ರಾಷ್ಟ್ರೀಯ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ; ನೇರಪ್ರಸಾರ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರ 8ನೇ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಲು ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಚುನಾವಣಾ ವರ್ಷವಾಗಿರುವುದರಿಂದ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೆ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. ತೆರಿಗೆ ಕಡಿತ, ಉತ್ಪಾದನೆ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಾಧ್ಯತೆ ಇದೆ. ಆದಾಯ ತೆರಿಗೆ ಸ್ಲಾಬ್ ಪರಿಷ್ಕರಿಸುವ ಸಾಧ್ಯತೆ ಇದ್ದು, ಮಧ್ಯಮ ವರ್ಗದ ಜನರಿಗೆ ದೊಡ್ಡ ಪರಿಹಾರ ನೀಡಬಹುದು […]

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ; ನೇರಪ್ರಸಾರ Read More »

ಜಾರ್ಖಂಡ್: ಬಹುಮಹಡಿ ಕಟ್ಟಡಕ್ಕೆ ಬೆಂಕಿ; 14 ಮಂದಿ‌ ಸಜೀವ ದಹನ

ಸಮಗ್ರ ನ್ಯೂಸ್: ಜಾರ್ಖಂಡ್ ನ ಧನ್ಬಾದ್ ನ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಧನ್ಬಾದ್ ನ ಆಶೀರ್ವಾದ್ ಟವರ್ ಜೋರಫಟಕ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ಸುಮಾರು 40 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಇತ್ತೀಚಿನ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದ್ದು 11 ಮಂದಿ ಮಂದಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅಗ್ನಿ ಅವಘಡದಿಂದ ಉಂಟಾಗಿರುವ ನಷ್ಟದ ಪ್ರಮಾಣ ಇನ್ನಷ್ಟೇ

ಜಾರ್ಖಂಡ್: ಬಹುಮಹಡಿ ಕಟ್ಟಡಕ್ಕೆ ಬೆಂಕಿ; 14 ಮಂದಿ‌ ಸಜೀವ ದಹನ Read More »

ನಾಳೆ(ಫೆ.1) ಕೇಂದ್ರ ಬಜೆಟ್ ಮಂಡನೆ| ಮೋದಿ ಸರ್ಕಾರದ ೨ನೇ ಅವಧಿಯ ಕೊನೆಯ ಬಜೆಟ್ ಮಂಡಿಸಲಿರುವ ನಿರ್ಮಲಾ ಮೇಡಂ

ಸಮಗ್ರ ನ್ಯೂಸ್: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು (ಬುಧವಾರ) ಬೆಳಿಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ. ಇದು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷಕ್ಕೆ ಸೀತಾರಾಮನ್ ಅವರ ಐದನೇ ನೇರ ಬಜೆಟ್ ಆಗಿರುತ್ತದೆ. ಹಿಂದಿನ ಎರಡು ಬಜೆಟ್‌ನಂತೆ 2023-24 ರ ಕೇಂದ್ರ ಬಜೆಟ್ ಅನ್ನು ಸಹ ಕಾಗದರಹಿತ ರೂಪದಲ್ಲಿ ವಿತರಿಸಲಾಗುತ್ತದೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಇದಾಗಿದೆ. ಉಭಯ

ನಾಳೆ(ಫೆ.1) ಕೇಂದ್ರ ಬಜೆಟ್ ಮಂಡನೆ| ಮೋದಿ ಸರ್ಕಾರದ ೨ನೇ ಅವಧಿಯ ಕೊನೆಯ ಬಜೆಟ್ ಮಂಡಿಸಲಿರುವ ನಿರ್ಮಲಾ ಮೇಡಂ Read More »

ಗೋವು ಭಾರತದಲ್ಲಿ ಮಾತ್ರ ಮಾತೆಯಲ್ಲ| ಈ ದೇಶದಲ್ಲಿ ಗೋಮೂತ್ರದಿಂದಲೇ ಸ್ನಾನ ಮಾಡ್ತಾರೆ ಗೊತ್ತಾ?

ಸಮಗ್ರ ನ್ಯೂಸ್: ಗೋವು ಭಾರತೀಯರ ಹೃದಯ ಬಡಿತವಾಗಿದೆ. ಭಾರತದ ಸಂಪೂರ್ಣ ಆಧ್ಯಾತ್ಮಿಕ ಚಿತ್ರಣವು ಹಸುವನ್ನ ಅದರ ಕೇಂದ್ರವಾಗಿ ಹೆಣೆದುಕೊಂಡಿರುವುದು ಕಂಡುಬರುತ್ತದೆ. ಗೋವನ್ನು ಭಾರತದಲ್ಲಿ ಮಾತೆ ಎಂದು ಪೂಜಿಸುತ್ತಾರೆ. ಇಲ್ಲಿ ಗೋವಂತೆ ಮೂರು ದೇವತೆಗಳನ್ನ ಒಂದೇ ಸ್ಥಳದಲ್ಲಿ ಪೂಜಿಸುವ ಒಂದು ರೂಪವಾಗಿದ್ದು, ಗೋವುಗಳಿಂದ ಹೊರಹೊಮ್ಮುವ ಪಂಚಗವ್ಯಗಳನ್ನು ಪಂಚಾಮೃತವೆಂದು ಪರಿಗಣಿಸುವ ಪುಣ್ಯಭೂಮಿ ಇದು. ವೇದಕಾಲದಿಂದಲೂ ಗೋವು ಮನುಕುಲದ ಅದಿದೇವತೆಯಾಗಿದೆ. ಆದರೆ ಭಾರತಕ್ಕಷ್ಟೇ ಗೋವು ಪೂಜನೀಯ ಎಂದು ಭಾವಿಸಿದರೆ ನಿಮ್ಮ ಭಾವನೆ ತಪ್ಪು. ಗೋವನ್ನು ಪೂಜನೀಯವಾಗಿ ಕಾಣುವ ಮತ್ತೊಂದು ದೇಶವಿದೆ. ದಕ್ಷಿಣ

ಗೋವು ಭಾರತದಲ್ಲಿ ಮಾತ್ರ ಮಾತೆಯಲ್ಲ| ಈ ದೇಶದಲ್ಲಿ ಗೋಮೂತ್ರದಿಂದಲೇ ಸ್ನಾನ ಮಾಡ್ತಾರೆ ಗೊತ್ತಾ? Read More »

ಒಡಿಶಾ ಆರೋಗ್ಯ ಸಚಿವರ ಎದೆಗೆ ಗುಂಡಿಕ್ಕಿದ ದುಷ್ಕರ್ಮಿಗಳು| ಸಚಿವ ನಬಾದಾಸ್ ಸ್ಥಿತಿ‌ ಚಿಂತಾಜನಕ

ಸಮಗ್ರ ನ್ಯೂಸ್: ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಎದೆಗೆ ಬಿದ್ದಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. ಅನಾಮಿಕರು ವ್ಯಕ್ತಿಗಳು ಹಾರಿಸಿದ ಗುಂಡು ಸಚಿವರ ಎದೆ ಹೊಕ್ಕಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಸಚಿವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಜರಾಜನಗರಕ್ಕೆ ತೆರಳುತ್ತಿದ್ದಾಗ ದಾಳಿ ನಡೆದಿದೆ. ನಬಾ ದಾಸ್ ಅವರು ವಾಹನದಿಂದ ಇಳಿಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ದಾಳಿಯ ಹಿಂದಿನ ನಿಖರವಾದ ಕಾರಣ

ಒಡಿಶಾ ಆರೋಗ್ಯ ಸಚಿವರ ಎದೆಗೆ ಗುಂಡಿಕ್ಕಿದ ದುಷ್ಕರ್ಮಿಗಳು| ಸಚಿವ ನಬಾದಾಸ್ ಸ್ಥಿತಿ‌ ಚಿಂತಾಜನಕ Read More »

ಕೇಂದ್ರಸರ್ಕಾರದಿಂದ ಪದ್ಮ ಪ್ರಶಸ್ತಿ ಘೋಷಣೆ| ಮಾಜಿ ಸಿಎಂ ಎಸ್.ಎಂ ಕೃಷ್ಣ, ಸುಧಾಮೂರ್ತಿ, ಎಸ್.‌ಎಲ್ ಬೈರಪ್ಪ ಸೇರಿ‌ 106 ಸಾಧಕರಿಗೆ ಪುರಸ್ಕಾರ

ಸಮಗ್ರ ನ್ಯೂಸ್: 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮ ಪುರಸ್ಕೃತರನ್ನು ಘೋಷಿಸಿದ್ದು, ಕನ್ನಡಿಗರಾದ ಸುಧಾ ಮೂರ್ತಿ, ಎಸ್. ಎಂ ಕೃಷ್ಣ, ಎಸ್.ಎಲ್ ಬೈರಲ್, ಉಮ್ಮಥಾಟ್ ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ಚಿಕ್ಕಬಳ್ಳಾಪುರದ ತಮಟೆ ವಾದಕ ಮುನಿ ವೆಂಕಟಪ್ಪ ಸೇರಿ 106 ಸಾಧಕರು ಸೇರಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. 2023ನೇ ಸಾಲಿಗೆ 106 ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ.

ಕೇಂದ್ರಸರ್ಕಾರದಿಂದ ಪದ್ಮ ಪ್ರಶಸ್ತಿ ಘೋಷಣೆ| ಮಾಜಿ ಸಿಎಂ ಎಸ್.ಎಂ ಕೃಷ್ಣ, ಸುಧಾಮೂರ್ತಿ, ಎಸ್.‌ಎಲ್ ಬೈರಪ್ಪ ಸೇರಿ‌ 106 ಸಾಧಕರಿಗೆ ಪುರಸ್ಕಾರ Read More »

ದೆಹಲಿಯಲ್ಲಿ ಪ್ರಬಲ ಭೂಕಂಪ; ಮನೆ ಬಿಟ್ಟು ಹೊರಗೋಡಿದ ಜನ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ದೆಹಲಿ ಹಾಗೂ ಉತ್ತರಾಖಂಡ್​ನ ಹಲವೆಡೆ 35 ಸೆಕೆಂಡ್​ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 5.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಇದರಿಂದ ದೆಹಲಿಯಲ್ಲಿ ಜನರು ಭಯ ಭಯಗೊಂಡು ಮನೆ, ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿಗಳು ಹೊರಬರಬೇಕಿದ್ದು, ಪರಿಶೀಲನೆ ಪ್ರಗತಿಯಲ್ಲಿದೆ.

ದೆಹಲಿಯಲ್ಲಿ ಪ್ರಬಲ ಭೂಕಂಪ; ಮನೆ ಬಿಟ್ಟು ಹೊರಗೋಡಿದ ಜನ Read More »

ಯುಎಇ ಅಧಿಕಾರಿ‌ ಸೋಗಿನಲ್ಲಿ ದೆಹಲಿಯ ಪೈವ್ ಸ್ಟಾರ್ ಹೊಟೇಲ್ ಗೆ ಪಂಗನಾಮ| ಬಿಲ್ ಪಾವತಿಸದೆ ಪರಾರಿಯಾದಾತ ಮಂಗಳೂರಿನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರದ ಅಧಿಕಾರಿ ಎಂದು ಹೇಳಿಕೊಂಡು 23 ಲಕ್ಷಕ್ಕೂ ಅಧಿಕ ಮೊತ್ತವನ್ನು ಪಂಚತಾರಾ ಹೋಟೆಲ್​ಗೆ ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮದ್ ಷರೀಫ್ (41) ಬಂಧಿತ ವ್ಯಕ್ತಿ. ಬಂಧಿತ ಮಹಮ್ಮದ್ ಷರೀಫ್ ಕರ್ನಾಟಕದ ದಕ್ಷಿಣ ಕನ್ನಡ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ನಕಲಿ ವ್ಯಾಪಾರ ಕಾರ್ಡ್​​​ನ್ನು ಬಳಸಿಕೊಂಡು ಸುಮಾರು ಮೂರು ತಿಂಗಳ ಕಾಲ ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಹಮ್ಮದ್ ಷರೀಫ್ ಮೂರು

ಯುಎಇ ಅಧಿಕಾರಿ‌ ಸೋಗಿನಲ್ಲಿ ದೆಹಲಿಯ ಪೈವ್ ಸ್ಟಾರ್ ಹೊಟೇಲ್ ಗೆ ಪಂಗನಾಮ| ಬಿಲ್ ಪಾವತಿಸದೆ ಪರಾರಿಯಾದಾತ ಮಂಗಳೂರಿನಲ್ಲಿ ಅರೆಸ್ಟ್ Read More »

2023ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ

ನವದೆಹಲಿ: 2023ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತಾಹ್ ಅಲ್-ಸಿಸಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷರನ್ನು ಇದೇ ಮೊದಲ ಬಾರಿಗೆ ಆಹ್ವಾನಿಸಲಾಗಿದೆ. ಅಧ್ಯಕ್ಷ ಅಲ್-ಸಿಸಿ ಜ. 24 ರಿಂದ 26 ರವರೆಗೆ ಭಾರತದಲ್ಲಿರಲಿದ್ದಾರೆ. ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಈಜಿಪ್ಟ್ ನ ಅಧ್ಯಕ್ಷರೊಂದಿಗೆ ಐವರು ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಇರಲಿದೆ.

2023ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ Read More »

ಜ.26ಕ್ಕೆ ಭಾರತದಲ್ಲಿ ಇಂಟ್ರಾನಸಲ್ ಕೋವಿಡ್ ಲಸಿಕೆ ಇನ್ ಕೋವ್ಯಾಕ್‌ ಬಿಡುಗಡೆ

ಸಮಗ್ರ ನ್ಯೂಸ್: ಸ್ವದೇಶಿ ಲಸಿಕೆ ತಯಾರಕ ಭಾರತ್ ಬಯೋಟೆಕ್ ತನ್ನ ಇಂಟ್ರಾನಾಸಲ್ ಕೋವಿಡ್ ಲಸಿಕೆ ಇನ್ ಕೊವಾಕ್ ಅನ್ನು ಜ.26ರಂದು ಭಾರತದಲ್ಲಿ ಮೊದಲ ಬಾರಿಗೆ ಬಿಡುಗಡೆ ಮಾಡಲಿದೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲಾ ತಿಳಿಸಿದ್ದಾರೆ. ಭೋಪಾಲ್‌ನಲ್ಲಿ ನಡೆದ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಎಲಾ, ಜಾನುವಾರುಗಳಲ್ಲಿನ ಗಡ್ಡೆಯ ಚರ್ಮದ ಕಾಯಿಲೆಗೆ ಸ್ವದೇಶಿ ಲಸಿಕೆ, ಲುಂಪಿ-ಪ್ರೊವಾಕ್‌ಇಂಡ್ ಅನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜ.26

ಜ.26ಕ್ಕೆ ಭಾರತದಲ್ಲಿ ಇಂಟ್ರಾನಸಲ್ ಕೋವಿಡ್ ಲಸಿಕೆ ಇನ್ ಕೋವ್ಯಾಕ್‌ ಬಿಡುಗಡೆ Read More »