ರಾಷ್ಟ್ರೀಯ

ಕೇರಳ ಪ್ರವೇಶಿಸಿದ ನೈಋತ್ಯ ಮುಂಗಾರು

ಸಮಗ್ರ ನ್ಯೂಸ್: ನೈಋತ್ಯ ಮುಂಗಾರು ಮಾರುತಗಳು ಮೇ.30 ರಂದು ಕೇರಳವನ್ನು ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಭುವನೇಶ್ವರ ಕೇಂದ್ರವು ಪ್ರಕಟಿಸಿದೆ. ರವಿವಾರ ಪಶ್ಚಿಯ ಬಂಗಾಳ ಹಾಗೂ ಬಾಂಗ್ಲಾದೇಶದ ಮೂಲಕ ಅಪ್ಪಳಿಸಿದ್ದ ಚಂಡಮಾರುತವು ಮಾನ್ಸೂನ್ ಮಾರುತವನ್ನು ಬಂಗಾಳ ಕೊಲ್ಲಿಗೆ ನೂಕಿರುವುದು ಮುಂಚಿತವಾಗಿಯೇ ಈಶಾನ್ಯ ಭಾರತವನ್ನು ಮಾನ್ಸೂನ್ ಆವರಿಸಿಕೊಳ್ಳಲು ಕಾರಣವಿರಬಹುದು ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಭಾರತೀಯ ಹವಾಮಾನ ಇಲಾಖೆಯು, “ನೈಋತ್ಯ ಮಾನ್ಸೂನ್ ಮಾರುತಗಳು ಕೇರಳವನ್ನು ಪ್ರವೇಶಿಸಿದ್ದು, ಇಂದು (ಮೇ […]

ಕೇರಳ ಪ್ರವೇಶಿಸಿದ ನೈಋತ್ಯ ಮುಂಗಾರು Read More »

ನಷ್ಟದಲ್ಲಿರುವ ಪೇಟಿಎಂ/ ಖರೀದಿಗೆ ಮುಂದಾದರೇ ಅದಾನಿ?

ಸಮಗ್ರ ನ್ಯೂಸ್: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ನಷ್ಟದಲ್ಲಿರುವ ಪೇಟಿಎಂ ಪೇಮೆಂಟ್ ನ ಮಾತೃ ಸಂಸ್ಥೆಯಾದ ಒನ್ 97 ಕಮ್ಯುನಿಕೇಷನ್ಸ್‍ನಲ್ಲಿ ಷೇರು ಖರೀದಿಸಲು ಮುಂದಾಗಿದ್ದು, ಈ ಕುರಿತು ಪೇಟಿಎಂ ಸಂಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ ಅವರ ಜತೆ ಮಾತುಕತೆ ನಡೆಸಿದ್ದಾರೆ ಎಂದು ವರದಿಗಳು ಹೇಳಿವೆ. ಮಂಗಳವಾರ ಅಹಮದಾಬಾದ್‍ನಲ್ಲಿರುವ ತಮ್ಮ ಕಚೇರಿಯಲ್ಲಿ ಅದಾನಿ ಅವರು ಶರ್ಮಾರನ್ನು ಭೇಟಿ ಮಾಡಿದರು. ಈ ವೇಳೆ ಒಪ್ಪಂದದ ಸ್ವೂಪದ ಬಗ್ಗೆ ಮಾತುಕತೆ ನಡೆಯತು ಎಂದು ಮೂಲಗಳು ತಿಳಿದು ಬಂದಿದೆ.

ನಷ್ಟದಲ್ಲಿರುವ ಪೇಟಿಎಂ/ ಖರೀದಿಗೆ ಮುಂದಾದರೇ ಅದಾನಿ? Read More »

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿರುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಲಿ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಟೀಕಿಸಿದ್ದಾರೆ. ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮ್ಮ ಆಸ್ತಿಯನ್ನು ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುವುದಾಗಿ ಹೇಳಿದೆ. ಈ ದೇಶದ ಪ್ರಧಾನಿಯಾಗಿದ್ದವು ಹಿಂದೊಮ್ಮೆ ದೇಶದ ಸಂಪತ್ತಿನ ಮೊದಲ

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ Read More »

ಅಂತಿಮ ಹಂತದ ಚುನಾವಣೆ/ ಇಂದು ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಅಂತಿಮ ಹಂತದ ಚುನಾವಣೆಯು ಜೂನ್ 1ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬೀಳಲಿದೆ. ಇದರ ಜೊತೆಗೆ ಒಡಿಶಾ ವಿಧಾನಸಭೆ ಚುನಾವಣಾ ಪ್ರಚಾರಕ್ಕೂ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯದ ಬಳಿಕ ಮನೆ-ಮನೆಗೆ ಮಾತ್ರ ತೆರೆಳಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಅನುಮತಿ ಇರುತ್ತದೆ. 7ನೇ ಹಂತದಲ್ಲಿ 8 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 57 ಲೋಕಸಭಾ ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಾರೆ. 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಡಿಶಾದಲ್ಲಿ 42

ಅಂತಿಮ ಹಂತದ ಚುನಾವಣೆ/ ಇಂದು ಬಹಿರಂಗ ಪ್ರಚಾರಕ್ಕೆ ತೆರೆ Read More »

ವಿಶ್ವಸಂಸ್ಥೆಯ ಪ್ರಶಸ್ತಿಗೆ ಭಾಜನರಾದ ಭಾರತೀಯ ಮಹಿಳಾ ಶಾಂತಿ ಪಾಲಕಿ ಮೇಜರ್ ರಾಧಿಕಾ ಸೇನಾ

ಸಮಗ್ರ ನ್ಯೂಸ್: ವಿಶ್ವಸಂಸ್ಥೆಯ ಪ್ರತಿಷ್ಠಿತ ಮಿಲಿಟರಿ ಅಡ್ವೋಕೆಟ್ ಪ್ರಶಸ್ತಿಗೆ, ಕಾಂಗೋದ ವಿಶ್ವಸಂಸ್ಥೆ ಮಿಷನ್‍ನಲ್ಲಿ ಸೇವೆ ಸಲ್ಲಿಸಿದ ಭಾರತೀಯ ಮಹಿಳಾ ಶಾಂತಿ ಪಾಲಕಿ ಮೇಜರ್ ರಾಧಿಕಾ ಸೇನಾ ಅವರು ಭಾಜನರಾಗಿದ್ದಾರೆ. ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟಾನಿಯೋ ಗ್ಯುಟೆರ್ರೆಸ್, ರಾಧಿಕಾ ಅವರನ್ನು ನಿಜ ನಾಯಕಿ, ಮಾದರಿ ಎಂದು ಬಣ್ಣಿಸಿದ್ದಾರೆ. ಕಾಂಗೋದಲ್ಲಿ ಯುನೈಟೆಡ್ ನೇಷನ್ಸ್ ಸ್ಟೆಬಿಲೆಷನ್ ಮಿಷನ್‍ನಲ್ಲಿ ಕಾರ್ಯ ನಿರ್ವಹಿಸಿದ್ದ ರಾಧಿಕಾ ಅವರಿಗೆ 2023ನೇ ಸಾಲಿನ ಮಿಲಿಟರಿ ಅಡ್ವೋಕೆಟ್ ಆಫ್ ದಿ ಇಯರ್ ಗೌರವ ದೊರೆತಿದ್ದು, ಮೇ.30ರಂದು ಅಂತರಾಷ್ಟ್ರೀಯ ಶಾಂತಿ ಪಾಲಕರ

ವಿಶ್ವಸಂಸ್ಥೆಯ ಪ್ರಶಸ್ತಿಗೆ ಭಾಜನರಾದ ಭಾರತೀಯ ಮಹಿಳಾ ಶಾಂತಿ ಪಾಲಕಿ ಮೇಜರ್ ರಾಧಿಕಾ ಸೇನಾ Read More »

ಪ್ರಚಾರ ಮುಗಿಯುತ್ತಿದ್ದಂತೆ ಧ್ಯಾನದ ಮೊರೆಹೋಗಲಿದ್ದಾರೆ ನಮೋ| ಕನ್ಯಾಕುಮಾರಿಯತ್ತ ತೆರಳುತ್ತಾರಾ ಪ್ರಧಾನಿ?

ಸಮಗ್ರ ನ್ಯೂಸ್: ಚುನಾವಣಾ ಪ್ರಚಾರ ಮುಗಿಯುತ್ತಿದ್ದಂತೆ ಮೋದಿ ಅವರು ವಿಶ್ರಾಂತಿಗಾಗಿ ಆಧ್ಯಾತ್ಮಿಕದತ್ತ ಮುಖ ಮಾಡಲಿದ್ದಾರೆ. ಮೇ 30 ರಿಂದ ಜೂನ್​​ 1ನೇ ತಾರೀಖಿನವರೆಗೆ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಇರಲಿದ್ದಾರೆ. ಪ್ರಸಿದ್ಧ ವಿವೇಕಾನಂದ ಸ್ಮಾರಕದಲ್ಲಿ ಹಗಲು-ರಾತ್ರಿ ಧ್ಯಾನದಲ್ಲಿ ತೊಡಗಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನಮಂತ್ರಿಯವರು ಗುರುವಾರ ಸಂಜೆ ಕನ್ಯಾಕುಮಾರಿಯ ಸಮುದ್ರ ಮಧ್ಯೆದಲ್ಲಿರುವ ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲೆಯ ಪ್ರತಿಮೆಯ ಸಮೀಪದಲ್ಲಿರುವ ಸುಂದರವಾದ VRM ಗೆ ಆಗಮಿಸುವ ನಿರೀಕ್ಷೆಯಿದೆ. ಜೂನ್ 1 ರಂದು ದೆಹಲಿಗೆ ತೆರಳಬಹುದು. ಅವರ ಭೇಟಿ ವೇಳೆ

ಪ್ರಚಾರ ಮುಗಿಯುತ್ತಿದ್ದಂತೆ ಧ್ಯಾನದ ಮೊರೆಹೋಗಲಿದ್ದಾರೆ ನಮೋ| ಕನ್ಯಾಕುಮಾರಿಯತ್ತ ತೆರಳುತ್ತಾರಾ ಪ್ರಧಾನಿ? Read More »

ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ| ರಘುಪತಿ ಭಟ್ಗೆ ಆಲಿಯಾ ಟಾಂಗ್

ಸಮಗ್ರ ನ್ಯೂಸ್: ಹಿಜಾಬ್ ವಿವಾದ ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಗಲಾಟೆಯಲ್ಲಿ ಮುಂದುವರೆದಿತ್ತು. ಅದರಲ್ಲೂ ಉಡುಪಿ ಸರ್ಕಾರಿ ಕಾಲೇಜಿನ ಹಿಜಾಬ್ ವಿವಾದ ಭಾರೀ ಸುದ್ದಿಯಾಗಿತ್ತು. ಈ ಹಿಜಾಬ್ ವಿವಾದದ ಸಂಬಂಧ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಅವರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ಅದೇ ಸಮಯದಲ್ಲಿ ರಘುಪತಿ ಭಟ್ ಅವರು ಶಾಸಕರಾಗಿದ್ದು, ಕಾಲೇಜಿನ ಅಧ್ಯಕ್ಷರಾಗಿದ್ದರು ಸಹ ಆಗಿದ್ದರು. ಇದೀಗ ಕಾಲೇಜಿನಿಂದ ಉಚ್ಚಾಟನೆಯಾಗಿದ್ದ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ, ಸದ್ಯ ಮಾಜಿ ಶಾಸಕ ರಘುಪತಿ ಭಟ್‌ ಪಕ್ಷದಿಂದ ಉಚ್ಚಾಟನೆಯಾಗಿರುವ ಬಗ್ಗೆ ಟ್ವೀಟ್‌ ಮಾಡಿ

ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ| ರಘುಪತಿ ಭಟ್ಗೆ ಆಲಿಯಾ ಟಾಂಗ್ Read More »

ಮುಂಗಾರು ಪೂರ್ವ ಮಳೆಯಬ್ಬರ| ಕೇರಳದಲ್ಲಿ 6 ಸಾವು

ಸಮಗ್ರ ನ್ಯೂಸ್: ಮಂಗಳವಾರ ಸುರಿದ ಮುಂಗಾರುಪೂರ್ವ ಮಳೆಗೆ ಕೊಚ್ಚಿ ನಗರ ಸೇರಿದಂತೆ ಕೇರಳದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕೋಟ್ಟಾಯಂ ಜಿಲ್ಲೆಯ ಭರಣಂಙಾನಂ ಬಳಿ ಭೂಕುಸಿತ ಸಂಭವಿಸಿದೆ. ಆದರೆ ಜೀವಹಾನಿ ವರದಿಯಾಗಿಲ್ಲ. ತಿರುವನಂತಪುರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕಾಸರಗೋಡು, ಆಲಪ್ಪುಳ, ಎರ್ನಾಕುಳಂ ಮತ್ತು ಕೋಟಯಂ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಳೆದ ವಾರ ಮಳೆಯಿಂದ ಆದ ಅವಘಡಗಳಿಗೆ ತುತ್ತಾಗಿ ಐದು ಮಂದಿ ಮೃತಪಟ್ಟಿದ್ದರು. ಕೋಟಯಂ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿದ ಪರಿಣಾಮವಾಗಿ ಪ್ರವಾಹ ಪರಿಸ್ಥಿತಿ

ಮುಂಗಾರು ಪೂರ್ವ ಮಳೆಯಬ್ಬರ| ಕೇರಳದಲ್ಲಿ 6 ಸಾವು Read More »

ಧ್ವನಿ ಸಂದೇಶದ ಅವಧಿ ಹೆಚ್ಚಿಸಿದ ವಾಟ್ಸಾಪ್/ ಇನ್ಮುಂದೆ ಕಳುಹಿಸಬಹುದು ಒಂದು ನಿಮಿಷದ ಧ್ವನಿ ಸಂದೇಶ

ಸಮಗ್ರ ನ್ಯೂಸ್: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಸಾಕಷ್ಟು ಹೊಸತನಗಳನ್ನು ಅಳವಡಿಸಿಕೊಳ್ಳುತ್ತಿದ್ದು, ಇದೀಗ ಧ್ವನಿ ಸಂದೇಶಗಳ ಕಾಲಾವಧಿಯನ್ನು ಹೆಚ್ಚಿಸಿ ಹೊಸ ಅಪ್‍ಡೇಟ್ ನೀಡಿದೆ. ವಾಟ್ಸ್ ಆಪ್ ಆವೃತ್ತಿಯು ಬಳಕೆದಾರರಿಗೆ ಪ್ರಸ್ತುತ ಕೇವಲ 30 ಸೆಕೆಂಡ್ ಗಳಷ್ಟು ಅವಧಿಯ ಧ್ವನಿ ಸಂದೇಶಗಳನ್ನು ಹಂಚಿಕೊಳ್ಳಲು ಮಾತ್ರ ಅನುಮತಿ ನೀಡುತ್ತಿತ್ತು. ಆದರೆ ಇನ್ನು ಮುಂದೆ ಸುಮಾರು ಒಂದು ನಿಮಿಷಗಳ ಕಾಲದ ಧ್ವನಿ ಸಂದೇಶವನ್ನು ವಾಟ್ಸಾಪ್ ಮೂಲಕ ಕಳುಹಿಸಬಹುದು. ಒಂದು ನಿಮಿಷದವರೆಗೆ ಧ್ವನಿ ಸಂದೇಶಗಳನ್ನು ಕಳುಹಿಸುವ ವಿಧಾನವನ್ನು ಬೆಂಬಲಿಸಲು

ಧ್ವನಿ ಸಂದೇಶದ ಅವಧಿ ಹೆಚ್ಚಿಸಿದ ವಾಟ್ಸಾಪ್/ ಇನ್ಮುಂದೆ ಕಳುಹಿಸಬಹುದು ಒಂದು ನಿಮಿಷದ ಧ್ವನಿ ಸಂದೇಶ Read More »

ಮಿಜೋರಾಂ ನಲ್ಲಿ ಕಲ್ಲು ಕ್ವಾರಿ‌ ಕುಸಿತ| 10 ಜನ ಸಾವು; ಹಲವರು ನಾಪತ್ತೆ

ಸಮಗ್ರ ನ್ಯೂಸ್: ಮಿಜೋರಾಂ ರಾಜ್ಯದ ರಾಜಧಾನಿ ಐಜ್ವಾಲ್ ನಲ್ಲಿ ಮಂಗಳವಾರ ಬೆಳಿಗ್ಗೆ ಕಲ್ಲಿನ ಕ್ವಾರಿ ಕುಸಿದು 10 ಜನ ಸಾವನ್ನಪ್ಪಿದ್ದು ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರಂತರ ಮಳೆಯ ಪರಿಣಾಮ ಈ ಕ್ವಾರಿ ಕುಸಿದಿದೆ ಎಂದು ಪೊಲೀಸರು ಹೇಳಿದ್ದಾರೆ. ನಗರದ ದಕ್ಷಿಣ ಹೊರವಲಯದಲ್ಲಿರುವ ಮೆಲ್ಥಮ್ ಪ್ರದೇಶದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 10 ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಿಜೋರಾಂ ನಲ್ಲಿ ಕಲ್ಲು ಕ್ವಾರಿ‌ ಕುಸಿತ| 10 ಜನ ಸಾವು; ಹಲವರು ನಾಪತ್ತೆ Read More »