ಕುತೂಹಲ ಮೂಡಿಸಿದ ಮೈಲಾರ ಗೊರವಯ್ಯನ ಕಾರ್ಣಿಕ ನುಡಿ| ಅಂಬಲಿ ಹಳಸೀತು, ಕಂಬಳಿ ಬೀಸಿತಲೇ ಎಂದ ಗೊರವಯ್ಯ| ಏನಿದರ ಒಳ ಮರ್ಮ?
ಸಮಗ್ರ ನ್ಯೂಸ್: ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಅನ್ನದಾತರಿಗೆಲ್ಲಾ ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ ಚರ್ಚೆ ಹುಟ್ಟು ಹಾಕಿದೆ. ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಭಂಡಾರದ ಒಡೆಯ ದೈವವಾಣಿಯನ್ನು ಲಕ್ಷಾಂತರ ಜನರು ಆಲಿಸಿದರು. ಭರತ ಹುಣ್ಣಿಮೆ ನಂತರ […]










