ರಾಷ್ಟ್ರೀಯ

ಅಬಕಾರಿ ಹಗರಣ/ ತಿಹಾರ್ ಜೈಲಿಗೆ ವಾಪಾಸಾದ ಕೇಜ್ರಿವಾಲ್

ಸಮಗ್ರ ನ್ಯೂಸ್: ಅಬಕಾರಿ ಹಗರಣದಲ್ಲಿ ಬಂಧಿತರಾದ ಬಳಿಕ ಲೋಕಸಭೆ ಚುನಾವಣೆ ಕಾರಣ ಜಾಮೀನು ಪಡೆದಿದ್ದ ಆಪ್ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಮರಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿ, ಜೂ.2ರಂದು ಜೈಲಿಗೆ ಮರಳಬೇಕು ಎಂದು ಕೇಜ್ರಿವಾಲ್‍ಗೆ ತಾಕೀತು ಮಾಡಿತ್ತು. ಈ ನಡುವೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ವಿಸ್ತರಣೆ ಕೋರಿದ್ದ ಅರ್ಜಿಯ ತೀರ್ಪು ಜೂ.5ಕ್ಕೆ ಮುಂದೂಡಿಕೆ ಆದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಭಾನುವಾರ ಜೈಲಿಗೆ […]

ಅಬಕಾರಿ ಹಗರಣ/ ತಿಹಾರ್ ಜೈಲಿಗೆ ವಾಪಾಸಾದ ಕೇಜ್ರಿವಾಲ್ Read More »

ಭಾರತ ತಂಡಕ್ಕೆ ತರಬೇತಿ ನೀಡುವುದಕ್ಕಿಂತ ದೊಡ್ಡ ಗೌರವವಿಲ್ಲ/ ಕೋಚ್ ಆಯ್ಕೆಯ ಕುರಿತ ವದಂತಿಗಳಿಗೆ ತೆರೆ ಎಳೆದ ಗಂಭೀರ್

ಸಮಗ್ರ ನ್ಯೂಸ್: ಭಾರತೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಅಯ್ಕೆಯ ಕುರಿತು ಎದ್ದಿರುವ ಊಹಾಪೋಹಗಳ ನಡುವೆ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಭಾರತೀಯ ಕ್ರಿಕೆಟ್ ತಂಡಕ್ಕೆ ತರಬೇತುದಾರರಾಗುವುದುಗೌರವದ ವಿಚಾರ ಎಂದು ಹೇಳಿದ್ದಾರೆ ನಾನು ಭಾರತ ತಂಡಕ್ಕೆ ಕೋಚ್ ಆಗಲು ಇಷ್ಟಪಡುತ್ತೇನೆ. ನಮ್ಮ ರಾಷ್ಟ್ರೀಯ ತಂಡಕ್ಕೆ ತರಬೇತಿ ನೀಡುವುದಕ್ಕಿಂತ ದೊಡ್ಡ ಗೌರವವಿಲ್ಲ” ಎಂದು ಹೇಳಿದ್ದಾರೆ. ಭಾರತವು ತನ್ನ T20 ವಿಶ್ವಕಪ್ ಅಭಿಯಾನವನ್ನು ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ವಿರುದ್ಧ ಪ್ರಾರಂಭಿಸಲಿರುವುದರಿಂದ, ಮೆನ್ ಇನ್ ಬ್ಲೂ

ಭಾರತ ತಂಡಕ್ಕೆ ತರಬೇತಿ ನೀಡುವುದಕ್ಕಿಂತ ದೊಡ್ಡ ಗೌರವವಿಲ್ಲ/ ಕೋಚ್ ಆಯ್ಕೆಯ ಕುರಿತ ವದಂತಿಗಳಿಗೆ ತೆರೆ ಎಳೆದ ಗಂಭೀರ್ Read More »

ಎಕ್ಸಿಟ್‌ ಪೋಲ್‌ ಗಳಲ್ಲಿ ಭರ್ಜರಿ ವಿಜಯದ ದಿಕ್ಸೂಚಿ ಬೆನ್ನಲ್ಲೇ ಪ್ರಧಾನಿ ಸಭೆ..!

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಏಳು ಹಂತದ ಮತದಾನ ಪೂರ್ಣಗೊಂಡಿದೆ, ನಿನ್ನೆ ಎಕ್ಸಿಟ್‌ ಪೋಲ್‌ ಫಲಿತಾಂಶವೂ ಹೊರಬಿದ್ದಿವೆ. ಇದರಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುತ್ತದೆ ಎಂಬ ಮಾಹಿತಿಯೂ ಲಭಿಸಿದೆ. ಈ ಮಾಹಿತಿ ಸಿಕ್ಕಾಗಿಂದ ಪ್ರಧಾನಿ ಮೋದಿ ಇಂದು 7 ಸಭೆಗಳನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಧಿಕಾರಕ್ಕೆ ಬಂದ ಮೊದಲ 100 ದಿನಗಳಲ್ಲಿ ಕೈಗೆತ್ತಿಕೊಳ್ಳಬಹುದಾದ ಯೋಜನೆ ಹಾಗೂ ದೇಶಾದ್ಯಂತ ತಲೆದೋರಿರುವ ಬಿಸಿಗಾಳಿ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಅಧಿಕೃತ ಮೂಲಗಳ

ಎಕ್ಸಿಟ್‌ ಪೋಲ್‌ ಗಳಲ್ಲಿ ಭರ್ಜರಿ ವಿಜಯದ ದಿಕ್ಸೂಚಿ ಬೆನ್ನಲ್ಲೇ ಪ್ರಧಾನಿ ಸಭೆ..! Read More »

ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂಬುದು ನನ್ನ ಆಸೆ/ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಸಮಗ್ರ ನ್ಯೂಸ್: “ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಪ್ರಿಯಾಂಕಾ ವಾದ್ರಾ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು’ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೇಶದಲ್ಲಿ ಯಾರಾದರೂ ಪ್ರಧಾನಿಯಾಗಬೇಕು ಎಂದರೆ ನನ್ನ ಆಯ್ಕೆ ರಾಹುಲ್ ಗಾಂಧಿ, ದೇಶದ ಯುವಕ-ಯುವತಿಯರು, ದೇಶದ ಶಕ್ತಿಯನ್ನು ಅವರು ಪ್ರತಿನಿಧಿಸುತ್ತಾರೆ. ಹಾಗಾಗಿ, ರಾಹುಲ್ ಗಾಂಧಿ ಅವರೇ ಪ್ರಧಾನಿಯಾಗಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಎನ್‍ಡಿಟಿವಿಯೊಂದಿಗೆ ಸಂದರ್ಶನದಲ್ಲಿ ಅವರು ಹೇಳಿದ್ದಾರೆ ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಶನಿವಾರ (ಜೂನ್ 1) ನಡೆಯಲಿದ್ದು ಜೂನ್ 4ರ ಫಲಿತಾಂಶದತ್ತ

ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂಬುದು ನನ್ನ ಆಸೆ/ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ Read More »

ದಾಖಲೆ ನಿರ್ಮಿಸಿದ ಮೋದಿ ಚುನಾವಣಾ ಪ್ರಚಾರ/ 206 ಪ್ರಚಾರ ಸಭೆ, 80 ಸಂದರ್ಶನಗಳಲ್ಲಿ ಪಾಲ್ಗೊಂಡ ಪ್ರಧಾನಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಗಾಗಿ 206 ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡುವುದರ ಜೊತೆಗೆ, ಪತ್ರಕರ್ತರೊಂದಿಗೆ 80 ಸಂದರ್ಶನಗಳಲ್ಲಿ ಭಾಗಿಯಾಗುವುದರ ಮೂಲಕ ದಾಖಲೆ ನಿರ್ಮಿಸಿದ್ದಾರೆ. 2024ರ ಲೋಕಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಹೋಶಿಯಾರ್‍ಪುರದಲ್ಲಿ ತಮ್ಮ ಕೊನೆಯ ಪ್ರಚಾರ ಸಭೆಯನ್ನು ನಡೆಸಿದ ನಂತರ ಧ್ಯಾನ ಮಾಡಲು ಕನ್ಯಾಕುಮಾರಿಗೆ ತೆರಳಿದ್ದಾರೆ. ನರೇಂದ್ರ ಮೋದಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದು, ಒಂದೇ ದಿನದಲ್ಲಿ ಹಲವು ಸಭೆಗಳನ್ನು ಉದ್ದೇಶಿಸಿ

ದಾಖಲೆ ನಿರ್ಮಿಸಿದ ಮೋದಿ ಚುನಾವಣಾ ಪ್ರಚಾರ/ 206 ಪ್ರಚಾರ ಸಭೆ, 80 ಸಂದರ್ಶನಗಳಲ್ಲಿ ಪಾಲ್ಗೊಂಡ ಪ್ರಧಾನಿ Read More »

ಕಿಸಾನ್ ಕರ್ಜಾ ಮಾಫಿ ಆಯೋಗ/ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡುತ್ತೇವೆ ಎಂದ ರಾಹುಲ್

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ಮೈತ್ರಿಪಕ್ಷಗಳು ಅಧಿಕಾರಕ್ಕೆ ಬಂದರೆ ‘ಕಿಸಾನ್ ಕರ್ಜಾ ಮಾಫಿ ಆಯೋಗ್’ ತರುವ ಮೂಲಕ ರೈತರ ಸಾಲವನ್ನು ಎಷ್ಟು ಬಾರಿ ಬೇಕಾದರೂ ಮನ್ನಾ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಯ ನಡುವೆ ಪ್ರಮುಖ ಭರವಸೆ ನೀಡಿದ್ದಾರೆ. “ಇತಿಹಾಸದಲ್ಲಿ ಮೊದಲ ಬಾರಿಗೆ ಈ ಚುನಾವಣೆ ಸಂವಿಧಾನವನ್ನು ಉಳಿಸಲು ಆಗಿದೆ. ಪಕ್ಷವೊಂದು ಸಂವಿಧಾನವನ್ನು ಬದಲಾಯಿಸುತ್ತೇವೆ ಮತ್ತು ಕಿತ್ತುಹಾಕುತ್ತೇವೆ ಎಂದು ಬಹಿರಂಗವಾಗಿ ಹೇಳಿದ್ದು ಇದೇ ಮೊದಲು. ಬಿಜೆಪಿ ಕೇವಲ ಕೋಟ್ಯಾಧಿಪತಿಗಳಿಗಾಗಿ ಕೆಲಸ ಮಾಡುತ್ತದೆ

ಕಿಸಾನ್ ಕರ್ಜಾ ಮಾಫಿ ಆಯೋಗ/ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡುತ್ತೇವೆ ಎಂದ ರಾಹುಲ್ Read More »

ಕೇರಳ ಪ್ರವೇಶಿಸಿದ ನೈಋತ್ಯ ಮುಂಗಾರು

ಸಮಗ್ರ ನ್ಯೂಸ್: ನೈಋತ್ಯ ಮುಂಗಾರು ಮಾರುತಗಳು ಮೇ.30 ರಂದು ಕೇರಳವನ್ನು ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಭುವನೇಶ್ವರ ಕೇಂದ್ರವು ಪ್ರಕಟಿಸಿದೆ. ರವಿವಾರ ಪಶ್ಚಿಯ ಬಂಗಾಳ ಹಾಗೂ ಬಾಂಗ್ಲಾದೇಶದ ಮೂಲಕ ಅಪ್ಪಳಿಸಿದ್ದ ಚಂಡಮಾರುತವು ಮಾನ್ಸೂನ್ ಮಾರುತವನ್ನು ಬಂಗಾಳ ಕೊಲ್ಲಿಗೆ ನೂಕಿರುವುದು ಮುಂಚಿತವಾಗಿಯೇ ಈಶಾನ್ಯ ಭಾರತವನ್ನು ಮಾನ್ಸೂನ್ ಆವರಿಸಿಕೊಳ್ಳಲು ಕಾರಣವಿರಬಹುದು ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಭಾರತೀಯ ಹವಾಮಾನ ಇಲಾಖೆಯು, “ನೈಋತ್ಯ ಮಾನ್ಸೂನ್ ಮಾರುತಗಳು ಕೇರಳವನ್ನು ಪ್ರವೇಶಿಸಿದ್ದು, ಇಂದು (ಮೇ

ಕೇರಳ ಪ್ರವೇಶಿಸಿದ ನೈಋತ್ಯ ಮುಂಗಾರು Read More »

ನಷ್ಟದಲ್ಲಿರುವ ಪೇಟಿಎಂ/ ಖರೀದಿಗೆ ಮುಂದಾದರೇ ಅದಾನಿ?

ಸಮಗ್ರ ನ್ಯೂಸ್: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ನಷ್ಟದಲ್ಲಿರುವ ಪೇಟಿಎಂ ಪೇಮೆಂಟ್ ನ ಮಾತೃ ಸಂಸ್ಥೆಯಾದ ಒನ್ 97 ಕಮ್ಯುನಿಕೇಷನ್ಸ್‍ನಲ್ಲಿ ಷೇರು ಖರೀದಿಸಲು ಮುಂದಾಗಿದ್ದು, ಈ ಕುರಿತು ಪೇಟಿಎಂ ಸಂಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ ಅವರ ಜತೆ ಮಾತುಕತೆ ನಡೆಸಿದ್ದಾರೆ ಎಂದು ವರದಿಗಳು ಹೇಳಿವೆ. ಮಂಗಳವಾರ ಅಹಮದಾಬಾದ್‍ನಲ್ಲಿರುವ ತಮ್ಮ ಕಚೇರಿಯಲ್ಲಿ ಅದಾನಿ ಅವರು ಶರ್ಮಾರನ್ನು ಭೇಟಿ ಮಾಡಿದರು. ಈ ವೇಳೆ ಒಪ್ಪಂದದ ಸ್ವೂಪದ ಬಗ್ಗೆ ಮಾತುಕತೆ ನಡೆಯತು ಎಂದು ಮೂಲಗಳು ತಿಳಿದು ಬಂದಿದೆ.

ನಷ್ಟದಲ್ಲಿರುವ ಪೇಟಿಎಂ/ ಖರೀದಿಗೆ ಮುಂದಾದರೇ ಅದಾನಿ? Read More »

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿರುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಲಿ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಟೀಕಿಸಿದ್ದಾರೆ. ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮ್ಮ ಆಸ್ತಿಯನ್ನು ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುವುದಾಗಿ ಹೇಳಿದೆ. ಈ ದೇಶದ ಪ್ರಧಾನಿಯಾಗಿದ್ದವು ಹಿಂದೊಮ್ಮೆ ದೇಶದ ಸಂಪತ್ತಿನ ಮೊದಲ

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ Read More »

ಅಂತಿಮ ಹಂತದ ಚುನಾವಣೆ/ ಇಂದು ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಅಂತಿಮ ಹಂತದ ಚುನಾವಣೆಯು ಜೂನ್ 1ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬೀಳಲಿದೆ. ಇದರ ಜೊತೆಗೆ ಒಡಿಶಾ ವಿಧಾನಸಭೆ ಚುನಾವಣಾ ಪ್ರಚಾರಕ್ಕೂ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯದ ಬಳಿಕ ಮನೆ-ಮನೆಗೆ ಮಾತ್ರ ತೆರೆಳಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಅನುಮತಿ ಇರುತ್ತದೆ. 7ನೇ ಹಂತದಲ್ಲಿ 8 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 57 ಲೋಕಸಭಾ ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಾರೆ. 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಡಿಶಾದಲ್ಲಿ 42

ಅಂತಿಮ ಹಂತದ ಚುನಾವಣೆ/ ಇಂದು ಬಹಿರಂಗ ಪ್ರಚಾರಕ್ಕೆ ತೆರೆ Read More »