ರಾಷ್ಟ್ರೀಯ

ಸೈಯದ್ ಅಲಿ ಶಾ ಗೀಲಾನಿ ಮೃತದೇಹಕ್ಕೆ ಪಾಕ್ ಧ್ವಜ – ಕುಟುಂಬಸ್ಥರ ವಿರುದ್ಧ ಎಫ್‍ಐಆರ್

ಶ್ರೀನಗರ: ಕಾಶ್ಮೀರ ಪ್ರತ್ಯೇಕವಾದಿ ನಾಯಕ ಸೈಯದ್ ಅಲಿ ಗೀಲಾನಿಯವರ ಮೃತದೇಹಕ್ಕೆ ಪಾಕಿಸ್ತಾನ ಧ್ವಜ ಹೊದಿಸಿ, ಕುಟುಂಬದವರ ವಿರುದ್ಧ ಬದ್ಗಾಂ ಪೆÇಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸೈಯದ್ ಅಲಿ ಗೀಲಾನಿ(92)ಯವರು ಬುಧವಾರ ರಾತ್ರಿ ತಮ್ಮ ನಿವಾಸದ ಮೃತಪಟ್ಟಿದ್ದರು. ನಂತರ ಅವರ ಮೃತ ದೇಹವನ್ನು ಸಮೀಪದಲ್ಲಿರು ಮಸೀದಿಯ ಸ್ಮಶಾನದಲ್ಲಿ ಹೂಳುವ ಕಾರ್ಯವನ್ನು ಮಾಡಲಾಗಿತ್ತು. ಇದಕ್ಕೂ ಮುನ್ನ ಪಾಕಿಸ್ತಾನ ರಾಷ್ಟ್ರ ಧ್ವಜವನ್ನು ಹೊದಿಸಿ ದೇಶದ ವಿರುದ್ಧ ಘೋಷಣೆ ಕೂಗಲಾಗಿತ್ತು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ […]

ಸೈಯದ್ ಅಲಿ ಶಾ ಗೀಲಾನಿ ಮೃತದೇಹಕ್ಕೆ ಪಾಕ್ ಧ್ವಜ – ಕುಟುಂಬಸ್ಥರ ವಿರುದ್ಧ ಎಫ್‍ಐಆರ್ Read More »

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ| ಬಾಲಕನ ಬಲಿ ಪಡೆದ ಬಾವಲಿ ಜ್ವರ

ಕೋಝಿಕೋಡ್: ಕೇರಳದಲ್ಲಿ ಆತಂಕ ಮೂಡಿಸಿದ್ದ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದೆ. ರಾಜ್ಯದ ಕೋಳಿಕೋಡ್ ನಲ್ಲಿ 13 ವರ್ಷದ ಬಾಲಕ ನಿಫಾ ವೈರಸ್ ನಿಂದ ಸಾವನ್ನಪ್ಪಿದ್ದಾನೆ ಎಂದು ಆರೋಗ್ಯ ಇಲಾಖೆ ಮೂಲಗಳು ಭಾನುವಾರ ತಿಳಿಸಿವೆ. ಸೋಂಕಿಗೊಳಗಾಗಿರುವ ಬಾಲಕ ಛತಮಂಗಳಂ ಹತ್ತಿರ ಬಳಿಯಿರುವ ಚುಲೂರ್ ಮೂಲದವನೆಂದು ತಿಳಿದುಬಂದಿದೆ.ಪುಣೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾದ ಹುಡುಗನ ಮಾದರಿಗಳು ನಿಫಾ ವೈರಸ್ ಇರುವಿಕೆಯನ್ನು ದೃಢಪಡಿಸಿವೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ತಂಡವನ್ನು ರಾಜ್ಯಕ್ಕೆ ರವಾನಿಸಿದೆ, ಅದು ಭಾನುವಾರ ತಲುಪಲಿದೆ.

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ| ಬಾಲಕನ ಬಲಿ ಪಡೆದ ಬಾವಲಿ ಜ್ವರ Read More »

ಬಸವನಾಡು ವಿಜಯಪುರದಲ್ಲಿ ಭೂಕಂಪನ| ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲು

ವಿಜಯಪುರ : ಶನಿವಾರ ತಡರಾತ್ರಿ ವಿಜಯನಗರ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ ದಾಖಲಾದ ಲಘು ತೀವ್ರತೆ ಭೂಕಂಪ ಎಂಬುದನ್ನು ಜಿಲ್ಲಾಡಳಿತ ದೃಢೀಕರಿಸಿದೆ. ಭೂಕಂಪನ ಅಗಿದ್ದು‌ ರಿಕ್ಟರ್ ಮಾಪಕದಲ್ಲಿ ದಾಖಲು 3.9 ತೀವ್ರತೆಯ ಭೂಕಂಪನ ಆಗಿದೆ.ಮಹಾರಾಷ್ಟ್ರದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂಧುವಾಗಿತ್ತು. ಕೆ.ಎಸ್.ಎನ್.ಡಿ.ಎಂ.ಸಿ. ಮೂಲಕ ಮಾಹಿತಿ ಸಂಗ್ರಹಿಸಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಹುತೇಕ ಎಲ್ಲ ಕಡೆ ಶನಿವಾರ ರಾತ್ರಿ11-47, 11-48 ರ ಮಧ್ಯಾವಧಿಯಲ್ಲಿ

ಬಸವನಾಡು ವಿಜಯಪುರದಲ್ಲಿ ಭೂಕಂಪನ| ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲು Read More »

ವಿಶ್ವ ನಾಯಕರ ರೇಟಿಂಗ್ ಪಟ್ಟಿಯಲ್ಲಿ ಮೋದಿನೇ ನಂ.1

ಉಳಿದ ರಾಷ್ಟ್ರಗಳ ಮುಖ್ಯಸ್ಥರಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರ ಅನುಮೋದನೆಯ ರೇಟಿಂಗ್ʼಗಳು ಶೇಕಡಾ 70ರಷ್ಟಿದೆ ‌ಎಂದು ಅಮೆರಿಕದ ದತ್ತಾಂಶ ಗುಪ್ತಚರ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಟ್ರ್ಯಾಕ್ ಹೇಳಿದೆ. ಮೋದಿ ಅವರ ಅನುಮೋದನೆಯ ರೇಟಿಂಗ್ʼಗಳು ಆಗಸ್ಟ್ 23 ರಂದು ಶೇಕಡಾ 72ರ ಗರಿಷ್ಠದಿಂದ ಸ್ವಲ್ಪ ಕುಸಿದಿವೆ. ಆದ್ರೆ, ಜೂನ್ 23ರಂದು ವರದಿಯಾದ ಶೇಕಡಾ 63ಕ್ಕಿಂತ ಉತ್ತಮವಾಗಿದೆ. ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಾಡರ್ ಅವರು ಶೇ.64 ರಷ್ಟು ಅನುಮೋದನೆ ರೇಟಿಂಗ್ʼನೊಂದಿಗೆ ಎರಡನೇ ಸ್ಥಾನದಲ್ಲಿದ್ರೆ, ಇಟಲಿಯ ಪ್ರಧಾನಿ ಮಾರಿಯೋ

ವಿಶ್ವ ನಾಯಕರ ರೇಟಿಂಗ್ ಪಟ್ಟಿಯಲ್ಲಿ ಮೋದಿನೇ ನಂ.1 Read More »

ಬಿಕಿನಿ ತೊಟ್ಟ ಸನ್ನಿ ಲಿಯೋನ್|ತನ್ನ ಪಕ್ಕದಲ್ಲಿ ಖಾಲಿ ಇರುವ ಜಾಗಕ್ಕೆ ಬರಲು ಇಷ್ಟಪಡುತ್ತೀರಾ!!

ಮುಂಬೈ: ಬಿಕಿನಿ ತೊಟ್ಟು ಸನ್ನಿ ಲಿಯೋನ್ ಪಕ್ಕದಲ್ಲಿ ಖಾಲಿ ಇರುವ ಜಾಕಕ್ಕೆ ಅಭಿಮಾನಿಗಳಿಗೆ ಆಹ್ವಾನ ನೀಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.ಮಾದಕ ಚೆಲುವೆ, ಬಾಲಿವುಡ್ ಪಿಂಕ್ ಲಿಪ್ಸ್ ಲೈಲಾ ತಿಳಿ ಮತ್ತು ಕಡು ನೀಲಿ ಬಣ್ಣದ ಬಿಕಿನಿ ತೊಟ್ಟು ಕಡಲ ಕಿನಾರೆಯ ಉಯ್ಯಾಲೆ ಮೇಲೆ ನಿಂತು ಮಿಂಚಿತಿರುವ ಹಾಟ್ ಫೋಟೋವನ್ನು ಸನ್ನಿ ಲಿಯೋನ್ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ನೀಲ ಸಾಗರದ ಕಡಲತೀರದಲ್ಲಿ ಹಾಕಿರುವ ಉಯ್ಯಾಲೆಯಲ್ಲಿ ನಿಂತಿರುವ ಫೋಟೋ ಪಡ್ಡೆಹುಡುಗರ ನಿದ್ದೆಗೆ ಕನ್ನ ಹಾಕಿದೆ. ಫೋಟೋ ಫೋಸ್ಟ್

ಬಿಕಿನಿ ತೊಟ್ಟ ಸನ್ನಿ ಲಿಯೋನ್|ತನ್ನ ಪಕ್ಕದಲ್ಲಿ ಖಾಲಿ ಇರುವ ಜಾಗಕ್ಕೆ ಬರಲು ಇಷ್ಟಪಡುತ್ತೀರಾ!! Read More »

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗ ಪತ್ತೆ

ನವದೆಹಲಿ: ವಿಧಾನಸಭೆಯಿಂದ ಚಾಂದಿನಿ ಚೌಕದಲ್ಲಿರುವ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗವೊಂದು ದೆಹಲಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಈ ಸುರಂಗವನ್ನು ಬಳಸುತ್ತಿದ್ದರು ಎಂದು ಮಾಹಿತಿ ಹಂಚಿಕೊಂಡರು. ನಾನು 1993ರಲ್ಲಿ ಶಾಸಕನಾದಾಗ ಕೆಂಪುಕೋಟೆಯವರೆಗೆ ಹೋಗುವ ಸುರಂಗ ಮಾರ್ಗದ ಬಗ್ಗೆ ಕೇಳಿದ್ದೆ. ಅದಲ್ಲದೆ ನಾನು ಅದರ ಇತಿಹಾಸವನ್ನು ಹುಡುಕಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗ ಪತ್ತೆ Read More »

ಪರಸ್ತ್ರೀ ಜೊತೆ ಪೊಲೀಸಪ್ಪನ ಲವ್ವಿಡವ್ವಿ| ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನಿಗೆ ಬಿತ್ತು‌ ಗೂಸಾ|

ಯಾದಗಿರಿ: ಪರಸ್ತ್ರೀ ಜತೆ ನಿನ್ನೆ ರಾತ್ರಿ ಮನೆಯಲ್ಲಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಪೊಲೀಸ್​ ಪೇದೆಯೊಬ್ಬರಿಗೆ ಆಕೆಯ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಪೇದೆಯನ್ನು ಬಂಧಿಸಲಾಗಿದೆ. ಡಿಆರ್​ ಕಾನ್​ಸ್ಟೇಬಲ್​ ಗುರಪ್ಪ ಬಂಧನಕ್ಕೊಳಗಾದವ. ಯಾದಗಿರಿ ಎಸ್​ಪಿ ಕಚೇರಿ ಸಮೀಪದಲ್ಲಿ ವಾಸವಾಗಿದ್ದ ಮಹಿಳೆ ಜತೆ ಪೊಲೀಸ್​ ಪೇದೆ ಗುರಪ್ಪಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಬುಧವಾರ ರಾತ್ರಿ ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಲ್ಲಿಗೆ ಗುರಪ್ಪ ಬಂದಿದ್ದ. ಅಷ್ಟರಲ್ಲಿ ಮನೆಗೆ ಬಂದ ಮಹಿಳೆಯ ಕುಟುಂಬಸ್ಥರು, ಪೇದೆಯ ಕೈ-ಕಾಲು ಕಟ್ಟಿ

ಪರಸ್ತ್ರೀ ಜೊತೆ ಪೊಲೀಸಪ್ಪನ ಲವ್ವಿಡವ್ವಿ| ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನಿಗೆ ಬಿತ್ತು‌ ಗೂಸಾ| Read More »

ಕಿರುತೆರೆ ನಟ ಸಿದ್ದಾರ್ಥ್ ಶುಕ್ಲಾ ನಿಧನ

ಜನಪ್ರಿಯ ರಿಯಾಲಿಟಿ ಶೋ ʼಬಿಗ್‌ ಬಾಸ್‌ 13ʼ ರ ವಿಜೇತರಾಗಿದ್ದ ಸಿದ್ದಾರ್ಥ್‌ ಶುಕ್ಲಾ ವಿಧಿವಶರಾಗಿದ್ದಾರೆ. 40 ವರ್ಷದ ಸಿದ್ದಾರ್ಥ್‌ ಶುಕ್ಲಾ ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ಡ್ಯಾನ್ಸ್‌ ದಿವಾನೆ 3 ರಲ್ಲೂ ತಮ್ಮ ಗೆಳತಿ ಶೆಹನಾಜ್‌ ಗಿಲ್‌ ಜೊತೆ ಸಿದ್ದಾರ್ಥ್‌ ಶುಕ್ಲಾ ಕಾಣಿಸಿಕೊಂಡಿದ್ದರು. ಸಣ್ಣ ವಯಸ್ಸಿನಲ್ಲಿಯೇ ಸಿದ್ದಾರ್ಥ್‌ ಶುಕ್ಲಾ ಇಹಲೋಕ ತ್ಯಜಿಸಿರುವುದು ಚಿತ್ರರಂಗದವರನ್ನು ದಿಗ್ಬ್ರಮೆಗೊಳಿಸಿದೆ. ಡಿಸೆಂಬರ್‌ 12, 1980 ರಂದು ಮುಂಬೈನಲ್ಲಿ ಸಿದ್ದಾರ್ಥ್‌ ಶುಕ್ಲಾ ಜನಿಸಿದ್ದು, ಮೂಲತಃ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನವರೆಂದು

ಕಿರುತೆರೆ ನಟ ಸಿದ್ದಾರ್ಥ್ ಶುಕ್ಲಾ ನಿಧನ Read More »

ದೇಶದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ| ಇದು ಮೂರನೇ ಅಲೆ ಸೂಚನೆಯೇ?

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಕಳೆದ 24 ಗಂಟೆಯಲ್ಲಿ 47,092 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,28,57,937ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 509 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 439529 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 389583 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24

ದೇಶದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ| ಇದು ಮೂರನೇ ಅಲೆ ಸೂಚನೆಯೇ? Read More »

ಹಿರಿಯ ಪತ್ರಕರ್ತ ಚಂದನ್ ಮಿತ್ರಾ‌ ವಿಧಿವಶ

ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಅವರು ಮಾಹಿತಿ ನೀಡಿದ್ದು, ಟ್ವೀಟ್ ಮಾಡಿ ತಮ್ಮ ನೋವು ಹಂಚಿಕೊಂಡಿದ್ದಾರೆ. ಚಂದನ್ ಮಿತ್ರಾ ದೆಹಲಿಯ ದಿ ಪಯೋನಿಯರ್ ಪತ್ರಿಕೆಯ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅಲ್ಲದೆ ಅವರು ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು – ಮೊದಲಿಗೆ 2003 ರಿಂದ

ಹಿರಿಯ ಪತ್ರಕರ್ತ ಚಂದನ್ ಮಿತ್ರಾ‌ ವಿಧಿವಶ Read More »