ರಾಷ್ಟ್ರೀಯ

ನವದೆಹಲಿ : ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ಸಮಗ್ರ ನ್ಯೂಸ್‌ : ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು 275 ಕೋಟಿ ರೂ. ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ […]

ನವದೆಹಲಿ : ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ Read More »

ಭಾರತೀಯ ಮೂಲದ 3 ಕಂಪೆನಿಗಳಿಗೆ ಅಮೆರಿಕ ನಿರ್ಬಂಧ

ಸಮಗ್ರ ನ್ಯೂಸ್: ಇರಾನಿಯನ್‌ ಸೇನೆ ಜೊತೆ ಅಕ್ರಮ ವ್ಯಾಪಾರ ವಹಿವಾಟು ಹೊಂದಿರುವ 12ಕ್ಕೂ ಅಧಿಕ ಕಂಪನಿಗಳು, ಹಡುಗುಗಳು ಮತ್ತು ಉದ್ಯಮಿಗಳ ಮೇಲೆ ಇದೀಗ ಅಮೆರಿಕ ನಿರ್ಬಂಧ ವಿಧಿಸಿದೆ. ಇದರಲ್ಲಿ ಭಾರತ ಮೂರು ಕಂಪನಿಗಳು ಸೇರಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಷ್ಯಾ-ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಈ ಕಂಪನಿಗಳು, ಹಡಗುಗಳು ಮತ್ತು ವ್ಯಕ್ತಿಗಳು ಇರಾನ್‌ನ ಮಾನವ ರಹಿತ ವೈಮಾನಿಕ ವಾಹನ- ಡ್ರೋನ್‌(UAVs) ಗಳನ್ನು ರಷ್ಯಾಗೆ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದು ಅಮೆರಿಕದ ಹೇಳಿದೆ. ಇರಾನ್‌ನ ಸಾಗರೋತ್ತರ

ಭಾರತೀಯ ಮೂಲದ 3 ಕಂಪೆನಿಗಳಿಗೆ ಅಮೆರಿಕ ನಿರ್ಬಂಧ Read More »

ಬ್ರೌಸರ್ ನಲ್ಲಿ ಹಿಸ್ಟರಿ ಬಗ್ಗೆ ತುಂಬಾ ಭಯ ಇದ್ಯ? ಮೊದಲು ಈ ಕೆಲ್ ಮಾಡಿ ಸಾಕು

ಇತ್ತೀಚಿನ ದಿನಗಳಲ್ಲಿ ಬ್ರೌಸರ್‌ಗಳಲ್ಲಿ ಹಲವು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಕೋಟಿಗಟ್ಟಲೆ ಬಳಕೆದಾರರ ಭದ್ರತೆ ಅಪಾಯದಲ್ಲಿದೆ ಎಂದು ಹೇಳಬಹುದು. ಈ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದಿಲ್ಲ. ಆದರೆ ಭಾರತ ಸರ್ಕಾರವು ಇವುಗಳ ಬಗ್ಗೆ ಕಾಲಕಾಲಕ್ಕೆ ತಿಳಿಸುತ್ತದೆ ಮತ್ತು ಬಳಕೆದಾರರನ್ನು ಎಚ್ಚರವಾಗಿರಿಸುತ್ತದೆ. ಮೈಕ್ರೋಸಾಫ್ಟ್ ಎಡ್ಜ್ ವೆಬ್ ಬ್ರೌಸರ್‌ನಲ್ಲಿನ ನಿರ್ಣಾಯಕ ಭದ್ರತಾ ದೋಷದ ಬಗ್ಗೆ ಈ ವಾರ ಮೈಕ್ರೋಸಾಫ್ಟ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ಮಾಹಿತಿಯನ್ನು ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್‌ಟಿ-ಇನ್) ಭದ್ರತಾ ಬುಲೆಟಿನ್‌ನಲ್ಲಿ ಬಹಿರಂಗಪಡಿಸಿದ್ದು, ಇದು ಪ್ರಮುಖ ಭದ್ರತಾ

ಬ್ರೌಸರ್ ನಲ್ಲಿ ಹಿಸ್ಟರಿ ಬಗ್ಗೆ ತುಂಬಾ ಭಯ ಇದ್ಯ? ಮೊದಲು ಈ ಕೆಲ್ ಮಾಡಿ ಸಾಕು Read More »

ನವದೆಹಲಿ: ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್‌ : ಯೂಟ್ಯೂಬರ್ ಮನೀಶ್ ಕಶ್ಯಪ್ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಸೇರ್ಪಡೆ ಯಾಗಿದ್ದಾರೆ. ಸನಾತನ ಧರ್ಮಕ್ಕೆ ಅಪಮಾನ ಮಾಡುವವರ ವಿರುದ್ಧ ನನ್ನ ಹೋರಾಟ ಎಂದಿದ್ದಾರೆ. ನಾವು ನಿನ್ನೆ ಮನೋಜ್ ತಿವಾರಿ ಅವರೊಂದಿಗೆ ಬಿಹಾರದಿಂದ ಬಂದಿದ್ದೇವೆ. ಅವರಿಂದಲೇ ನಾನು ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಯಿತು. ನನ್ನ ಜೀವನದ ಕೆಟ್ಟ ದಿನಗಳು ಕೊನೆಗೊಂಡವು. ಹಾಗಾಗಿ ಬಿಜೆಪಿ ಸೇರಿದ್ದೇನೆ. ನಾವು ಬಿಹಾರವನ್ನು ಬಲಪಡಿಸಬೇಕು. ಲಾಲು ಕುಟುಂಬ ಬಿಹಾರವನ್ನು ಲೂಟಿ ಮಾಡಿ ನಾಶಪಡಿಸಿತು. ನನ್ನ ಹೋರಾಟ ಸನಾತನವನ್ನು ದೂಷಿಸುವವರು ಮತ್ತು ರಾಷ್ಟ್ರೀಯತೆಯ

ನವದೆಹಲಿ: ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ Read More »

ಚೆನ್ನೈ: ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು- ಮನ್ಸೂರ್ ಅಲಿ ಖಾನ್

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ತಮಿಳು ಚಿತ್ರರಂಗದ ಖ್ಯಾತ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ. ಚೆನ್ನೈನ ಕಾಂಗ್ರೆಸ್‌ ಭವನದಲ್ಲಿ ಇಂದು ಮನ್ಸೂರ್ ಅಲಿ ಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವ ಪೆರುಂಡಗೈ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದ ಮನ್ಸೂರ್ ಅಲಿ ಖಾನ್ ನಾನು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತೇನೆ ಎಂದಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 19ರಂದು

ಚೆನ್ನೈ: ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು- ಮನ್ಸೂರ್ ಅಲಿ ಖಾನ್ Read More »

ಕೋಲ್ಕತ್ತಾ: ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ-ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್‌ : ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅಲ್ಲದೇ ಈ ಮೂಲಕ ಆಯ್ಕೆ ಮಾಡಲಾದ 25,753 ಶಿಕ್ಷಕರ ಹುದ್ದೆಯನ್ನು ವಜಾಗೊಳಿಸುವಂತೆ ಆದೇಶಿಸಿತು. ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ,

ಕೋಲ್ಕತ್ತಾ: ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ-ಮಮತಾ ಬ್ಯಾನರ್ಜಿ Read More »

ಮಧ್ಯಪ್ರದೇಶ: ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿದೆ- ಮೋದಿ

ಸಮಗ್ರ ನ್ಯೂಸ್ : ಕರ್ನಾಟಕದಲ್ಲಿ ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪಿತ್ರಾರ್ಜಿತ ಆಸ್ತಿ ಮೇಲೆ ತೆರಿಗೆ ಹೇರಲು ಹೊರಟಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಮುಸ್ಲಿಂ ಎಂಬ ಕಾರಣಕ್ಕೆ ಮಾತ್ರ ಉಚಿತ ರೇಷನ್ ಪಡೆಯುತ್ತಾರೆ ಎಂಬುದನ್ನು ನೀವು ಎಂದಾದರೂ ಕೇಳಿದ್ದೀರಾ? ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ

ಮಧ್ಯಪ್ರದೇಶ: ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿದೆ- ಮೋದಿ Read More »

ದೆಹಲಿ: ಅಕ್ರಮವಾಗಿ 30 ಮೇಕೆ ಸಾಗಾಟ| ಆರೋಪಿಗಳಿಬ್ಬರ ಬಂಧನ

ಸಮಗ್ರ ನ್ಯೂಸ್ : ಮಾರುತಿ ಸ್ವಿಫ್ಟ್ ಕಾರಿನಲ್ಲಿ 30 ಅಕ್ರಮವಾಗಿ ಮೇಕೆ ಸಾಗಾಟ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಡೆದಿದೆ. ಮಾರುತಿ ಸುಜುಕಿ ಸ್ವಿಫ್ಟ್ ಕಾರಿನೊಳಗೆ ಮೇಕೆಗಳು ಮತ್ತು ಕುರಿಗಳನ್ನು ತುಂಬಿಸಲಾಗಿತ್ತು. ಕಾರಿನೊಳಗೆ ಮೇಕೆ, ಕುರಿಗಳನ್ನು ತುಂಬಿ ಬಚ್ಚಿಟ್ಟಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೇಕೆ, ಕುರಿಗಳನ್ನು ಕಾರಿನಿಂದ ರಕ್ಷಿಸಿದ್ದಾರೆ. ವರದಿಗಳ ಪ್ರಕಾರ, ಪೊಲೀಸರು ಪಿಸಿಆರ್ ಕರೆಯನ್ನು ಸ್ವೀಕರಿಸಿದರು, ಸಿವಿಲ್ ಲೈನ್ಸ್

ದೆಹಲಿ: ಅಕ್ರಮವಾಗಿ 30 ಮೇಕೆ ಸಾಗಾಟ| ಆರೋಪಿಗಳಿಬ್ಬರ ಬಂಧನ Read More »

ಜೈಪುರ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನ ಪತನ

ಸಮಗ್ರ ನ್ಯೂಸ್‌ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನವೊಂದು ರಾಜಸ್ಥಾನದ ಜೈಸಲ್ಮೇರ್‌ನಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಪಿಥಾಲ ಗ್ರಾಮದ ಬಳಿಯ ಜಮೀನಿನಲ್ಲಿ ಇಂದು ಬೆಳಗ್ಗೆ ಪತನಗೊಂಡಿದೆ. ಇದು ಮಾನವರಹಿತ ವಿಮಾನವಾದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ವಿಮಾನವು ಜಮೀನಿನಲ್ಲಿ ಪತನಗೊಂಡ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ, ಇಡೀ ವಿಮಾನವು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಾಯುಪಡೆಯೇ ಮಾಹಿತಿ ನೀಡಿದೆ. ವಿಮಾನ ಪತನದ ಸುದ್ದಿ ತಿಳಿಯುತ್ತಲೇ ಖುರಿ ಪೊಲೀಸ್‌ ಠಾಣೆ ಅಧಿಕಾರಿ ಮೇ

ಜೈಪುರ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನ ಪತನ Read More »

ಕೊಟಕ್ ಬ್ಯಾಂಕ್ ಮೇಲೆ RBI ನಿರ್ಬಂಧ|ಕ್ರೆಡಿಟ್ ಕಾರ್ಡ್ ವಿತರಣೆಗೆ ಬ್ರೇಕ್

ಸಮಗ್ರ ನ್ಯೂಸ್: ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ಇಂದು ಶಾಕ್‌ ನೀಡಿದೆ. ಈ ಬ್ಯಾಂಕ್ ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಟ್‌ ವಿತರಣೆ ಮಾಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು ಎಂದು ಆರ್‌ಬಿಐ ನಿರ್ಬಂಧ ಹೇರಿದೆ. ಇದರಿಂದಾಗಿ ಬ್ಯಾಂಕ್‌ಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬ್ಯಾಂಕ್ ನ ಗ್ರಾಹಕರಿಗೆ ಭಯ ಎದುರಾಗಿದ್ದು ಇದಕ್ಕೆ ಬ್ಯಾಂಕ್ ನಿಂದ ಗ್ರಾಹಕರಿಗೆ ಭಯ ಪಡಬೇಕಿಲ್ಲ ಎಂದು ತಿಳಿಸಿದೆ. ಇದು ನೂತನ

ಕೊಟಕ್ ಬ್ಯಾಂಕ್ ಮೇಲೆ RBI ನಿರ್ಬಂಧ|ಕ್ರೆಡಿಟ್ ಕಾರ್ಡ್ ವಿತರಣೆಗೆ ಬ್ರೇಕ್ Read More »