ರಾಷ್ಟ್ರೀಯ

2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ

ಸಮಗ್ರ ನ್ಯೂಸ್‌: ಭಾರತವು 2025 ರ ಪುರುಷರ ಏಷ್ಯಾಕಪ್ ಅನ್ನು ಆಯೋಜಿಸುವ ಹಕ್ಕು ಪಡೆದಿದೆ. ಈ ಟೂರ್ನಿ 20 ಓವರ್‌ಗಳ ಮಾದರಿಯಲ್ಲಿ ನಡೆಯಲಿದೆ. ಇದರಲ್ಲಿ 6 ತಂಡಗಳು ಭಾಗವಹಿಸಲಿದ್ದು, ಈಗಾಗಲೇ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ತಂಡಗಳು ಅರ್ಹತೆ ಪಡೆದುಕೊಂಡಿದ್ದು, ಆರನೇ ತಂಡವನ್ನು ಅರ್ಹತಾ ಸುತ್ತಿನ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್ ಬಿಡುಗಡೆ ಮಾಡಿದ IEOI ದಾಖಲೆಯ ಪ್ರಕಾರ, ಭಾರತವು 2025 ರಲ್ಲಿ ನಡೆಯಲ್ಲಿರುವ ಪುರುಷರ ಏಷ್ಯಾಕಪ್‌ಗೆ ಆತಿಥ್ಯ ವಹಿಸಲಿದೆ. ಈ ಟೂರ್ನಿ ಟಿ20 […]

2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ Read More »

ಏರುತ್ತಿರುವ ಟೊಮೆಟೋ ದರ/ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

ಸಮಗ್ರ ನ್ಯೂಸ್‌: ನೂರು ರೂಗಿಂತ ಅಧಿಕಗೊಂಡಿರುವ ಟೊಮೆಟೋ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ (ಎನ್‌ಸಿಸಿಎಫ್) ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಲಿದೆ. ಮೊದಲಿಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್‌ಸಿಸಿಎಫ್‌ನ ರೀಟೇಲ್ ಸ್ಟೋರ್ ಮತ್ತು ವಾಹನಗಳ ಮೂಲಕ ಟೊಮೆಟೋ ಮಾರಾಟ ನಡೆಯಲಿದ್ದು, ಒಂದು ಕಿಲೋ ಟೊಮೆಟೋ 60 ರೂಗೆ ಸಿಗಲಿದೆ. ದೇಶದ ಹಲವೆಡೆ ಟೊಮೆಟೊ ಬೆಲೆ 70 ರೂಗಿಂತ ಮೇಲೇರಿದೆ. ದೆಹಲಿ ಮೊದಲಾದ ಕೆಲವೆಡೆಯಂತೆ ಬೆಲೆ 120

ಏರುತ್ತಿರುವ ಟೊಮೆಟೋ ದರ/ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ Read More »

ಲಡಾಖ್‌ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ/ ಇಂದು ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ

ಸಮಗ್ರ ನ್ಯೂಸ್‌: ಲಡಾಖ್‌ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಮೋದಿ ಅವರು ಅತ್ಯಂತ ಕಾರ್ಯತಂತ್ರದ ಮತ್ತು ಪ್ರಮುಖ ಶಿಂಕುಲ್ ಲಾ ಸುರಂಗವನ್ನು ಉದ್ಘಾಟಿಸಲಿದ್ದಾರೆ, ಇದು ಎಲ್ಲಾ ಋತುಗಳಲ್ಲಿ ಪರ್ಯಾಯ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಲಡಾಖ್ ಗೆ ಪಡೆಗಳ ಕ್ಷಿಪ್ರ ಚಲನೆಯನ್ನು ಸುಗಮಗೊಳಿಸುತ್ತದೆ. ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲಡಾಖ್ ಲೆಫ್ಟಿನೆಂಟ್ ಗವರ್ನರ್ ಬ್ರಿಗೇಡಿಯರ್ (ಡಾ) ಬಿ.ಡಿ. ಮಿಶ್ರಾ (ನಿವೃತ್ತ). ಸಿಡಿಎಸ್ ಮತ್ತು ಮೂರು ಸೇನಾ

ಲಡಾಖ್‌ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ/ ಇಂದು ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ Read More »

ನೂತನ ಫೀಚರ್‌ ಪರಿಚಯಿಸಿದ ಗೂಗಲ್‌ ಮ್ಯಾಪ್‌

ಸಮಗ್ರ ನ್ಯೂಸ್‌: ಅಮೆರಿಕದ ಮೂಲದ ಗೂಗಲ್‌ ಭಾರತೀಯರಿಗೆ ತನ್ನ ಗೂಗಲ್‌ ಮ್ಯಾಪ್‌ನಲ್ಲಿ ಒಂದಿಷ್ಟು ಹೊಸ ಆಯ್ಕೆಗಳನ್ನು ಪರಿಚಯಿಸಿದ್ದು, ಎಲೆಕ್ಟ್ರಿಕ್‌ ಚಾರ್ಜಿಂಗ್‌ ಪಾಯಿಂಟ್‌ ಎಲ್ಲಿದೆ, ಫ್ಲೈಓವರ್‌ ಯಾವುದೋ ಕಾರಣಕ್ಕೆ ಮುಚ್ಚಿದ್ದರೆ ಅದರ ಮಾಹಿತಿ, ಮೆಟ್ರೋ ಟಿಕೆಟ್‌ ಖರೀದಿ, ನಾಲ್ಕು ಚಕ್ರಗಳ ವಾಹನಗಳಿಗೆ ಕಿರಿದಾದ ದಾರಿ ತಪ್ಪಿಸಲು ನೆರವಾಗುವ ಕೃತಕ ಬುದ್ಧಿಮತ್ತೆ ಆಧರಿತ ಆಯ್ಕೆಗಳನ್ನು ಪರಿಚಯಿಸಿದೆ. ಅಲ್ಲದೆ ಡೆವಲಪರ್‌ಗಳಿಗೆ ಗೂಗಲ್‌ ಮ್ಯಾಪ್‌ ಫ್ಲ್ಯಾಟ್‌ಫಾರಂ ಬಳಕೆ ಶುಲ್ಕವನ್ನು ಶೇ.70ರಷ್ಟು ಕಡಿತ ಕೂಡಾ ಮಾಡಿದೆ. ಮೊದಲ ಹಂತದಲ್ಲಿ ಈ ಸೇವೆಗಳು ಬೆಂಗಳೂರು ಸೇರಿದಂತೆ

ನೂತನ ಫೀಚರ್‌ ಪರಿಚಯಿಸಿದ ಗೂಗಲ್‌ ಮ್ಯಾಪ್‌ Read More »

ಸಿಂಪಲ್ಲಾಗಿ ಸಾಯೋದಕ್ಕೆ ಆತ್ಮಹತ್ಯೆ ಮೆಷಿನ್ ಆವಿಷ್ಕರಿಸಿದ ಸ್ವಿಟ್ಜರ್ಲೆಂಡ್‌‌| ನೋವಿಲ್ಲದೆ ಕ್ಷಣದಲ್ಲಿ ಸಾಯಿಸುತ್ತೆ ಈ ಯಂತ್ರ

ಸಮಗ್ರ ಡಿಜಿಟಲ್ ಡೆಸ್ಕ್: ‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಿಸುವ ಯಂತ್ರ’ವನ್ನು ಸ್ವಿಟ್ಜರ್ಲೆಂಡ್ ಆವಿಷ್ಕರಿಸಲಾಗಿದ್ದು, ಶೀಘ್ರದಲ್ಲೇ ಇದು ಬಳಕೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ವಿಟ್ಜರ್ಲೆಂಡ್‌ ಸರ್ಕಾರ ಆತ್ಮಹತ್ಯೆ ಯಂತ್ರ ಬಳಕೆಗೆ ಕಾನೂನು ಅನುಮೋದನೆ ನೀಡಿದೆ. ಇದೀಗ ವ್ಯಕ್ತಿಯು ಕೇವಲ ಒಂದು ನಿಮಿಷದಲ್ಲಿ ಈ ಯಂತ್ರವನ್ನು ಬಳಸಿ ತನ್ನ ಪ್ರಾಣವನ್ನು ತ್ಯಾಗ ಮಾಡಬಹುದಾಗಿದೆ. ಸಾರ್ಕೋ ಎಂಬ ಸಂಸ್ಥೆ ಈ ವಿನೂತನ ಯಂತ್ರವನ್ನು ಆವಿಷ್ಕರಿಸಿದ್ದು, 2019ರಲ್ಲೇ ಈ ಆತ್ಮಹತ್ಯಾ ಸಾಧನೆವನ್ನು ಸಂಸ್ಥೆ ರಿವೀಲ್ ಮಾಡಿತ್ತು. ಆದರೆ ಇದೀಗ ಅತ್ಯಾಧುನಿಕ ಅಪ್

ಸಿಂಪಲ್ಲಾಗಿ ಸಾಯೋದಕ್ಕೆ ಆತ್ಮಹತ್ಯೆ ಮೆಷಿನ್ ಆವಿಷ್ಕರಿಸಿದ ಸ್ವಿಟ್ಜರ್ಲೆಂಡ್‌‌| ನೋವಿಲ್ಲದೆ ಕ್ಷಣದಲ್ಲಿ ಸಾಯಿಸುತ್ತೆ ಈ ಯಂತ್ರ Read More »

ನಾನ್ ಸ್ಟಿಕ್ ಕುಕ್ ವೇರ್ ಬಳಕೆಯಿಂದ ಈ ಕಾಯಿಲೆ ಬರಬಹುದು!! ಆತಂಕಕಾರಿ ವರದಿ‌ ಬಹಿರಂಗ

ಸಮಗ್ರ ನ್ಯೂಸ್: ನಾನ್ ಸ್ಟಿಕ್ ಕಿಚನ್ ವೇರ್ ಅತಿಯಾಗಿ ಬಿಸಿಯಾಗುವುದರಿಂದ ಅವುಗಳ ಮೇಲಿನ ಲೇಪನದಲ್ಲಿ ರಾಸಾಯನಿಕಗಳ ಬಿಡುಗಡೆಯಿಂದ ಉಂಟಾಗುವ ಹೊಗೆಯಿಂದ ಈ ಸಮಸ್ಯೆಗಳು ಉಂಟಾಗುತ್ತವೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ. ಕಳೆದ ವರ್ಷ ಯುನೈಟೆಡ್ ಸ್ಟೇಟ್ಸ್‌ ನಲ್ಲಿ ವರದಿಯಾದ ಪಾಲಿಮರ್ ಫ್ಯೂಮ್ ಜ್ವರದ ಪ್ರಕರಣಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ, ಇದು ಅತಿಯಾಗಿ ಬಿಸಿಯಾದ ನಾನ್‌ಸ್ಟಿಕ್ ಪ್ಯಾನ್‌ಗಳಿಂದ ಹೊಗೆಯನ್ನು ಉಸಿರಾಡುವುದರಿಂದ ಉಂಟಾಗುವ ಅಪರೂಪದ ಕಾಯಿಲೆಯಾಗಿದೆ. ಸಾಮಾನ್ಯವಾಗಿ ಪಾಲಿಮರ್ ಫ್ಯೂಮ್ ಜ್ವರವನ್ನು “ಟೆಫ್ಲಾನ್ ಫ್ಲೂ” ಎಂದು ಉಲ್ಲೇಖಿಸಲಾಗುತ್ತದೆ. ಟ್ರೇಡ್‌ಮಾರ್ಕ್ ನಾನ್‌ಸ್ಟಿಕ್ ಕೋಟಿಂಗ್,

ನಾನ್ ಸ್ಟಿಕ್ ಕುಕ್ ವೇರ್ ಬಳಕೆಯಿಂದ ಈ ಕಾಯಿಲೆ ಬರಬಹುದು!! ಆತಂಕಕಾರಿ ವರದಿ‌ ಬಹಿರಂಗ Read More »

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಇಂದಿನಿಂದ ಭಾರತದ ಒಲಿಂಪಿಕ್ಸ್ ಅಭಿಯಾನ ಶುರು

ಸಮಗ್ರ ನ್ಯೂಸ್‌: ಭಾರತವು ಇಂದಿನಿಂದ ಒಲಿಂಪಿಕ್ಸ್ ಅಭಿಯಾನ ಆರಂಭಿಸಲಿದ್ದು, ಬಿಲ್ಲುಗಾರಿಕೆ (ಆರ್ಚರಿ) ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟುಗಳಾದ ದೀಪಿಕಾ ಕುಮಾರಿ, ಅಂಕಿತಾ ಭಕತ್, ಭಜನ್ ಕೌರ್, ಬಿ ಧೀರಜ್, ತರುಣ್‌ದೀಪ್ ರೈ ಮತ್ತು ಪ್ರವೀಣ್ ಜಾಧವ್ ಸ್ಪರ್ಧಿಸಲಿದ್ದಾರೆ. ವೈಯಕ್ತಿಕ ಶ್ರೇಯಾಂಕ ಸುತ್ತಿನಲ್ಲಿ ಸ್ಪರ್ಧೆ ನಡೆಯಲಿದೆ. ಇದಾದ ಬಳಿಕ ಪುರುಷರ ವೈಯುಕ್ತಿಕ ಶ್ರೇಯಾಂಕ ಸುತ್ತಿನ ಆರ್ಚರಿ ಸ್ಪರ್ಧೆಗಳು ನಡೆಯಲಿವೆ. ಭಾರತೀಯ ಬಿಲ್ಲುಗಾರರ ಪದಕದ ಮಹತ್ವಾಕಾಂಕ್ಷೆಗೆ ಇಂದಿನ ಶ್ರೇಯಾಂಕದ ಸುತ್ತು ನಿರ್ಣಾಯಕವಾಗಿರುತ್ತದೆ. ಶ್ರೇಯಾಂಕದ ಸುತ್ತಿನಿಂದ ಆಗ್ರ ನಾಲ್ಕು ಶ್ರೇಯಾಂಕದ ತಂಡಗಳು ನೇರವಾಗಿ

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಇಂದಿನಿಂದ ಭಾರತದ ಒಲಿಂಪಿಕ್ಸ್ ಅಭಿಯಾನ ಶುರು Read More »

ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ

ಸಮಗ್ರ ನ್ಯೂಸ್: ನೇಪಾಳದ ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಉಲ್ಲೇಖಿಸಿದ್ದಾರೆ. ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರು ಇರಲಿಲ್ಲ, ಆದರೆ ತಾಂತ್ರಿಕ ತಂಡದ 19 ಸದಸ್ಯರು ವಿಮಾನದಲ್ಲಿದ್ದರು. ಅಪಘಾತಕ್ಕೆ ಕಾರಣ ಏನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. 19 ಸದಸ್ಯರ ಸಾವಿನ ಶಂಕೆ ವ್ಯಕ್ತವಾಗಿದೆ. ಆದರೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಅನ್ನೋದರ ಕುರಿತು ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತ ನಡೆದ ಸ್ಥಳದಿಂದ ಇದುವರೆಗೆ

ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ Read More »

ಬಜೆಟ್ 2024| ಯಾವ ಕ್ಷೇತ್ರಕ್ಕೆ‌ ಏನು ಸಿಕ್ತು? ಇಲ್ಲಿದೆ ಹೈಲೈಟ್ಸ್…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಬಜೆಟ್ ನಲ್ಲಿ ನಿಗದಿಪಡಿಸಿದ ಗುರಿಗಳನ್ನು ಅನುಸರಿಸಿ, ನಾವು ಒಂಬತ್ತು ಆದ್ಯತೆಗಳನ್ನು ನಿಗದಿಪಡಿಸಿದ್ದೇವೆ, ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ಮಾಡಲಾಗುವುದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. 2024-25ನೇ ಸಾಲಿನ ಕೇಂದ್ರ

ಬಜೆಟ್ 2024| ಯಾವ ಕ್ಷೇತ್ರಕ್ಕೆ‌ ಏನು ಸಿಕ್ತು? ಇಲ್ಲಿದೆ ಹೈಲೈಟ್ಸ್… Read More »

ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವ/ ಲಡಾಖ್‌ನಲ್ಲಿ ಸಂಭ್ರಮಾಚರಣೆ ಮಾಡಲಿರುವ ಮೋದಿ

ಸಮಗ್ರ ನ್ಯೂಸ್‌: ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜುಲೈ 26ರಂದು ಲಡಾಖ್‌ನ ದ್ರಾಸ್‌ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಲಡಾಖ್‌ನ ಲೆಫ್ಟಿನೆಂಟ್‌ ಜನರಲ್‌ ಮಿಶ್ರಾ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 2022ರಲ್ಲಿ ಪ್ರಧಾನಿ ಮೋದಿ ಅವರು ಕಾರ್ಗಿಲ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು ಮತ್ತು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸಿದ್ದರು.

ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವ/ ಲಡಾಖ್‌ನಲ್ಲಿ ಸಂಭ್ರಮಾಚರಣೆ ಮಾಡಲಿರುವ ಮೋದಿ Read More »