ರಾಷ್ಟ್ರೀಯ

ಆಸ್ಪತ್ರೆಗೆ ದಾಖಲಾದ ಸೂಪರ್ ಸ್ಟಾರ್ ರಜನಿಕಾಂತ್

ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಸಂಜೆ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿನ ವೈದ್ಯರು ರಜನಿಕಾಂತ್ ಅವರನ್ನು ವಿವಿಧ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಇಂದು ಸಂಜೆ 4.30ರ ಸುಮಾರಿಗೆ ಅವರು ಆಸ್ಪತ್ರೆಗೆ ತೆರಳಿದ್ದಾರೆ. ಎಂದಿನಂತೆ ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆಗೆ ದಾಖಲಾದ ಸೂಪರ್ ಸ್ಟಾರ್ ರಜನಿಕಾಂತ್ Read More »

ಉಪನ್ಯಾಸಕರ ಕೊಠಡಿಯಲ್ಲಿ ಆತ್ಮಹತ್ಯೆಗೈದ ಪ್ರಾಂಶುಪಾಲ

ಛತ್ತೀಸ್ ಗಡ: ಉಪನ್ಯಾಸಕರ ಕೊಠಡಿಯಲ್ಲಿ ಪ್ರಾಂಶುಪಾಲ ನೇಣಿಗೆ ಶರಣಾದ ಆಘಾತಕಾರಿ ಘಟನೆ ಚತ್ತೀಸಗಢದ ಸರ್ಕಾರಿ ಕಾಲೇಜೊಂದರಲ್ಲಿ ನಡೆದಿದೆ. ಅಹಿವಾರದ ಸರ್ಕಾರಿ ನಾಗರಿಕ ಕಲ್ಯಾಣ ಕಾಲೇಜಿನ ಪ್ರಾಂಶುಪಾಲರಾದ ಬಿ.ಪಿ. ನಾಯಕ್​(60) ಉಪನ್ಯಾಸಕರ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ದುರ್ಗ್​ ಹೆಚ್ಚುವರಿ ಎಸ್​ಪಿ ಅನಂತ್​ ಕುಮಾರ್ ಸಾಹು ಹೇಳಿದ್ದಾರೆ. ಸಿಬ್ಬಂದಿ ನೀಡಿರುವ ಮಾಹಿತಿಯ ಪ್ರಕಾರ, ನಾಯಕ್​ ಬೆಳಗ್ಗೆ 9:30ರ ಸುಮಾರಿಗೆ ಕಾಲೇಜಿಗೆ ಆಗಮಿಸಿದ್ದರು. ಸ್ವಲ್ಪ ಹೊತ್ತು ಬಿಟ್ಟು ವಾಚ್​ ಮನ್​ ಗಮನಿಸಿದ ವೇಳೆ ಪ್ರಾಂಶುಪಾಲ ನಾಯಕ್​​ ಉಪನ್ಯಾಸಕರ

ಉಪನ್ಯಾಸಕರ ಕೊಠಡಿಯಲ್ಲಿ ಆತ್ಮಹತ್ಯೆಗೈದ ಪ್ರಾಂಶುಪಾಲ Read More »

ಅಬ್ಬಬ್ಬಾ..! ಒಂದೇ ಹೆರಿಗೆಯಲ್ಲಿ ನಾಲ್ಕು‌ ಹಡೆದ ಮಹಾತಾಯಿ|

ಡಿಜಿಟಲ್ ಡೆಸ್ಕ್ : 27 ವರ್ಷದ ಮಹಿಳೆ ಒಂದೇ ಬಾರಿಗೆ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ವಿಸ್ಮಯಕಾರಿ ಘಟನೆಯು ಹೈದರಾಬಾದ್​​ನಲ್ಲಿ ನಡೆದಿದೆ. ಹೈದರಾಬಾದ್​​​ನ ಹಫೀಜ್​ಬಾಬಾ ನಗರದ ನಿವಾಸಿಯಾದ ಮಹಿಳೆಯು ಒಂದೇ ಬಾರಿಗೆ ಒಂದು ಗಂಡು ಮಗು ಹಾಗೂ ಮೂವರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ರೀತಿ ಒಂದೇ ಬಾರಿಗೆ ನಾಲ್ವರು ಮಕ್ಕಳಿಗೆ 5 ಕೋಟಿ ಮಹಿಳೆಯರಲ್ಲಿ ಒಬ್ಬರು ಜನ್ಮ ನೀಡುತ್ತಾರೆ. ಆದರೆ ಇಂತಹ ಪರಿಸ್ಥಿತಿಗಳಲ್ಲಿ ಹೆರಿಗೆ ಸಾಮಾನ್ಯವಾಗಿ ಅತ್ಯಂತ ಕಠಿಣದಾಯಕವಾಗಿ ಇರುತ್ತದೆ. ಮೀನಾ ಮಲ್ಟಿ ಸ್ಪೆಷಾಲಿಟಿ

ಅಬ್ಬಬ್ಬಾ..! ಒಂದೇ ಹೆರಿಗೆಯಲ್ಲಿ ನಾಲ್ಕು‌ ಹಡೆದ ಮಹಾತಾಯಿ| Read More »

ಕೋವಿಡ್ ಗೆ ಕೊಡಲಿ ಏಟು ಕೊಡಲು ಸಿದ್ದವಾಯ್ತು ಟ್ಯಾಬ್ಲೆಟ್| ಭಾರತದಲ್ಲೇ ತಯಾರಾಗಲು ಈ ಮಾತ್ರೆಯ ಬೆಲೆ ಎಷ್ಟು ಗೊತ್ತಾ..?

ನವದೆಹಲಿ: ಕೋವಿಡ್‌-_19ರ ಚಿಕಿತ್ಸೆಗಾಗಿ ಅಭಿವೃದ್ಧಿಪಡಿಸಿರುವ ವಿಶ್ವದ ಮೊದಲ ಮಾತ್ರೆ ಭಾರತದಲ್ಲೂ ಉತ್ಪಾದನೆಯಾಗುವ ಸಾಧ್ಯತೆ ಇದೆ. ಅಮೆರಿಕ ಮೂಲದ ಮೆರ್ಕ್ ಆ್ಯಂಡ್ ಕೋ ಅಭಿವೃದ್ಧಿಪಡಿಸಿರುವ ಮೋಲ್ನುಪಿರಾವಿರ್‌ ಗುಳಿಗೆಯನ್ನು ಭಾರತದಲ್ಲೂ ಉತ್ಪಾದಿಸಲು ಅನುಮತಿ ಕೋರಿ ಹೈದ್ರಾಬಾದ್‌ ಮೂಲದ ಆಪ್ಟಿಮಸ್‌ ಫಾರ್ಮಾ, ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ. ‘ಭಾರತದಲ್ಲಿ ಗುಳಿಗೆಯ ತುರ್ತು ಬಳಕೆಗೆ ಒಂದೊಮ್ಮೆ ಅನುಮೋದನೆ ದೊರೆತರೆ ಕಂಪನಿಯು ತಿಂಗಳಲ್ಲಿ 8 ಕೋಟಿ ಗುಳಿಗೆಗಳನ್ನು ಉತ್ಪಾದಿಸಲಿದೆ. ಪ್ರತಿ ಗುಳಿಗೆಗೆ ಅಂದಾಜು 30 ರೂ.ದರ ಇರಲಿದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್‌

ಕೋವಿಡ್ ಗೆ ಕೊಡಲಿ ಏಟು ಕೊಡಲು ಸಿದ್ದವಾಯ್ತು ಟ್ಯಾಬ್ಲೆಟ್| ಭಾರತದಲ್ಲೇ ತಯಾರಾಗಲು ಈ ಮಾತ್ರೆಯ ಬೆಲೆ ಎಷ್ಟು ಗೊತ್ತಾ..? Read More »

ತಂದೆಯ ಶವದ ಮುಂದೆ ಮಾಡೆಲ್ ಫೋಟೋ ಶೂಟ್|“ಚಿಟ್ಟೆ ದೂರ ಹಾರಿದೆ….!!”

ಫ್ಲೋರಿಡಾ: ಮಾಡೆಲ್ ಒಬ್ಬಳು ತನ್ನ ತಂದೆಯ ಶವದ ಮುಂದೆಯೇ ಫೋಟೋಶೂಟ್ ಮಾಡಿಸಿಕೊಂಡು ಭಾರೀ ಚರ್ಚೆಗೆ ಗ್ರಾಸವಾದ ಘಟನೆ ಫ್ಲೋರಿಡಾದಲ್ಲಿ ಬೆಳಕಿಗೆ ಬಂದಿದೆ. ಆಕೆಯನ್ನು ಮಾಡೆಲ್ ಅನ್ನು ಜಯೆ ರಿವೇರಾ(20) ಎಂದು ಗುರುತಿಸಲಾಗಿದ್ದು, ಈಕೆ ಫ್ಲೋರಿಡಾದ ಮೈಮಿ ನಗರದ ಸಾಮಾಜಿಕ ಜಾಲತಾಣದ ಸ್ಟಾರ್ ಆಗಿದ್ದು, ಇದೀಗ ಈಕೆಯ ಫೋಟೋಶೂಟ್ ಗೆ ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.ಇನ್‌ಸ್ಟಾ ಖಾತೆಯಲ್ಲಿ ರಿವೇರಾ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾಳೆ. ಈಕೆ ತನ್ನ ತಂದೆಯ ಶವದ ಮುಂದೆ ನಿಂತು ಫೋಟೋಶೂಟ್ ಮಾಡಿಸಿದ್ದಾಳೆ. ಅಲ್ಲದೆ ಆ ಫೋಟೋಗಳನ್ನು

ತಂದೆಯ ಶವದ ಮುಂದೆ ಮಾಡೆಲ್ ಫೋಟೋ ಶೂಟ್|“ಚಿಟ್ಟೆ ದೂರ ಹಾರಿದೆ….!!” Read More »

ದೇಶವಾಸಿಗಳಿಗೆ ಬಿಗ್ ಶಾಕ್| 150ರ ಗಡಿದಾಟಲಿದೆ ತೈಲೋತ್ಪನ್ನ ದರ| ದುಬಾರಿಯಾಗ್ತಾ ಇದೆ ಕಚ್ಚಾತೈಲ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನದತ್ತ ಏರುತ್ತಲೇ ಇದೆ. ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಜನಸಾಮಾನ್ಯರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಗೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಈಗ ಪ್ರಸಿದ್ಧ ಜಾಗತಿಕ ಹಣಕಾಸು ಕಂಪನಿ ಗೋಲ್ಡ್‌ಮನ್ ಸ್ಯಾಚ್ಸ್ ಮುಂಬರುವ ಸಮಯದಲ್ಲಿ, ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 150 ರೂ. ತಲುಪಲಿದೆ ಎಂದು ಹೇಳಿದೆ. ಮುಂದಿನ ವರ್ಷದ ವೇಳೆಗೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 110 ಡಾಲರ್

ದೇಶವಾಸಿಗಳಿಗೆ ಬಿಗ್ ಶಾಕ್| 150ರ ಗಡಿದಾಟಲಿದೆ ತೈಲೋತ್ಪನ್ನ ದರ| ದುಬಾರಿಯಾಗ್ತಾ ಇದೆ ಕಚ್ಚಾತೈಲ Read More »

ಸೈಕಲ್ ರಿಕ್ಷಾ ಚಾಲಕನಿಗೆ 3 ಕೋಟಿ ತೆರಿಗೆ ಕಟ್ಟುವಂತೆ ಐ.ಟಿ ನೋಟಿಸ್!ಠಾಣೆ ಮೆಟ್ಟಿಲೇರಿದ ಬಡ ರಿಕ್ಷಾ ಚಾಲಕ

ಮಥುರಾ: ಬಡ ಸೈಕಲ್ ರಿಕ್ಷಾ ಚಾಲಕರೊಬ್ಬರಿಗೆ ಬರೋಬ್ಬರಿ 3 ಕೋಟಿ ರೂ. ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ನೋಟಿ ನೀಡಿದ್ದು, ಈ ಹಿನ್ನಲೆ ಸೈಕಲ್ ರಿಕ್ಷಾ ಚಾಲಕ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಮರ್ ಕಾಲೋನಿ ನಿವಾಸಿ ಪ್ರತಾಪ್ ಸಿಂಗ್ ಹೆಸರಿನ ಸೈಕಲ್ ರಿಕ್ಷಾ ಚಾಲಕ ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ವಂಚನೆಯಾಗಿದೆ ಎಂದು ದೂರು ನೀಡಿದ್ದಾರೆ. ಈ ಕುರಿತು ಪ್ರತಾಪ್ ಸಿಂಗ್ ಅವರು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, `ಬ್ಯಾಂಕ್‍ನವರು ಐ.ಟಿ

ಸೈಕಲ್ ರಿಕ್ಷಾ ಚಾಲಕನಿಗೆ 3 ಕೋಟಿ ತೆರಿಗೆ ಕಟ್ಟುವಂತೆ ಐ.ಟಿ ನೋಟಿಸ್!ಠಾಣೆ ಮೆಟ್ಟಿಲೇರಿದ ಬಡ ರಿಕ್ಷಾ ಚಾಲಕ Read More »

ರಾಮಲಲ್ಲಾ ದರ್ಶನ ಪಡೆದ ಕೇಜ್ರಿವಾಲ್| ಅಯೋಧ್ಯೆ ಭೇಟಿ ಬಳಿಕ ದೆಹಲಿ ಸಿಎಂ ಹೇಳಿದ್ದೇನು?

ಅಯೋಧ್ಯೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. ಅ.26 ರಂದು ಅರವಿಂದ್ ಕೇಜ್ರಿವಾಲ್ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಭಗವಾನ್ ರಾಮಲಲ್ಲಾ ಗೆ ಪೂಜೆ ಸಲ್ಲಿಸಿದ ಬಳಿಕ ತಮ್ಮ ಭಾಷಣವನ್ನು ಜೈ ಶ್ರೀರಾಮ್ ಘೋಷಣೆಯೊಂದಿಗೆ ಅವರು ಪ್ರಾರಂಭಿಸಿದರು. ಈ ವೇಳೆ ಮಾತನಾಡಿದ ಅವರು, ” ರಾಷ್ಟ್ರರಾಜಧಾನಿಯ ಹಿರಿಯ ನಾಗರಿಕರಿಗೆ ಕಲ್ಪಿಸಲಾಗುವ ಉಚಿತ ತೀರ್ಥಯಾತ್ರೆಗಳ ಪ್ರದೇಶಗಳ ಪಟ್ಟಿಯಲ್ಲಿ ಅಯೋಧ್ಯೆಯ ರಾಮ ಮಂದಿರವನ್ನೂ ಸೇರಿಸುವ ವಿಷಯವಾಗಿ ಅ.27 ರಂದು ವಿಶೇಷ ಸಚಿವ

ರಾಮಲಲ್ಲಾ ದರ್ಶನ ಪಡೆದ ಕೇಜ್ರಿವಾಲ್| ಅಯೋಧ್ಯೆ ಭೇಟಿ ಬಳಿಕ ದೆಹಲಿ ಸಿಎಂ ಹೇಳಿದ್ದೇನು? Read More »

ನೀವು ಸಾಲ ಮಾಡಿ ಕಳ್ಳತನ‌ ಮಾಡಿ; ಆದ್ರೆ ಮೂಲ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ: ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​​ ತರಾಟೆ

ಬೆಂಗಳೂರು: ದಾಸರಹಳ್ಳಿ ವಿಭಾಗದಲ್ಲಿ ರಸ್ತೆ ದುಸ್ಥಿತಿ ಹಿನ್ನೆಲೆ, ಇಲ್ಲಿ ನಿಜಕ್ಕೂ ರಸ್ತೆಗಳು ಅಸ್ತಿತ್ವದಲ್ಲಿವೆಯೇ ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಮಳೆ‌ ಮುಗಿದ ನಂತರ ರಸ್ತೆ ಕಾಮಗಾರಿ ನಡೆಸಲಾಗುವುದು. ಅನುದಾನ ಲಭ್ಯವಾದರೆ ಶೀಘ್ರ ಕಾಮಗಾರಿ ನಡೆಸುವುದು ಎಂದು ಹೈಕೋರ್ಟ್​​ಗೆ ಬಿಬಿಎಂಪಿ ಪರ ವಕೀಲ‌ ವಿ. ಶ್ರೀನಿಧಿ ಹೇಳಿಕೆ ನೀಡಿದ್ದಾರೆ. ನೀವು ಸಾಲ ಮಾಡಿ, ಕಳ್ಳತನ‌ ಮಾಡಿ. ಆದರೆ, ಮೂಲಭೂತ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ. ಮಳೆಯ‌ ನಂತರ ಬೆಂಗಳೂರಿನ ರಸ್ತೆಗಳು ಇನ್ನೂ

ನೀವು ಸಾಲ ಮಾಡಿ ಕಳ್ಳತನ‌ ಮಾಡಿ; ಆದ್ರೆ ಮೂಲ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ: ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​​ ತರಾಟೆ Read More »

ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ-2021ಕ್ಕೆ ರಾಜ್ಯಪಾಲರಿಂದ ಅಂಕಿತ

ಬೆಂಗಳೂರು: ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಕಾಯ್ದೆ-2021 ಮಸೂದೆಗೆ ರಾಜ್ಯಪಾಲ ಥಾವರ್​ ಚಂದ್‌ ಗೆಹ್ಲೋಟ್​​​ ಅಂಕಿತ ಹಾಕಿದ್ದಾರೆ. ಈ ಮೂಲಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ-2021 ಜಾರಿಗೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನು, ನ್ಯಾಯಾಲಯ, ನ್ಯಾಯಮಂಡಳಿ, ಪ್ರಾಧಿಕಾರದ ಯಾವುದೇ ತೀರ್ಪು ಅಥವಾ ಆದೇಶ ಇದ್ದರೂ ಕಾಯ್ದೆ ಜಾರಿಯಾದ ದಿನದವರೆಗೆ ಅಸ್ತಿತ್ವದಲಿರುವ ಧಾರ್ಮಿಕ ಕಟ್ಟಡಗಳನ್ನು (ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ, ಬೌದ್ಧ ವಿಹಾರ, ಮಜರ್ ಇತರೆ) ಸಂರಕ್ಷಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಸರ್ಕಾರ ಅಥವಾ ಯಾವುದೇ

ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ-2021ಕ್ಕೆ ರಾಜ್ಯಪಾಲರಿಂದ ಅಂಕಿತ Read More »