ರಾಷ್ಟ್ರೀಯ

ಮಧುರೈ-ಬೆಂಗಳೂರು ನಡುವೆ ವಂದೇ ಭಾರತ್/ ಪ್ರಾಯೋಗಿಕ ಸಂಚಾರ ಆರಂಭ

ಸಮಗ್ರ ನ್ಯೂಸ್:ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು. ಸೋಮವಾರ ಬೆಳಗ್ಗೆ 5.15ಕ್ಕೆ ಮಧುರೈ ನಿಲ್ದಾಣದಿಂದ ಹೊರಟು ಬೆಂಗಳೂರನ್ನು ಮಧ್ಯಾಹ್ನ 2 ಗಂಟೆ ಸುಮಾರಿಗೆ ತಲುಪಿ ಪುನಃ ತೆರಳಿತು. ಎರಡು ನಗರಗಳನ್ನು ಸರಿಸುಮಾರು 6 ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ. ರೈಲಿನ ವೇಗ, ನಿಲುಗಡೆ ನಿಲ್ದಾಣ ನಿಗದಿ ಬಳಿಕ ರೈಲಿನ ವೇಳಾಪಟ್ಟಿ, ದರವನ್ನು ಪ್ರಕಟಿಸಿ, ವಾಣಿಜ್ಯ ಸಂಚಾರದ ದಿನಾಂಕ ಘೋಷಣೆ ಮಾಡಲಾಗುತ್ತದೆ. ಪ್ರಾಥಮಿಕ ಮಾಹಿತಿಯಂತೆ ಈ […]

ಮಧುರೈ-ಬೆಂಗಳೂರು ನಡುವೆ ವಂದೇ ಭಾರತ್/ ಪ್ರಾಯೋಗಿಕ ಸಂಚಾರ ಆರಂಭ Read More »

ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ/ 9.26 ಕೋಟಿ ರೈತರ ಖಾತೆಗೆ ಬಿತ್ತು ಹಣ

ಸಮಗ್ರ ನ್ಯೂಸ್: ಪಿಎಂ ಕಿಸಾನ್ ಯೋಜನೆಯ 17 ನೇ ಕಂತನ್ನು ವಾರಣಾಸಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ ಬಿಡುಗಡೆ ಮಾಡಿದ್ದಾರೆ. ವಾರಣಾಸಿಯಲ್ಲಿ ಈ ಕಾರ್ಯಕ್ರಮವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಉತ್ತರ ಪ್ರದೇಶ ಸರ್ಕಾರದ ಸಮನ್ವಯದೊಂದಿಗೆ ಆಯೋಜಿಸಿದೆ.ಈ ಸಂದರ್ಭ, ಪಿಎಂ ಮೋದಿ 9.26 ಕೋಟಿ ಫಲಾನುಭವಿ ರೈತರಿಗೆ ಕಂತಿನ ಭಾಗವಾಗಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಕೇಂದ್ರ ಯೋಜನೆಯಾದ ಪಿಎಂ ಕಿಸಾನ್ ಯೋಜನೆ ಕೋಟ್ಯಂತರ ರೈತರಿಗೆ ವಾರ್ಷಿಕ 6,000 ರೂ.ಗಳ

ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ/ 9.26 ಕೋಟಿ ರೈತರ ಖಾತೆಗೆ ಬಿತ್ತು ಹಣ Read More »

ತಂಗಿ ಪ್ರಿಯಾಂಕಗಾಗಿ ವಯನಾಡ್ ಕ್ಷೇತ್ರ ಬಿಟ್ಟುಕೊಡಲಿರುವ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಖರ್ಗೆ ಅವರ ನಿವಾಸದಲ್ಲಿ ಚರ್ಚೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಈ ಮೂಲಕ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟು, ಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಕೇರಳದ

ತಂಗಿ ಪ್ರಿಯಾಂಕಗಾಗಿ ವಯನಾಡ್ ಕ್ಷೇತ್ರ ಬಿಟ್ಟುಕೊಡಲಿರುವ ರಾಹುಲ್ ಗಾಂಧಿ Read More »

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ| 15 ಸಾವು, ಹಲವರು ಗಂಭೀರ

ಸಮಗ್ರ ನ್ಯೂಸ್: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ನ್ಯೂ ಜಲ್ಪೈಗುರಿ ಬಳಿ ಸೋಮವಾರ ಬೆಳಿಗ್ಗೆ ಗೂಡ್ಸ್ ರೈಲು ಸೀಲ್ಡಾಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಎನ್‌ಎಫ್‌ಆರ್ನ ಕಟಿಹಾರ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ| 15 ಸಾವು, ಹಲವರು ಗಂಭೀರ Read More »

ಜಮ್ಮು ಕಾಶ್ಮೀರದಲ್ಲಿ ಜಗತ್ತಿನ ಅತೀ ಎತ್ತರದ ರೈಲ್ವೆ ಸೇತುವೆ/ ಯಶಸ್ವಿಯಾದ ಪ್ರಾಯೋಗಿಕ ರೈಲು ಸಂಚಾರ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್ ನದಿ ಮೇಲೆ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ರೈಲ್ವೆ ಸೇತುವೆಯಲ್ಲಿ ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳು ಹಳಿ ಸೇರಿದಂತೆ ಇತರ ತಾಂತ್ರಿಕ ಕೆಲಸಗಳನ್ನು ಪರಿಶೀಲನೆ ನಡೆಸಿದ್ದು, ಇದೇ ವೇಳೆ ಚೆನಾಬ್ ಸೇತುವೆ ಮೇಲೆ ನಡೆಸಿದ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ಲನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ,

ಜಮ್ಮು ಕಾಶ್ಮೀರದಲ್ಲಿ ಜಗತ್ತಿನ ಅತೀ ಎತ್ತರದ ರೈಲ್ವೆ ಸೇತುವೆ/ ಯಶಸ್ವಿಯಾದ ಪ್ರಾಯೋಗಿಕ ರೈಲು ಸಂಚಾರ Read More »

ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಟೋಲ್ ಬೂತನ್ನೇ ನೆಲಸಮ ಮಾಡಿದ ಜೆಸಿಬಿ ಚಾಲಕ

ಸಮಗ್ರ ನ್ಯೂಸ್: ದೆಹಲಿ-ಲಕ್ನೋ ಹೆದ್ದಾರಿ ಎನ್ಎಚ್-9 ಪಿಲ್ಖುವಾ ಪೊಲೀಸ್ ಠಾಣಾ ವ್ಯಾಪ್ತಿಯ ಛಿಜರಾಸಿ ಟೋಲ್ ಪ್ಲಾಜಾ ಹಾದು ಹೋಗುತ್ತಿದ್ದ ಜೆಸಿಬಿ ಡ್ರೈವರ್ ಬಳಿ ಹಣ ಕೇಳಿದ್ದು ಆತ ಜಗಳಕ್ಕಿಳಿದಿದ್ದಾನೆ. ಬಳಿಕ ಬುಲ್ಡೋಸರ್ನಿಂದ ಟೋಲ್ ಪ್ಲಾಜಾವನ್ನು ನೆಲಸಮಗೊಳಿಸಿದ್ದಾನೆ. ಟೋಲ್ ಸಿಬ್ಬಂದಿ ಎಲ್ಲವನ್ನೂ ವಿಡಿಯೋ ಮಾಡಿದ್ದಾರೆ, ಆತ ಟೋಲ್ ಕೆಡಗುವ ಸಂಪೂರ್ಣ ವಿಡಿಯೋ ವೈರಲ್ ಆಗಿದೆ. ಜೆಸಿಬಿ ಚಾಲಕ ಟೋಲ್ ಬೂತ್ ಮೂಲಕ ಹಾದುಹೋಗುತ್ತಿದ್ದ, ಹಾಗಾಗಿ ಟೋಲ್ ಸಿಬ್ಬಂದಿ ಹಣ ಕೇಳಿದ್ದಾರೆ ಅದಕ್ಕೆ ಚಾಲಕ ಆವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು

ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಟೋಲ್ ಬೂತನ್ನೇ ನೆಲಸಮ ಮಾಡಿದ ಜೆಸಿಬಿ ಚಾಲಕ Read More »

ಜೂ.24ರಿಂದ ಜು.3ರ ವರೆಗೆ ಸಂಸತ್ ಮೊದಲ ಅಧಿವೇಶನ/ ಜುಲೈ ಮೂರನೇ ವಾರದಲ್ಲಿ ಬಜೆಟ್

ಸಮಗ್ರ ನ್ಯೂಸ್: ಜೂ.24ರಿಂದ ಜು.3ರ ವರೆಗೆ ಸಂಸತ್ ಮೊದಲ ಅಧಿವೇಶನ ನಡೆಯಲಿದ್ದು, 18ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸಂಸದರ ಪ್ರಮಾಣ ಸ್ವೀಕಾರ ಹಾಗೂ ಮಹತ್ವದ ಸ್ಪೀಕರ್ ಆಯ್ಕೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರ ಸಚಿವ ಕಿರಣ್ ರಿಜಿಜು ಅವರು ಮಾಹಿತಿ ನೀಡಿದ್ದಾರೆ. ಆರಂಭದ ಮೂರು ದಿನ ರಾಷ್ಟ್ರಪತಿ ನೇಮಿಸುವ ಹಂಗಾಮಿ ಸ್ಪೀಕರ್ ನೂತನ ಸಂಸದರಿಗೆ ಪ್ರಮಾಣ ಬೋಧಿಸಲಿದ್ದಾರೆ. ಬಳಿಕ ಸ್ಪೀಕರ್ ಆಯ್ಕೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂ. 27 ರಂದು ಲೋಕಸಭೆ

ಜೂ.24ರಿಂದ ಜು.3ರ ವರೆಗೆ ಸಂಸತ್ ಮೊದಲ ಅಧಿವೇಶನ/ ಜುಲೈ ಮೂರನೇ ವಾರದಲ್ಲಿ ಬಜೆಟ್ Read More »

ಕುವೈತ್ ಅಗ್ನಿದುರಂತ| 40 ಭಾರತೀಯರು ಸಾವು| ಮೃತದೇಹ ತರಲು ಪ್ರಯತ್ನ – ಜೈಶಂಕರ್

ಸಮಗ್ರ ನ್ಯೂಸ್: ಕುವೈತ್‌ನ ಕಟ್ಟಡವೊಂದರಲ್ಲಿ ಬುಧವಾರ ನಡೆದ ಅಗ್ನಿ ದುರಂತದಲ್ಲಿ 40 ಭಾರತೀಯರು ಮೃತಪಟ್ಟಿದ್ದು, 50 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಒಟ್ಟು 49 ಮಂದಿ ಮೃತಪಟ್ಟಿದ್ದು ಅವರಲ್ಲಿ 40 ಜನ ಭಾರತೀಯರು ಎಂದು ತಿಳಿದುಬಂದಿದೆ. ಮೃತಪಟ್ಟ ಇತರರು ಪಾಕಿಸ್ತಾನ, ಫಿಲಿಪಿನೋ, ಈಜಿಪ್ಟ್‌ ಮತ್ತು ನೇಪಾಳ ಮೂಲದ ಕಾರ್ಮಿಕರು ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ಮಾಹಿತಿ ತಿಳಿಸಿದೆ. ಘಟನೆಯ ಕುರಿತು ಪ್ರಧಾನಿ ಮೋದಿ, ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದಾರೆ. ಸಭೆಯ

ಕುವೈತ್ ಅಗ್ನಿದುರಂತ| 40 ಭಾರತೀಯರು ಸಾವು| ಮೃತದೇಹ ತರಲು ಪ್ರಯತ್ನ – ಜೈಶಂಕರ್ Read More »

ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಮೋಹನ್ ಚರಣ್ ಮಾಝಿ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಅವರು ಅಧಿಕಾರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಅಧಿಕಾರಾವಧಿ ಕೊನೆಗೊಂಡಿದ್ದರಿಂದ ಮಾಝಿ ಕೇಸರಿ

ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ Read More »

HSPR ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮತ್ತೆ ವಿಸ್ತರಣೆಗೆ ಹೈಕೋರ್ಟ್ ಸಮ್ಮತಿ| ಜು.4ಕ್ಕೆ ವಿಚಾರಣೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಆಗಸ್ಟ್‌ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ಅನುಮತಿ ನೀಡಿದೆ. HSRP ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಬುಧವಾರ ನಡೆಸಿತು. “ಹೈಕೋರ್ಟ್‌ನ ರಜಾಕಾಲೀನ ಪೀಠವು

HSPR ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮತ್ತೆ ವಿಸ್ತರಣೆಗೆ ಹೈಕೋರ್ಟ್ ಸಮ್ಮತಿ| ಜು.4ಕ್ಕೆ ವಿಚಾರಣೆ ಮುಂದೂಡಿಕೆ Read More »