ರಾಷ್ಟ್ರೀಯ

ಕೆ.ಸೆಟ್ ಫಲಿತಾಂಶ ಪ್ರಕಟ| ಈ ಬಾರಿ ಮೇಲುಗೈ‌ ಸಾಧಿಸಿದ ಪುರುಷ ಅಭ್ಯರ್ಥಿಗಳು|

ಮೈಸೂರು: ಜುಲೈ 25, 2021ರಂದು ರಾಜ್ಯಾಧ್ಯಂತ ನಡೆಸಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯ ಪರೀಕ್ಷೆಯಲ್ಲಿ ಪುರುಷ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಕೆಸೆಟ್-2021ರ ಪರೀಕ್ಷೆಯ ಫಲಿತಾಂಶವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಬಿಡುಗಡೆ ಮಾಡಿದರು. ಈ ಬಾರಿ 83,907 ಅಭ್ಯರ್ಥಿಗಳು ಕೆಸೆಟ್ ಪರೀಕ್ಷೆಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇವರಲ್ಲಿ 69,857 ಅಭ್ಯರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿಸಿದರು. ಇನ್ನೂ ಪರೀಕ್ಷೆಗೆ […]

ಕೆ.ಸೆಟ್ ಫಲಿತಾಂಶ ಪ್ರಕಟ| ಈ ಬಾರಿ ಮೇಲುಗೈ‌ ಸಾಧಿಸಿದ ಪುರುಷ ಅಭ್ಯರ್ಥಿಗಳು| Read More »

ಪತ್ನಿಯನ್ನು ಆಕೆಯ ಪ್ರೇಮಿಯೊಂದಿಗೆ ಮದುವೆ ಮಾಡಿಸಿದ ಪತಿರಾಯ

ಲಕ್ನೋ: ವ್ಯಕ್ತಿಯೊಬ್ಬ ತನ್ನ ಐದು ತಿಂಗಳ ದಾಂಪತ್ಯವನ್ನು ತ್ಯಾಗ ಮಾಡಿ, ಮತ್ತು ಹೆಂಡತಿಯನ್ನು ಆಕೆಯ ಗೆಳೆಯನೊಂದಿಗೆ ಮದುವೆ ಮಾಡಿಸಿದ ವಿಚಿತ್ರ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಶುಕ್ರವಾರ ಗೋಲ್ ಚೌರಾದಲ್ಲಿರುವ ಆಶಾಜ್ಯೋತಿ ಕೇಂದ್ರದಲ್ಲಿ ನಡೆದ ಈ ಮದುವೆಗೆ ಜಿಲ್ಲಾ ಪರೀಕ್ಷಾಧಿಕಾರಿ, ಒನ್ ಸ್ಟಾಪ್ ಸೆಂಟರ್ ಮ್ಯಾನೇಜರ್, ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಮೂವರ ಸಂಬಂಧಿಕರು ಸಾಕ್ಷಿಯಾಗಿದ್ದರು. ಗುರುಗ್ರಾಮ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿರುವ ಬರ್ರಾ-8 ನಿವಾಸಿ ಪಂಕಜ್ ಶರ್ಮಾ ಅವರು ಮೇ

ಪತ್ನಿಯನ್ನು ಆಕೆಯ ಪ್ರೇಮಿಯೊಂದಿಗೆ ಮದುವೆ ಮಾಡಿಸಿದ ಪತಿರಾಯ Read More »

ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ ಎಂದ ಸುಪ್ರೀಂ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಹಾಗೂ ವಾಯುಮಾಲಿನ್ಯದ ನಡುವೆ ಪಟಾಕಿ ಸಂಪೂರ್ಣ ನಿಷೇಧಿಸುವಂತೆ ಕೋಲ್ಕತ್ತ ಹೈಕೋರ್ಟ್ ಹೇಳಿತ್ತು. ಆದರೆ, ಕೋಲ್ಕತ್ತಾ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಬದಿಗೊತ್ತಿ, ಹೊಸ ತೀರ್ಪು ನೀಡಿದೆ. ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದ ವಿಚಾರಣೆ ವೇಳೆ ಶುಕ್ರವಾರದ ಸುಪ್ರೀಂ ಕೋರ್ಟ್ನ ಆದೇಶದ ಮೇರೆಗೆ ಮಾತನಾಡಿದ ನ್ಯಾಯಮೂರ್ತಿಗಳು, ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲು ಆಗುವುದಿಲ್ಲ. ದುರುಪಯೋಗವನ್ನು ತಡೆಯಲು ಕಾರ್ಯವಿಧಾನವನ್ನು ಬಲಪಡಿಸಿ” ಎಂದು ಹೇಳಿದರು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ಅಜಯ್ ರಸ್ತೋಗಿ

ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ ಎಂದ ಸುಪ್ರೀಂ Read More »

ಭಾರೀ ಏರಿಕೆ ಕಂಡ ಗ್ಯಾಸ್ ಸಿಲೆಂಡರ್| ಗ್ರಾಹಕರ ಜೇಬಗೆ ದೊಡ್ಡ ಕತ್ತರಿ

ನವದೆಹಲಿ: ದೀಪಾವಳಿಯ ಮೊದಲು LPG ಬೆಲೆಯಲ್ಲಿ ಹೆಚ್ಚಳ ಕಂಡಿದೆ. ಅಂದ ಹಾಗೇ ಪ್ರತಿ ತಿಂಗಳ ಮೊದಲ ದಿನ ಗ್ಯಾಸ್‌ ಸಿಲೆಂಡರ್‌ ಬೆಲೆಯನ್ನು ನಿಗದಿ ಮಾಡಲಾಗುತ್ತಿದ್ದು, ಅದರಂತೆ ಇಂದು ವಾಣಿಜ್ಯ ಸಿಲಿಂಡರ್ ಬೆಲೆ 265 ರೂ ಹೆಚ್ಚಳ ಮಾಡಲಾಗಿದೆ. ಈಗ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 2000 ರೂ ದಾಟಿದೆ. ಮೊದಲು 1733 ರೂ ಇತ್ತು, . ಮುಂಬೈನಲ್ಲಿ 1683 ರೂ.ಗೆ ದೊರೆಯುವ 19 ಕೆಜಿ ಸಿಲಿಂಡರ್ ಈಗ 1950 ರೂ.ಗೆ ಲಭ್ಯವಾಗಲಿದೆ. ಅದೇ ಸಮಯದಲ್ಲಿ, ಈಗ 19 ಕೆಜಿ

ಭಾರೀ ಏರಿಕೆ ಕಂಡ ಗ್ಯಾಸ್ ಸಿಲೆಂಡರ್| ಗ್ರಾಹಕರ ಜೇಬಗೆ ದೊಡ್ಡ ಕತ್ತರಿ Read More »

ಮುಂದುವರಿದ ಪೆಟ್ರೋಲ್, ಡೀಸೆಲ್ ಜೊತೆಯಾಟ| ಅಡುಗೆ ಅನಿಲವೂ ಏಕ್ ದಂ‌ ಸೆಂಚುರಿ ಬಾರಿಸುವ ಸಾಧ್ಯತೆ|

ದೆಹಲಿ: ಸತತ ಐದನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇದರಿಂದ ದೇಶಾದ್ಯಂತ ತೈಲ ಬೆಲೆ ದಾಖಲೆ ಮಟ್ಟ ತಲುಪಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು ಭಾನುವಾರ (ಅ.31) ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಿವೆ. ಇಂದು ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 35 ಪೈಸೆ ಏರಿಕೆ ಆಗಿದೆ.ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ ಈಗಾಗಲೇ ಬಸವಳಿದಿರುವ ಜನಸಾಮಾನ್ಯರ ಮೇಲೆ ದೀಪಾವಳಿ ಹಬ್ಬದ ವೇಳೆ ಇನ್ನೊಂದು ಬರೆ ಎಳೆಯಲು ಕೇಂದ್ರ ಸರಕಾರ ಮುಂದಾಗಿದೆ. ಅಧಿಕೃತ ಮೂಲಗಳ ಪ್ರಕಾರ ಮುಂದಿನ ದಿನಗಳಲ್ಲಿ

ಮುಂದುವರಿದ ಪೆಟ್ರೋಲ್, ಡೀಸೆಲ್ ಜೊತೆಯಾಟ| ಅಡುಗೆ ಅನಿಲವೂ ಏಕ್ ದಂ‌ ಸೆಂಚುರಿ ಬಾರಿಸುವ ಸಾಧ್ಯತೆ| Read More »

ಪೋಪ್ ಪ್ರಾನ್ಸಿಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ| ಜಗದ್ವಿಚಾರಗಳ‌ ಬಗ್ಗೆ ಚರ್ಚೆ

ವ್ಯಾಟಿಕನ್​ ಸಿಟಿ: ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲೆಂದು ಇಟಲಿ​ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವ್ಯಾಟಿಕನ್​ ನಗರದಲ್ಲಿ ಕ್ರೈಸ್ತ ಧರ್ಮದ ಪರಮೋಚ್ಛ ಗುರು ಪೋಪ್​ ಫ್ರಾನ್ಸಿಸ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕ್ಯಾಥೋಲಿಕ್​ ಚರ್ಚ್​ನ ಮುಖ್ಯಸ್ಥರಾಗಿರುವ ಪೋಪ್​ ಫ್ರಾನ್ಸಿಸ್​ ಅವರನ್ನ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿದ್ದು ಇದೇ ಮೊದಲು. ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿ, ಬಡತನ ನಿರ್ಮೂಲನೆ, ಉತ್ತಮ ಜೀವನ ನಿರ್ವಹಣೆ ಕುರಿತು ಪೋಪ್​ ಫ್ರಾನ್ಸಿಸ್ ಮತ್ತು ನರೇಂದ್ರ ಮೋದಿ ಇಬ್ಬರೂ

ಪೋಪ್ ಪ್ರಾನ್ಸಿಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ| ಜಗದ್ವಿಚಾರಗಳ‌ ಬಗ್ಗೆ ಚರ್ಚೆ Read More »

ಸದ್ಯಕ್ಕಿಲ್ಲ ಕರ್ನಾಟಕ-ಕೇರಳ ಅಂತರಾಜ್ಯ ಬಸ್‌ ಸಂಚಾರ

ಮಂಗಳೂರು: ಸದ್ಯಕ್ಕೆ ಕರ್ನಾಟಕ-ಕೇರಳ ಅಂತರಾಜ್ಯ ಬಸ್‌ ಸಂಚಾರ ಪುನರಾರಂಭವಾಗುವುದು ಅನುಮಾನವಾಗಿದ್ದು, ಈ ಕಾರಣ ಒಂದು ವಾರ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ನ.1ರಿಂದ ಬಸ್‌ ಸಂಚಾರ ಪುನರಾರಂಭವಾಗುವು ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ. ಆದರೆ, ಒಂದು ವಾರಗಳ ಕಾಲ ಅಂತರಾಜ್ಯ ಬಸ್‌ ಸಂಚಾರ ಪುನರಾರಂಭವಾಗದು ಎಂದು ದ.ಕ ಜಿಲ್ಲಾಡಳಿತ ಹೇಳಿದೆ. ಈ ವಿಚಾರವಾಗಿ ಕೇರಳ ಕೆಎಸ್‌ಆರ್‌ಟಿಸಿಯ ಅಧಿಕಾರಿಗಳು ತಿಳಿಸಿದ್ದು, “ಕರ್ನಾಟಕ ಬಸ್‌ಗಳು ರಾಜ್ಯ ಪ್ರವೇಶಿಸುವುದಕ್ಕಾಗಲಿ, ನಮ್ಮ ಬಸ್‌ಗಳನ್ನು ಕರ್ನಾಟಕಕ್ಕೆ ಬಿಡುವುದಕ್ಕಾಗಲಿ

ಸದ್ಯಕ್ಕಿಲ್ಲ ಕರ್ನಾಟಕ-ಕೇರಳ ಅಂತರಾಜ್ಯ ಬಸ್‌ ಸಂಚಾರ Read More »

ಇಂದು(ಅ.30) 3 ಲೋಕಸಭಾ ಹಾಗೂ 30 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ| ಕರ್ನಾಟಕದ ಹಾನಗಲ್, ಸಿಂದಗಿಯಲ್ಲಿ‌ ಮತದಾನ ಆರಂಭ

ನವದೆಹಲಿ ​: 13 ರಾಜ್ಯಗಳಲ್ಲಿ ಹರಡಿರುವ ಮೂರು ಲೋಕಸಭಾ ಸ್ಥಾನಗಳು ಮತ್ತು 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಇಂದು ನಡೆಯುತ್ತಿದೆ. ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದ್ದು ಚುನಾವಣೆ ಬಿಗಿ ಭದ್ರತೆಯ ನಡುವೆ ನಡೆಯುತ್ತಿದೆ. ದಾದ್ರಾ ಮತ್ತು ನಗರ ಹವೇಲಿ, ಹಿಮಾಚಲ ಪ್ರದೇಶದ ಮಂಡಿ ಮತ್ತು ಮಧ್ಯಪ್ರದೇಶದ ಖಾಂಡ್ವಾದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಉಪ ಚುನಾವಣೆಗಳ ಸಂದರ್ಭದಲ್ಲಿ ಕಟ್ಟುನಿಟ್ಟಾದ ಕೋವಿಡ್-19 ಮಾರ್ಗಸೂಚಿಗಳನ್ನು ನಿರ್ವಹಿಸುವಂತೆ ಭಾರತೀಯ ಚುನಾವಣಾ ಆಯೋಗವು ಮತದಾನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಉಪಚುನಾವಣೆಯ ಸಮಯದಲ್ಲಿ

ಇಂದು(ಅ.30) 3 ಲೋಕಸಭಾ ಹಾಗೂ 30 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ| ಕರ್ನಾಟಕದ ಹಾನಗಲ್, ಸಿಂದಗಿಯಲ್ಲಿ‌ ಮತದಾನ ಆರಂಭ Read More »

ಫೇಸ್‌ಬುಕ್ ಅಧೀನದ ಕಂಪನಿಗಳಿಗೆ ಒಂದೇ ಬ್ರ‍್ಯಾಂಡ್

ಇಂಟರ್‌ನೆಟ್ ಲೋಕವನ್ನೇ ಬದಲಿಸಲಿದೆಯಾ ಮೆಟಾವರ್ಸ್..? ವಿವರ ಇಲ್ಲಿದೆ ವಾಷಿಂಗ್ಟನ್: ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಮೆಸೆಂಜರ್, ಒಕುಲಸ್ ಮುಂತಾದ ಕಂಪನಿಗಳು ಮಾರ್ಕ್ ಜುಕರ್‌ಬರ್ಗ್ ಒಡೆತನದಲ್ಲಿದ್ದು, ಈ ಎಲ್ಲ ಸೋಶಿಯಲ್ ಮೀಡಿಯಾಗಳನ್ನು ಒಟ್ಟಿಗೆ ತರಲಾಗುತ್ತದೆ ಎಂದು ಜುಕರ್‌ಬರ್ಗ್ ಘೋಷಿಸಿದ್ದಾರೆಪ್ರಸಿದ್ಧ ಸಾಮಾಜಿಕ ಜಾಲತಾಣ ಫೇಸ್‌ಬುಕ್ ಕಂಪನಿಯ ಮುಖ್ಯಸ್ಥ ಮಾರ್ಕ್ ಜುಕರ್ ಬರ್ಗ್ ಭವಿಷ್ಯದ ವರ್ಚುವಲ್ ದೃಷ್ಟಿಕೋನದೊಂದಿಗೆ ತಮ್ಮ ಕಂಪನಿಯನ್ನು ಮೆಟಾ ಎಂಬ ಹೆಸರಿನಲ್ಲಿ ಬ್ರಾಂಡಿಂಗ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೇ ಅವರು ಮೆಟಾವರ್ಸ್ ಎಂದು ಕರೆದಿದ್ದಾರೆ.ನಿನ್ನೆ ನಡೆದ ಕಂಪನಿಯ ವಾರ್ಷಿಕ ಸಭೆಯನ್ನುದ್ದೇಶಿಸಿ ಮಾತನಾಡಿದ

ಫೇಸ್‌ಬುಕ್ ಅಧೀನದ ಕಂಪನಿಗಳಿಗೆ ಒಂದೇ ಬ್ರ‍್ಯಾಂಡ್ Read More »

ಮಹಿಳೆಯರಿಗೊಂದು ಗುಡ್ ನ್ಯೂಸ್| ಕೊನೆಗೂ ಇಳಿಕೆಯಾದ ಅಡುಗೆಎಣ್ಣೆ ದರ

ನವದೆಹಲಿ: ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ಸ್ವಲ್ಪ ‌ನಿರಾಳರಾಗಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಅಡುಗೆ ಎಣ್ಣೆ ಅದರ ಲೀಟರ್ ಗೆ 20 ರೂ. ನಷ್ಟು ಕಡಿಮೆಯಾಗಿದೆ. ಇನ್ನು 5 ರೂಪಾಯಿಯಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಕೊರೋನಾ ನಂತರದಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಅಡುಗೆ ಎಣ್ಣೆ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳಿಂದ ದರ ಇಳಿಕೆಯಾಗಿದೆ. ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಇಳಿಕೆ ಮಾಡಲಾಗಿದೆ. ಇದರಿಂದ ದೇಶೀಯ ಮಾರುಕಟ್ಟೆಯಲ್ಲಿ ಲೀಟರ್ ಅಡುಗೆ ಎಣ್ಣೆ ದರ 20

ಮಹಿಳೆಯರಿಗೊಂದು ಗುಡ್ ನ್ಯೂಸ್| ಕೊನೆಗೂ ಇಳಿಕೆಯಾದ ಅಡುಗೆಎಣ್ಣೆ ದರ Read More »