ರಾಷ್ಟ್ರೀಯ

HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಿಸಿದ ಸರ್ಕಾರ| ಮೇ.31 ಕೊನೆಯ ದಿನ

ಸಮಗ್ರ ನ್ಯೂಸ್: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನಿರ್ದಿಷ್ಟ ಸಮಯ ನೀಡಿತ್ತು ಆದರೆ ಇದೀಗ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೇ 31ರ ವರೆಗೆ ಅಂದರೆ ಮೂರು ತಿಂಗಳು ವಿಸ್ತರಿಸಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್​ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಸದನದಲ್ಲಿ ಗಡುವು ವಿಸ್ತರಣೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾಹಿತಿ ನೀಡಿದ್ದರು. ಇಂದು ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ […]

HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಿಸಿದ ಸರ್ಕಾರ| ಮೇ.31 ಕೊನೆಯ ದಿನ Read More »

ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ| 11 ಕಾರ್ಮಿಕರು ಸಜೀವ ದಹನ

ಸಮಗ್ರ ನ್ಯೂಸ್: ಬಣ್ಣದ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 11ಮಂದಿ ಕಾರ್ಮಿಕರು ಸಜೀವ ದಹನವಾದ ಘಟನೆ ಫೆ. 15ರಂದು ನವದೆಹಲಿಯ ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ 11ಮಂದಿ ಕಾರ್ಮಿಕರ ಸುಟ್ಟ ಮೃತದೇಹಗಳು ಪತ್ತೆಯಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತು ಈ ವೇಳೆ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ| 11 ಕಾರ್ಮಿಕರು ಸಜೀವ ದಹನ Read More »

20 ಮೊಬೈಲ್ ಅನ್ನ ಒಟ್ಟೊಟ್ಟಿಗೆ ಬಳಸ್ತಾರಂತೆ ಗೂಗಲ್ ಸಿಇಒ ಸುಂದರ್ ಪಿಚೈ! ಹೇಗಿದೆ ಸಾಧ್ಯ?

ಸಮಗ್ರ ನ್ಯೂಸ್: ಈ ಟೆಕ್ ಕಂಪನಿಗಳ ದೊಡ್ಡ ಬಾಸ್‌ಗಳು ತಮ್ಮ ದೈನಂದಿನ ಜೀವನದಲ್ಲಿ ತಂತ್ರಜ್ಞಾನವನ್ನು ಎಷ್ಟರ ಮಟ್ಟಿಗೆ ಬಳಸುತ್ತಾರೆ ಅಂತ ನೀವು ತಿಳಿದುಕೊಂಡರೆ ಗ್ಯಾರೆಂಟಿ ಶಾಕ್ ಆಗ್ತೀರಾ. ಬನ್ನಿ ಹಾಗಾದರೆ ಗೂಗಲ್ ಮತ್ತು ಆಲ್ಫಾಬೆಟ್‌ನ ಸಿಇಒ ಸುಂದರ್ ಪಿಚೈ ಅವರು ಈ ಬಗ್ಗೆ ಇತ್ತೀಚೆಗೆ ನೀಡಿದ ಒಂದು ಸಂದರ್ಶನದಲ್ಲಿ ಏನಂತ ಹೇಳಿದ್ದಾರೆ ನೋಡಿ. ತಮ್ಮ ಟೆಕ್ ಅಭ್ಯಾಸಗಳ ಬಗ್ಗೆ ಮಾತನಾಡಿದ ಸುಂದರ್ ಪಿಚೈ ಅವರು ಹೇಳಿದ ಒಂದು ಆಶ್ಚರ್ಯಕರವಾದ ವಿಷಯವೆಂದರೆ ಅವರು ವಿವಿಧ ಕಾರಣಗಳಿಗಾಗಿ ಒಂದೇ ಬಾರಿಗೆ

20 ಮೊಬೈಲ್ ಅನ್ನ ಒಟ್ಟೊಟ್ಟಿಗೆ ಬಳಸ್ತಾರಂತೆ ಗೂಗಲ್ ಸಿಇಒ ಸುಂದರ್ ಪಿಚೈ! ಹೇಗಿದೆ ಸಾಧ್ಯ? Read More »

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ದೆಹಲಿಯಲ್ಲಿ ರೈತರ ದೆಹಲಿ ಚಲೋ ಪ್ರತಿಭಟನೆ

ಸಮಗ್ರ ನ್ಯೂಸ್: ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಘೋಷಣೆ ಮಾಡಿದೆ. ಉತ್ತರ ಪ್ರದೇಶ, ಹರ್ಯಾಣ ಮತ್ತು ಪಂಜಾಬ್ ಮತ್ತು ಇತರೆ ಸ್ಥಳಗಳಿಂದ ರೈತರು ಬಂದು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತರು ಬ್ಯಾರಿಕೇಡ್ ತೆಗೆಯಲು ಪ್ರಯತ್ನಿಸಿದ್ದರಿಂದ ಪೊಲೀಸರು ಅಶ್ರುವಾಯು ಶೆಲ್ ಗಳನ್ನು ಸಿಡಿಸಿದ್ದಾರೆ. ಮತ್ತೊಂದೆಡೆ, ರೈತರ ‘ದೆಹಲಿ ಚಲೋ’

ದೆಹಲಿಯಲ್ಲಿ ರೈತರ ದೆಹಲಿ ಚಲೋ ಪ್ರತಿಭಟನೆ Read More »

ಫೆ.16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಎಸ್‌ಕೆಎಂ

ಸಮಗ್ರ ನ್ಯೂಸ್: ರೈತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ದೆಹಲಿ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದು ಎರಡು ಮೂರು ದಿನಗಳಿಂದ ರೈತರ ಹೋರಾಟ ತಾರಕಕ್ಕೇರಿತು. ದೆಹಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಗೆ ಆಗಮಿಸುತ್ತಿದ್ದರು. ಇವರನ್ನು ತಡೆಯುವಲ್ಲಿ ಪೊಲೀಸರು ಹರಸಾಹಸ ಪಡಬೇಕಾಯಿತು. ಇದೀಗ ಸಂಯುಕ್ತ ಕಿಸಾನ್ ಮೋರ್ಚಾ ಫೆಬ್ರವರಿ 16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬ್ಯಾನರ್‌ನಡಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ರೈತ ಸಂಘಗಳು ತಮ್ಮ ಇತರ ಬೇಡಿಕೆಗಳನ್ನು ಕೇಂದ್ರ

ಫೆ.16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಎಸ್‌ಕೆಎಂ Read More »

ಹೆಚ್ಎಸ್ಆರ್ ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ ಮಾಡಿದೆ. ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್

ಹೆಚ್ಎಸ್ಆರ್ ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ Read More »

Ev Trend: ಎಲೆಕ್ಟ್ರಿಕ್ ವಾಹನ ಸಬ್ಸಿಡಿ ಹೊಸ ರೂಲ್ಸ್, ಕೇಂದ್ರ ಸರ್ಕಾರದ ಪ್ರಮುಖ ನಿರ್ಧಾರ ಏನು ಗೊತ್ತಾ?

ಸಮಗ್ರ ನ್ಯೂಸ್: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು, ಎಲೆಕ್ಟ್ರಿಕ್ ವಾಹನ ತಯಾರಕರಿಗೆ ಪ್ರೋತ್ಸಾಹವನ್ನು ಹೆಚ್ಚು ಸಮರ್ಥನೀಯವಾಗಿಸುವ ಉದ್ದೇಶದಿಂದ ಕೇಂದ್ರವು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ಎಲೆಕ್ಟ್ರಿಕ್ ವಾಹನಗಳ ವೇಗದ ಅಡಾಪ್ಷನ್ ಮತ್ತು ಉತ್ಪಾದನೆ (FAME-II) ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ಭಾರಿ ಸಬ್ಸಿಡಿಗಳನ್ನು ನೀಡುತ್ತಿದೆ. ಆದಾಗ್ಯೂ, ಕೇಂದ್ರ ಭಾರೀ ಕೈಗಾರಿಕೆಗಳ ಸಚಿವಾಲಯವು ಇತ್ತೀಚೆಗೆ ಫೇಮ್-II ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಲೆಕ್ಕಾಚಾರ ಮಾಡುವ ವಿಧಾನವನ್ನು ಬದಲಾಯಿಸಿದೆ. ವಾಹನಗಳ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಆದ್ದರಿಂದ ಸಬ್ಸಿಡಿಗಳಿಗಾಗಿ ಎಕ್ಸ್ ಶೋರೂಂ ಬೆಲೆಗಳನ್ನು

Ev Trend: ಎಲೆಕ್ಟ್ರಿಕ್ ವಾಹನ ಸಬ್ಸಿಡಿ ಹೊಸ ರೂಲ್ಸ್, ಕೇಂದ್ರ ಸರ್ಕಾರದ ಪ್ರಮುಖ ನಿರ್ಧಾರ ಏನು ಗೊತ್ತಾ? Read More »

ಸ್ಕೂಟರ್ ಖರೀದಿಸಲು ಯೋಚಿಸ್ತಾ ಇದ್ದಿರಾ?| ಹಾಗಾದ್ರೆ ಇಲ್ಲಿದೆ ಕಣ್ಣುಕುಕ್ಕುವ ವೈಶಿಷ್ಟ್ಯಗಳು!

ಸಮಗ್ರ ನ್ಯೂಸ್: ದಿನನಿತ್ಯದ ಬಳಕೆಗೆ ಬಹುತೇಕರು ಸ್ಕೂಟರ್‌ಗಳನ್ನು ಆಯ್ಕೆಮಾಡಿಕೊಳ್ಳುತ್ತಾರೆ. ಆದರೆ, ಯಾವ ಮಾದರಿಯನ್ನು (ಮಾಡೆಲ್) ಕೊಂಡುಕೊಳ್ಳಬೇಕು, ಬೆಲೆ ಎಷ್ಟು, ವೈಶಿಷ್ಟ್ಯಗಳೇನು ಎಂಬ ಹಲವು ಗೊಂದಲವಿರುತ್ತದೆ. ರೂ.85,000 ಗಿಂತ ಕಡಿಮೆ ಬೆಲೆಗೆ ಸಿಗುವ ಹೋಂಡಾ ಆಕ್ಟಿವಾ 125, ಟಿವಿಎಸ್ ಜುಪಿಟರ್, ಹೀರೋ ಡೆಸ್ಟಿನಿ ಪ್ರೈಮ್ ಸ್ಕೂಟರ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ. ಮೊದಲಿಗೆ ಹೋಂಡಾ ಆಕ್ಟಿವಾ 125 (Honda Activa 125) ಸ್ಕೂಟರ್, ರೂ.79,806 ಆರಂಭಿಕ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಇದರ 124 ಸಿಸಿ ಎಂಜಿನ್ 8.30 ಪಿಎಸ್

ಸ್ಕೂಟರ್ ಖರೀದಿಸಲು ಯೋಚಿಸ್ತಾ ಇದ್ದಿರಾ?| ಹಾಗಾದ್ರೆ ಇಲ್ಲಿದೆ ಕಣ್ಣುಕುಕ್ಕುವ ವೈಶಿಷ್ಟ್ಯಗಳು! Read More »

ಮದರಸಾ ಧ್ವಂಸ ವೇಳೆ ಹಿಂಸಾಚಾರ| ಕಂಡಲ್ಲಿ ಗುಂಡು ಹಾರಿಸಲು ಆದೇಶ

ಸಮಗ್ರ ನ್ಯೂಸ್: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಧಿಕಾರಿಗಳು ಕಾನೂನುಬಾಹಿರ ಎಂದು ಘೋಷಿಸಿದ ಮದರಸಾವನ್ನು ನೆಲಸಮಗೊಳಿಸಲು ಹೋದಾಗ ಜನಸಮೂಹದೊಂದಿಗಿನ ಘರ್ಷಣೆಯಲ್ಲಿ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಧ್ವಂಸವನ್ನು ವಿರೋಧಿಸಿದ ವನ್ಬುಲ್ಪುರದಲ್ಲಿ ಜನಸಮೂಹವು ಅವರ ಮೇಲೆ ಕಲ್ಲುಗಳನ್ನು ಎಸೆಯಿತು. ಅವರೆಲ್ಲರೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರದೇಶದಲ್ಲಿ ಶೂಟ್-ಎಟ್-ಸೈಟ್ ಆದೇಶಗಳನ್ನ ಹೊರಡಿಸಲಾಗಿದೆ ಮತ್ತು ಭದ್ರತೆಯನ್ನು ಬಲಪಡಿಸಲಾಗಿದೆ. ಪೊಲೀಸರಲ್ಲದೆ, ಆಡಳಿತ ಮತ್ತು ನಾಗರಿಕ ಅಧಿಕಾರಿಗಳ ತಂಡವು ಪಕ್ಕದ ಪ್ರಾರ್ಥನಾ ಪ್ರದೇಶವನ್ನ ಹೊಂದಿರುವ ಮದರಸಾಕ್ಕೆ ಹೋಗಿತ್ತು. ಜೆಸಿಬಿ ಯಂತ್ರವು ಚಲಿಸಲು ಪ್ರಾರಂಭಿಸಿದಾಗ, “ಅಶಿಸ್ತಿನ

ಮದರಸಾ ಧ್ವಂಸ ವೇಳೆ ಹಿಂಸಾಚಾರ| ಕಂಡಲ್ಲಿ ಗುಂಡು ಹಾರಿಸಲು ಆದೇಶ Read More »