ರಾಷ್ಟ್ರೀಯ

ಷೇರು ಮಾರುಕಟ್ಟೆಯಲ್ಲಿ ನಾಗಾಲೋಟ| ಗರಿಷ್ಠ ಮಟ್ಟಕ್ಕೆ ತಲುಪಿದ ಸೆನ್ಸೆಕ್ಸ್, ನಿಪ್ಟಿ

ಸಮಗ್ರ ನ್ಯೂಸ್: ಷೇರು ಮಾರುಕಟ್ಟೆ ಇಂದು ಏರಿಕೆಯನ್ನ ಕಾಣುತ್ತಿದ್ದು, ಭಾರತದ ಬ್ಲೂ-ಚಿಪ್ ಸೂಚ್ಯಂಕಗಳಾದ ನಿಫ್ಟಿ ಮತ್ತು ಸೆನ್ಸೆಕ್ಸ್ ಇಂದು ಹೊಸ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನ ತಲುಪಿದವು. ಸೆನ್ಸೆಕ್ಸ್ 427 ಪಾಯಿಂಟ್ಸ್ ಏರಿಕೆಗೊಂಡು 72,148 ಕ್ಕೆ ತಲುಪಿದೆ ಮತ್ತು ನಿಫ್ಟಿ 21,735 ಕ್ಕೆ ಪ್ರಾರಂಭವಾಯಿತು. ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 500 ಅಂಕಗಳ ಜಿಗಿತದೊಂದಿಗೆ 72,000 ಮಟ್ಟವನ್ನು ದಾಟಿತು. ನಿಫ್ಟಿ 21,700 ಮಟ್ಟವನ್ನು ದಾಟಿದೆ. ಇದರ ನಂತರವೂ, ಷೇರು ಮಾರುಕಟ್ಟೆ ಏರುತ್ತಲೇ ಇತ್ತು. ಐಟಿ ಸೇವಾ ಸಂಸ್ಥೆಗಳ ಫಲಿತಾಂಶಗಳು ಮತ್ತು […]

ಷೇರು ಮಾರುಕಟ್ಟೆಯಲ್ಲಿ ನಾಗಾಲೋಟ| ಗರಿಷ್ಠ ಮಟ್ಟಕ್ಕೆ ತಲುಪಿದ ಸೆನ್ಸೆಕ್ಸ್, ನಿಪ್ಟಿ Read More »

100 ಶತಕೋಟಿ ಡಾಲರ್ ಕ್ಲಬ್ ಸೇರಿದ ಅಂಬಾನಿ/ ಏಷ್ಯಾದಲ್ಲೇ ಶ್ರೀಮಂತ ವ್ಯಕ್ತಿ

ಸಮಗ್ರ ನ್ಯೂಸ್: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು 100 ಶತಕೋಟಿ ಡಾಲರ್ ಕ್ಲಬ್ ಕೂಡ ಸೇರುವ ಮೂಲಕ ಏಷ್ಯಾದಲ್ಲೇ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗೌತಮ್ ಅದಾನಿ ಅವರು ಏಷ್ಯಾದ ಶ್ರೀಮಂತ ವ್ಯಕ್ತಿ ಎನಿಸಿದ್ದರು. ಈಗ ಈ ಸ್ಥಾನವನ್ನು ಮುಕೇಶ್ ಅಂಬಾನಿ ಮತ್ತೆ ಪಡೆದುಕೊಂಡಿದ್ದಾರೆ. ರಿಲಯನ್ಸ್ ಕಂಪನಿಯು ಇತ್ತೀಚೆಗೆ ಹೆಚ್ಚು ಲಾಭ ಗಳಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಮುಕೇಶ್ ಅಂಬಾನಿ ಅವರು 8.7 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯನ್ನು

100 ಶತಕೋಟಿ ಡಾಲರ್ ಕ್ಲಬ್ ಸೇರಿದ ಅಂಬಾನಿ/ ಏಷ್ಯಾದಲ್ಲೇ ಶ್ರೀಮಂತ ವ್ಯಕ್ತಿ Read More »

ದೇಶದ ಅತೀ ಉದ್ದದ ಸಮುದ್ರ ಸೇತುವೆ ಇಂದು ಲೋಕಾರ್ಪಣೆ/ ಪ್ರಧಾನಿ ಮೋದಿಯಿಂದ ಉದ್ಘಾಟನೆ

ಸಮಗ್ರ ನ್ಯೂಸ್: ದೇಶದ ಅತೀ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಇಂದು ಲೋಕಾರ್ಪಣೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಮುಂಬೈನ ಸವಿ ಹಾಗೂ ರಾಯಗಢದ ಪ್ರವಾ ಪ್ರದೇಶದ ನಡುವಿನ 21.8 ಕಿ.ಮೀ ಉದ್ದದ ಸೇತುವೆಯನ್ನು ಕೇವಲ 20 ನಿಮಿಷಗಳಲ್ಲಿ ಕ್ರಮಿಸಬಹುದಾಗಿದೆ. ಒಟ್ಟಾರೆ ಆರು ಲೇನ್ ಮಾರ್ಗ ಹೊಂದಿರುವ ಅಟಲ್ ಬಿಹಾರಿ ವಾಜಪೇಯಿ ಸೇವಿ-ನವ ಶೇವಾ ಅಟಲ್ ಸೇತು ಸಮುದ್ರದ ಮೇಲೆ 16.50 ಕಿಮೀ ಹಾಗೂ ಭೂಮಿಯ ಮೇಲೆ 5.50 ಕಿ.ಮೀ ಉದ್ದವನ್ನು ಹೊಂದಿದೆ.

ದೇಶದ ಅತೀ ಉದ್ದದ ಸಮುದ್ರ ಸೇತುವೆ ಇಂದು ಲೋಕಾರ್ಪಣೆ/ ಪ್ರಧಾನಿ ಮೋದಿಯಿಂದ ಉದ್ಘಾಟನೆ Read More »

ಜ.31ರಿಂದ ಬಜೆಟ್ ಅಧಿವೇಶನ/ ಫೆ.1ರಂದು ಮಧ್ಯಂತರ ಬಜೆಟ್

ಸಮಗ್ರ ನ್ಯೂಸ್: ಮೋದಿ ನೇತೃತ್ವದ ಈ ಸರ್ಕಾರದ ಕೊನೆಯ ಬಜೆಟ್ ಗೆ ದಿನಾಂಕ ನಿಗದಿಯಾಗಿದ್ದು, ಫೆ.1ರಂದು ಮಧ್ಯಂತರ ಬಜೆಟ್ ಹಾಗೂ ಜ.31ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಜ.31ರಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಸಂಸತ್‍ನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುತ್ತಾರೆ. ಮರುದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆಗಳು ಇರುವ ಕಾರಣ ಅದರ ಮುಂಚಿನ ಬಜೆಟ್‍ನ್ನು ಮಧ್ಯಂತರ ಬಜೆಟ್ ಎನ್ನಲಾಗುತ್ತದೆ. ಚುನಾವಣೆ ನಂತರ ಹೊಸ

ಜ.31ರಿಂದ ಬಜೆಟ್ ಅಧಿವೇಶನ/ ಫೆ.1ರಂದು ಮಧ್ಯಂತರ ಬಜೆಟ್ Read More »

ಅಯೋಧ್ಯೆಯಲ್ಲಿ ಮೊಳಗಲಿದೆ “ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ”

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಇದರ ನಡುವೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಗೀತೆ ರಚನೆಗಾರ ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂಬ ಗೀತೆ ಜ.22 ರಂದು ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಪ್ರಸಾರವಾಗಲಿದೆ ಎಂದು ಅಯೋಧ್ಯೆ ಟ್ರಸ್ಟ್ ಟ್ವಿಟ್ ಮಾಡುವ ಮೂಲಕ ಖಚಿತಪಡಿಸಿದೆ. ಈ ಕುರಿತು ಡಾ.ಗಜಾನನ ಶರ್ಮಾ ಸ್ಪಷ್ಟಪಡಿಸಿದ್ದು ನಾನು ರಚಿಸಿದ ಹಾಡನ್ನು ರಾಮಮಂದಿರ ಟ್ರಸ್ಟ್‍ನವರು ತೆಗೆದುಕೊಂಡಿದ್ದಕ್ಕೆ ಖುಷಿಯಾಗಿದೆ ಎಂದರು.ಡಾ.ಗಜಾನನ ಶರ್ಮಾರವರಿಗೆ

ಅಯೋಧ್ಯೆಯಲ್ಲಿ ಮೊಳಗಲಿದೆ “ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ” Read More »

370ನೇ ವಿಧಿಯನ್ನು ರದ್ದು/ ಸುಪ್ರೀಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿರುವ ಸುಪ್ರೀಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಜಾಫರ್ ಇನ್ಸಾಲ್ ಖಾನ್ ಎಂಬವರು ಮತ್ತು ಅವಾಮಿ ನ್ಯಾಷನಲ್ ಕಾನ್ಸರನ್ಸ್‍ನಿಂದ ಎರಡು ಪ್ರತ್ಯೇಕ ಮರು ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿದೆ. ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019ರ ನಿರ್ಧಾರವನ್ನು, ಡಿಸೆಂಬರ್ 11, 2023 ರಂದು ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠವು ಸರ್ವಾನುಮತದಿಂದ ಎತ್ತಿಹಿಡಿದಿತ್ತು. ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರವನ್ನು

370ನೇ ವಿಧಿಯನ್ನು ರದ್ದು/ ಸುಪ್ರೀಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ Read More »

ಮೊಟ್ಟಮೊದಲ ಬುಲೆಟ್ ಟ್ರೈನ್ 2026ರಲ್ಲಿ ಕಾರ್ಯಾರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಸಮಗ್ರ ನ್ಯೂಸ್: ದೇಶದ ಮೊಟ್ಟಮೊದಲ ಬುಲೆಟ್ ಟ್ರೈನ್ 2026ರಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವೈಬ್ರಂಟ್ ಗುಜರಾತ್ ಶೃಂಗಸಭೆಯಲ್ಲಿ ಹೇಳಿದ್ದಾರೆ. ಈವರೆಗೂ 270 ಕಿಲೋಮೀಟರ್‍ವರೆಗಿನ ಕೆಲಸ ಸಂಪೂರ್ಣವಾಗಿದೆ. ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾಪೆರ್Çರೇಷನ್ ಲಿಮಿಟೆಡ್ ಜನವರಿ 8 ರಂದು ಗುಜರಾತ್, ಮಹಾರಾಷ್ಟ್ರ ಮತ್ತು ದಾದ್ರಾ ಮತ್ತು ನಗರ ಹವೇಲಿಯಾದ್ಯಂತ ಬುಲೆಟ್ ರೈಲು ಯೋಜನೆ ಎಂದು ಕರೆಯಲ್ಪಡುವ ಮುಂಬೈ-ಅಹಮದಾಬಾದ್ ರೈಲು ಕಾರಿಡಾರ್‍ಗೆ ಯೋಜನೆಗೆ ಅಗತ್ಯವಿರುವ ಸಂಪೂರ್ಣ 1389.49 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು

ಮೊಟ್ಟಮೊದಲ ಬುಲೆಟ್ ಟ್ರೈನ್ 2026ರಲ್ಲಿ ಕಾರ್ಯಾರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ Read More »

ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ತಿರಸ್ಕರಿಸಿದ ‘ಕೈ’ ನಾಯಕರು…?

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನೂ ಕೆಲವು ದಿನಗಳಷ್ಟೆ ಬಾಕಿ ಇದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಬರುವುದಿಲ್ಲ ಎಂದು ಹೇಳಿದೆ. ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ಕೈ ನಾಯಕರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಲವಾರು ಪರ-ವಿರೋಧ ಅಭಿಪ್ರಾಯಗಳ ನಡುವೆ ರಾಮ ಮಂದಿರ ಕಾರ್ಯಕ್ರಮದ ವಿಷಯದಲ್ಲಿ ಕಾಂಗ್ರೆಸ್ ನಿಲುವಿನ ಬಗ್ಗೆ ಊಹಾಪೋಹಗಳಿಗೆ ಕೊನೆ ಹಾಡಿದೆ. ಇಂಡಿಯಾ

ರಾಮಮಂದಿರ ಟ್ರಸ್ಟ್ ನ ಆಹ್ವಾನವನ್ನು ತಿರಸ್ಕರಿಸಿದ ‘ಕೈ’ ನಾಯಕರು…? Read More »

ಅಯೋಧ್ಯೆ ರಾಮಮಂದಿರ ಸ್ವರ್ಣ ಲೇಪಿತ ದ್ವಾರಗಳ ಮೊದಲ ಫೋಟೋ ರಿವೀಲ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಮುಂಚಿತವಾಗಿ, ದೇವಾಲಯದ ಚಿನ್ನದ ಲೇಪಿತ ಬಾಗಿಲುಗಳ ಮೊದಲ ಫೋಟೋ ಮಂಗಳವಾರ ಬಿಡುಗಡೆ ಆಗಿದೆ. ದೇವಾಲಯದ ಗರ್ಭಗುಡಿ ಅಥವಾ ಗರ್ಭಗೃಹದಲ್ಲಿ ಭಾರವಾದ ಚಿನ್ನದ ಲೇಪಿತ ಬಾಗಿಲುಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ ದೇವರ ವಿಗ್ರಹವನ್ನು ಜನವರಿ 22 ರಂದು ಪ್ರತಿಷ್ಠಾಪಿಸಲಾಗುವುದು. ಹೈದರಾಬಾದ್ ಮೂಲದ ಕುಶಲಕರ್ಮಿಯೊಬ್ಬರು ಈ ಬಾಗಿಲನ್ನು ನಿರ್ಮಿಸಿದ್ದಾರೆ. ಲಕ್ಷಾಂತರ ಜನರ ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಕೇಂದ್ರ ಬಿಂದುವಾದ ಭವ್ಯ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾಪನೆ’ ಅಥವಾ

ಅಯೋಧ್ಯೆ ರಾಮಮಂದಿರ ಸ್ವರ್ಣ ಲೇಪಿತ ದ್ವಾರಗಳ ಮೊದಲ ಫೋಟೋ ರಿವೀಲ್ Read More »

ಹೇ ಪ್ರಭೂ, ಯೇ ಕ್ಯಾ ಹುವಾ| ಇಲ್ಲಿದ್ದಾನೆ ಈ ವೈರಲ್ ಡೈಲಾಗ್ ನ ಸೃಷ್ಟಿಕರ್ತ!!

ಸಮಗ್ರ ನ್ಯೂಸ್: ಹೇಯ್ ಪ್ರಭು ಯೇ ಕ್ಯಾ ಹುವಾ.. ಹೇಯ್ ಹರಿಕೃಷ್ಣ ಜಗನ್ನಾಥ ಪ್ರೇಮಾನಂದ ಯೇ ಕ್ಯಾ ಹುವಾ ಈ ಡೈಲಾಗ್ ಯಾರಿಗೆ ಗೊತ್ತಿಲ್ಲ. ಹೇಳಿ ಯಾರ ಬಾಯಲ್ಲಿ ನೋಡಿದರೂ ಇದೇ ಡೈಲಾಗ್, ಮನೆಯೊಂದಕ್ಕೆ ಪ್ರವಾಹದ ನೀರು ತುಂಬಿದ ವೇಳೆ ಮೂವರು ಯುವಕರು ಆ ನೀರಿನಲ್ಲಿ ತಮ್ಮ ಮೊಬೈಲ್ ಹಿಡಿದು ಇಳಿದ ವೇಳೆ ಈ ಡೈಲಾಗ್ ಹೇಳಿ ಆ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದರು. ಕಳೆದ ವರ್ಷದ ಜೂನ್‌ನಲ್ಲಿ ಈ ವೀಡಿಯೋ ರೆಕಾರ್ಡ್ ಆಗಿತ್ತು. ಇದು ನಂತರದಲ್ಲಿ ಎಷ್ಟು

ಹೇ ಪ್ರಭೂ, ಯೇ ಕ್ಯಾ ಹುವಾ| ಇಲ್ಲಿದ್ದಾನೆ ಈ ವೈರಲ್ ಡೈಲಾಗ್ ನ ಸೃಷ್ಟಿಕರ್ತ!! Read More »