ರಾಷ್ಟ್ರೀಯ

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ| ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ

ಸಮಗ್ರ ನ್ಯೂಸ್: ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ಇದೊಂದು ಅಪರೂಪದ ಬೆಳವಣಿಗೆ ಯಾಗಿದ್ದು ದೇಶದಲ್ಲಿ ಹಿಂದೆಂದೂ ಇಂತಹ ಪ್ರಕರಣ ಸಂಭವಿಸಿರಲಿಲ್ಲ. ಕೇವಲ ವಿರೋಧ ಪಕ್ಷವನ್ನು ತುಳಿಯಲು, ನಾಯಕರುಗಳನ್ನು ಅವಮಾನಿಸುವಂತ ಸಣ್ಣತನವನ್ನು ತೋರಿದ ಕೇಂದ್ರ ಸರಕಾರ ಮತ್ತು ಬಿಜೆಪಿ ಪಕ್ಷಕ್ಕೆ ಇದು ಒಂದು ಪಾಠ ವಾಗಬೇಕು. ರಾಹುಲ್ ಗಾಂಧೀಯವರು ದೇಶದ ಸಮಸ್ಯೆಗಳನ್ನು ಮತ್ತು ಕೇಂದ್ರ ಸರಕಾರದ ವೈಫಲ್ಯಗಳನ್ನು ಸಂಸತ್ತಿನಲ್ಲಿ ಮಾತನಾಡುತ್ತಾರೆ ಎಂದು ಸಂಸತ್ […]

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ| ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ Read More »

ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಮತ್ತೆ ಮರಳಿದ ಸಂಸದ ಸ್ಥಾನ| ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ

ಸಮಗ್ರ ನ್ಯೂಸ್: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೀಡಾಗಿದ್ದ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿಧಿಸಿದ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ತಡೆಯಾಜ್ಞೆಯಿಂದಾಗಿ ಲೋಕಸಭೆ ಸದಸ್ಯತ್ವದಿಂದಲೇ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ನಿರಾಳರಾಗಿದ್ದಾರೆ. ಹಾಗೆಯೇ, ಸಂಸತ್ ಸದಸ್ಯತ್ವ ಸ್ಥಾನವೀಗ ಮರಳಿದೆ. ರಾಹುಲ್ ಗಾಂಧಿ ಲೋಕಸಭೆ ಸದಸ್ವತ್ವದಿಂದ ಅನರ್ಹವಾಗಲು ಕಾರಣವಾಗಿರುವ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ಸಮರ್ಥಿಸಲು

ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಮತ್ತೆ ಮರಳಿದ ಸಂಸದ ಸ್ಥಾನ| ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ Read More »

ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸುವಂತೆ ಮೋದಿ ಸೂಚನೆ

ಸಮಗ್ರ ನ್ಯೂಸ್: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರ್ವಾಭಾವಿ ಸಿದ್ಧತೆಗಳನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ನೇತೃತ್ವದ ಪ್ರಜಾಸತ್ತಾತ್ಮಕ ಒಕ್ಕೂಟ(NDA)ವು ನಡೆಸುತ್ತಿದೆ.ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರವು ಮುಸ್ಲಿಂ ಮಹಿಳೆಯರಲ್ಲಿ ಭದ್ರತೆಯ ಭಾವನೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬರುವ ರಕ್ಷಾ ಬಂಧನ ಹಬ್ಬದಲ್ಲಿ ಸಾಧ್ಯವಾದಷ್ಟು ಮುಸ್ಲಿಂ ಮಹಿಳೆಯರನ್ನು ತಲುಪುವಂತೆ ಅವರು ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಂಸದರ ಸಭೆಯಲ್ಲಿ ಈ ಬಗ್ಗೆ ಮಾತಾಡಿದ ಮೋದಿ ಈ

ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸುವಂತೆ ಮೋದಿ ಸೂಚನೆ Read More »

2000 ರೂ. ನೋಟಿನ ಬಗ್ಗೆ ಆರ್‌ಬಿಐಯಿಂದ ಮತ್ತೊಂದು ಪ್ರಕಟಣೆ

ಸಮಗ್ರ ನ್ಯೂಸ್: ಎರಡು ಸಾವಿರ ರೂಪಾಯಿ ನೋಟುಗಳನ್ನು ಹಿಂಪಡೆಯುವುದಾಗಿ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕಟಣೆ ಹೊರಡಿಸಿದ್ದು, ಆದಷ್ಟು ಬೇಗ 2000 ಮುಖಬೆಲೆಯ ನೋಟು ಹಿಂತಿರುಗಿಸುವಂತೆ ಮನವಿ ಮಾಡಿದೆ. 2023ರ ಮಾರ್ಚ್ 31ಕ್ಕೆ 3.62 ಲಕ್ಷ ಕೋಟಿ ರೂಪಾಯಿಯಷ್ಟಿದ್ದ 2 ಸಾವಿರ ರೂ ನೋಟುಗಳು ಮೇ 19ಕ್ಕೆ 3.56 ಲಕ್ಷ ಕೋಟಿ ರೂ.ಗೆ ಇಳಿದಿತ್ತು. ಜು. 31ರ ಅಂಕಿ-ಅಂಶದಂತೆ ಎಲ್ಲ ಬ್ಯಾಂಕ್​ಗಳಿಗೆ ಒಟ್ಟು 3.14 ಲಕ್ಷ ಕೋಟಿ ಮೊತ್ತದ 2 ಸಾವಿರ ರೂ. ನೋಟುಗಳು ವಾಪಸ್

2000 ರೂ. ನೋಟಿನ ಬಗ್ಗೆ ಆರ್‌ಬಿಐಯಿಂದ ಮತ್ತೊಂದು ಪ್ರಕಟಣೆ Read More »

‌2 ತಿಂಗಳಾದರೂ ಪತ್ತೆಯಾಗದ 29 ಶವಗಳ ಗುರುತು

ಸಮಗ್ರ ನ್ಯೂಸ್:‌ ಒಡಿಶಾದ ರೈಲು ಅಪಘಾತ ಸಂಭವಿಸಿ ಇಂದಿಗೆ 2 ತಿಂಗಳುಗಳು ಕಳೆದರು 29 ಮೃತದೇಹಗಳ ಗರುತು ಇನ್ನೂ ಪತ್ತೆಯಾಗಿಲ್ಲ ಎಂದು ಎಐಐಎಂಎಸ್‍ನ‌ ವೈದ್ಯಕೀಯ ಅಧೀಕ್ಷಕ ದಿಲೀಪ್ ಕುಮಾರ್ ಪರಿದಾ ಹೇಳಿದ್ದಾರೆ. ಘಟನೆ ಬಳಿಕ ಆಸ್ಪತ್ರೆಯಲ್ಲಿ 162 ದೇಹಗಳನ್ನು ಇರಿಸಲಾಗಿದ್ದು, ಆದರಲ್ಲಿ 113 ಮೃತದೇಹಗಳ ಗುರುತು ಪತ್ತೆಯಾಗಿದ್ದು ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಉಳಿದ ಮೃತ ದೇಹಗಳಿಗಾಗಿ ಡಿಎನ್‍ಎ ಪರೀಕ್ಷೆ ನಡೆಸಲಾಗಿದೆ. ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಖಚಿತ ವರದಿಯ ಬಳಿಕವಷ್ಟೆ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು. ಅಲ್ಲದೇ ಡಿಎನ್‍ಎ

‌2 ತಿಂಗಳಾದರೂ ಪತ್ತೆಯಾಗದ 29 ಶವಗಳ ಗುರುತು Read More »

ಚುನಾವಣೆ ಗೆಲ್ಲಲು ಮೋದಿ ಹೀಗೂ ಮಾಡಿಸಬಹುದೇ? ಕಾಶ್ಮೀರದ ಮಾಜಿ ರಾಜ್ಯಪಾಲರಿಂದ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಅಪಾಯಕಾರಿ ವ್ಯಕ್ತಿ. ಮುಂದಿನ ಲೋಕಸಭೆ ಚುನಾವಣೆ ಗೆಲುವಿಗೆ ರಾಮ ಮಂದಿರದ ಮೇಲೆ ದಾಳಿ ನಡೆಸಬಹುದು ಅಥವಾ ಯಾವುದೇ ಬಿಜೆಪಿ ನಾಯಕನ ಹತ್ಯೆ ಮಾಡಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಪುಲ್ವಾಮಾ ದಾಳಿಯನ್ನು ಉಲ್ಲೇಖಿಸಿ ಮಾತನಾಡುತ್ತಿದ್ದ ಸತ್ಯಪಾಲ್ ಮಲಿಕ್ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 2024ರ

ಚುನಾವಣೆ ಗೆಲ್ಲಲು ಮೋದಿ ಹೀಗೂ ಮಾಡಿಸಬಹುದೇ? ಕಾಶ್ಮೀರದ ಮಾಜಿ ರಾಜ್ಯಪಾಲರಿಂದ ಸ್ಪೋಟಕ ಹೇಳಿಕೆ Read More »

ಧೋನಿ ವಿಮಾನದಲ್ಲಿ ಮಲಗಿದ್ದಾಗ ಕದ್ದು ಫೋಟೋ ಕ್ಲಿಕ್ಕಿಸಿದ ಗಗನಸಖಿ

ಸಮಗ್ರ ನ್ಯೂಸ್: ಎಂ.ಎಸ್ ಧೋನಿ ಅಭಿಮಾನಿಗಳು ಒಮ್ಮೆಯಾದ್ರೂ ಧೋನಿಯನ್ನ ಹತ್ತಿರದಿಂದ ನೋಡ್ಬೇಕು,ಅಂತಹ ಒಂದು ಕ್ಷಣ ಸಿಕ್ಕರೂ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲಾರದೇ ಇರೋದಿಲ್ಲ. 2023 IPL ಟೂರ್ನಿಯಲ್ಲಿ ಮಹಿ ನೋಡಲೆಂದೇ ಸಾವಿರಾರು ಕಿಲೋ ಮೀಟರ್‌ಗಳಿಂದ ಅಭಿಮಾನಿಗಳು ಬಂದಿದ್ರು. ಇದೀಗ ಗಗನಸಖಿಯೊಬ್ಬಳು ಅಂತಹದ್ದೇ ಕ್ಷಣವನ್ನ ಫೋಟೋದಲ್ಲಿ ಸೆರೆಹಿಡಿಯಲು ಹೋಗಿ ಸುದ್ದಿಯಾಗಿದ್ದಾಳೆ. ಇತ್ತೀಚೆಗೆ ವಿಮಾನ ಪ್ರಯಾಣ ಸಮಯದಲ್ಲಿ MSD ಪಕ್ಕದಲ್ಲಿ ನಿಂತು ಗಗನ ಸಖಿಯೊಬ್ಬಳು (Air Hostess) ಫೋಟೋ ತೆಗೆದುಕೊಂಡಿದ್ದಾಳೆ. ಆದ್ರೆ ಈ ಫೋಟೋ ತೆಗೆದುಕೊಳ್ಳುವಾಗ ಧೋನಿ ಸಣ್ಣ ನಿದ್ರೆಗೆ ಜಾರಿದ್ದರು.

ಧೋನಿ ವಿಮಾನದಲ್ಲಿ ಮಲಗಿದ್ದಾಗ ಕದ್ದು ಫೋಟೋ ಕ್ಲಿಕ್ಕಿಸಿದ ಗಗನಸಖಿ Read More »

ಮನೆಗೆ ತೆರಳಿದ್ದ ಯೋಧನ ಅಪಹರಣ| ಸೇನೆಯಿಂದ ತೀವ್ರ ಹುಡುಕಾಟ

ಸಮಗ್ರ ನ್ಯೂಸ್: ರಜೆಯ ಮೇಲೆ ಮನೆಗೆ ಬಂದಿದ್ದ ಯೋಧನನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu & Kashmir) ಕುಲ್ಗಾಮ್ ನಲ್ಲಿ ನಡೆದಿದೆ. ಜಾವೇದ್ ಅಹ್ಮದ್ ವಾನಿ (25) ಅಪರಹರಣಕ್ಕೊಳಗಾದ ಯೋಧ ಎಂದು ತಿಳಿದು ಬಂದಿದೆ. ಜಾವೇದ್ ಮನೆಯಿಂದ ಅಂಗಡಿಯೊಂದಕ್ಕೆ ತೆರಳುವುದಾಗಿ ಹೇಳಿ ಕಾರಿನಲ್ಲಿ ಹೋಗಿದ್ದರು. ಆದರೆ ತುಂಬಾ ಸಮಯದವರೆಗೂ ಅವರು ವಾಪಾಸ್ ಆಗದೇ ಇರುವುದರಿಂದ ಕುಟುಂಬಸ್ಥರು ಹುಡುಕಾಟ ಆರಂಭಿಸಿದಾಗ ಅವರ ಕಾರು ಪರಂಹಾಲ್ ಎಂಬ ಗ್ರಾಮದಲ್ಲಿ ಪತ್ತೆಯಾಗಿದೆ. ಕಾರಿನ ಡೋರ್‌ಗಳು ತೆರೆದಿದ್ದು ಕಾರಿನಲ್ಲಿ

ಮನೆಗೆ ತೆರಳಿದ್ದ ಯೋಧನ ಅಪಹರಣ| ಸೇನೆಯಿಂದ ತೀವ್ರ ಹುಡುಕಾಟ Read More »

ಸ್ವಂತ ಉದ್ಯಮ ಆರಂಭಿಸಲು ಕೇಂದ್ರ ಸರ್ಕಾರ ನೀಡುತ್ತೆ 50 ಲಕ್ಷ ರೂ. ಸಾಲ – ಶೇ.50 ಸಬ್ಸಿಡಿಯೂ ಲಭ್ಯ| ಹೇಗೆ ಅರ್ಜಿ ಸಲ್ಲಿಸುವುದು? | ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್:ಸ್ವಂತ ಉದ್ಯಮ ಸ್ಥಾಪಿಸಿ ಸ್ವಾವಲಂಬಿ ಉದ್ಯಮಿ ಆಗಬೇಕೆ? ಹಾಗಾದರೆ ಕೋಳಿ ಫಾರಂ ಸ್ಥಾಪನೆಗೆ ಮುಂದಾಗಬಹುದು. ಯಾಕೆಂದರೆ? ಈ ಉದ್ಯಮ ಆರಂಭಿಸಲು ಕೇಂದ್ರ ಸರಕಾರ 50 ಲಕ್ಷ ರೂ. ಸಾಲ ನೀಡುತ್ತಿದೆ. ಶೇ. 50ರಷ್ಟು (50%) ಸಬ್ಸಿಡಿ (Subsidy) ಇದ್ದು, ನೀವು 25 ಲಕ್ಷ ಹೂಡಿಕೆ ಮಾಡಿದರೆ ಉಳಿದ ಮೊತ್ತವನ್ನು ಕೇಂದ್ರ ಭರಿಸಲಿದೆ. ಯಾರಿಗೆಲ್ಲ ಸೌಲಭ್ಯ ಲಭ್ಯ?ಈ ಯೋಜನೆಯಡಿ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು. ವ್ಯಕ್ತಿ, ಸ್ವಸಹಾಯ ಸಂಘಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತ ಸಹಕಾರ ಸಂಘಗಳು,

ಸ್ವಂತ ಉದ್ಯಮ ಆರಂಭಿಸಲು ಕೇಂದ್ರ ಸರ್ಕಾರ ನೀಡುತ್ತೆ 50 ಲಕ್ಷ ರೂ. ಸಾಲ – ಶೇ.50 ಸಬ್ಸಿಡಿಯೂ ಲಭ್ಯ| ಹೇಗೆ ಅರ್ಜಿ ಸಲ್ಲಿಸುವುದು? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ ʻಆಗಸ್ಟ್ʼ ತಿಂಗಳ ಬ್ಯಾಂಕ್ ರಜಾದಿನಗಳ ಪೂರ್ಣ ಪಟ್ಟಿ

ಸಮಗ್ರ ನ್ಯೂಸ್: ಆಗಸ್ಟ್ ತಿಂಗಳು ಪ್ರಾರಂಭವಾಗುತ್ತಿದೆ ಮತ್ತು ಪ್ರತಿ ತಿಂಗಳಂತೆ ಈ ತಿಂಗಳೂ ಬ್ಯಾಂಕ್‌ಗಳಲ್ಲಿ ಅಧಿಕೃತ ರಜಾದಿನಗಳು ಇರುತ್ತವೆ ಎಂದು ಎಲ್ಲರೂ ಯೋಚಿಸುತ್ತಿರುತ್ತಾರೆ. ದೇಶದಾದ್ಯಂತ ಸೆಂಟ್ರಲ್ ರಿಸರ್ವ್ ಬ್ಯಾಂಕ್ (RBI) ಹೊರಡಿಸಿದ 2023 ರ ಬ್ಯಾಂಕ್ ಹಾಲಿಡೇಸ್ ಪಟ್ಟಿಯ ಪ್ರಕಾರ, ಆಗಸ್ಟ್‌ ತಿಂಗಳಲ್ಲಿ ಒಟ್ಟು 14 ದಿನ (ಬ್ಯಾಂಕ್ ರಜಾ) ದೇಶಾದ್ಯಂತ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಇದು ಹಬ್ಬಗಳ ರಜಾದಿನಗಳು ಮತ್ತು ವಾರಾಂತ್ಯದ ರಜಾದಿನಗಳು ಹಾಗೇ ಇತರ ಯಾವುದೇ ರೀತಿಯ ಸಂದರ್ಭಗಳ ರಜೆಯನ್ನು ಒಳಗೊಂಡಿರುತ್ತದೆ. ಇದರಲ್ಲಿ ಪ್ರತಿ ರಾಜ್ಯಗಳು

ಬ್ಯಾಂಕ್ ಗ್ರಾಹಕರೇ ಗಮನಿಸಿ ʻಆಗಸ್ಟ್ʼ ತಿಂಗಳ ಬ್ಯಾಂಕ್ ರಜಾದಿನಗಳ ಪೂರ್ಣ ಪಟ್ಟಿ Read More »