ರಾಷ್ಟ್ರೀಯ

+84, +62, +60 ಸಂಖ್ಯೆಗಳಿಂದ ಬರುವ ಕರೆಗಳನ್ನು ಅಪ್ಪಿ ತಪ್ಪಿ ಸ್ವೀಕರಿಸಬೇಡಿ

ಸಮಗ್ರ ನ್ಯೂಸ್: ಅಪರಿಚಿತ ಸಂಖ್ಯೆಗಳಾದ +84, +62, +60 ರಿಂದ ಕರೆ ಬರುತ್ತಿದ್ದರೆ, ಅಂತಹ ಕರೆಗಳನ್ನು ಸ್ವೀಕರಿಸಬೇಡಿ. ನಿಮ್ಮನ್ನು ಬಲೆಗೆ ಬೀಳಿಸುವ ಮೂಲಕ ಹಣವನ್ನು ಸುಲಿಗೆ ಮಾಡಬಹುದು. ಈ ನಿಟ್ಟಿನಲ್ಲಿ ಸರ್ಕಾರವು ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದೆ. ಕಳೆದ ಕೆಲವು ತಿಂಗಳುಗಳಿಂದ, +84, +62, +60 ರಿಂದ ಪ್ರಾರಂಭವಾಗುವ ವಾಟ್ಸಾಪ್ ಸಂಖ್ಯೆಗಳಿಂದ ಭಾರಿ ಕರೆಗಳು ಬರುತ್ತಿರುವುದು ಕಂಡುಬಂದಿದೆ. ಮಲೇಷ್ಯಾ, ಕೀನ್ಯಾ, ವಿಯೆಟ್ನಾಂ ಮತ್ತು ಇಥಿಯೋಪಿಯಾದಿಂದ ಇಂತಹ ಕರೆಗಳು ಬರುತ್ತಿವೆ. ಈ ಐಎಸ್ಡಿ ಸಂಖ್ಯೆಗಳಿಂದ ಬರುವ ಕರೆಗಳು ಸಾಮಾನ್ಯವಾಗಿ ವೀಡಿಯೊ […]

+84, +62, +60 ಸಂಖ್ಯೆಗಳಿಂದ ಬರುವ ಕರೆಗಳನ್ನು ಅಪ್ಪಿ ತಪ್ಪಿ ಸ್ವೀಕರಿಸಬೇಡಿ Read More »

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ಭಾನುವಾರ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್,

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ Read More »

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ

ಸಮಗ್ರ ನ್ಯೂಸ್: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರವೀಣ್ ಸೂದ್ ಅವರನ್ನು ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಸಿಬಿಐನ ಉನ್ನತ ಹುದ್ದೆಗೆ 3 ಅಧಿಕಾರಿಗಳನ್ನು ಆಯ್ಕೆ ಮಾಡಿತ್ತು. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮೂರು ಅಧಿಕಾರಿಗಳ

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ Read More »

ವಿದೇಶದ ಕಾರಿನ ಸ್ಟೆರಿಂಗ್ ಯಾಕೆ ಎಡಭಾಗದಲ್ಲಿರುತ್ತೆ..?

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಬಹುತೇಕರ ಮನೆಯಲ್ಲಿ ಕಾರು ಇದ್ದೆ ಇರುತ್ತದೆ. ಕಾರನ್ನು ಚಲಾಯಿಸುವ ವೇಳೆ ಎಂದಾದರೂ ಭಾರತದಲ್ಲಿ ಸ್ಟೆರಿಂಗ್ ಬಲಭಾಗದಲಿದ್ದು. ವಿದೇಶದಲ್ಲೇಕೆ ಎಡಭಾಗದಲ್ಲಿರುತ್ತೆ..? ನಾವ್ಯಾಕೆ ಬಲಭಾಗದ ಸ್ಟೆರಿಂಗ್​ ಇರುವ ಕಾರು ಬಳಕೆ ಮಾಡುತ್ತೇವೆ..? ಎಂದು ಯೋಚಿಸಿದ್ದೀರಾ…? ಹೌದು ಎಂದಾದರೆ ನಿಮ್ಮ ಪ್ರಶ್ನೆಗೆ ಉತ್ತರ ಇವತ್ತೇ ಕಂಡುಕೊಳ್ಳಬಹುದು. ನಾವಂತು ಮೊದಲಿನಿಂದಲೂ ಎಡಗೈಗಿಂತ ಬಲಗೈ ಶ್ರೇಷ್ಟ ಎಂಬುದನ್ನು ನಂಬಿಕೊಂಡು ಬಂದವರು. ಈಗಿನ ಕಾರು ಮಾತ್ರವಲ್ಲ, ಹಿಂದೆ ಎತ್ತಿನ ಬಂಡಿ, ಕುದುರೆ ಟಾಂಗಾದ ಮೇಲೆ ಸವಾರಿ ಮಾಡುವಾಗಲೂ ಭಾರತೀಯರು ಬಲಗೈಯಲ್ಲಿಯೇ ಆಯುಧ

ವಿದೇಶದ ಕಾರಿನ ಸ್ಟೆರಿಂಗ್ ಯಾಕೆ ಎಡಭಾಗದಲ್ಲಿರುತ್ತೆ..? Read More »

ನಮೀಬಿಯಾದಿಂದ ತಂದ ಮತ್ತೊಂದು ಚೀತಾ ದುರಂತ ಸಾವು| ಎರಡೇ ತಿಂಗಳಲ್ಲಿ ಮೂರನೇ ಸಾವು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಕುನೋ ಉದ್ಯಾನವನಕ್ಕೆ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ತಂದಿದ್ದ ಇನ್ನೊಂದು ಹೆಣ್ಣು ಚೀತಾ ‘ದಕ್ಷಾ’ ಮಂಗಳವಾರ ಸಾವು ಕಂಡಿದೆ. ಗಂಡು ಚೀತಾದ ಆಕ್ರಮಣಕಾರಿ ಸಂಭೋಗದ ಕಾರಣದಿಂದಾಗಿ ಚೀತಾ ಸಾವು ಕಂಡಿದೆ ಎಂದು ಹೇಳಲಾಗಿದೆ. ಕುನೋದಲ್ಲಿ ಕಳೆದ ಎರಡು ತಿಂಗಳಲ್ಲಿ ಸಾವು ಕಂಡ ಮೂರನೇ ಆಫ್ರಿಕಾದ ಚೀತಾ ಇದಾಗಿದೆ.‌ ಕೆಲವು ವಾರಗಳ ಹಿಂದೆ, ಏಪ್ರಿಲ್‌ನಲ್ಲಿ, ದಕ್ಷಿಣ ಆಫ್ರಿಕಾದಿಂದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಗೊಂಡಿದ್ದ ಆರು ವರ್ಷದ ಗಂಡು ಚೀತಾ ಉದಯ್ ಹೃದಯಾಘಾತದಿಂದ ಸಾವು ಕಂಡಿತ್ತು. ಮಾರ್ಚ್‌

ನಮೀಬಿಯಾದಿಂದ ತಂದ ಮತ್ತೊಂದು ಚೀತಾ ದುರಂತ ಸಾವು| ಎರಡೇ ತಿಂಗಳಲ್ಲಿ ಮೂರನೇ ಸಾವು Read More »

ಮೊಬೈಲ್‌ನಲ್ಲಿ ಆ್ಯಪ್ ಬಳಸಿ ಮತಗಟ್ಟೆ ಹುಡುಕುವುದು ಹೇಗೆ?

ಸಮಗ್ರ ನ್ಯೂಸ್: ಮೇ 09, ರಾಜ್ಯಾದ್ಯಂತ ನಾಳೆ ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮತದಾರರು ತಮ್ಮ ಮತಗಟ್ಟೆ ವಿಳಾಸ ಎಲ್ಲಿದೆ ಎಂದು ಸುಲಭವಾಗಿ ಹುಡುಕಬಹುದು. ಮತದಾರರಿಗೆ ಅನುಕೂಲ ಆಗುವಂತೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣಾ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಮತಗಟ್ಟೆಗೆ ಗೂಗಲ್ ಲೊಕೇಶನ್ ಆಧರಿಸಿ ಮತಗಟ್ಟೆ ತಲುಪಬಹುದು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳಲ್ಲಿ ಸಣ್ಣ ಪುಟ್ಟ ಸ್ಥಳಗಳ ಬಗ್ಗೆ ಗೂಗಲ್‌ನಲ್ಲಿಯೂ ಮಾಹಿತಿ ಲಭ್ಯವಾಗದೆ ಮತ್ತು ಅಂತಹ ಸ್ಥಳಗಳನ್ನು ಗೂಗಲ್ ಮ್ಯಾಪ್ ಲಭ್ಯವಿರುವುದಿಲ್ಲ. ಅದಕ್ಕಾಗಿ,

ಮೊಬೈಲ್‌ನಲ್ಲಿ ಆ್ಯಪ್ ಬಳಸಿ ಮತಗಟ್ಟೆ ಹುಡುಕುವುದು ಹೇಗೆ? Read More »

ಬೆರಳಿಗೆ ಹಚ್ಚುವ ಚುನಾವಣಾ ಶಾಯಿಯ ಇತಿಹಾಸ ಗೊತ್ತೇ? 35 ದೇಶಗಳಿಗೆ ರಪ್ತಾಗುತ್ತಿದೆ ನಮ್ಮ ರಾಯಲ್ ಶಾಯಿ!!

ಸಮಗ್ರ ನ್ಯೂಸ್: ಪ್ರತಿಯೊಬ್ಬರೂ ತಾವು ಮತದಾನ ಮಾಡಿದ ಮೇಲೆ ತಮ್ಮ ಕೈಯ ತೋರು ಬೆರಳನ್ನು ಏಕೆ ತೋರಿಸುತ್ತಿದ್ದಾರೆ ಎಂಬ ಸಂದೇಹ ಚಿಕ್ಕ ಮಕ್ಕಳಲ್ಲಿ ಮೂಡಿದರೂ ದೊಡ್ಡವರಾದವರಿಗೆ ಈ ಬಗ್ಗೆ ಸಹಜವಾಗಿ ಗೊತ್ತೇ ಇರುತ್ತದೆ. ಹೌದು, ವ್ಯಕ್ತಿಯೊಬ್ಬನಿಗೆ ಸಾಂವಿಧಾನಿಕವಾಗಿ ಬಂದಿರುವ ಮತದಾನದ ಹಕ್ಕನ್ನು ಅವನು ಚಲಾಯಿಸಿದ್ದಾನೆ ಎಂಬುದನ್ನು ಸೂಚಿಸುವ ಹಾಗೂ ಒಂದೇ ಬಾರಿ ಮಾಡಬೇಕಾಗಿರುವ ತನ್ನ ಸರಿಯಾದ ಹಕ್ಕನ್ನು ಚಲಾಯಿಸಿದ್ದಾನೆ ಎಂದು ಖಾತರಿಪಡಿಸುವ ಸಂಕೇತವಾಗಿ ಅವನ/ಅವಳ ಕೈಯ ತೋರು ಬೆರಳಿಗೆ ಸುಲಭವಾಗಿ ಅಳಿಸಲಾಗದಂತಹ ಒಂದು ಶಾಯಿಯ ಗುರುತನ್ನು ಹಾಕಿರುತ್ತಾರೆ.

ಬೆರಳಿಗೆ ಹಚ್ಚುವ ಚುನಾವಣಾ ಶಾಯಿಯ ಇತಿಹಾಸ ಗೊತ್ತೇ? 35 ದೇಶಗಳಿಗೆ ರಪ್ತಾಗುತ್ತಿದೆ ನಮ್ಮ ರಾಯಲ್ ಶಾಯಿ!! Read More »

ತಾಂತ್ರಿಕ ದೋಷದಿಂದ ಮನೆ ಮೇಲೆ ಬಿದ್ದ ಮಿಗ್-21 ವಿಮಾನ| ಮೂವರು ಗ್ರಾಮಸ್ಥರು ಸಾವು

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ MiG-21 ಯುದ್ಧ ವಿಮಾನ ರಾಜಸ್ಥಾನದ ಹನುಮಾನ್‌ಗಢ ಬಳಿ ಪತನಗೊಂಡಿದೆ. ಇದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನೂ, ವಿಮಾನ ಪೈಲೆಟ್‌ಗಳು ಸುರಕ್ಷಿತವಾಗಿದ್ದಾರೆ. ವಿಮಾನವು ಹನುಮಾನ್‌ಗಢ್ ಜಿಲ್ಲೆಯ ಪಿಲಿಬಂಗಾ ಬಳಿ ತಾಂತ್ರಿಕ ದೋಷದಿಂದಾಗಿ ಸೂರತ್‌ಗಢ ವಾಯುನೆಲೆಯಿಂದ ಟೇಕ್ ಆಫ್ ಆದ ಕೆಲವೇ ಹೊತ್ತಲ್ಲಿ ಪತನಗೊಂಡಿದೆ. ಪೈಲಟ್ ಮತ್ತು ಸಹ ಪೈಲಟ್ ಸಕಾಲದಲ್ಲಿ ವಿಮಾನದಿಂದ ಜಿಗಿದರು ಮತ್ತು ಪ್ಯಾರಾಚೂಟ್ ಸಹಾಯದಿಂದ ಡ್ರೈನ್ ಪ್ರದೇಶದಲ್ಲಿ ಸುರಕ್ಷಿತವಾಗಿ ಇಳಿದಿದ್ದಾರೆ.

ತಾಂತ್ರಿಕ ದೋಷದಿಂದ ಮನೆ ಮೇಲೆ ಬಿದ್ದ ಮಿಗ್-21 ವಿಮಾನ| ಮೂವರು ಗ್ರಾಮಸ್ಥರು ಸಾವು Read More »

ಕಾಂಗೋ: ಪ್ರವಾಹ, ಭೂಕುಸಿತಕ್ಕೆ 400 ಮಂದಿ ಸಾವು

ಸಮಗ್ರ ನ್ಯೂಸ್: ಕಾಂಗೊದ ಪೂರ್ವಭಾಗದಲ್ಲಿ ಸಂಭವಿಸಿರುವ ಹಠಾತ್ ಪ್ರವಾಹ ಮತ್ತು ಭೂಕುಸಿತದ ಅವಘಡದಿಂದಾಗಿ ಸುಮಾರು 400 ಜನರು ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ. 394 ಜನರ ಶವ ಪತ್ತೆಯಾಗಿದೆ. ನಾಪತ್ತೆಯಾದವರಿಗೆ ಶೋಧ ಮುಂದುವರಿದಿದೆ. ನ್ಯಾಮುಕುಬಿ ಗ್ರಾಮದಲ್ಲಿ ನೂರಾರು ಮನೆಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ. ಸಿಕ್ಕಿ ಉಳಿದಿರುವವರ ರಕ್ಷಣೆಗೆ ಅವಶೇಷಗಳ ನಡುವೆ ತೀವ್ರ ಹುಡುಕಾಟ ನಡೆದಿದೆ. ಮಣ್ಣಿನಡಿಯೂ ಹಲವರು ಸಿಲುಕಿರುವ ಸಾಧ್ಯತೆಗಳಿವೆ. ಧಾರಾಕಾರ ಮಳೆಯಿಂದಾಗಿ ನದಿ ಉಕ್ಕಿ ಹರಿದಿದ್ದು, ನದಿಪಾತ್ರದಲ್ಲಿದ್ದ ಗ್ರಾಮಗಳು ತೀವ್ರ ಪರಿಣಾಮಕ್ಕೆ ತುತ್ತಾಗಿವೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಪ್ರವಾಹ

ಕಾಂಗೋ: ಪ್ರವಾಹ, ಭೂಕುಸಿತಕ್ಕೆ 400 ಮಂದಿ ಸಾವು Read More »

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 21 ಮಂದಿ ಸಾವನ್ನಪ್ಪಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ Read More »