ರಾಷ್ಟ್ರೀಯ

ಅಕ್ಕಿ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಬಿಗ್ ಪ್ಲ್ಯಾನ್| ಬಾಸ್ಮತಿ ಅಕ್ಕಿ ಬಲು ಅಗ್ಗ

ಸಮಗ್ರ ನ್ಯೂಸ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಕ್ಕಿ ಬೆಲೆಗೆ ಸಂಬಂಧಿಸಿದಂತೆ ದೊಡ್ಡ ಹೆಜ್ಜೆ ಇಟ್ಟಿದೆ. ಇದು ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಚಿಲ್ಲರೆ ಬೆಲೆಯಲ್ಲಿ ಇಳಿಕೆಗೆ ಕಾರಣವಾಗುತ್ತದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ಸೋಮವಾರ ನವದೆಹಲಿಯಲ್ಲಿ ಬಾಸ್ಮತಿ ಅಲ್ಲದ ಅಕ್ಕಿಯ ದೇಶೀಯ ಬೆಲೆಯನ್ನು ಪರಿಶೀಲಿಸಲು ಅಕ್ಕಿ ಸಂಸ್ಕರಣಾ ಉದ್ಯಮದ ಪ್ರಮುಖ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಈ ಖಾರಿಫ್‌ನಲ್ಲಿ ಉತ್ತಮ ಬೆಳೆ, ಭಾರತೀಯ ಆಹಾರ ನಿಗಮದಲ್ಲಿ (ಎಫ್‌ಸಿಐ) ಸಾಕಷ್ಟು ದಾಸ್ತಾನು […]

ಅಕ್ಕಿ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಬಿಗ್ ಪ್ಲ್ಯಾನ್| ಬಾಸ್ಮತಿ ಅಕ್ಕಿ ಬಲು ಅಗ್ಗ Read More »

ಮತ್ತೆ ಕಾವೇರಿಸುತ್ತಿರುವ ಕಾವೇರಿ/ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ

ಸಮಗ್ರ ನ್ಯೂಸ್: ಡಿಸೆಂಬರ್ ಅಂತ್ಯದವರಿಗೆ ತಮಿಳುನಾಡಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಕಳೆದ 15 ದಿನಗಳಿಂದಲೂ ಈಶಾನ್ಯ ಮಾನ್ಸೂನ್ ಮಾರುತದಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹವೇ ಸೃಷ್ಟಿಯಾಗಿದೆ. ಇದರ ನಡುವೆ ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ಹಲವು ಬಾರಿ ವಾದ ಮಂಡಿಸುತ್ತಲೇ

ಮತ್ತೆ ಕಾವೇರಿಸುತ್ತಿರುವ ಕಾವೇರಿ/ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ Read More »

ರಾಮಮಂದಿರದ ಪ್ರಾಣ ಪ್ರತಿಷ್ಠೆ/ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ

ಸಮಗ್ರ ನ್ಯೂಸ್: ಬಿಜೆಪಿ ಹಿರಿಯ ನಾಯಕರಾದ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ರಾಮಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. 2024ರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಅಡ್ವಾಣಿಜಿ ಮತ್ತು ರಾಮ ಮಂದಿರ ಚಳವಳಿಯ ಪ್ರವರ್ತಕ ಡಾ.ಮುರಳಿ ಮನೋಹರ್ ಜೋಶಿ ಜಿ ಅವರನ್ನ ಆಹ್ವಾನಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ರಾಮ ಮಂದಿರ ಟ್ರಸ್ಟ್

ರಾಮಮಂದಿರದ ಪ್ರಾಣ ಪ್ರತಿಷ್ಠೆ/ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ Read More »

ಕ್ಯಾಶ್‍ಲೆಸ್ ವ್ಯವಹಾರಕ್ಕೆ ಜೈ ಎಂದ ಜನ/ ಐದು ವರ್ಷದಲ್ಲಿ 8,375 ಕೋಟಿ ಡಿಜಿಟಲ್ ಪಾವತಿ

ಸಮಗ್ರ ನ್ಯೂಸ್: ಯುಪಿಐ ಡಿಜಿಟಲ್ ಪಾವತಿ ಭಾರತದಲ್ಲಿ ಗಣನೀಯ ಏರಿಕೆಯಾಗಿದ್ದು, ಕೇವಲ 5 ವರ್ಷದಲ್ಲಿ ವಹಿವಾಟು 92 ಕೋಟಿಯಿಂದ 8,375 ಕೋಟಿಗೆ ಏರಿಕೆಯಾಗಿದೆ. ಯುಪಿಐ ಪಾವತಿಗಳ ಗಣನೀಯ ವಿಸ್ತರಣೆಯಿಂದಾಗಿ ಕಳೆದ ಆರ್ಥಿಕ ವರ್ಷದಲ್ಲಿ ಚಲಾವಣೆಯಲ್ಲಿರುವ ಬ್ಯಾಂಕ್ ನೋಟುಗಳ ಬೆಳವಣಿಗೆಯನ್ನು 7.8%ಕ್ಕೆ ಇಳಿಸಲು ಸಹಾಯ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಈ ಕುರಿತು ಲೋಕಸಭೆಗೆ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೆ ಕರದ್ ಲಿಖಿತ ಉತ್ತರ ನೀಡಿದ್ದು, ಯುಪಿಐ ವಹಿವಾಟುಗಳು ಗಣನೀಯ ಬೆಳವಣಿಗೆಯನ್ನು ಕಂಡಿದೆ.

ಕ್ಯಾಶ್‍ಲೆಸ್ ವ್ಯವಹಾರಕ್ಕೆ ಜೈ ಎಂದ ಜನ/ ಐದು ವರ್ಷದಲ್ಲಿ 8,375 ಕೋಟಿ ಡಿಜಿಟಲ್ ಪಾವತಿ Read More »

ಜ್ಞಾನವಾಪಿ ಮಸೀದಿ ಭೂ ವಿವಾದ/ ಮುಸ್ಲಿಮರ ಐದು ಅರ್ಜಿಗಳನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ್ದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮ ತೇಜಾಮಿಯಾ ಮಸೀದಿ ಹಾಗೂ ಯುಪಿ ಸುನ್ನಿ ಸೆಂಟ್ರಲ್ ವಕ್ಸ್ ಬೋರ್ಡ್ ಸಲ್ಲಿಸಿದ್ದ ಅರ್ಜಿಗಳನ್ನು ಅಲಹಾಬಾದ್ ಕೋರ್ಟ್‍ನಲ್ಲಿ ವಜಾಗೊಳಿಸಲಾಗಿದೆ. ಜ್ಞಾನವಾಪಿ ಮಸೀದಿಯ ಸಮಗ್ರ ಸಮೀಕ್ಷೆಯನ್ನು ನಡೆಸುವಂತೆ ವಾರಣಾಸಿ ಜಿಲ್ಲಾ ಕೋರ್ಟ್ ಸೂಚಿಸಿದ್ದು, ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಸದ್ಯ ಅಲಹಾಬಾದ್ ಕೋರ್ಟ್ ಅರ್ಜಿ ವಜಾ ಮಾಡಿದ್ದು, ಇನ್ನು ಆರು

ಜ್ಞಾನವಾಪಿ ಮಸೀದಿ ಭೂ ವಿವಾದ/ ಮುಸ್ಲಿಮರ ಐದು ಅರ್ಜಿಗಳನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ Read More »

ದೇಶದಲ್ಲಿ ರೂಪಾಂತರಿ ಕೋವಿಡ್ ಹೆಚ್ಚಳ ಹಿನ್ನಲೆ| ಕೇಂದ್ರದಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದೆ. ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳಲ್ಲಿ ಈಗಾಗಲೇ ಕೋವಿಡ್ ಅಲೆ ಭೀತಿ ಎದುರಾಗಿದೆ. ಭಾರತದಲ್ಲಿ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದ್ದರೂ ಆತಂಕದ ಪರಿಸ್ಥಿತಿ ಇಲ್ಲ. ಆದರೆ ಕೇರಳದಲ್ಲಿ ಕೋವಿಡ್ ಹೊಸ ತಳಿ JN.1 ಪತ್ತೆಯಾಗಿದೆ. ಇಷ್ಟೇ ಅಲ್ಲ ಕೋವಿಡ್‌ನಿಂದ ಸಾವು ಕೂಡ ಸಂಭವಿಸಿದೆ. ಇತರ ರಾಜ್ಯಗಳಲ್ಲೂ ಕೋವಿಡ್ ಸಂಖ್ಯೆ ಏರಿಕೆಯತ್ತ ಸಾಗುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಕೋವಿಡ್ ಈ ಹಿಂದಿನ ಅಲೆಗಳಲ್ಲಿ ಕೇಂದ್ರ ಸರ್ಕಾರ

ದೇಶದಲ್ಲಿ ರೂಪಾಂತರಿ ಕೋವಿಡ್ ಹೆಚ್ಚಳ ಹಿನ್ನಲೆ| ಕೇಂದ್ರದಿಂದ ಮಾರ್ಗಸೂಚಿ ಪ್ರಕಟ Read More »

ಸೋದರಳಿಯನೇ ಉತ್ತರಾಧಿಕಾರಿ ಎಂದ ಮಮತಾ ಬ್ಯಾನರ್ಜಿ/ ಯುವ ನಾಯಕತ್ವಕ್ಕೆ ಮಣೆ ಹಾಕಿದ ತೃಣಮೂಲ ಕಾಂಗ್ರೆಸ್

ಸಮಗ್ರ ನ್ಯೂಸ್: ಸೋದರಳಿಯನೇ ಮಮತಾ ಬ್ಯಾನರ್ಜಿಯ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಅಧಿಕೃತವಾಗಿ ಉತ್ತರ ದೊರೆತಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಕುನಾಲ್ ಘೋಷ್, ಮಮತಾ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರೇ ಮಮತಾ ನಂತರದಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು 2036 ರವರೆಗೆ ಸೇವೆ ಸಲ್ಲಿಸುತ್ತಾರೆ. ತದನಂತರ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು

ಸೋದರಳಿಯನೇ ಉತ್ತರಾಧಿಕಾರಿ ಎಂದ ಮಮತಾ ಬ್ಯಾನರ್ಜಿ/ ಯುವ ನಾಯಕತ್ವಕ್ಕೆ ಮಣೆ ಹಾಕಿದ ತೃಣಮೂಲ ಕಾಂಗ್ರೆಸ್ Read More »

ದೂರಸಂಪರ್ಕ ಮಸೂದೆ-2023/ ಇನ್ಮುಂದೆ ಸಿಮ್ ಕಾರ್ಡ್‍ಗೆ ಬಯೋಮೆಟ್ರಿಕ್ ಕಡ್ಡಾಯ

ಸಮಗ್ರ ನ್ಯೂಸ್: ದೂರಸಂಪರ್ಕ ಮಸೂದೆ-2023 ನ್ನು ಇಂದು ಸಂಸತ್ತಿನಲ್ಲಿ ಮಂಡಿಸಲಾಗಿದ್ದು, ಈ ಮಸೂದೆಯು ಸಿಮ್ ಕಾರ್ಡ್ ನೀಡುವಾಗ ಟೆಲಿಕಾಂ ಕಂಪನಿಗಳು ಗ್ರಾಹಕರ ಬಯೋಮೆಟ್ರಿಕ್ ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ಟೆಲಿಕಾಂ ಸೇವೆಗಳನ್ನು ನೀಡುವ ಯಾವುದೇ ಅಧಿಕೃತ ಕಂಪನಿಯು ಯಾವುದೇ ವ್ಯಕ್ತಿಗೆ ಟೆಲಿಕಾಂ ಸೇವೆಗಳನ್ನು ನೀಡುವ ಮುನ್ನ ಆತನ ಬಯೋಮೆಟ್ರಿಕ್ ಗುರುತನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಆನ್ ಲೈನ್ ಮೆಸೇಜಿಂಗ್ ಮತ್ತು ಸ್ಟ್ರೀಮಿಂಗ್ ಸೇವೆಗಳಂತಹ ಓವರ್-ದಿ- ಟಾಪ್ ಸೇವೆಗಳನ್ನು ಈ ಮಸೂದೆಯ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಟೆಲಿಕಾಂ ಸಚಿವ

ದೂರಸಂಪರ್ಕ ಮಸೂದೆ-2023/ ಇನ್ಮುಂದೆ ಸಿಮ್ ಕಾರ್ಡ್‍ಗೆ ಬಯೋಮೆಟ್ರಿಕ್ ಕಡ್ಡಾಯ Read More »

ವಾರಣಾಸಿ-ಹೊಸದಿಲ್ಲಿ ನಡುವೆ ಎರಡನೇ ವಂದೇ ಭಾರತ್ ರೈಲು/ ಪ್ರಧಾನಿ ಮೋದಿ ಹಸಿರು ನಿಶಾನೆ

ಸಮಗ್ರ ನ್ಯೂಸ್: ವಾರಣಾಸಿ ಮತ್ತು ಹೊಸದಿಲ್ಲಿ ನಡುವಿನ ಎರಡನೇ ವಂದೇ ಭಾರತ್ ರೈಲು ಸೇರಿದಂತೆ ಒಟ್ಟು ನಾಲ್ಕು ರೈಲುಗಳಿಗೆ ವಿಕಾಸ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಲಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ವಂದೇ ಭಾರತ್ ರೈಲಿನಲ್ಲಿ ಐಷಾರಾಮಿ ಒಳಾಂಗಣ, ಸ್ಪರ್ಶ-ಮುಕ್ತ ಅನುಕೂಲಗಳೊಂದಿಗೆ ಜೈವಿಕ ನಿರ್ವಾತ ಶೌಚಾಲಯಗಳು, ಹರಡಿದ ಎಲ್‍ಇಡಿ ಲೈಟಿಂಗ್ ಮತ್ತು ಪ್ರತಿ ಸೀಟಿನ

ವಾರಣಾಸಿ-ಹೊಸದಿಲ್ಲಿ ನಡುವೆ ಎರಡನೇ ವಂದೇ ಭಾರತ್ ರೈಲು/ ಪ್ರಧಾನಿ ಮೋದಿ ಹಸಿರು ನಿಶಾನೆ Read More »

ಹೆಚ್ಚುತ್ತಿರುವ ಭಕ್ತರ ಸಂಖ್ಯೆ/ ಶಬರಿಮಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ದ್ವಾರ

ಸಮಗ್ರ ನ್ಯೂಸ್: ಶಬರಿಮಲೆಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳುವ ಮಕ್ಕಳಿಗಾಗಿ ಪ್ರತ್ಯೇಕ ದ್ವಾರವನ್ನು ತೆರೆಯುವ ಮಹತ್ವದ ನಿರ್ಧಾರವನ್ನು ತಿರುವಾಂಕೂರು ದೇವಸ್ಥಾನ ಮಂಡಳಿ ಕೈಗೊಂಡಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳುವ ಮಕ್ಕಳಿಗಾಗಿ ಟ್ರಾವೆನ್ ಕೋರ್ ದೇವಸ್ಥಾನಂ ಬೋರ್ಡ್ (ಟಿಬಿಡಿ) ವಿಶೇಷ ಗೇಟ್ ವ್ಯವಸ್ಥೆ ಕಲ್ಪಿಸಿದೆ. ಭಾನುವಾರ ಬೆಳಗ್ಗೆಯಿಂದ ಮುಂದಿನ ಸಾಲಿನಲ್ಲಿ ಮಕ್ಕಳಿಗೆ ಅಯ್ಯಪ್ಪನ ದರ್ಶನ ನೀಡಲಾಗುತ್ತಿದೆ. ಇದರಿಂದ ಮಕ್ಕಳು ಉದ್ದನೆಯ ಸರತಿ ಸಾಲಿನಿಂದ ಪಾರಾಗಿದ್ದಾರೆ. ವಿಶೇಷ ಗೇಟ್ ಮೂಲಕ ಮಕ್ಕಳನ್ನು

ಹೆಚ್ಚುತ್ತಿರುವ ಭಕ್ತರ ಸಂಖ್ಯೆ/ ಶಬರಿಮಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ದ್ವಾರ Read More »