ರಾಷ್ಟ್ರೀಯ

ನಾಳೆ(ಮಾ.31)ಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| 3305 ಪರೀಕ್ಷಾ ಕೇಂದ್ರಗಳ ಸ್ಥಾಪನೆ

ಸಮಗ್ರ ನ್ಯೂಸ್: ನಾಳೆಯಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, […]

ನಾಳೆ(ಮಾ.31)ಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| 3305 ಪರೀಕ್ಷಾ ಕೇಂದ್ರಗಳ ಸ್ಥಾಪನೆ Read More »

Essential drugs price hike| ನಾಗರೀಕರಿಗೆ ಬಿಗ್ ಶಾಕ್| ಎ. 1ರಿಂದ‌ ವಿವಿಧ ಔಷಧಿಗಳು ಬಲು ದುಬಾರಿ| ಸತತ ಮೂರನೇ ವರ್ಷವೂ ದರ ಏರಿಕೆ

ಸಮಗ್ರ ನ್ಯೂಸ್: ಸಾರ್ವಜನಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಏಪ್ರಿಲ್ 1ರಿಂದ 384 ರೀತಿಯ ಅಗತ್ಯ ಔಷಧಿಗಳ ಬೆಲೆಗಳು ರಿಂದ ಹೆಚ್ಚಾಗಲಿವೆ. ಇದರಲ್ಲಿ ನೋವು ನಿವಾರಕ ಮಾತ್ರೆಗಳು, ಹೃದ್ರೋಗಗಳಿಗೆ ಸಂಬಂಧಿಸಿದ ಮಾತ್ರೆಗಳು, ಪ್ರತಿಜೀವಕಗಳು, ಗ್ಯಾಸ್ ಟ್ರಬಲ್, ಕ್ಷಯ ತಡೆಗಟ್ಟುವ ಮಾತ್ರೆಗಳು ಸೇರಿವೆ. ರಾಷ್ಟ್ರೀಯ ಸಗಟು ಬೆಲೆ ಸೂಚ್ಯಂಕದ ಪ್ರಕಾರ ಪ್ರತಿ ವರ್ಷ ಔಷಧಿಗಳ ಬೆಲೆ ಏರಿಕೆಯನ್ನ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (NPPA) ಪ್ರಸ್ತಾಪಿಸುತ್ತದೆ. ಈ ವರ್ಷ ಶೇಕಡಾ 12.2 ರಷ್ಟು ಹೆಚ್ಚಳವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಔಷಧೀಯ

Essential drugs price hike| ನಾಗರೀಕರಿಗೆ ಬಿಗ್ ಶಾಕ್| ಎ. 1ರಿಂದ‌ ವಿವಿಧ ಔಷಧಿಗಳು ಬಲು ದುಬಾರಿ| ಸತತ ಮೂರನೇ ವರ್ಷವೂ ದರ ಏರಿಕೆ Read More »

ಪತ್ರಕರ್ತರಿಗೂ ಪೋಸ್ಟಲ್ ವೋಟಿಂಗ್ ಗೆ ಅವಕಾಶ| ಧನ್ಯವಾದ ತಿಳಿಸಿದ KUWJ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು)ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು

ಪತ್ರಕರ್ತರಿಗೂ ಪೋಸ್ಟಲ್ ವೋಟಿಂಗ್ ಗೆ ಅವಕಾಶ| ಧನ್ಯವಾದ ತಿಳಿಸಿದ KUWJ Read More »

ನೀತಿಸಂಹಿತೆ ಹಿನ್ನಲೆ; ಗೃಹಸಚಿವರ ಕಾರು ವಶಕ್ಕೆ ಪಡೆದ ಚುನಾವಣೆ ಆಯೋಗ

ಸಮಗ್ರ ನ್ಯೂಸ್ : ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರ ಸರ್ಕಾರಿ ಕಾರನ್ನ ವಶಪಡಿಸಿಕೊಂಡ ಸುದ್ದಿ ಹರಿದಾಡಿತು. ಇದರ ಜೊತೆಗೆ ಗೃಹ ಸಚಿವರ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವ ಜ್ಞಾನೇಂದ್ರ ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನು ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ

ನೀತಿಸಂಹಿತೆ ಹಿನ್ನಲೆ; ಗೃಹಸಚಿವರ ಕಾರು ವಶಕ್ಕೆ ಪಡೆದ ಚುನಾವಣೆ ಆಯೋಗ Read More »

UPI ಸಾಮಾನ್ಯ ಪೇಮೆಂಟ್ಸ್ ಗಳಿಗೆ ಶುಲ್ಕವಿರಲ್ಲ – NPCI ಸ್ಪಷ್ಟನೆ

ಸಮಗ್ರ ನ್ಯೂಸ್: ಯುಪಿಐ ಆಧಾರಿತ ವ್ಯವಹಾರಗಳಿಗೆ ವಿಧಿಸಲಾಗಿದೆ ಎನ್ನಲಾದ ಇಂಟರ್‌ಚೇಂಜ್ ಶುಲ್ಕಗಳ ಬಗ್ಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಸ್ಪಷ್ಟೀಕರಣ ನೀಡಿದೆ. ಈ ಶುಲ್ಕಗಳು ಪ್ರಿಪೇಯ್ಡ್ ಪಾವತಿ ವ್ಯವಹಾರ (ಪಿಪಿಐ) ಗಳಿಗೆ ಮಾತ್ರ ಅನ್ವಯಿಸುತ್ತವೆ. ಆದರೆ ಗ್ರಾಹಕರಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಪಿಪಿಐ ಹೇಳಿದೆ. ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಬ್ಯಾಂಕ್ ಖಾತೆಗೆ ಯುಪಿಐ ಮೂಲ GBಕ ಹಣ ಕಳುಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ. ಗಿಫ್ಟ್​ ಕಾರ್ಡ್​ಗಳು, ವ್ಯಾಲೆಟ್​ಗಳು,

UPI ಸಾಮಾನ್ಯ ಪೇಮೆಂಟ್ಸ್ ಗಳಿಗೆ ಶುಲ್ಕವಿರಲ್ಲ – NPCI ಸ್ಪಷ್ಟನೆ Read More »

ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಏನೆಲ್ಲಾ..?|ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆ ನೀತಿಸಂಹಿತೆ(code of conduct) ಜಾರಿಯಾಗಿದ್ದು ಮೇ.10ರಂದು ಮತದಾನ ಮತ್ತು ಮೇ.13 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನಲೆ ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಈ ಕೆಳಗಿನಂತಿವೆ.1.ಹೊಸ ಕಾರ್ಯಕ್ರಮಗಳ ಅನುಷ್ಟಾನ, ಉದ್ಘಾಟನೆ ಮಾಡುವ ಹಾಗಿಲ್ಲ

ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಏನೆಲ್ಲಾ..?|ಇಲ್ಲಿದೆ ನೋಡಿ Read More »

ಸೌದಿಯಲ್ಲಿ ಅಪಘಾತ| ಮಂಗಳೂರಿನ ಯುವಕ ಮೃತ್ಯು

Samagra news: ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತಪಟ್ಟಿದ್ದಾನೆ. ಮೃತರನ್ನು ಮಂಗಳೂರು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಇವರು ಏ .20ರಂದು ಊರಿಗೆ ಬರುವವರಿದ್ದರು.

ಸೌದಿಯಲ್ಲಿ ಅಪಘಾತ| ಮಂಗಳೂರಿನ ಯುವಕ ಮೃತ್ಯು Read More »

ಕರುನಾಡ ಕದನಕ್ಕೆ ಮುಹೂರ್ತ ಫಿಕ್ಸ್| ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ| ಮೇ.10ಕ್ಕೆ ಮತದಾನ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗವು ಘೋಷಣೆ ಮಾಡಿದ್ದು ಮೇ 10ರಂದು ಚುಣಾವಣೆ ನಡೆಯಲಿದ್ದು ಮೇ 13 ರಂದು ಮತದಾನ ಎಣಿಕೆ ನಡೆಯಲಿದೆ. ಈ ಕುರಿತು ಚುನಾವಣಾ ಆಯೋಗ ಬೆಳಗ್ಗೆ ೧೧.೩೦ರ ವೇಳೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಚುನಾವಣಾ ಆಯೋಗ ಕರ್ನಾಟಕದಲ್ಲಿ 5 ಕೋಟಿ 21ಲಕ್ಷ ಮತದಾರರು ಇದ್ದಾರೆ. ಅದರಲ್ಲಿ 2 ಕೋಟಿ 62 ಲಕ್ಷ ಪುರುಷ ಮತದಾರರು,2 ಕೋಟಿ 59 ಲಕ್ಷ ಮಹಿಳಾ ಮತದಾರರು ಇದ್ದಾರೆ.

ಕರುನಾಡ ಕದನಕ್ಕೆ ಮುಹೂರ್ತ ಫಿಕ್ಸ್| ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ| ಮೇ.10ಕ್ಕೆ ಮತದಾನ Read More »

charges imposed for UPI payment| ಎ.1 ರಿಂದ UPI ಪೇಮೆಂಟ್ಸ್ ಮೇಲೆ ಶುಲ್ಕ| ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಪಾವತಿ ನಿಗಮ

ಸಮಗ್ರ ನ್ಯೂಸ್: ಭಾರತೀಯ ರಾಷ್ಟ್ರೀಯ ಪಾವತಿ ನಿಗಮ(NPCI) ಇತ್ತೀಚಿನ ಸುತ್ತೋಲೆಯಲ್ಲಿ ಏಪ್ರಿಲ್ 1 ರಿಂದ UPI ಮೇಲಿನ ವ್ಯಾಪಾರಿ ವಹಿವಾಟುಗಳ ಮೇಲೆ PPI ಶುಲ್ಕಗಳನ್ನು ಅನ್ವಯಿಸುವಂತೆ ಸೂಚಿಸಿದೆ. ಇನ್ನು ಮುಂದೆ UPI ಮೂಲಕ ಕೆಲವು ರೀತಿಯ ಪಾವತಿಗಳ ಮೇಲೆ ಇಂಟರ್ಚೇಂಜ್ ಶುಲ್ಕವನ್ನು ವಿಧಿಸಲಾಗುತ್ತದೆ. ವ್ಯಾಲೆಟ್‌ಗಳು ಅಥವಾ ಕಾರ್ಡ್‌ಗಳಂತಹ ಪ್ರಿಪೇಯ್ಡ್ ಸಾಧನಗಳ ಮೂಲಕ UPI ವ್ಯವಸ್ಥೆಯ ಅಡಿಯಲ್ಲಿ ನಡೆಸುವ ವ್ಯಾಪಾರಿ ವಹಿವಾಟುಗಳ ಮೇಲೆ 1.1% ಶುಲ್ಕವನ್ನು ವಿಧಿಸಲಾಗುತ್ತದೆ. ಆನ್‌ಲೈನ್ ವ್ಯಾಪಾರಿಗಳು, ದೊಡ್ಡ ವ್ಯಾಪಾರಿಗಳು ಮತ್ತು ಸಣ್ಣ ಆಫ್‌ಲೈನ್ ವ್ಯಾಪಾರಿಗಳಲ್ಲಿ

charges imposed for UPI payment| ಎ.1 ರಿಂದ UPI ಪೇಮೆಂಟ್ಸ್ ಮೇಲೆ ಶುಲ್ಕ| ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಪಾವತಿ ನಿಗಮ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು ದಿನಾಂಕ ಘೋಷಣೆ

ಸಮಗ್ರ ನ್ಯೂಸ್: ಇಂದು(ಮಾ.29) ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗವು ಘೋಷಣೆ ಮಾಡಲಿದೆ. ಇಂದು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದಿದ್ದು, ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡುವ ಸಂಬಂಧ ಪತ್ರಿಕಾಗೋಷ್ಠಿಯನ್ನು ಕರೆದಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು ದಿನಾಂಕ ಘೋಷಣೆ Read More »