ರಾಷ್ಟ್ರೀಯ

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ”

ದಿಸ್ಪುರ್: ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವ ವ್ಯವಸ್ಥೆಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಂತ ಬಿಸ್ವಾ ಶರ್ಮಾ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ವಿರುದ್ಧ ವಾಗ್ದಾಳಿ ನಡೆಸಿದರು. ಸ್ವತಂತ್ರ ಭಾರತದಲ್ಲಿ ವಾಸಿಸುವ ಪುರುಷನಿಗೆ ಹಿಂದಿನ ಪತ್ನಿಗೆ ವಿಚ್ಛೇದನ ನೀಡದೇ 3-4 ಮಹಿಳೆಯರನ್ನು ಮದುವೆಯಾಗುವ ಯಾವುದೇ ಹಕ್ಕಿಲ್ಲ. ನಾವು ಅಂತಹ ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ. ನಾವು ನ್ಯಾಯವನ್ನು ನೀಡಲು ಪ್ರಯತ್ನಿಸಬೇಕು. ಮುಸ್ಲಿಂ ಹೆಂಗಸರು, ಮುಸ್ಲಿಂ ಹುಡುಗಿಯರು ಹಿಜಬ್ ಧರಿಸಲು ಕೇಳುತ್ತಾರೆ. ಹುಡುಗರು […]

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ” Read More »

ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ| ಕರ್ನಾಟಕದ ಈ ಜಿಲ್ಲೆಗಳು ಸೇರಿ ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಮಾಂಡೌಸ್’ ಚಂಡಮಾರುತ ಇನ್ನಷ್ಟು ತೀವ್ರಗೊಂಡಿದೆ. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕ ಹಾಗೂ ನೆರೆಯ ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಭಾರಿ ಮಳೆ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರತ್ಯ ಬಂಗಾಳಕೊಲ್ಲಿಯಲ್ಲಿ ಪ್ರದೇಶದಲ್ಲಿರುವ ಈ ‘ಮಾಂಡೌಸ್’ ಚಂಡಮಾರುತವು ಚೆನ್ನೈನಿಂದ ಆಗ್ನೇಯ ದಿಕ್ಕಿಗೆ 250ಕಿಲೋ ಮೀಟರ್ ದೂರದಲ್ಲಿ ಕೇಂದ್ರಿಕೃತವಾಗಿದೆ. ‘ಮಾಂಡೌಸ್’ ತನ್ನ ಮೂಲ ಸ್ಥಳದಿಂದ ಪಶ್ವಿಮ ಮತ್ತು ವಾಯುವ್ಯ ದಿಕ್ಕಿನತ್ತ ಸಂಚರಿಸಲಿದೆ. ಶುಕ್ರವಾರ ರಾತ್ರಿ ವೇಳೆಗೆ ಪುದುಚೇರಿ ಮಾರ್ಗವಾಗಿ

ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ| ಕರ್ನಾಟಕದ ಈ ಜಿಲ್ಲೆಗಳು ಸೇರಿ ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ Read More »

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳಲ್ಲಿ ಗಳಿಕೆಯಾದ ಮತಗಳ ಪ್ರಮಾಣದಿಂದ ಅಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಪರಿವರ್ತನೆಯಾಗಲಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್ ಸೇರಿ ಎರಡೂ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿದ್ದು, ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದೆ. ಸತತವಾಗಿ ಚುನಾವಣೆಗಳಲ್ಲಿ ಗಳಿಸಿದ ಮತಗಳಿಂದಾಗಿ ರಾಷ್ಟ್ರೀಯ ಪಕ್ಷವಾಗುವ ಅರ್ಹತೆಯನ್ನು ಅಮ್ ಆದ್ಮಿ ಪಡೆದುಕೊಂಡಿದೆ. 2012ರಲ್ಲಿ ಸರಿಯಾಗಿ 10 ವರ್ಷಗಳ ಹಿಂದೆ ಆರಂಭಗೊಂಡು ಆಪ್ ಹೆಸರಿನಿಂದ ರಾಜಕೀಯ ಮುಖ್ಯವಾಹಿನಿಯಲ್ಲಿ

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ Read More »

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬುಧವಾರ ತನ್ನ ಪ್ರಮುಖ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ ಶೇ 6.25 ಕ್ಕೆ ಹೆಚ್ಚಿಸಿದೆ. ಹಣದುಬ್ಬರ ನಿಯಂತ್ರಣ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್ ಬಿಐ ಹೇಳಿದ್ದು, ಈ ನಡುವೆ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಾಗುವ ಆತಂಕ ಎದುರಾಗಿದೆ. ಕೇಂದ್ರ ಬ್ಯಾಂಕ್‌ನ ಇತ್ತೀಚಿನ ನಿರ್ಧಾರವು ಆರ್‌ಬಿಐ ರೆಪೋ ದರಗಳನ್ನು ಏರಿಕೆ ಮಾಡಿರುವುದರಿಂದ ಗೃಹ ಸಾಲ, ಕಾರಿನ ಸಾಲ ಸೇರಿದಂತೆ ಇತರ ಸಾಲಗಳ ಇಎಂಐ ಏರಿಕೆಯಾಗುವ ಸಾಧ್ಯತೆ

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ Read More »

ಸರಣಿ‌ ಅಪಘಾತಕ್ಕೆ ಕಾರಣವಾಯ್ತು ಉರಗ| ಹಾವಿನಂತ ರಸ್ತೆಯಲ್ಲಿ ಹಾವೇ ಬಂದು ಮಲಗಿತ್ತು!!

ಸಮಗ್ರ ನ್ಯೂಸ್: ಆ ಒಂದು ಹಾವು ಹೆದ್ದಾರಿಯಲ್ಲಿ ಅಡ್ಡ ಬಂದ ಕಾರಣ ಚಿಕ್ಕಬಳ್ಳಾಪುರ ಬಳಿ ಇಂದು ಬೆಳಗ್ಗೆ 6 ಗಂಟೆಯಲ್ಲಿ ಸರಣಿ ಅಪಘಾತಗಳು ಸಂಭವಿಸಿಬಿಟ್ಟಿವೆ. ಹೆದ್ದಾರಿಯಲ್ಲಿ ಹಾವು ಅಡ್ಡ ಬಂತು ಅಂತಾ ಹಿಂದೆಮುಂದೆ ನೋಡದೇ ಕಂಟೇನರ್ ಲಾರಿ ಚಾಲಕ ಬ್ರೇಕ್ ಹಾಕಿದ್ದಾನೆ. ಅಷ್ಟರಲ್ಲಿ ಮುಂದೆ ಲಾರಿ ಚಾಲಕನ ಅವಾಂತರದಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಕಂಟೈನರ್ ಲಾರಿ, ಒಂದು ಟಾಟಾ ಏಸ್, ಒಂದು ಕಾರು, ಒಂದು ಟಿಪ್ಪರ್ ಮಧ್ಯೆ ಸರಣಿ ಅಪಘಾತಗಳು ತನ್ನಿಂತಾನೇ ಆಗಿವೆ. ಟಾಟಾ

ಸರಣಿ‌ ಅಪಘಾತಕ್ಕೆ ಕಾರಣವಾಯ್ತು ಉರಗ| ಹಾವಿನಂತ ರಸ್ತೆಯಲ್ಲಿ ಹಾವೇ ಬಂದು ಮಲಗಿತ್ತು!! Read More »

ಚುನಾವಣೋತ್ತರ ಸಮೀಕ್ಷೆ| ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಬಹುಮತ

ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಉತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಟಿವಿ9 ಭಾರತ್ ವರ್ಷ ನಡೆಸಿದ ಸಮೀಕ್ಷೆಯಲ್ಲಿ ಗುಜರಾತ್ ನ 182 ಸ್ಥಾನಗಳಲ್ಲಿ ಬಿಜೆಪಿ 125 ರಿಂದ 130 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ 40 ರಿಂದ 50, ಆಮ್ ಆದ್ಮಿ ಪಕ್ಷ 3 ರಿಂದ 5 ಹಾಗೂ ಇತರರು ಮೂರರಿಂದ ಏಳು ಸ್ಥಾನ ಗಳಿಸಲಿದ್ದಾರೆ. ಟಿವಿ9 ಭಾರತ್ ವರ್ಷ ಸಮೀಕ್ಷೆ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಅತಂತ್ರ ಫಲಿತಾಂಶ ಸೃಷ್ಟಿಯಾಗಬಹುದು.

ಚುನಾವಣೋತ್ತರ ಸಮೀಕ್ಷೆ| ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಬಹುಮತ Read More »

ಇಂತಹ ಹಾಡುಗಳನ್ನು ಪ್ರಸಾರ ಮಾಡಿದರೆ ಶಿಸ್ತು ಕ್ರಮ| ಖಾಸಗಿ ಎಫ್ಎಂ ಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಮದ್ಯಪಾನ , ಡ್ರಗ್ಸ್, ಶಸ್ತ್ರಾಸ್ತ್ರಗಳು ಮತ್ತು “ದರೋಡೆಕೋರ ಅಥವಾ ಗನ್ ಸಂಸ್ಕೃತಿ”ಯನ್ನು ವೈಭವೀಕರಿಸುವ ಹಾಡುಗಳನ್ನು ಹಾಕದಂತೆ ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಇಲ್ಲದಿದ್ದರೆ ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಅನುಮತಿಗಳನ್ನು ಸಸ್ಪೆಂಡ್‌ ಮಾಡುವುದು ಮುಂತಾದ ಶಿಸ್ತು ಕ್ರಮದ ಎಚ್ಚರಿಕೆಯನ್ನೂ ನೀಡಿದೆ. ಕೆಲವು ಎಫ್‌ಎಂ ರೇಡಿಯೊ ಚಾನೆಲ್‌ಗಳು ಮದ್ಯ, drugs ಶಸ್ತ್ರಾಸ್ತ್ರಗಳು, ದರೋಡೆಕೋರರು ಮತ್ತು ಗನ್ ಸಂಸ್ಕೃತಿಯನ್ನ ವೈಭವೀಕರಿಸುವ ಹಾಡುಗಳನ್ನ ಪ್ರಸಾರ ಮಾಡುವುದನ್ನ ಸಚಿವಾಲಯ ಗಮನಿಸಿದ್ದು ಎಚ್ಚರಿಕೆ ನೀಡಿದೆ. ಸಲಹೆಯನ್ನು ಉಲ್ಲಂಘಿಸುವವರ ವಿರುದ್ಧ

ಇಂತಹ ಹಾಡುಗಳನ್ನು ಪ್ರಸಾರ ಮಾಡಿದರೆ ಶಿಸ್ತು ಕ್ರಮ| ಖಾಸಗಿ ಎಫ್ಎಂ ಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ Read More »

ಮೆಟ್ಟಿಲಿಂದ ಜಾರಿ ಬಿದ್ದು ಮಲವಿಸರ್ಜನೆ ಮಾಡಿಕೊಂಡ ರಷ್ಯಾ ಅಧ್ಯಕ್ಷ ಪುತಿನ್!!

ಸಮಗ್ರ ನ್ಯೂಸ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಮಾಸ್ಕೋದ ತಮ್ಮ ಅಧಿಕೃತ ನಿವಾಸದಲ್ಲಿ ಮೆಟ್ಟಿಲು ಇಳಿಯುವಾಗ ಜಾರಿ ಬಿದ್ದಿದ್ದಾರೆ. ಇದರ ಪರಿಣಾಮ ಅನಿಯಂತ್ರಿತ ಮಲವಿಸರ್ಜನೆ ಮಾಡಿಕೊಂಡಿದ್ದಾರೆ ಎಂದು ಪುಟಿನ್‌ ಅವರ ಭದ್ರತಾ ತಂಡದ ಹೇಳಿಕೆ ಉಲ್ಲೇಖೀಸಿ ಟೆಲಿಗ್ರಾಂ ಸುದ್ದಿವಾಹಿನಿ ವರದಿ ಮಾಡಿದೆ. “ಇನ್ನೇನು ಐದು ಮೆಟ್ಟಿಲುಗಳು ಇರುವಾಗ ಪುಟಿನ್‌(70) ಜಾರಿ ಬಿದ್ದರು. ಕ್ಯಾನ್ಸರ್‌ನಿಂದಾಗಿ ಹೊಟ್ಟೆ ಮತ್ತು ಕರುಳಿನ ಸಮಸ್ಯೆ ಇರುವುದರಿಂದ ಅವರು ಬಿದ್ದ ತಕ್ಷಣ ಅನಿಯಂತ್ರಿತ ಮಲವಿಸರ್ಜನೆ ಆಗಿದೆ,’ ಎಂದು ವರದಿಗಳು ತಿಳಿಸಿವೆ. ‘ರಕ್ತ ಕ್ಯಾನ್ಸರ್‌

ಮೆಟ್ಟಿಲಿಂದ ಜಾರಿ ಬಿದ್ದು ಮಲವಿಸರ್ಜನೆ ಮಾಡಿಕೊಂಡ ರಷ್ಯಾ ಅಧ್ಯಕ್ಷ ಪುತಿನ್!! Read More »

OYO ದಿಂದಲೂ ಉದ್ಯೋಗಿಗಳ ಗೇಟ್ ಪಾಸ್!! ಕೆಲಸ ಕಳೆದುಕೊಳ್ಳಲಿದ್ದಾರೆ 600 ಮಂದಿ

ಸಮಗ್ರ ನ್ಯೂಸ್: ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಈಗಾಗಲೇ ಉದ್ಯೋಗ ಕಡಿತದ ಪರ್ವ ಆರಂಭವಾಗಿದ್ದು, ಟ್ವಿಟ್ಟರ್, ಮೆಟಾ, ಸಿಸ್ಕೋ ಮೊದಲಾದ ಕಂಪನಿಗಳು ತಮ್ಮ ಸಹಸ್ರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ಭಾರತದಲ್ಲಿ ಈಗಾಗಲೇ ಸ್ಟಾರ್ಟ್ ಅಪ್ ಕಂಪನಿಗಳಾದ ಬೈಜೂಸ್ ಹಾಗೂ ಝೋಮ್ಯಾಟೋ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಕಡಿತ ಮಾಡುತ್ತಿದ್ದು, ಇದೀಗ ಓಯೋ ಹೋಟೆಲ್ಸ್ ಅಂಡ್ ಪ್ರೈವೇಟ್ ಲಿಮಿಟೆಡ್ ಇದೇ ಹಾದಿ ಹಿಡಿಯುತ್ತಿದೆ. ಓಯೋ 600 ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ತೀರ್ಮಾನಿಸಿದ್ದು, ಒಟ್ಟು 3,700 ಉದ್ಯೋಗಿಗಳ ಪೈಕಿ

OYO ದಿಂದಲೂ ಉದ್ಯೋಗಿಗಳ ಗೇಟ್ ಪಾಸ್!! ಕೆಲಸ ಕಳೆದುಕೊಳ್ಳಲಿದ್ದಾರೆ 600 ಮಂದಿ Read More »

ಎಲ್ಐಸಿ ನೀಡ್ತಾ ಇದೆ ವಾಟ್ಸಪ್ ಸೇವೆ| ಈ ನಂಬರ್ ನಲ್ಲಿ ಸಿಗಲಿದೆ ಸಂಪೂರ್ಣ ಸೇವಾ ವಿವರ

ಸಮಗ್ರ ನ್ಯೂಸ್: ದೇಶದಲ್ಲಿ ಹಲವಾರು ಮಂದಿ ವಾಟ್ಸಾಪ್ ಬಳಕೆ ಮಾಡುತ್ತಾರೆ. ಹೀಗಿರುವಾಗ ಪ್ರಮುಖ ಸಂಸ್ಥೆಗಳು ತಮ್ಮ ಸೇವೆಯನ್ನು ವಾಟ್ಸಾಪ್ ಮೂಲಕ ನೀಡುತ್ತಿದೆ. ಈಗ ದೇಶದ ಪ್ರಮುಖ ವಿಮಾ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ವಾಟ್ಸಾಪ್ ಸೇವೆಯನ್ನು ಆರಂಭ ಮಾಡಿದೆ. ಶುಕ್ರವಾರ ಎಲ್‌ಐಸಿ ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಿದೆ. ಎಲ್‌ಐಸಿ ಪಾಲಿಸಿಯನ್ನು ಹೊಂದಿರುವವರು ಎಲ್‌ಐಸಿ ಸೇವೆಯನ್ನು ಎಲ್‌ಐಸಿ ಪೋರ್ಟಲ್‌ ಬದಲಾಗಿ ವಾಟ್ಸಾಪ್ ಮೂಲಕವೇ ಪಡೆಯಬಹುದು. ನೀವು 8976862090 ಸಂಖ್ಯೆಗೆ HI (ಹಾಯ್) ಎಂದು ಕಳುಹಿಸುವ

ಎಲ್ಐಸಿ ನೀಡ್ತಾ ಇದೆ ವಾಟ್ಸಪ್ ಸೇವೆ| ಈ ನಂಬರ್ ನಲ್ಲಿ ಸಿಗಲಿದೆ ಸಂಪೂರ್ಣ ಸೇವಾ ವಿವರ Read More »