ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ: ನಿರ್ಮಲಾ ಸೀತಾರಾಮನ್
ಸಮಗ್ರ ನ್ಯೂಸ್: ಕೊರೊನಾದಂತಹ ಸಂಕಷ್ಟದ ನಡುವೆಯೂ ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಿಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ನೀತಿಗಳಿಂದಾಗಿ ಆರ್ಥಿಕತೆ ಏರಿಕೆಯಾಗಿ ಅಭಿವೃದ್ಧಿಯಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಲಾಗುವುದು, ಮಾಡಲಾಗುವುದು ಎನ್ನಲಾಗುತ್ತಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಿದೆ, ಮಾಡಿದೆ ಎನ್ನಲಾಗುತ್ತಿದೆ. ನೀವು ಜನರಿಗೆ ಕನಸುಗಳನ್ನು ತೋರಿಸುತ್ತೀರಿ. ನಾವು ಅವರ ಕನಸುಗಳನ್ನು ನನಸಾಗಿಸುತ್ತಿದ್ದೇವೆ […]










