ರಾಷ್ಟ್ರೀಯ

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಕಾನ್ಪುರದ ಉಪನಗರ ಸಚೆಂದಿಯಲ್ಲಿ ಬಸ್ ಮತ್ತು ಆಟೊ ಢಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದು, 30 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಲಾಲಾ ಲಜಪತ್​ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ.ಲಖನೌ ನಿಂದ ದೆಹಲಿಗೆ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಸಚೆಂದಿಯಲ್ಲಿ ಬಸ್ ಆಟೋಗೆ […]

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ Read More »

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ : ಇಬ್ಬರ ಬಂಧನ

ಮಹಾರಾಷ್ಟ್ರ : ದಲಿತ ಬಾಲಕನ ಮೇಲೆ ಮೂತ್ರವಿಸರ್ಜಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಜಮೀನಿನ ಮಾಲಕ ರವೀಂದ್ರ ಮತ್ತು ಪ್ರವೀಣನನ್ನು ಬಂಧಿತ ಆರೋಪಿಗಳು.ಬಾಲಕನ ಮೇಲಿನ ಹಲ್ಲೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಮಾವಿನ ಕಾಯಿ ಕೀಳಿದ್ದಕ್ಕೆ ಬಾಲಕನನ್ನು ಪ್ರಶ್ನಿಸಿ ಮರಕ್ಕೆ ಕಟ್ಟಿಹಾಕಿ, ಮೈಮೇಲೆ ಮೂತ್ರ ವಿಸರ್ಜನೆ ಮಾಡಿ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಘಟನೆ ಬಗ್ಗೆ ಸಂತ್ರಸ್ತ ಬಾಲಕ ಮನೆಯಲ್ಲಿ ಹೇಳಿದ್ದು, ಪೋಷಕರು ಕೇಸ್ ದಾಖಲಿಸಿದ್ದಾರೆ. ಮಾವು

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ : ಇಬ್ಬರ ಬಂಧನ Read More »

ಕೂಲಿ ಕಸಿದುಕೊಂಡ ಪದ್ಮಶ್ರಿ ಪುರಸ್ಕಾರ: ಪ್ರಶಸ್ತಿ ಬಂದ ಬಳಿಕ ಬದುಕೋದೇ ಇವ್ರಿಗೆ ಕಷ್ಟವಾಗ್ತಿದೆ

ಒರಿಸ್ಸಾ: ಪದ್ಮಶ್ರಿ ಪ್ರಶಸ್ತಿ ಸಿಕ್ಕಿದ ಬಳಿಕ ಕೂಲಿ ಕೆಲಸಕ್ಕೆ ಕೂಡ ನನ್ನನ್ನು ಯಾರೂ ಕರೆಯಿತ್ತಿಲ್ಲ. ಒಪ್ಪೊತ್ತಿನ ಊಟಕ್ಕೆ ಗತಿಯಿಲ್ಲ, ಎಂದು ಪದ್ಮಶ್ರೀ ಪುರಸ್ಕೃತರೋರ್ವರು ಹೇಳಿದ್ದು, ಇದೀಗ ಎಲ್ಲೆಡೆ ಸುದ್ದಿಯಾಗ್ತಿದೆ. ಹೌದು. ಇವರು ಒರಿಸ್ಸಾದ ಬಡರೈತ ದೈತಾರಿ ನಾಯಕ್. ಕೇಂದ್ರ ಸರಕಾರ ಕೊಟ್ಟ ಪದ್ಮಶ್ರಿ ಪ್ರಶಸ್ತಿ ಬಳಿಕ ಇವರ ಬಾಳು ಬೀದಿಪಾಲಾಗಿದೆ. ದೈತಾರಿ ನಾಯಕ್ ಒರಿಸ್ಸಾದಲ್ಲಿ 3 ಕಿ,ಮೀ ಗುಡ್ಡವನ್ನು ಅಗೆದು ಸುರಂಗವನ್ನು ಕೊರೆದು ಜನರ ಜಮೀನಿಗೆ ನೀರು ತಂದಿದ್ದರು. ಊರಿನ ಜನರ ಬಾಳನ್ನು ಬೆಳಗಿಸಿದ ಇವರಿಗೆ ಕೇಂದ್ರ

ಕೂಲಿ ಕಸಿದುಕೊಂಡ ಪದ್ಮಶ್ರಿ ಪುರಸ್ಕಾರ: ಪ್ರಶಸ್ತಿ ಬಂದ ಬಳಿಕ ಬದುಕೋದೇ ಇವ್ರಿಗೆ ಕಷ್ಟವಾಗ್ತಿದೆ Read More »

ಜೂ.10ರಂದು ವರ್ಷದ ಮೊದಲ ಸೂರ್ಯಗ್ರಹಣ, ಭಾರತದಲ್ಲಿ ಕಾಣಿಸುತ್ತಾ? ಹೇಗಿರುತ್ತೆ ಗ್ರಹಣ?

ಈ ವರ್ಷದ ಮೊದಲ ಸೂರ್ಯಗ್ರಹಣಕ್ಕೆ ದಿನಗಣನೆ ಆರಂಭವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಚಂದ್ರಗ್ರಹಣಕ್ಕೆ ಭೂಮಿಯ ಕೆಲ ಪ್ರದೇಶಗಳು ಸಾಕ್ಷಿಯಾಗಿದ್ದು, ಇದೀಗ ಜೂನ್ 10ರಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಈ ಬಾರಿ ಉಂಗುರ ತೊಡಿಸಿದ ರೀತಿಯಲ್ಲಿ ಸೂರ್ಯ ಗ್ರಹಣ ಕಾಣಿಸಲಿದ್ದು, ಅದನ್ನು ರಿಂಗ್ ಆಫ್ ಫೈರ್(ಬೆಂಕಿಯ ಉಂಗುರ) ಎಂದು ಕರೆಯಲಾಗಿದೆ. ರಿಂಗ್ ಆಫ್ ಫೈರ್ ಎಂದರೇನು?:ಚಂದ್ರನು ತನ್ನ ಕಕ್ಷೆಯಲ್ಲಿ ಭೂಮಿಯಿಂದ ಬಹು ದೂರದಲ್ಲಿದ್ದಾಗ ಸೂರ್ಯನಿಗೆ ಅಡ್ಡ ಬರುವ ಪರಿಣಾಮ ಅದು ಉಂಗುರ ತೊಡಿಸಿದ ರೀತಿಯಲ್ಲಿ ಕಾಣಿಸಲಿದೆ ಎಂದು

ಜೂ.10ರಂದು ವರ್ಷದ ಮೊದಲ ಸೂರ್ಯಗ್ರಹಣ, ಭಾರತದಲ್ಲಿ ಕಾಣಿಸುತ್ತಾ? ಹೇಗಿರುತ್ತೆ ಗ್ರಹಣ? Read More »

ನಾಮಪತ್ರ ಹಿಂಪಡೆಯಲು ಹಣದ ಆಮೀಷ ಆರೋಪ | ಕೆ.ಸುರೇಂದ್ರನ್ ವಿರುದ್ಧ ಕೇಸು ದಾಖಲಿಸಲು ಕೋರ್ಟ್ ಅನುಮತಿ

ಕಾಸರಗೋಡು: ಕೇರಳ ವಿಧಾನಸಭೆಗೆ ಕಳೆದ ಏಪ್ರಿಲ್ ನಲ್ಲಿ ಚುನಾವಣೆ ನಡೆದು ಮೇ ತಿಂಗಳಲ್ಲಿ ಫಲಿತಾಂಶ ಹೊರಬಂದಿತ್ತು. ವಿಧಾನಸಭಾ ಚುನಾವಣೆ ವೇಳೆ ಹಣ ಹಾಗೂ ಆಮಿಷ ನೀಡಿ ನಾಮಪತ್ರ ಹಿಂತೆಗೆಯಲು ಅನ್ಯ ಪಕ್ಷದ ಅಭ್ಯರ್ಥಿ ಓರ್ವರಿಗೆ ಒತ್ತಡ ಹೇರಿದ ಆರೋಪದ ಮೇಲೆ ಸುರೇಂದ್ರನ್ ಅವರ ಮೇಲೆ ಕೇಸು ದಾಖಲಿಸಿ ಕೊಳ್ಳಲು ನ್ಯಾಯಾಲಯ ಅನುಮತಿ ನೀಡಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರರವರ ಹೇಳಿಕೆ ಹಿನ್ನಲೆಯಲ್ಲಿ, ಎಲ್ ಡಿ ಎಫ್ ಅಭ್ಯರ್ಥಿಯಾಗಿದ್ದ ರಮೇಶನ್ ನೀಡಿದ ದೂರಿನನ್ವಯ ಇದೀಗ

ನಾಮಪತ್ರ ಹಿಂಪಡೆಯಲು ಹಣದ ಆಮೀಷ ಆರೋಪ | ಕೆ.ಸುರೇಂದ್ರನ್ ವಿರುದ್ಧ ಕೇಸು ದಾಖಲಿಸಲು ಕೋರ್ಟ್ ಅನುಮತಿ Read More »

ಮರಕ್ಕೆ ಢಿಕ್ಕಿ ಹೊಡೆದ ಆಂಬುಲೆನ್ಸ್ : ಮೂವರು ಸಾವು

ಕೇರಳ : ಆಂಬುಲೆನ್ಸ್ ಒಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಕಣ್ಣೂರಿನಲ್ಲಿ ಸೋಮವಾರ ನಡೆದಿದೆ. ಮೃತರನ್ನು ಪಯ್ಯನ್ನೂರು ನಿವಾಸಿಗಳಾದ ಬೀಜೋ (45), ಆತನ ಸಹೋದರಿ ರಜಿನಾ (37), ಮತ್ತು ಆಂಬುಲೆನ್ಸ್ ಚಾಲಕ ನಿತಿನ್ ರಾಜ್ (40) ಎಂದು ಗುರುತಿಸಲಾಗಿದೆ. ಜೊತೆಯಲ್ಲಿ ಇದ್ದ ಬೆಣ್ಣಿ ಎಂಬವರು ಗಂಭೀರ ಗಾಯಗೊಂಡಿದ್ದು ಕಣ್ಣೂರಿನ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದ್ದು, ಚಾಲಕ ನಿದ್ರೆಯ ಮಂಪರಿನಲ್ಲಿ ಇದ್ದುದರಿಂದ ನಿಯಂತ್ರಣ

ಮರಕ್ಕೆ ಢಿಕ್ಕಿ ಹೊಡೆದ ಆಂಬುಲೆನ್ಸ್ : ಮೂವರು ಸಾವು Read More »

ಪುಣೆ: ಕಾರ್ಖಾನೆಯಲ್ಲಿ ಅಗ್ನಿ ಅವಘಡ | 17 ಜನ ಮೃತ್ಯು

ಪುಣೆ: ಇಲ್ಲಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆ ಸಿಲುಕಿ 17 ಜನ ಪ್ರಾಣ ಕಳೆದುಕೊಂಡಿದ್ದಾರೆ. ಮುಲ್ಶಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಎಸ್‌ಯುಎಸ್‌ ಅಕ್ವಾ ಟೆಕ್ನಾಲಜೀಸ್’ ರಾಸಾಯನಿಕ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, 15 ಮಹಿಳೆಯರು ಸೇರಿದಂತೆ 17 ಮಂದಿ ಮೃತಪಟ್ಟಿದ್ದಾರೆ ಹಾಗೂ ಸಣ್ಣಪುಟ್ಟ ಗಾಯಗೊಂಡ 20 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪುಣೆ ಜಿಲ್ಲಾಡಳಿತ ತಿಳಿಸಿದೆ.ಬೆಂಕಿ ನಂದಿಸಿ ಅವಶೇಷಗಳ ತೆರವು ಕಾರ್ಯಾಚರಣೆ ಮತ್ತು ಮೃತ ವ್ಯಕ್ತಿಗಳ ಗುರುತು ಪತ್ತೆ

ಪುಣೆ: ಕಾರ್ಖಾನೆಯಲ್ಲಿ ಅಗ್ನಿ ಅವಘಡ | 17 ಜನ ಮೃತ್ಯು Read More »

ಲಸಿಕಾ ನೀತಿಯಲ್ಲಿ ಮತ್ತೆ ಯೂ ಟರ್ನ್ ಹೊಡೆದ ಕೇಂದ್ರ, ರಾಜ್ಯಗಳಿಗಿಲ್ಲ ಹೊಣೆಗಾರಿಕೆ

ನವದೆಹಲಿ: ಲಸಿಕೆ ಹಂಚಿಕೆಯಲ್ಲಿ ರಾಜ್ಯಗಳಿಗೆ ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ‌ ಮತ್ತೆ ಲಸಿಕಾ ನೀತಿಯಲ್ಲಿ ಯೂ ಟರ್ನ್ ಹೊಡೆದಿದೆ.ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಇದೇ 21ರಿಂದ ಕೇಂದ್ರ ಸರ್ಕಾರವೇ ಹದಿನೆಂಟು ವರ್ಷ ಮೀರಿದ ಎಲ್ಲರಿಗೂ ಉಚಿತ ಲಸಿಕೆ‌ ನೀಡುವುದಾಗಿ ಪ್ರಕಟಿಸಿದ್ದು, ರಾಜ್ಯಗಳಿಗೆ ಲಸಿಕೆ ಹಂಚುವ ಜವಾಬ್ದಾರಿಯನ್ನು ಕೇಂದ್ರವೇ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.ಕೊರೊನ ಎರಡನೇ ಅಲೆಯನ್ನು ಹತೋಟಿಗೆ ತರಲು ಕೇಂದ್ರ ಸರ್ಕಾರ ಶಕ್ತಿಮೀರಿ ಪ್ರಯತ್ನ ‌ನಡೆಸಿದೆ. ಅದಾಗ್ಯೂ ಹಲವು ಮಂದಿ ತಮ್ಮವರನ್ನು

ಲಸಿಕಾ ನೀತಿಯಲ್ಲಿ ಮತ್ತೆ ಯೂ ಟರ್ನ್ ಹೊಡೆದ ಕೇಂದ್ರ, ರಾಜ್ಯಗಳಿಗಿಲ್ಲ ಹೊಣೆಗಾರಿಕೆ Read More »

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಜೂನ್ 21ರಿಂದ ಕೇಂದ್ರದಿಂದಲೇ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ ದೀಪಾವಳಿವರೆಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಉಚಿತ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು. ಮೋದಿ ಭಾಷಣದ ಸಾರಾಂಶವೇನು?:ಕೊರೊನಾ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿದ್ದು, ಅನೇಕು ತಮ್ಮವರನ್ನು ಕಳೆದುಕೊಂಡಿದ್ದಾರೆ. ಇದು 100 ವರ್ಷಗಳಲ್ಲಿಯೇ ಅತಿ ದೊಡ್ಡ ಮಹಾಮಾರಿ. ಕೋವಿಡ್ ವಿರುದ್ಧ ಹೋರಾಟದ ವೇಳೆ ದೇಶದಲ್ಲಿಯೇ ಹೊಸ ಆರೋಗ್ಯ ವ್ಯವಸ್ಥೆ

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ Read More »

ಎರಡು ಮಕ್ಕಳ ತಾಯಿ, ಮಗನ ವಯಸ್ಸಿನ ಬಾಲಕನ ಜೊತೆ ಪರಾರಿ: ಕಾರಣ ನಿಗೂಢ

ಛತ್ತೀಸ್‌ಗಢ: ಇಲ್ಲಿನ ಕೋರಬಾದದಲ್ಲಿ 30 ವರ್ಷದ ಮಹಿಳೆಯೊಬ್ಬಳು ತನ್ನ ಮಗನ ಸಮನವಾದ 14 ವರ್ಷದ ಬಾಲಕನೊಂದಿಗೆ ಓಡಿ ಹೋದ ಘಡನೆ ನಡೆದಿದೆ. ಈ ಮಹಿಳೆಗೆ ಎರಡು ಮಕ್ಕಳಿದ್ದು ಈ ರೀತಿ ಪರಾರಿಯಾಗಿರುವುದು ಆತಂಕ ಉಂಟುಮಾಡಿದೆ. ಈಕೆಯ ಗಂಡ ಸರಕಾರಿ ನೌಕರನಾಗಿದ್ದ. ಈಕೆಗೆ ಅದೇ ಊರಿನ ಬಾಲಕನೊಂದಿಗೆ ಪ್ರೇಮಾಂಕುರಗೊಂಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಇವರ ನಡುವೆ ಕುಚುಕು ಪ್ರೇಮ ಕೂಡ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಇವರಿಬ್ಬರ ನಡುವಿನ ಈ ವಿಚಿತ್ರ ಪ್ರೇಮ ದೈಹಿಕ ಸಂಪರ್ಕದವರೆಗೂ ತಲುಪಿತ್ತು. ಇದಕ್ಕೆ

ಎರಡು ಮಕ್ಕಳ ತಾಯಿ, ಮಗನ ವಯಸ್ಸಿನ ಬಾಲಕನ ಜೊತೆ ಪರಾರಿ: ಕಾರಣ ನಿಗೂಢ Read More »