ರಾಷ್ಟ್ರೀಯ

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ|

ಮೇಘಾಲಯ: ಇಲ್ಲಿನ ಶಿಲ್ಲಾಂಗ್‌ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ವೊಂದು ನದಿಗೆ ಉರುಳಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಬಸ್‌ನಲ್ಲಿ ಸುಮಾರು 21 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಶಿಲ್ಲಾಂಗ್‌ ಸಮೀಪದಲ್ಲಿರುವ ರಿಂಗ್ಡಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. 16 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾ ಆರಂಭಿಸಿದ್ದರು. ಆದರೆ, […]

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ| Read More »

ಭಾರತಕ್ಕೆ ಪತ್ರ ಬರೆದ ತಾಲಿಬಾನಿಗಳು|

ಕಾಬೂಲ್, ಸೆ.29- ಆಫ್ಘಾನಿಸ್ಥಾನವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊದಲ ಬಾರಿಗೆ ತಾಲಿಬಾನಿಗಳು ಭಾರತ ಸರ್ಕಾರದೊಂದಿಗೆ ಸಂಪರ್ಕ ಸಾಸಿದ್ದು, ಎರಡೂ ದೇಶಗಳ ನಡುವೆ ವಿಮಾನ ಸಂಚಾರ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಆಫ್ಘಾನಿಸ್ಥಾನದ ವಿಮಾನಯಾನ ಹಂಗಾಮಿ ಸಚಿವ ಹಮೀದುಲ್ಲಾ ಅಕುಂದಾ ಅವರು ಭಾರತದ ವಿಮಾನಯಾನದ ಮಹಾ ನಿರ್ದೇಶಕ ಅರುಣ್‍ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಎರಡೂ ದೇಶಗಳ ನಡುವೆ ಈ ಮೊದಲಿನಂತೆ ವಿಮಾನ ಸಂಚಾರ ಆರಂಭಿಸಬೇಕು ಎಂದು ಅಕುಂದಾ ಪತ್ರದಲ್ಲಿ ಸಲಹೆ ನೀಡಿದ್ದಾರೆ. ಕಾಬುಲ್ ವಿಮಾನ ನಿಲ್ದಾಣವನ್ನು ತಾಲಿಬಾನಿಗಳು ವಶಪಡಿಸಿಕೊಂಡ

ಭಾರತಕ್ಕೆ ಪತ್ರ ಬರೆದ ತಾಲಿಬಾನಿಗಳು| Read More »

ಅಮೇರಿಕಾದಲ್ಲಿ ಪ್ರಧಾನಿ ಮೋದಿಯವರಿಗೆ ಉಣಬಡಿಸಿದ್ದು ಮಂಗಳೂರಿನ ಮಗಳು..! ಆತಿಥ್ಯ‌ ನೀಡಿದ ತಂಡದಲ್ಲಿ ಸುಮಲ್ ಸಂದೀಪ್

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಮೂರು ದಿನಗಳ ಕಾಲ ಹೋಟೆಲ್​ನಲ್ಲಿ ತಂಗಿದ್ದ ನರೇಂದ್ರ ಮೋದಿ ಅವರಿಗೆ ಆತಿಥ್ಯ ನೀಡಿದ ತಂಡದ ನೇತೃತ್ವವನ್ನು ಮಂಗಳೂರಿನ ಯುವತಿ ಸುಮಲ್ ಸಂದೀಪ್ ಕೋಟ್ಯಾನ್ ವಹಿಸಿಕೊಂಡಿದ್ದರು. ನರೇಂದ್ರ ಮೋದಿ ಅವರ ಜೊತೆಗಿನ ಮೂರು ದಿನಗಳ ಅನುಭವವನ್ನು ಮನೆಯವರ ಮುಂದೆ ಸುಮಲ್ ತೆರೆದಿಟ್ಟಿದ್ದು ನರೇಂದ್ರ ಮೋದಿ ಅವರಿಗೆ ಎರಡನೇ ಬಾರಿ ಆತಿಥ್ಯ ನೀಡಿದ ಖುಷಿಯನ್ನು ಹಂಚಿಕೊಂಡಿದ್ದಾರೆ. ಸುಮಲ್ ಸಂದೀಪ್ ಕೋಟ್ಯಾನ್

ಅಮೇರಿಕಾದಲ್ಲಿ ಪ್ರಧಾನಿ ಮೋದಿಯವರಿಗೆ ಉಣಬಡಿಸಿದ್ದು ಮಂಗಳೂರಿನ ಮಗಳು..! ಆತಿಥ್ಯ‌ ನೀಡಿದ ತಂಡದಲ್ಲಿ ಸುಮಲ್ ಸಂದೀಪ್ Read More »

ವಿವಾಹಿತ ಮಹಿಳೆ ಜೊತೆಗೆ ಪಲ್ಲಂಗ ಹಂಚಿಕೊಂಡ ಪ್ರಿಯಕರ| ಇವರಿಬ್ಬರ ಕಾಮದಾಟ ನೋಡಲಾರದೆ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ?

ಜಾರ್ಖಂಡ್: ಮದುವೆಯಾದರೂ ಅನ್ಯವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಈ ಇಬ್ಬರ ಪ್ರಕರಣ ನೋಡಲಾರದೆ ಗ್ರಾಮಸ್ಥರು ಈ ಕೃತ್ಯ ಎಸಗಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು 50-60 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಇಡೀ ಊರು ತುಂಬಾ ಮೆರವಣಿಗೆ

ವಿವಾಹಿತ ಮಹಿಳೆ ಜೊತೆಗೆ ಪಲ್ಲಂಗ ಹಂಚಿಕೊಂಡ ಪ್ರಿಯಕರ| ಇವರಿಬ್ಬರ ಕಾಮದಾಟ ನೋಡಲಾರದೆ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ? Read More »

ಹೊಸರೂಪದ ಬಿಸಿಯೂಟ ಯೋಜನೆ ಜಾರಿಗೆ ಚಿಂತನೆ

ನವದೆಹಲಿ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಶಾಲೆಯ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದು, ಈ ಯೋಜನೆಯನ್ನು ಹೊಸರೂಪದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹೆಸರಿನಲ್ಲಿ ಯೋಜನೆ ಮುಂದುವರೆಯಲಿದೆ. ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಯೋಜನೆಯಡಿ ಅಂಗನವಾಡಿ ಮಕ್ಕಳಿಗೆ ಬಿಸಿಯೂಟ ವಿಸ್ತರಿಸಲಾಗಿದೆ. ವಿಶೇಷ ದಿನಗಳ ಸಂದರ್ಭದಲ್ಲಿ ಸಾರ್ವಜನಿಕರಿಂದಲೂ ಊಟ ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಪೌಷ್ಟಿಕ ತರಕಾರಿ, ಹಣ್ಣು ಬೆಳೆಯಲು ಕೈತೋಟ

ಹೊಸರೂಪದ ಬಿಸಿಯೂಟ ಯೋಜನೆ ಜಾರಿಗೆ ಚಿಂತನೆ Read More »

ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ನಾಳೆ ಭಾರತ್‌ ಬಂದ್‌ಗೆ ಕರೆ ಕೊಟ್ಟಿದೆ. ಆದರೆ, ಈ ಭಾರತ್‌ ಬಂದ್ ಯಶಸ್ಸು ಕಾಣುವ ಸಾಧ್ಯತೆಗಳು ಕಡಿಮೆ ಇದೆ ಎಂದು ಹೇಳಳಾಗುತ್ತಿದೆ. ಸಂಘಟನೆಗಳು ರೈತರಿಗೆ ನೈತಿಕ ಬೆಂಬಲ ನೀಡುವುದಾಗಿ ಹೇಳುತ್ತಿವೆ. ಆದರೆ, ಬಂದ್’ಗೆ ಆಸಕ್ತಿ ತೋರುತ್ತಿಲ್ಲ. ರೈತರು ಕರೆ ಕೊಟ್ಟಿರುವ ಬಂದ್‌ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದ್ದು, ಸಂಪೂರ್ಣ ಬೆಂಬಲ ನೀಡಿಲ್ಲ. ಹೀಗಾಗಿ ನಾಳೆ ಎಂದಿನಂತೆ ಹೋಟೆಲ್ ಓಪನ್ ಇರಲಿದೆ. ಅಲ್ಲದೇ, ಕೆಎಸ್‌ಆರ್’ಟಿಸಿ

ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ. Read More »

ಷೇರುಪೇಟೆಯಲ್ಲಿ ಮುಂದುವರಿದ ಗೂಳಿ ಓಟ| 60ಸಾವಿರ ಗಡಿ ದಾಟಿ ದಾಖಲೆ ಏರಿಕೆ ಕಂಡ ಸೆನ್ಸೆಕ್ಸ್

ನವದೆಹಲಿ: ಷೇರು ಮಾರುಕಟ್ಟೆ ಶುಕ್ರವಾರ ಹೊಸ ಇತಿಹಾಸ ಸೃಷ್ಟಿಸಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ 338 ಅಂಕಗಳ ಜಿಗಿತದೊಂದಿಗೆ ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್​ 60 ಸಾವಿರ ಗಡಿ ದಾಟಿದೆ. ಭಾರತೀಯ ಷೇರು ಮಾರುಕಟ್ಟೆ ಇದೇ ಮೊದಲ ಬಾರಿಗೆ 60 ಸಾವಿರ ಗಡಿ ದಾಟಿ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ನಿಫ್ಟಿ ಕೂಡ 100 ಅಂಕಗಳ ಜಿಗಿತದೊಂದಿಗೆ ದಾಖಲೆಯ 17,923.35 ನಲ್ಲಿ ವಹಿವಾಟು ನಡೆಸುತ್ತಿದೆ. ಗುರುವಾರ 958 ಪಾಯಿಂಟ್​ಗಳ ಏರಿಕೆ ಕಂಡು ಸೆನ್ಸೆಕ್ಸ್

ಷೇರುಪೇಟೆಯಲ್ಲಿ ಮುಂದುವರಿದ ಗೂಳಿ ಓಟ| 60ಸಾವಿರ ಗಡಿ ದಾಟಿ ದಾಖಲೆ ಏರಿಕೆ ಕಂಡ ಸೆನ್ಸೆಕ್ಸ್ Read More »

ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ

ಬೆಂಗಳೂರು: ಮರಗಳನ್ನೇ ತನ್ನ ಮಕ್ಕಳೆಂದು ಸಾಕಿ ಸಲಹುತ್ತಾ ಪರಿಸರಕ್ಕಾಗಿ ತಮ್ಮ ಬದುಕನ್ನೇ ಮುಡಿಪಿಟ್ಟ ವೃಕ್ಷಮಾತೆ 111 ವರ್ಷದ ಶತಾಯುಷಿ ಸಾಲುಮರದ ತಿಮ್ಮಕ್ಕರಿಗೆ ಅಂತರಾಷ್ಟ್ರೀಯ ಸಂಸ್ಥೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಫಲಕ ನೀಡಿ ಗೌರವಿಸಿದ್ದಾರೆ. 80 ವರ್ಷಗಳಲ್ಲಿ ಪರಿಸರ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿರುವ ಮಹಿಳೆ, 80 ವರ್ಷದಲ್ಲಿ 8 ಸಾವಿರ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಅವರು ನೆಟ್ಟ ಸಸಿಗಳು

ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ Read More »

ಪಂಜಾಬ್ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿ

ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ, ಪ್ರಸ್ತಾವಿತ ಮುಖ್ಯಮಂತ್ರಿಯಾಗಿ ಸುಖ್ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ದಿಢೀರ್ ವಿದ್ಯಮಾನಗಳಲ್ಲಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಹೊಸ ಪಂಜಾಬ್ ಮುಖ್ಯಮಂತ್ರಿಯಾಗಲಿದ್ದಾರೆ. ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದು, ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿ Read More »

ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ

ಬೆಂಗಳೂರು: ಕನ್ನಡ ಬಿಗ್‍ಬಾಸ್ ಸೀಸನ್ 8ರ ಸ್ಪರ್ಧಿ ವೈಜಯಂತಿ ಅಡಿಗ ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡು ಸುದ್ದಿಯಾಗಿದ್ದಾರೆ. ವೈಜಯಂತಿ ಅಡಿಗ ಪ್ರಿಯಕರ ಸೂರಜ್ ಜೊತೆ ಆನ್‍ಲೈನ್‍ನಲ್ಲಿ ಎಂಗೇಜ್‍ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿದೆ . ಬಿಗ್‍ಬಾಸ್ ಮನೆಗೆ ಮೂವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದರು. ಪ್ರಿಯಾಂಕಾ ತಿಮ್ಮೇಶ್ ಹಾಗೂ ವೈಜಯಂತಿ ಅಡಿಗ ಒಂದೇ ದಿನ ಮನೆಗೆ ಎಂಟ್ರಿ ಪಡೆದಿದ್ದರು. ಆದರೆ ವೈಜಯಂತಿಗೆ ಬಿಗ್‍ಬಾಸ್ ಮನೆಯಲ್ಲಿ ಹೆಚ್ಚು

ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ Read More »