ರಾಷ್ಟ್ರೀಯ

ಅಗ್ನಿ ಕ್ಷಿಪಣಿಗಳ ಪಿತಾಮಹ ನರೈನ್ ಅಗರ್ವಾಲ್ ವಿಧಿವಶ

ಸಮಗ್ರ ನ್ಯೂಸ್: ಅಗ್ನಿ ಕ್ಷಿಪಣಿಗಳ ಪಿತಾಮಹ, DRDO ಖ್ಯಾತ ವಿಜ್ಞಾನಿ ರಾಮ್ ನರೈನ್ ಅಗರ್ವಾಲ್(84) ನಿಧನರಾಗಿದ್ದಾರೆ. ಭಾರತದ ರಕ್ಷಣಾ ಸಂಶೋಧನೆಯಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಖ್ಯಾತ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್ ಅವರು ಗುರುವಾರ ಹೈದರಾಬಾದ್‌ ನಲ್ಲಿ ನಿಧನರಾಗಿದ್ದಾರೆ. “ಅಗ್ನಿ ಕ್ಷಿಪಣಿಗಳ ಪಿತಾಮಹ” ಎಂದೇ ಕರೆಯಲ್ಪಡುವ ಅಗರ್ವಾಲ್ ಅವರು ಭಾರತದ ದೀರ್ಘಾವಧಿಯ ರಕ್ಷಣಾ ಸಂಶೋಧನೆ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಆಶ್ರಯದಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮ ಭಾರತದ ಕ್ಷಿಪಣಿ ತಂತ್ರಜ್ಞಾನಕ್ಕೆ ಅಗರ್ವಾಲ್ […]

ಅಗ್ನಿ ಕ್ಷಿಪಣಿಗಳ ಪಿತಾಮಹ ನರೈನ್ ಅಗರ್ವಾಲ್ ವಿಧಿವಶ Read More »

ರಾಜಧಾನಿಯಲ್ಲಿ ಮತ್ತೊಂದು ನಿಗೂಢ‌ ಸ್ಪೋಟ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅನುಮಾನಾಸ್ಪದ ಸ್ಪೋಟ ವರದಿಯಾಗಿದೆ. ನಗರದ ಜೆಪಿ ನಗರ 24. ಮೇನ್ ಉಡುಪಿ ಉಪಹಾರ ಬಳಿ ಘಟನೆ ನಡೆದಿದೆ. ಈ ಸ್ಪೋಟ ಕೂಡ ರಾಮೇಶ್ವರಂ ಕೆಫೆ ಬ್ಲಾಸ್ಟ್‌ ರೀತಿಯಲ್ಲೇ ನಿಗೂಢವಾಗಿದೆ ಎನ್ನಲಾಗಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್‌ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಅದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿತ್ತು. ಅದೇ ಮಾದರಿಯಲ್ಲಿ ಜೆಪಿ ನಗರದಲ್ಲಿ ನಡೆದಿರುವ ಸ್ಪೋಟವೂ ಕೂಡ ಅನುಮಾನಾಸ್ಪದವಾಗಿದೆ. ಜೆಪಿ ನಗರದ ಮನೆಯಲ್ಲಿ ಈ ಘಟನೆ ನಡೆದಿದ್ದು,ಪ್ರಕರಣದಲ್ಲಿ ಇಬ್ಬರಿಗೆ ಗಾಯವಾಗಿದೆ.

ರಾಜಧಾನಿಯಲ್ಲಿ ಮತ್ತೊಂದು ನಿಗೂಢ‌ ಸ್ಪೋಟ; ಇಬ್ಬರು ಗಂಭೀರ Read More »

ಪ್ರಧಾನಿ ಮೋದಿಯ ಗಡ್ಡ ಎಳೆದು‌ ಮುದ್ದಾಡುತ್ತಿರುವ ಈ ಬಾಲೆಯ ಹಿನ್ನೆಲೆ ಗೊತ್ತೇ? ಕರುಳು ಹಿಂಡುವ ಸ್ಟೋರಿ ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ಮೋದಿಯ ಗಡ್ಡ ಹಿಡಿದು ಎಳೆದು, ಮೋದಿಯ ಕನ್ನಡಕ ಮುಟ್ಟುತ್ತಾ, ಮುದ್ದಾಡುತ್ತಿರುವ ಮೂರು ವರ್ಷದ ಆ ಮಗಳ ವೀಡಿಯೋ ವೈರಲ್‌ ಆಗುತ್ತಿದೆ. ಆ ವಿಡಿಯೋ ನೋಡುತ್ತಿದ್ದರೆ ಎಂಥವರ ಮುಖದಲ್ಲಿಯೂ ನಗು ಮೂಡುವುದು. ಆ ಮಗುವಿಗೆ ತನ್ನ ಎದುರಿಗಿರುವುದು ಪ್ರಧಾನಿಯೆಂದು ಗೊತ್ತಿಲ್ಲ, ಆದರೆ ಆ ವ್ಯಕ್ತಿಯನ್ನು ನೋಡಿದಾಗ ಮಗುವಿಗೆ ರಕ್ಷಕಂತೆ ಅಥವಾ ತುಂಬಾ ಆಪ್ತನಂತೆ ಅನಿಸಿರಬಹುದು, ಇಲ್ಲದಿದ್ದರೆ ಹತ್ರಕ್ಕೂ ಬರಲ್ಲ, ಆದರೆ ಈ ಮಗು ಮೋದಿಯನ್ನು ತುಂಬಾ ಚೆನ್ನಾಗಿ ಗೊತ್ತಿರುವಂತೆ ಮೋದಿಯನ್ನು ಅಪ್ಪಿಕೊಂಡು ಬಿಳಿಗಡ್ಡ ಎಳೆದು ಮೋದಿಯನ್ನು

ಪ್ರಧಾನಿ ಮೋದಿಯ ಗಡ್ಡ ಎಳೆದು‌ ಮುದ್ದಾಡುತ್ತಿರುವ ಈ ಬಾಲೆಯ ಹಿನ್ನೆಲೆ ಗೊತ್ತೇ? ಕರುಳು ಹಿಂಡುವ ಸ್ಟೋರಿ ಇಲ್ಲಿದೆ ನೋಡಿ… Read More »

ಈ ಬಾರಿ ಎಷ್ಟನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದೇವೆ? ಗೊಂದಲ ಬೇಡ; ಇಲ್ಲಿದೆ ಸರಳ ಉತ್ತರ…

ಸಮಗ್ರ ನ್ಯೂಸ್: 1947ರ ಆಗಸ್ಟ್ 15 ಭಾರತೀಯರ ಪಾಲಿಗೆ ಐತಿಹಾಸಿಕ ದಿನವಾಗಿದ್ದು, ಬ್ರಿಟೀಷರ ಕಪಿ ಮುಷ್ಠಿಯಿಂದ ನಮಗೆ ಸ್ವಾತಂತ್ರ್ಯ ದೊರೆತ ದಿನ. ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಹೋರಾಟಗಾರರು ಬಲಿದಾನಗೈದಿದ್ದಾರೆ. ಅವರ ನೆತ್ತರ ಹನಿಗಳಿಂದಾಗಿ ನಾವಿಂದು ನೆಮ್ಮದಿಯಾಗಿ ಉಸಿರಾಡುವಂತಾಗಿದೆ. ಪ್ರತಿ ವರ್ಷ ಆಗಸ್ಟ್ 15ರಂದು ದೇಶದ ನಾಗರಿಕರು ಸ್ವಾತಂತ್ರ್ಯಕ್ಕೆ ಹೋರಾಡಿದ ವೀರರನ್ನು ನೆನಪಿಸಿಕೊಳ್ಳುತ್ತೇವೆ. 200 ವರ್ಷಗಳ ಬ್ರಿಟಿಷ್ ಆಳ್ವಿಕೆಯಿಂದ ಮುಕ್ತವಾದ ಭಾರತ ಪ್ರಜಾಸತ್ತಾತ್ಮಕ ಸಾರ್ವಭೌಮ ರಾಷ್ಟ್ರವಾಯಿತು. ಭಾರತ ಸ್ವಾತಂತ್ರ್ಯ ದಿನದ ಹಿಂದಿನ ರಾತ್ರಿ ಆಗಸ್ಟ್ 14, 1947 ರಂದು,

ಈ ಬಾರಿ ಎಷ್ಟನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದೇವೆ? ಗೊಂದಲ ಬೇಡ; ಇಲ್ಲಿದೆ ಸರಳ ಉತ್ತರ… Read More »

ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ನಟ್ವರ್ ಸಿಂಗ್ ಇನ್ನಿಲ್ಲ

ಸಮಗ್ರ ನ್ಯೂಸ್: ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಕೆ. ನಟ್ವರ್‌ ಸಿಂಗ್‌ (95) ಅವರು ನಿಧನರಾಗಿದ್ದಾರೆ. ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿ ಭಾರತದ ರಾಜತಾಂತ್ರಿಕತೆಗೆ ಅಪಾರ ಕೊಡುಗೆ ನೀಡಿದ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ. ನಟ್ವರ್‌ ಸಿಂಗ್‌ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಸ್ನೇಹ, ಸಂಬಂಧ ಮೂಡಲು ಎರಡೂ ದೇಶಗಳು

ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ನಟ್ವರ್ ಸಿಂಗ್ ಇನ್ನಿಲ್ಲ Read More »

ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ

ಸಮಗ್ರ ನ್ಯೂಸ್‌: 17 ತಿಂಗಳ ಜೈಲು ವಾಸದ ಬಳಿಕ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಬಳಿಕ ಸಿಸೋಡಿಯಾ ಅವರು ಬಿಡುಗಡೆಯಾಗಿ ಹೊರ ಬಂದಿದ್ದಾರೆ. ಸಿಸೋಡಿಯಾ ಅವರನ್ನು 2023 ರ ಫೆಬ್ರವರಿ 26ರಂದು ಸಿಬಿಐ, ಎರಡು ವಾರಗಳ ನಂತರ ಇಡಿ ಬಂಧಿಸಿತ್ತು. ಈಗ ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ

ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ Read More »

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು ವ್ಯರ್ಥವಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಬೆಳಗಾವಿ, ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ಸಮಯ ಬದಲಾಗಿದೆ. ಗೋವಾ ಮೂಲಕ ಸಂಚರಿಸುವ ಎರಡು ಟ್ರೈನ್ ಗಳ ಸಂಚಾರ ಬಂದ್ ಆಗಿದೆ.

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ Read More »

2025ರವರೆಗೆ ಬಾಹ್ಯಾಕಾಶದಲ್ಲೆ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌.. ನಾಸಾದಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಬಾಹ್ಯಾಕಾಶದಲ್ಲೆ ಸಿಲುಕಿದ್ದಾರೆ ಎಂಬ ವರದಿಗಳು ಈ ಹಿಂದೆ ಬಂದಿತ್ತು. ಆದರೆ ಇದೀಗ ನಾಸಾ ಇನ್ನೊಂದು ಅಧೀಕೃತ ಮಾಹಿತಿಯೊಂದನ್ನು ನೀಡಿದೆ. ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಂಡ ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ ಎಂದು ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ (NASA) ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ

2025ರವರೆಗೆ ಬಾಹ್ಯಾಕಾಶದಲ್ಲೆ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌.. ನಾಸಾದಿಂದ ಸ್ಪಷ್ಟನೆ Read More »

ಜಪಾನ್ ನಲ್ಲಿ 7.1 ತೀವ್ರತೆಯ ಭೂಕಂಪನ| ಸುನಾಮಿ ಅಪ್ಪಳಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಜಪಾನ್‌ ನ ದಕ್ಷಿಣ ಕರಾವಳಿ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 7.1ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಜಪಾನ್‌ ನ ದಕ್ಷಿಣದ ಮುಖ್ಯ ದ್ವೀಪವಾದ ಕ್ಯೂಶುವಿನ ಪೂರ್ವ ಕರಾವಳಿಯಲ್ಲಿ ಸುಮಾರು 30 ಕಿಲೋ ಮೀಟರ್‌ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇರುವುದನ್ನು ಗುರುತಿಸಲಾಗಿದೆ ಎಂದು ವರದಿ ವಿವರಿಸಿದೆ. ಪ್ರಬಲ ಭೂಕಂಪದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಈವರೆಗೆ ಯಾವ ಮಾಹಿತಿಯೂ ಬಂದಿಲ್ಲ. ಭೂಕಂಪದ

ಜಪಾನ್ ನಲ್ಲಿ 7.1 ತೀವ್ರತೆಯ ಭೂಕಂಪನ| ಸುನಾಮಿ ಅಪ್ಪಳಿಸುವ ಸಾಧ್ಯತೆ Read More »

‘ಈಕೆಯನ್ನಲ್ಲವೇ ನಾವು ಬೀದಿಯಲ್ಲಿ ಎಳೆದಾಡಿದ್ದು?’| ವಿನೇಶ್ ಪೋಗಟ್ ಪೈನಲ್‌ಗೆ ಎಂಟ್ರಿಯಾದ ಬೆನ್ನಲ್ಲೇ ಭಜರಂಗ್ ಪೂನಿಯಾ ಟ್ವೀಟ್

ಸಮಗ್ರ ನ್ಯೂಸ್: ವಿನೇಶ್‌ ಪೋಗಟ್‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯ 50 ಕೆಜಿ ರೆಸ್ಲಿಂಗ್‌ನಲ್ಲಿ ಸೆಮಿಫೈನಲ್‌ಗೇರುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ. ಪ್ರೀ ಕ್ವಾರ್ಟರ್‌ ಫೈನಲ್‌ನಲ್ಲಿ ಆಕೆ ಹಾಲಿ ವಿಶ್ವಚಾಂಪಿಯನ್‌ಅನ್ನು ಸೋಲಿಸಿದ ರೀತಿಯೇ ಒಲಿಂಪಿಕ್ಸ್‌ ಚಿನ್ನ ಗೆಲುವಿಗಿಂತ ಮಹತ್ವದ್ದು ಎಂದು ಬಿಂಬಿಸಲಾಗುತ್ತದೆ. ವಿನೇಶ್‌ ಪೋಗಟ್‌ ಚಿನ್ನದ ಭರವಸೆಯನ್ನು ಮೂಡಿಸಿರುವ ನಡುವೆಯೇ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಜರಂಗ್‌ ಪೂನಿಯಾ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ರೆಸ್ಲಿಂಗ್‌ ಫೆಡರೇಷನ್‌ನಲ್ಲಿ ಬದಲಾವಣೆ ಆಗಬೇಕು. ಮಾಜಿ ಅಧ್ಯಕ್ಷರಾಗಿರುವ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ

‘ಈಕೆಯನ್ನಲ್ಲವೇ ನಾವು ಬೀದಿಯಲ್ಲಿ ಎಳೆದಾಡಿದ್ದು?’| ವಿನೇಶ್ ಪೋಗಟ್ ಪೈನಲ್‌ಗೆ ಎಂಟ್ರಿಯಾದ ಬೆನ್ನಲ್ಲೇ ಭಜರಂಗ್ ಪೂನಿಯಾ ಟ್ವೀಟ್ Read More »