ರಾಷ್ಟ್ರೀಯ

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಕನ್ನಡ ಚಿತ್ರನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು. “ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ […]

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ Read More »

ಇಂದು ಪಂಜಾಬ್ ಸಿಎಂ ಭಗವಂತಮಾನ್ ಗೆ ಎರಡನೇ‌ ಮದುವೆ

ಸಮಗ್ರ ನ್ಯೂಸ್: ಪಂಜಾಬ್ ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್​ ಸಿಎಂಗೆ ಇದು ಎರಡನೇ ಮದುವೆ. 48 ವರ್ಷದ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರು ಇಂದು ಚಂಡೀಗಢದಲ್ಲಿ ನಡೆಯಲಿರುವ ಖಾಸಗಿ ಸಮಾರಂಭದಲ್ಲಿ ಡಾ. ಗುರುಪ್ರೀತ್​ ಕೌರ್​ ಎಂಬುವರನ್ನು ವರಿಸಲಿದ್ದಾರೆ. ಈ ಹಿಂದೆ ಸ್ಟ್ಯಾಂಡ್​ ಅಪ್​​ ಕಾಮಿಡಿಯನ್​ ಆಗಿದ್ದ ಮಾನ್​, 6 ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಯಿಂದ ಡಿವೋರ್ಸ್​ ಪಡೆದುಕೊಂಡಿದ್ದಾರೆ. ಮಾನ್​ ಮತ್ತು ಗುರುಪ್ರೀತ್​ ನಡುವೆ

ಇಂದು ಪಂಜಾಬ್ ಸಿಎಂ ಭಗವಂತಮಾನ್ ಗೆ ಎರಡನೇ‌ ಮದುವೆ Read More »

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯ ಮಾದರಿಯಾಗಿದೆ. ಅವರು ಸಂಸತ್ತಿಗೆ ಆಯ್ಕೆಯಾಗಿರುವುದು ಅಭಿನಂದನಾರ್ಹ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸರಕಾರ ನಾಮನಿರ್ದೇಶನ ಮಾಡಿದೆ.ಇವರ ಜೊತೆ ಖ್ಯಾತ ಅಥ್ಲೀಟ್ ಪಿ.ಟಿ.

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ Read More »

ಟೈಲರ್ ಹತ್ಯೆ ಬಳಿಕ ಮೆಡಿಕಲ್ ಅಂಗಡಿ ಮಾಲೀಕನ ಕೊಲೆ| ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆಗೈದ ಕಿರಾತಕರು

ಸಮಗ್ರ ನ್ಯೂಸ್: ನೂಪರ್ ಶರ್ಮಾ ಬೆಂಬಲಿಸಿದ್ದ ರಾಜಸ್ಥಾನದ ಹಿಂದೂ ಟೈಲರ್ ಕನ್ಹಯ್ಯಲಾಲ್ ಹತ್ಯೆ ಪ್ರಕರಣದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ನೂಪರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಹತ್ಯೆಯಾಗಿರುವ ವಿಚಾರ ವರದಿಯಾಗಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ ನೂಪರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದ್ದು, ಹೀಗಾಗಿ ಉಮೇಶ್ ಪ್ರಹ್ಲಾದ್ ರಾವ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ. ಜೂನ್ 21 ರಂದು

ಟೈಲರ್ ಹತ್ಯೆ ಬಳಿಕ ಮೆಡಿಕಲ್ ಅಂಗಡಿ ಮಾಲೀಕನ ಕೊಲೆ| ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆಗೈದ ಕಿರಾತಕರು Read More »

ಉದಯಪುರ ಟೈಲರ್ ಕೊಲೆ ಆರೋಪಿಗಳಿಗಿತ್ತಾ ಬಿಜೆಪಿ ನಂಟು? ಇಂಡಿಯಾ ಟುಡೇ ವರದಿಯಲ್ಲಿ ಹೊರಬಿತ್ತು‌ ಶಾಕಿಂಗ್ ನ್ಯೂಸ್!! ಕೊಲೆ ನಡೆಸಲು ಬಿಜೆಪಿ ಸೇರಬಯಸಿದನೇ ಕೊಲೆಗಾರ?

ಸಮಗ್ರ ನ್ಯೂಸ್: ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಟೈಲರ್ ಹತ್ಯೆಯ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ Indiatoday.com ಮಾಡಿರುವ ತನಿಖಾ ವರದಿಯಲ್ಲಿ ಬೆಳಕಿಗೆ ಬಂದಿದೆ. ರಾಜಸ್ಥಾನದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಕಳೆದ ಹತ್ತು ವರ್ಷಗಳಿಂದ ಇರುವ ಸದಸ್ಯ ಇರ್ಷಾದ್‌ ಚೈನ್‌ವಾಲ ಆರೋಪಿಗಳಲ್ಲಿ ಓರ್ವನಾದ ರಿಯಾಝ್‌ ಜೊತೆ ಕಾಣಿಸಿಕೊಂಡಿರುವ ಹಲವು ಚಿತ್ರಗಳನ್ನು ಇಂಡಿಯಾ ಟುಡೆ ವರದಿ ಮಾಡಿದೆ. ಈ ಕುರಿತು ಇರ್ಷಾದ್‌ ಬಳಿ ಕೇಳಿದಾಗ, ಬಿಜೆಪಿ ನಾಯಕ ಗುಲಾಬ್‌ ಚಂದ್‌ ಕಟಾರಿಯಾ

ಉದಯಪುರ ಟೈಲರ್ ಕೊಲೆ ಆರೋಪಿಗಳಿಗಿತ್ತಾ ಬಿಜೆಪಿ ನಂಟು? ಇಂಡಿಯಾ ಟುಡೇ ವರದಿಯಲ್ಲಿ ಹೊರಬಿತ್ತು‌ ಶಾಕಿಂಗ್ ನ್ಯೂಸ್!! ಕೊಲೆ ನಡೆಸಲು ಬಿಜೆಪಿ ಸೇರಬಯಸಿದನೇ ಕೊಲೆಗಾರ? Read More »

ಔರಂಗಾಬಾದ್, ಉಸ್ಮಾನಾಬಾದ್ ಹೆಸರು ಬದಲಾಯಿಸಿದ ಮಹಾ ಸರ್ಕಾರ

ಸಮಗ್ರ ನ್ಯೂಸ್: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಔರಂಗಾಬಾದ್, ಉಸ್ಮಾನಾಬಾದ್ ಮತ್ತು ಮುಂಬರುವ ಹೊಸ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು ಮರುನಾಮಕರಣ ಮಾಡುವ ವಿವಾದಾತ್ಮಕ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಔರಂಗಾಬಾದ್ ಅನ್ನು ಸಂಭಾಜಿ ನಗರ ಎಂದು ಮತ್ತು ಉಸ್ಮಾನಾಬಾದ್ ಅನ್ನು ಧರಾಶಿವ್ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು

ಔರಂಗಾಬಾದ್, ಉಸ್ಮಾನಾಬಾದ್ ಹೆಸರು ಬದಲಾಯಿಸಿದ ಮಹಾ ಸರ್ಕಾರ Read More »

ಉದಯಪುರ ಕೊಲೆಗಾರರಿಗಿತ್ತು ಪಾಕ್ ಉಗ್ರರೊಂದಿಗೆ ಸಂಬಂಧ| ಕೊಲೆಮಾಡಿ ವಿಡಿಯೋ ಸಂದೇಶ ಕಳಿಸ್ತೇವೆ ಎಂದಿದ್ರಂತೆ ಪಾತಕಿಗಳು

ಸಮಗ್ರ ನ್ಯೂಸ್: ರಾಜಸ್ಥಾನದ ಉದಯಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಹತ್ಯೆಗೀಡಾದ ಟೈಲರ್ ಕನ್ನಯ್ಯ ಲಾಲ್ ಪ್ರಕರಣವನ್ನು ಕೇಂದ್ರ ಸರ್ಕಾರ, ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಇದರ ಮಧ್ಯೆ ಹಂತಕರ ಕುರಿತು ಒಂದೊಂದೇ ಶಾಕಿಂಗ್ ಸಂಗತಿಗಳು ಬಹಿರಂಗವಾಗುತ್ತಿವೆ. ಮಹಮ್ಮದ್ ರಿಯಾಜ್ ಆಕ್ತಾರಿ ಮತ್ತು ಗೌಸ್ ಮಹಮ್ಮದ್ ಎಂಬ ಈ ಹಂತಕರು ಕನ್ನಯ್ಯ ಲಾಲ್ ಅವರನ್ನು ಹತ್ಯೆ ಮಾಡಿದ ಬಳಿಕ ಅಜ್ಮೀರ್ ದರ್ಗಾಕ್ಕೆ ಭೇಟಿ ನೀಡುವ ಪ್ಲಾನ್ ಮಾಡಿದ್ದರಾದರೂ ರಾಜ್ ಸಮಂದ್ ಬಳಿ ಪೊಲೀಸರಿಗೆ ಸೆರೆಸಿಕ್ಕಿದ್ದಾರೆ. ಅವರುಗಳ ವಿಚಾರಣೆ ವೇಳೆ ಈ

ಉದಯಪುರ ಕೊಲೆಗಾರರಿಗಿತ್ತು ಪಾಕ್ ಉಗ್ರರೊಂದಿಗೆ ಸಂಬಂಧ| ಕೊಲೆಮಾಡಿ ವಿಡಿಯೋ ಸಂದೇಶ ಕಳಿಸ್ತೇವೆ ಎಂದಿದ್ರಂತೆ ಪಾತಕಿಗಳು Read More »

ಸುಪ್ರೀಂ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಠಾಕ್ರೆ ರಾಜೀನಾಮೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ಮೈತ್ರಿ ಸರ್ಕಾರ ನಾಳೆ ವಿಶ್ವಾಸ ಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ವಿಶ್ವಾಸ ಮತಯಾಚನೆ ನಡೆಸಲು ರಾಜ್ಯಪಾಲರು ನೀಡಿರುವ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆ ಗೆ ಭಾರೀ ಹಿನ್ನೆಡೆಯಾಗಿದ್ದು, ಇದಾದ ಬಳಿಕ ಸುದ್ದಿಗೋಷ್ಠಿ ಕರೆದು ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಎರಡೂವರೆ ವರ್ಷದ ‘ಮಹಾ ವಿಕಾಸ್ ಅಘಾಡಿ’ ಸರಕಾರದ ಆಡಳಿತ ಅಂತ್ಯವಾಗಿದೆ.

ಸುಪ್ರೀಂ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಠಾಕ್ರೆ ರಾಜೀನಾಮೆ Read More »

“ವಿಶ್ವಾಸ ಮತ ಯಾಚನೆ ಮಾಡ್ಲೇಬೇಕು” ಸರ್ವೋಚ್ಚ ನ್ಯಾಯಾಲಯದ ಆದೇಶ| ಮಹಾಪತನಕ್ಕೆ ಕೌಂಟ್ ಡೌನ್ ಶುರು

ಸಮಗ್ರ ನ್ಯೂಸ್: ಕುತೂಹಲ ಹೆಚ್ಚಿರುವ ಶಿವಸೇನಾ ಬಂಡಾಯ ಶಾಸಕರ ಮತ್ತು ಮುಖ್ಯಮಂತ್ರಿ ತಂಡದ‌ ನಡುವಿನ ಒಡಕು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದು ರಾಜ್ಯಪಾಲರ ಆದೇಶವನ್ನು ನ್ಯಾಯಾಲಯ‌ ಎತ್ತಿ ಹಿಡಿದಿದೆ. ವಿಶ್ವಾಸ ಮತ ಯಾಚನೆ ಕುರಿತಂತೆ ಠಾಕ್ರೆ ಅರ್ಜಿ ವಿಚಾರಿಸಿದ ಸುಪ್ರೀಂ ಕೋರ್ಟ್ ಮತಯಾಚನೆ ಮಾಡಲೇಬೇಕೆಂದು ಆದೇಶಿಸಿದೆ. ಬಂಡಾಯ 16 ಶಾಸಕರೂ ಮತ ಚಲಾವಣೆ ಮಾಡಲು ನ್ಯಾಯಾಲಯ ಅನುಮತಿಸಿದ್ದು ಇದಕ್ಕಾಗಿ 11:00ಗಂಟೆಗೆ ಸಮಯ ನಿಗದಿಪಡಿಸಿದ್ದು ಮಹಾರಾಷ್ಟ್ರ ಸರಕಾರ ಪತನ ಖಚಿತವಾಗಿದೆ.

“ವಿಶ್ವಾಸ ಮತ ಯಾಚನೆ ಮಾಡ್ಲೇಬೇಕು” ಸರ್ವೋಚ್ಚ ನ್ಯಾಯಾಲಯದ ಆದೇಶ| ಮಹಾಪತನಕ್ಕೆ ಕೌಂಟ್ ಡೌನ್ ಶುರು Read More »

ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದವರ ರುಂಡ ಚೆಂಡಾಡಿದ ದುಷ್ಕರ್ಮಿಗಳು| ಮೋದಿಯನ್ನೂ ಕೊಲ್ಲುವುದಾಗಿ ಬೆದರಿಕೆ

ಸಮಗ್ರ ನ್ಯೂಸ್: ನುಪೂರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಅಂಗಡಿ ಮಾಲೀಕನ ಶಿರಚ್ಛೇದ ಮಾಡಲಾಗಿದೆ. ವ್ಯಕ್ತಿಯನ್ನು ದುಷ್ಕರ್ಮಿಗಳು ಶಿರಶ್ಚೇಧ ಮಾಡಿದ್ದಾರೆ. ಉದಯಪುರ ನಗರದ ಮಾಲ್ಡಾಸ್ ಸ್ಟ್ರೀಟ್ ಪ್ರದೇಶದಲ್ಲಿ ಘಟನೆ ನಡೆದಿದೆ. ಶಿರಚ್ಛೇದನದ ಬಳಿಕ ದುಷ್ಕರ್ಮಿಗಳು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಶಿರಚ್ಛೇದನ ಮಾಡಿದ್ದಕ್ಕೆ ಹೆಮ್ಮೆಯಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ಉದಯಪುರದ ಧನ್ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಕನ್ಹಯ್ಯಾ ಲಾಲ್ ಟೈಲರಿಂಗ್

ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದವರ ರುಂಡ ಚೆಂಡಾಡಿದ ದುಷ್ಕರ್ಮಿಗಳು| ಮೋದಿಯನ್ನೂ ಕೊಲ್ಲುವುದಾಗಿ ಬೆದರಿಕೆ Read More »