ರಾಷ್ಟ್ರೀಯ

ಬದಲಾಗಿದೆ ಕಾಶ್ಮೀರ/ ಕೇಳುತ್ತಿದೆ ಪ್ರವಾಸಿಗರ ಕಲರವ

ಸಮಗ್ರ ನ್ಯೂಸ್: ಭೂ ಲೋಕದ ಸ್ವರ್ಗ ಎಂದು ಹೆಸರಾಗಿರುವ ಕಾಶ್ಮೀರದಲ್ಲಿ ಕೆಲವು ವರ್ಷಗಳ ಹಿಂದೆ ಗುಂಡಿನ ಸದ್ದು ಮಾತ್ರ ಕೇಳಿಸುತ್ತಿದ್ದು, ಇದೀಗ ಈಗ ಅತಿಥಿಗಳ ಕಲರವ ಕೇಳಿಬರುತ್ತಿದೆ. ಕಣಿವೆ ರಾಜ್ಯಕ್ಕೆ ಈಗ ದಾಖಲೆಯ ಸಂಖ್ಯೆಯಲ್ಲಿ ಪ್ರವಾಸಿಗರ ಆಗಮನವಾಗುತ್ತಿದ್ದು, ಪ್ರವಾಸೋದ್ಯಮದ ಚಿತ್ರಣವೇ ಬದಲಾಗುತ್ತಿದೆ. ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯಲ್ಲಿ ಬರೋಬ್ಬರಿ 12,000 ಹೋಮ್‍ಸ್ಟೇಗಳು ಬುಕ್ಕಿಂಗ್ ಆಗಿವೆ ಎಂಬುದೇ ಇಲ್ಲಿಗೆ ಪ್ರವಾಸಿಗರು ಎಷ್ಟು ಆಕರ್ಷಿತರಾಗುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ. ಇದಲ್ಲದೆ ಇಲ್ಲಿನ ಸ್ಥಳೀಯರೂ ಪ್ರವಾಸಿಗರನ್ನು ಆಕರ್ಷಿಸಲು ತಮ್ಮ ವಸತಿ ಸ್ಥಳಗಳಲ್ಲಿಯೇ ಹೋಮ್ ಸ್ಟೇ […]

ಬದಲಾಗಿದೆ ಕಾಶ್ಮೀರ/ ಕೇಳುತ್ತಿದೆ ಪ್ರವಾಸಿಗರ ಕಲರವ Read More »

ಭಾರತೀಯ ರಿಸರ್ವ್ ಬ್ಯಾಂಕಿನ 90ನೇ ಸಂಸ್ಥಾಪನಾ ದಿನ/ ವಿಶೇಷ ನಾಣ್ಯ ಬಿಡುಗಡೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ, ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ ಬಿಐ) 90ನೇ ಸಂಸ್ಥಾಪನಾ ದಿನದ ಅಂಗವಾಗಿ ವಿಶೇಷ ನಾಣ್ಯವನ್ನು ಬಿಡುಗಡೆಗೊಳಿಸಿದರು.ಈ ನಾಣ್ಯವು ಶೇ.99.99ರಷ್ಟು ಶುದ್ಧವಾದ ಬೆಳ್ಳಿಯಿಂದ ಮಾಡಲ್ಪಟ್ಟಿದ್ದು, ಅಂದಾಜು 40 ಗ್ರಾಂ ತೂಕ ಹೊಂದಿದೆ. ಇದು ಆರ್‍ಬಿಐನ ಶ್ರೀಮಂತ ಇತಿಹಾಸ ಹಾಗೂ 9 ದಶಕಗಳ ಸಾಧನೆಯನ್ನು ಪ್ರತಿಬಿಂಬಿಸುತ್ತದೆ. ಕಳೆದ ಒಂದು ದಶಕದಲ್ಲಿ RBI ಹಾಗೂ ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಫಲವಾಗಿ ಬ್ಯಾಂಕಿಂಗ್ ವಲಯ ಉತ್ತಮ ರೀತಿಯಲ್ಲಿ ಮುಂದಿನ ಹತ್ತು ವರ್ಷಗಳಲ್ಲಿ ಕೇಂದ್ರೀಯ ಬ್ಯಾಂಕ್

ಭಾರತೀಯ ರಿಸರ್ವ್ ಬ್ಯಾಂಕಿನ 90ನೇ ಸಂಸ್ಥಾಪನಾ ದಿನ/ ವಿಶೇಷ ನಾಣ್ಯ ಬಿಡುಗಡೆ Read More »

ಕೇಜ್ರಿವಾಲ್‍ಗೆ ಎಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ/ ತಿಹಾರ್ ಜೈಲಿಗೆ ಶಿಫ್ಟ್

ಸಮಗ್ರ ನ್ಯೂಸ್: ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ, ಅರವಿಂದ್ ಕೇಜ್ರಿವಾಲ್‍ಗೆ ಎಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದು, ಇದರ ಜೊತೆಗೆ ಬಿಗಿ ಭದ್ರತೆಯ ಮಧ್ಯೆ ತಿಹಾರ್ ಜೈಲಿಗೆ ಕರೆತರಲಾಗಿದೆ. ಬಂಧನದ ಸಮಯದಲ್ಲಿ ಓದುವ ಸಾಮಗ್ರಿಗಳಿಗಾಗಿ ವಿಶೇಷ ವಿನಂತಿ ಮಾಡಿದ್ದಾರೆ. ಭಗವದ್ಗೀತೆ, ರಾಮಾಯಣ ಮತ್ತು ನೀರಜಾ ಚೌಧರಿ ಅವರ “ಹೌ ಪ್ರೈಮ್ ಮಿನಿಸ್ಟರ್ ಡಿಸೈಡ್ಸ್” ಎಂಬ ಮೂರು ಪುಸ್ತಕಗಳನ್ನು ತಮ್ಮೊಂದಿಗೆ ಇಟ್ಟುಕೊಳ್ಳಲು ಅವರ ವಕೀಲರು ನ್ಯಾಯಾಲಯದಿಂದ ಅನುಮತಿ ಕೋರಿದ್ದಾರೆ. ಅವರು ಜೈಲಿನಲ್ಲಿದ್ದಾಗ ಅಗತ್ಯ ಔಷಧಿಗಳನ್ನು

ಕೇಜ್ರಿವಾಲ್‍ಗೆ ಎಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ/ ತಿಹಾರ್ ಜೈಲಿಗೆ ಶಿಫ್ಟ್ Read More »

ಪ್ರೆಗ್ನೆನ್ಸಿ ವಿಚಾರದಲ್ಲಿ ನೆಟ್ಟಿಗರ ಪ್ರಶ್ನೆಗೆ ಉತ್ತರ ಕೊಟ್ಟ ಪರಿಣಿತಿ ಚೋಪ್ರಾ

ಸಮಗ್ರ ನ್ಯೂಸ್:‌ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ರವರು ‘ಅಮರ್ ಸಿಂಗ್ ಚಮ್ಕಿಲಾ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದು, ಇದರ ನಡುವೆ ಪರಿಣಿತಿ ಚೋಪ್ರಾ ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹಬ್ಬಿದ್ದು, ಈ ವದಂತಿಗೆ ನಟಿ ಸ್ಪಷ್ಟನೆ ನೀಡಿದ್ದಾರೆ. ನಟಿ ಪರಿಣಿತಿ ಚೋಪ್ರಾ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದ ಸಂದರ್ಶನಕ್ಕೆ ಬರುವಾಗ ನಟಿ ಫಿಟೆಡ್ ಬಟ್ಟೆಯನ್ನು ಧರಿಸಿದ್ದರು. ಇದನ್ನು ನೋಡಿ ಚೋಪ್ರಾ ರವರು ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹರಡಿತ್ತು. ಈ ವಿಷಯ ಅವರಿಗೆ

ಪ್ರೆಗ್ನೆನ್ಸಿ ವಿಚಾರದಲ್ಲಿ ನೆಟ್ಟಿಗರ ಪ್ರಶ್ನೆಗೆ ಉತ್ತರ ಕೊಟ್ಟ ಪರಿಣಿತಿ ಚೋಪ್ರಾ Read More »

ನವದೆಹಲಿ:ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಸಮಗ್ರ ನ್ಯೂಸ್‌ : ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಘಟನೆ ನಡೆದಿದೆ. ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು ಇವಿಎಂ ಇಲ್ಲದೆ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾಷಣ ಮಾಡಿದ್ದು,. ಇದರ ಜೊತೆಗೆ ಬಿಜೆಪಿ ಹಿರಿಯ ನಾಯಕ ಹರ್ದೀಪ್ ಸಿಂಗ್ ಪುರಿ ನೇತೃತ್ವದ ನಿಯೋಗ ದೇಶ ವಿರೋಧಿ ಹೇಳಿಕೆ ಎಂದು ವ್ಯಾಖ್ಯಾನಿಸಿ ದೂರು ನೀಡಿದೆ. ಕೇಜ್ರಿವಾಲ್ ಇಡಿ ಬಂಧನ ಖಂಡಿಸಿ ಭಾನುವಾರ ಇಂಡಿಯಾ ಒಕ್ಕೂಟ ದೆಹಲಿಯ

ನವದೆಹಲಿ:ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ Read More »

ದೆಹಲಿ: ದಲಿತ ಬಾಲಕ ಮೇಲ್ಜಾತಿ ವ್ಯಕ್ತಿಯ ನೀರಿನ ಬಕೆಟ್ ಮುಟ್ಟಿದ್ದಕ್ಕೆ ಹಲ್ಲೆ

ಸಮಗ್ರ ನ್ಯೂಸ್ : ಶಾಲೆಯಲ್ಲಿ ಹ್ಯಾಂಡ್ ಪಂಪ್ ಬಳಿ ಇರಿಸಲಾಗಿದ್ದ ಮೇಲ್ಜಾತಿ ವ್ಯಕ್ತಿಯ ನೀರಿನ ಬಕೆಟ್ ಅನ್ನು ಎಂಟು ವರ್ಷದ ದಲಿತ ಬಾಲಕ ಮುಟ್ಟಿದನು ಎಂಬ ಕಾರಣಕ್ಕೆ ಬಾಲಕನಿಗೆ ಥಳಿಸಿರುವ ಘಟನೆ ರಾಜಸ್ಥಾನದ ಅಲ್ವಾರ್‌ನ ಮಂಗಳೇಶಪುರ ಗ್ರಾಮದಲ್ಲಿ ನಡೆದಿದೆ. ನಾಲ್ಕನೇ ತರಗತಿ ಬಾಲಕ ಚಿರಾಗ್ ಎಂದು ಗುರುತಿಸಲಾಗಿದೆ. ರತಿರಾಮ್ ಠಾಕೂರ್ ಎಂಬ ಮೇಲ್ಜಾತಿಯ ವ್ಯಕ್ತಿ ಹ್ಯಾಂಡ್ ಪಂಪ್‌ನಿಂದ ಬಕೆಟ್‌ನಲ್ಲಿ ನೀರು ತುಂಬಿಸುತ್ತಿದ್ದನು. ಚಿರಾಗ್ ನೀರು ಕುಡಿಯಲು ಬಕೆಟ್ ಅನ್ನು ಸರಿಸಿದ್ದ. ಆತ ಮುಟ್ಟಿದ್ದಕ್ಕೆ ಕೋಪಗೊಂಡ ಠಾಕೂರ್, ಚಿರಾಗ್

ದೆಹಲಿ: ದಲಿತ ಬಾಲಕ ಮೇಲ್ಜಾತಿ ವ್ಯಕ್ತಿಯ ನೀರಿನ ಬಕೆಟ್ ಮುಟ್ಟಿದ್ದಕ್ಕೆ ಹಲ್ಲೆ Read More »

ಕಾಂಗ್ರೆಸ್ ಗೆ ರಿಲೀಫ್ ಕೊಟ್ಟ ಸುಪ್ರೀಂ/ ತೆರಿಗೆ ವಸೂಲಿಗೆ‌ ತಡೆ

ಸಮಗ್ರ ನ್ಯೂಸ್: ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ ವಿಚಾರದಲ್ಲಿ ಕಾಂಗ್ರೆಸ್‌ಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಲೋಕಸಭಾ ಎಲೆಕ್ಷನ್ ಹೊತ್ತಿನಲ್ಲಿ ಬಾಕಿ ಇರುವ ಕೋಟ್ಯಾಂತರ ರೂಪಾಯಿ ತೆರಿಗೆ ಪಾವತಿಸಲು IT ಇಲಾಖೆ ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ಕಾಂಗ್ರೆಸ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣೆಯ ಸಮಯದಲ್ಲಿ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಹೇಳಿದೆ. ಸುಪ್ರೀಂಕೋರ್ಟ್ ಮಹತ್ವದ

ಕಾಂಗ್ರೆಸ್ ಗೆ ರಿಲೀಫ್ ಕೊಟ್ಟ ಸುಪ್ರೀಂ/ ತೆರಿಗೆ ವಸೂಲಿಗೆ‌ ತಡೆ Read More »

ನವದೆಹಲಿ: ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್‌ ಪಕ್ಷದ ತೆರಿಗೆ ವಸೂಲಿ ಇಲ್ಲ| ಕೇಂದ್ರ ಭರವಸೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿಯುವರೆಗೂ ಕಾಂಗ್ರೆಸ್‌ ಪಕ್ಷ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.‌ ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್‌ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾ. ಬಿ.ವಿ.ನಾಗರತ್ನ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತು. ಈ ವೇಳೆ ಸಾಲಿಸಿಟರ್‌ ಜನರಲ್‌

ನವದೆಹಲಿ: ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್‌ ಪಕ್ಷದ ತೆರಿಗೆ ವಸೂಲಿ ಇಲ್ಲ| ಕೇಂದ್ರ ಭರವಸೆ Read More »

ಬಿಜೆಪಿ 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ;ರಾಹುಲ್‌

ಸಮಗ್ರ ನ್ಯೂಸ್‌ : ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಇಲ್ಲದೇ ʻ400 ಪಾರ್‌ʼ ಘೋಷಣೆ ಮಾಡಲು ಸಾಧ್ಯವಿಲ್ಲ. 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ. ಮೋದಿ ಒಬ್ಬರೇ ಈ ಕೆಲಸ ಮಾಡುತ್ತಿಲ್ಲ. ಅವರ ಜೊತೆಗೆ ಕೆಲವು ಉದ್ಯಮಿಗಳೂ ಸೇರಿಕೊಂಡಿದ್ದಾರೆ ಎಂದು ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ED ಬಂಧನ ಖಂಡಿಸಿ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ I.N.D.I.A. ಒಕ್ಕೂಟದ ʻಪ್ರಜಾಪ್ರಭುತ್ವ ಉಳಿಸಿʼ ಪ್ರತಿಭಟನಾ ರ‍್ಯಾಲಿಯನ್ನು ದ್ದೇಶಿಸಿ ಅವರು, ಬಿಜೆಪಿ ಗೆದ್ದು

ಬಿಜೆಪಿ 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ;ರಾಹುಲ್‌ Read More »

ಕೋಲ್ಕತ್ತಾ: ಲೋಕಸಭಾ ಚುನಾವಣೆ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ; ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ ಎಂದು ಎನ್‌ಡಿಎ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಸವಾಲು ಎಸೆದಿದ್ದಾರೆ. ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಇಂದು ಮಮತಾ ಬ್ಯಾನರ್ಜಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹಾಕಿರುವ ಎನ್‌ಡಿಎ ಒಕ್ಕೂಟಕ್ಕೆ ನಾನು ಸವಾಲು ಎಸೆಯುತ್ತೇನೆ. ಬಿಜೆಪಿಯವರು 400 ಪಾರ್ ಎಂದು ಹೇಳುತ್ತಿದ್ದಾರೆ. ನಾನು ಮೊದಲು 200 ಸೀಟುಗಳ ಮಾನದಂಡವನ್ನು ದಾಟಿ

ಕೋಲ್ಕತ್ತಾ: ಲೋಕಸಭಾ ಚುನಾವಣೆ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ; ಮಮತಾ ಬ್ಯಾನರ್ಜಿ Read More »