ರಾಷ್ಟ್ರೀಯ

ಕನ್ನಡದಲ್ಲಿ ಎಕ್ಸ್ ಖಾತೆ ಆರಂಭಿಸಿದ ಮೋದಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ, ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಕನ್ನಡದ ಪ್ರತ್ಯೇಕ ಚಾನೆಲ್‍ನ್ನು ಆರಂಭಿಸಿದ್ದಾರೆ. ಕನ್ನಡ ಮತದಾರರನ್ನು ತಲುಪುವ ಉದ್ದೇಶದಿಂದಾಗಿ ನಮೋ ಕನ್ನಡ ಎಂಬ ಹೆಸರಿನಲ್ಲಿ ಕನ್ನಡದ ಟ್ವಿಟರ್ ಖಾತೆ ಆರಂಭಿಸಲಾಗಿದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳು, ಭಾಷಣಗಳು ಹಾಗೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಖಾತೆ ಆರಂಭ ಮಾಡಲಾಗಿದೆ.

ಕನ್ನಡದಲ್ಲಿ ಎಕ್ಸ್ ಖಾತೆ ಆರಂಭಿಸಿದ ಮೋದಿ Read More »

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ

ಸಮಗ್ರ ನ್ಯೂಸ್: ಲಕ್ಷದ್ವೀಪದ ಕವರಟ್ಟಿಯಲ್ಲಿ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎನಿಸಿರುವ ಎಚ್‍ಡಿಎಫ್‍ಸಿ ತನ್ನ ಮೊದಲ ಶಾಖೆ ತೆರೆಯುವ ಮೂಲಕ ಲಕ್ಷದ್ವೀಪದಲ್ಲಿ ಶಾಖೆ ತೆರೆದ ಮೊದಲ ಖಾಸಗಿ ಬ್ಯಾಂಕ್ ಎನಿಸಿಕೊಂಡಿದೆ. ‘ಜನರು ಎಲ್ಲಿರುತ್ತಾರೋ ಅಲ್ಲಿಯೇ ಸೇವೆಯನ್ನು ಒದಗಿಸಬೇಕು ಎನ್ನುವುದು ನಮ್ಮ ಬ್ಯಾಂಕ್‍ನ ಉದ್ದೇಶ. ಲಕ್ಷದ್ವೀಪದಲ್ಲಿರುವ ವ್ಯಕ್ತಿಗಳಿಗೆ, ಕುಟುಂಬಗಳಿಗೆ ಹಾಗೂ ಉದ್ಯಮದಾರರಿಗೆ ಸೇವೆಯನ್ನು ನೀಡಲು ಉತ್ಸುಕರಾಗಿದ್ದೇವೆ’ ಎಂದು ಬ್ಯಾಂಕ್‍ನ ಮುಖ್ಯಸ್ಥ ಎಸ್. ಸಂಪತ್‍ಕುಮಾರ್ ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯ ಕಮಾಂಡಿಂಗ್ ಅಧಿಕಾರಿ ಕ್ಯಾಪ್ಟನ್ ಲವಕೇಶ್ ಅವರು ಲಕ್ಷದ್ವೀಪದಲ್ಲಿ ಕಾರ್ಯಾರಂಭ

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ Read More »

ಲೋಕಸಭಾ ಚುನಾವಣೆ/ ‘ಎಐ’ ಹೇಳುತ್ತಿದೆ ರಾಜಕೀಯ ಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷಿಗಳು ಗ್ರಹಗತಿಗಳ ಆಧಾರದಲ್ಲಿ ಚುನಾವಣೆಯ ಸಮಯದಲ್ಲಿ ಇದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿಯುವ ಸಂಪ್ರದಾಯ ಇದೆ. ಆದರೆ ಈ ಬಾರಿಯ ಲೋಕಸಭೆ ಅಖಾಡದಲ್ಲಿ ಏನಾಗಲಿದೆ ಎಂಬುದನ್ನು ಎಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ತನ್ನಲ್ಲಿ ಅಡಕವಾದ ಡೇಟಾಗಳ ಮೂಲಕ ಭವಿಷ್ಯ ನುಡಿಯುತ್ತಿದೆ. ಈ ಹಿಂದೆ ನಡೆದ ಬೆಳವಣಿಗೆ ಹಾಗೂ ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಡೇಟಾ ಪರಿಷ್ಕರಿಸಿ ಎಐ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಬರಬಹುದು ಎಂದು ಭವಿಷ್ಯ ನುಡಿಯುತ್ತಿದೆ. ಇದಲ್ಲದೆ, ಚುನಾವಣೆಯಲ್ಲಿ

ಲೋಕಸಭಾ ಚುನಾವಣೆ/ ‘ಎಐ’ ಹೇಳುತ್ತಿದೆ ರಾಜಕೀಯ ಭವಿಷ್ಯ Read More »

ನವದೆಹಲಿ: ಅಭ್ಯರ್ಥಿಯ ಆಸ್ತಿಯ ವಿವರ ತಿಳಿಯುವ ಹಕ್ಕು ಮತದಾರನಿಗೆ ಇಲ್ಲ;ಸುಪ್ರೀಂ

ಸಮಗ್ರ ನ್ಯೂಸ್‌ : ಅಭ್ಯರ್ಥಿಯ ಪ್ರತಿಯೊಂದು ಆಸ್ತಿಯನ್ನು ತಿಳಿಯುವ ಹಕ್ಕು ಮತದಾರನಿಗೆ ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧ ಪಡದ ಸಂಗತಿಯಲ್ಲಿ ಅಭ್ಯರ್ಥಿ ತಮ್ಮ ಖಾಸಗಿತನವನ್ನು ಕಾಪಾಡಿಕೊಳ್ಳುವ ಹಕ್ಕು ಇರುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಅರುಣಾಚಲಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಕಾರಿಖೋಕ ಕ್ರಿ ಅವರ ಶಾಸಕ ಸ್ಥಾನವನ್ನು ಕೋರ್ಟ್ ಎತ್ತಿಹಿಡಿದಿದೆ. ಸರಿಯಾಗಿ ಆಸ್ತಿ ಘೋಷಣೆ ಮಾಡಿಲ್ಲವೆಂದು ಕಾರಿಖೋ ಕ್ರಿ ಅವರ ಶಾಸಕ ಸ್ಥಾನವನ್ನು ಅಸಿಂಧು

ನವದೆಹಲಿ: ಅಭ್ಯರ್ಥಿಯ ಆಸ್ತಿಯ ವಿವರ ತಿಳಿಯುವ ಹಕ್ಕು ಮತದಾರನಿಗೆ ಇಲ್ಲ;ಸುಪ್ರೀಂ Read More »

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್‌ : ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಪುತ್ರಿ ಕವಿತಾ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಇಂದು ಆದೇಶಿಸಿದ್ದು, ಈ ಕುರಿತು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ. ಕವಿತಾ ನ್ಯಾಯಾಲಕ್ಕೆ ಹಾಜರುಪಡಿಸಲು ಹೋಗುವ ವೇಳೆ ಈ ರೀತಿ ಪ್ರತಿಕ್ರಿಯಿಸಿ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ವಿರೋಧ ಪಕ್ಷದ

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ Read More »

ಮುಂಬೈ : ಸಮೋಸಾದೊಳಗೆ ಕಾಂಡೋಮ್ ಪತ್ತೆ| ಆರೋಪಿ ವಶ, ಐವರ ವಿರುದ್ಧ ಎಫ್‌ಐಆರ್‌

ಸಮಗ್ರ ನ್ಯೂಸ್‌ : ಕ್ಯಾಂಟೀನ್‌ ನೊಂದರಲ್ಲಿ ಸಮೋಸಾದೊಳಗೆ ಬ್ಯಾಂಡೇಜ್‌, ಕಾಂಡೋಮ್, ಕಲ್ಲುಗಳು ಮತ್ತು ತಂಬಾಕು ಮುಂತಾದ ವಸ್ತುಗಳು ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಹೀಮ್ ಶೇಖ್, ಅಜರ್ ಶೇಖ್, ಮಜರ್ ಶೇಖ್, ಅಜರ್ ಶೇಖ್ ಮತ್ತು ವಿಕ್ಕಿ ಶೇಖ್ ಆರೋಪಿಗಳೆಂದು ಗುರುತಿಸಲಾಗಿದೆ. ಕಂಪನಿಯು ತಮ್ಮ ಒಪ್ಪಂದವನ್ನು ರದ್ದುಪಡಿಸಿದ ಕೋಪದಿಂದ ಆರೋಪಿಗಳೆಲ್ಲರೂ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬೈ : ಸಮೋಸಾದೊಳಗೆ ಕಾಂಡೋಮ್ ಪತ್ತೆ| ಆರೋಪಿ ವಶ, ಐವರ ವಿರುದ್ಧ ಎಫ್‌ಐಆರ್‌ Read More »

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್

ಸಮಗ್ರ ನ್ಯೂಸ್: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ 52 ಮಂದಿ ಹಾಗೂ ಏ.6 ರಂದು ಒಬ್ಬರು ಸೇರಿದಂತೆ 53 ಮಂದಿ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 270 ಪುರುಷ 21 ಮಹಿಳೆಯರು ಸೇರಿದಂತೆ 300 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಈ ಪೈಕಿ 53 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, 247 ಮಂದಿ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ 226 ಪುರುಷ

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್ Read More »

ಅಬಕಾರಿ ನೀತಿ ಹಗರಣ/ ಯುಗಾದಿಯಂದು ಕೇಜ್ರೀವಾಲ್‍ಗೆ ಸಿಗಬಹುದೇ ಸಿಹಿ ಸುದ್ದಿ?

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಗರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯ ಕುರಿತಾದ ದೆಹಲಿ ಹೈಕೋರ್ಟ್ ನ ತೀರ್ಪು ಇಂದು (ಏಪ್ರಿಲ್ 9) ಪ್ರಕಟಿಸಲಿದೆ. ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಅವರು ತನ್ನ ಬಂಧನ ಮತ್ತು ಇ.ಡಿ ರಿಮ್ಯಾಂಡ್ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್‍ನ ನ್ಯಾ. ಸ್ವರಾನಾ ಕಾಂತ ಶರ್ಮಾ ಅವರುಳ್ಳ ಪೀಠ, ಇಂದು ಅಪರಾಹ್ನ 2.30ರ ಸುಮಾರಿಗೆ ತೀರ್ಪು

ಅಬಕಾರಿ ನೀತಿ ಹಗರಣ/ ಯುಗಾದಿಯಂದು ಕೇಜ್ರೀವಾಲ್‍ಗೆ ಸಿಗಬಹುದೇ ಸಿಹಿ ಸುದ್ದಿ? Read More »

ಬಂಗಾಳದಲ್ಲಿ ಬಿಜೆಪಿ ನಂಬರ್ ಒನ್/ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ದಕ್ಷಿಣ ಭಾರತ ಹಾಗೂ ಈಶಾನ್ಯ ಭಾರತದಲ್ಲಿ ತನ್ನ ಎಲೆ ಬೇರುಗಳನ್ನು ವ್ಯಾಪಕವಾಗಿ ವಿಸ್ತರಿಸಲು ಕಳೆದ ಕೆಲ ಸಮಯದಿಂದ ಕಠಿಣವಾಗಿ ಶ್ರಮಿಸುತ್ತಿದ್ದು, ಅವರ ಶ್ರಮಕ್ಕೆ ಫಲ ಸಿಕ್ಕುವ ಸಮಯ ಬಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯೂ ನಂಬರ್ 1 ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಅವರು 2021 ರ ಬಂಗಾಳ ಚುನಾವಣೆಯ ಪ್ರಚಾರದಲ್ಲಿ ತೃಣಮೂಲ ಮುಖ್ಯಸ್ಥೆ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ

ಬಂಗಾಳದಲ್ಲಿ ಬಿಜೆಪಿ ನಂಬರ್ ಒನ್/ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿಕೆ Read More »

ಅರುಣಾಚಲ ಪ್ರದೇಶ ಎಂದೆಂದಿಗೂ ನಮ್ಮದೇ/ ಚೀನಾಕ್ಕೆ ತಿರುಗೇಟು ನೀಡಿದ ಮೋದಿ

ಸಮಗ್ರ ನ್ಯೂಸ್: ಅರುಣಾಚಲ ಪ್ರದೇಶವು ಹಿಂದೆಯೂ ಭಾರತದ್ದಾಗಿತ್ತು. ಈಗಲೂ ಭಾರತದ್ದಾಗಿದೆ ಹಾಗೂ ಮುಂದೆಯೂ ಭಾರತದ್ದೇ ಆಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಆಗಿ ಚೀನಾಕ್ಕೆ ತಿರುಗೇಟು ನೀಡಿದ್ದಾರೆ. ಅರುಣಾಚಲ ಪ್ರದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೇಂದ್ರದ ಯೋಜನೆಗಳು ಕ್ಷಿಪ್ರವಾಗಿ ಅರುಣಾಚಲ ಪ್ರದೇಶವನ್ನು ತಲುಪುತ್ತಿವೆ. ಇದರೊಂದಿಗೆ ವಿಕಸಿತ ಭಾರತದ ಕಲ್ಪನೆ ಸಾಕಾರಗೊಳಿಸಲಾಗುತ್ತಿದೆ. ವಿಕಸಿತ ಭಾರತ, ವಿಕಸಿತ ಈಶಾನ್ಯ ಎಂಬ ಯೋಜನೆ ಅನ್ವಯ ಕಳೆದ ತಿಂಗಳು ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ 55 ಸಾವಿರ ಕೋಟಿ

ಅರುಣಾಚಲ ಪ್ರದೇಶ ಎಂದೆಂದಿಗೂ ನಮ್ಮದೇ/ ಚೀನಾಕ್ಕೆ ತಿರುಗೇಟು ನೀಡಿದ ಮೋದಿ Read More »