ರಾಷ್ಟ್ರೀಯ

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು

ಸಮಗ್ರ ನ್ಯೂಸ್ : ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ. ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಗುರುತಿಸಲಾಗಿದೆ. ಸ್ಫೋಟದ ನಂತರ ಇಡೀ ಕಾರ್ಖಾನೆಗೆ […]

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು Read More »

ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ

ಸಮಗ್ರ ನ್ಯೂಸ್: ಅಯೋಧ್ಯೆ ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ . ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಬುಧವಾರ ಬೆಳಗ್ಗೆ ಅಯೋಧ್ಯೆಯ ರಾಮಮಂದಿರಕ್ಕೆ ತೆರಳಿದ್ದರು. ಅಲ್ಲಿ ಅವರು ಶ್ರೀರಾಮ ದೇವಾಲಯವನ್ನು ಪ್ರವೇಶಿಸಿ ಬಾಲರಾಮದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಬಳಿಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಜನವರಿಯಲ್ಲಿ ಎರಡು ಬಾರಿ ಅಯೋಧ್ಯೆಗೆ ಬಂದಿದ್ದೆ. ಅಂದಿನ ಭಾವನೆ ಇಂದಿಗೂ ಹಾಗೆಯೇ ಉಳಿದಿದೆ. ನಾನು ಅಯೋಧ್ಯೆಗೆ ಹಲವು ಬಾರಿ ಬಂದಿದ್ದೇನೆ.

ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ Read More »

ಭಾರತಕ್ಕೂ ಬಂತು ಗೂಗಲ್ ವ್ಯಾಲೆಟ್

ಸಮಗ್ರ ನ್ಯೂಸ್: ಪ್ರತಿಷ್ಠಿತ ಕಂಪೆನಿ ಗೂಗಲ್ ಆಂಡ್ರಾಯ್ಡ್ ಮೊಬೈಲ್ ಹೊಂದಿರುವ ತನ್ನ ಗ್ರಾಹಕರಿಗೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಿದ್ದು, ಗೂಗಲ್ ವ್ಯಾಲೆಟ್ ಎನ್ನುವ ವಿಶೇಷ ಅಪ್ಲಿಕೇಶನ್ ಪರಿಚಯಿಸಿದೆ. ಈ ವ್ಯಾಲೆಟ್‍ನಿಂದ ಬೋಡಿರ್ಂಗ್ ಪಾಸ್, ಲಾಯಲ್ಟಿ ಕಾರ್ಡ್, ಕಾರ್ಯಕ್ರಮಗಳ ಟಿಕೆಟ್ , ಸಾರ್ವಜನಿಕ ಸಾರಿಗೆ ಪಾಸ್‍ಗಳು ಸೇರಿದಂತೆ ದೈನಂದಿನ ಅಗತ್ಯಕ್ಕೆ ಬೇಕಾಗುವ ಎಲ್ಲ ದಾಖಲೆಗಳನ್ನು ಒಂದೆಡೆ ಇಡುವುದಕ್ಕೆ ಈ ಅಪ್ಲಿಕೇಶನ್ ಸೂಕ್ತವಾಗಿರಲಿದೆ. ಜೊತೆಗೆ ಗ್ರಾಹಕರ ದಾಖಲೆಗಳು ಕೂಡ ಭದ್ರವಾಗಿರಲಿದೆ. ಈ ಡಿಜಿಟಲ್ ಅಪ್ಲಿಕೇಶನ್ ಭಾರತದಲ್ಲಿ ತನ್ನ ಕಾರ್ಯಾರಂಭ ಮಾಡಿದ್ದು, ಈ

ಭಾರತಕ್ಕೂ ಬಂತು ಗೂಗಲ್ ವ್ಯಾಲೆಟ್ Read More »

ಸೌರ ವಿದ್ಯುತ್ ಉತ್ಪಾದನೆ/ ಜಪಾನ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರಿದ ಭಾರತ

ಸಮಗ್ರ ನ್ಯೂಸ್: ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‍ನ ವರದಿಯ ಪ್ರಕಾರ, ಸೌರ ವಿದ್ಯುತ್ ಉತ್ಪಾದನೆಯಲ್ಲಿ ಭಾರತ 2023ರಲ್ಲಿ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಂ.3 ಸ್ಥಾನಕ್ಕೆ ಏರಿದೆ. 2015 ರಲ್ಲಿ ಭಾರತವು 9ನೇ ಶ್ರೇಯಾಂಕ ಪಡೆದಿತ್ತು. ಆದರೆ ಈಗ ಸರ್ಕಾರದ ಸತತ ಪ್ರಯತ್ನಗಳಿಂದ 3ನೇ ಸ್ಥಾನಕ್ಕೆ ಏರಿದೆ. ಎಂಬರ್ ಸಂಸ್ಥೆ ಬುಧವಾರ ಗ್ಲೋಬಲ್ ಎಲೆಕ್ಟ್ರಿಸಿಟಿ ರಿವ್ಯೂ 2024 ಅನ್ನು ಪ್ರಕಟಿಸಿದ್ದು, 2023ರಲ್ಲಿ ಭಾರತವು ಸೌರ ವಿದ್ಯುತ್ ಉತ್ಪಾದನೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ

ಸೌರ ವಿದ್ಯುತ್ ಉತ್ಪಾದನೆ/ ಜಪಾನ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರಿದ ಭಾರತ Read More »

‘ಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಸಮಗ್ರ ನ್ಯೂಸ್ : ಕೊರೊನಾ ಲಸಿಕೆ ಕೋವಿಶೀಲ್ಡ್ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ ತಾನು ತಯಾರಿಸಿ ಪ್ರಪಂಚಕ್ಕೆ ನೀಡಿದ್ದ ಕೋವಿಶೀಲ್ಡ್ ವ್ಯಾಕ್ಸಿನ್ನಿಂದ ತುಂಬಾ ಅಪರೂಪದ ಪ್ರಕರಣಗಳಲ್ಲಿ ಮಾರಣಾಂತಿಕ ಅಡ್ಡ ಪರಿಣಾಮ ಉಂಟು ಮಾಡುತ್ತಿದೆ ಎಂದು ಲಂಡನ್ ಕೋರ್ಟ್ಗೆ ಹೇಳಿದೆ. ಟಿಟಿಎಸ್ನಂಥ ಡೇಂಜರಸ್ ಕಾಯಿಲೆಯನ್ನು ಕೊರೊನಾ ವ್ಯಾಕ್ಸಿನ್ ಉಂಟು ಮಾಡುತ್ತಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ, ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸಿದೆ. ಪರಿಣಾಮ ಆರ್ಥಿಕ ನೆಪವೊಡ್ಡಿ ಫಾರ್ಮಾ

‘ಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ Read More »

ಇಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆ

ಸಮಗ್ರ ನ್ಯೂಸ್ : ವಿಶ್ವ ರೆಡ್ ಕ್ರಾಸ್ ದಿನವನ್ನು ವಿಶ್ವದಾದ್ಯಂತ ಮೇ 8ರಂದು ಆಚರಿಸಲಾಗುತ್ತದೆ. ಸ್ವಿಸ್ ಉದ್ಯಮಿ ಮತ್ತು ವಿಶ್ವದ ಅತಿದೊಡ್ಡ ಮಾನವೀಯ ನೆರವು ಸಂಸ್ಥೆಯಾದ ರೆಡ್ ಕ್ರಾಸ್ ನ ಸಂಸ್ಥಾಪಕ ಹೆನ್ರಿ ಡ್ಯುನಾಂಟ್ ಅವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುತ್ತದೆ. 1901ರಲ್ಲಿ ಮೊದಲ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದ ಅವರು, ರೆಡ್ಕ್ರಾಸ್ನ ಅಂತಾರಾಷ್ಟ್ರೀಯ ಸಮಿತಿಯ ಸ್ಥಾಪಕರಾಗಿದ್ದಾರೆ. ತುರ್ತು ಮತ್ತು ಸಂಘರ್ಷದ ಸಮಯದಲ್ಲಿ ಅಗತ್ಯವಿರುವವರಿಗೆ ಬೆಂಬಲ ನೀಡುವ ಸಲುವಾಗಿ ರೆಡ್ ಕ್ರಾಸ್ ಅನ್ನು ಸ್ಥಾಪಿಸಲಾಗಿದೆ. ಇಟಲಿಯಲ್ಲಿನ ಸೋಲ್ಫೆರಿನೊ

ಇಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆ Read More »

ಅರವಿಂದ ಕೇಜ್ರಿವಾಲ್ ಒಬ್ಬ ಸಿಎಂ, ಅವರ ಪ್ರಚಾರ ನಡೆಸಬೇಕಿದೆ| ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಪ್ರಶ್ನೆ

ಸಮಗ್ರ ನ್ಯೂಸ್: ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನವನ್ನು ಪ್ರಶ್ನಿಸಿ ದಿಲ್ಲಿ ಸಲ್ಲಿಸಿತು ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಇಂದು ಜಾರಿ ನಿರ್ದೇಶನಾಲಯಕ್ಕೆ ಕೆಲ ಮಹತ್ವದ ಪ್ರಶ್ನೆಗಳನ್ನು ಕೇಳಿದೆ. “ತಪ್ಪು ಮಾಡಿದ್ದಾರೆಂಬುದಕ್ಕೆ ಸಾಕ್ಷ್ಯಗಳಿವೇ ಮತ್ತು ನಿರಪಾಧಿ ಎಂದು ತೋರಿಸಿಕೊಡುವ ಅಂಶಗಳಿವೆಯೇ?” ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. “ಇದು ಆಡಳಿತಾತ್ಮಕ ಕೆಲಸವೇ? ನೀವು ಎರಡರ ನಡುವೆ ಸಮತೋಲನ ಸಾಧಿಸಬೇಕಿದೆ. ಒಂದು ಅಂಶವನ್ನು ಹೊರತುಪಡಿಸುವ ಹಾಗಿಲ್ಲ. ನೀವು ಒಬ್ಬ ವ್ಯಕ್ತಿಯ ಜೀವನದ ಮೇಲಿನ ಹಕ್ಕನ್ನು

ಅರವಿಂದ ಕೇಜ್ರಿವಾಲ್ ಒಬ್ಬ ಸಿಎಂ, ಅವರ ಪ್ರಚಾರ ನಡೆಸಬೇಕಿದೆ| ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಪ್ರಶ್ನೆ Read More »

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದೇ ವೇಳೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ 25,753 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಿ ಏಪ್ರಿಲ್ 22ರಂದು ಕಲ್ಕತ್ತಾ ಹೈಕೋರ್ಟ್

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್ Read More »

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿರುವ ರಾಮ ಮಂದಿರ ನಿಷ್ಟ್ರಯೋಜಕ ಆಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮ್ಮ ದೇಶದಲ್ಲಿ ದೇವಸ್ಥಾನಗಳನ್ನು ಈ ರೀತಿ ನಿರ್ಮಿಸಿಲ್ಲ. ರಾಮ ಮಂದಿರವನ್ನು ವಾಸ್ತು ಪ್ರಕಾರ ನಿರ್ಮಿಸಿಲ್ಲ. ನಾನು ಪ್ರತಿದಿನ ರಾಮನನ್ನು ಆರಾಧಿಸುತ್ತೇನೆ. ಕೆಲವರು ರಾಮನವಮಿಯಂದು ಪೇಟೆಂಟ್ ಮಾಡಿದ್ದಾರೆ. ಆದರೆ ಅಯೋಧ್ಯೆಯಲ್ಲಿರುವ ಆ ದೇವಾಲಯವು ನಿಷ್ಟ್ರಯೋಜಕ ಆಗಿದೆ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮತ ಬ್ಯಾಂಕ್ ರಾಜಕೀಯಕ್ಕಾಗಿ

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್ Read More »

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವಿನ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವುದಾಗಿ ಮೂವರು ಪಕ್ಷೇತರ ಶಾಸಕರು ಮಂಗಳವಾರ ಘೋಷಿಸಿದ್ದಾರೆ. ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. ಇದರಿಂದ ಸೈನಿ ಸರ್ಕಾರವು ಬಹುಮತ ಕಳೆದುಕೊಂಡಿದ್ದು, ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ. ಸರ್ಕಾರ ಪತನದ ಸನಿಹದಲ್ಲಿದ್ದು,

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ Read More »