ರಾಷ್ಟ್ರೀಯ

370 ನೇ ವಿಧಿಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಬೇಡಿ/ ಅಮಿತ್ ಷಾ ಎಚ್ಚರಿಕೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ್ದು, ಅದನ್ನು ಮತ್ತೊಮ್ಮೆ ತಿದ್ದುಪಡಿ ಮಾಡುವ ಧೈರ್ಯ ಮಾಡಬೇಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್‍ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡಿದ್ದಾರೆ ಎಂದು ಮಧ್ಯಪ್ರದೇಶದ ಮಂಡ್ಲಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದರು. ಕಾಂಗ್ರೆಸ್ […]

370 ನೇ ವಿಧಿಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಬೇಡಿ/ ಅಮಿತ್ ಷಾ ಎಚ್ಚರಿಕೆ Read More »

18 ವರ್ಷ ತುಂಬಿದವರಿಗೆಲ್ಲಾ ಮತದಾನಕ್ಕೆ ಅವಕಾಶ

ಸಮಗ್ರ ನ್ಯೂಸ್: ಈ ವರ್ಷ 18 ಪ್ರಾಯ ತುಂಬಿದವರಿಗೂ ಚುನಾವಣಾ ಆಯೋಗ ಗುಡ್ ನ್ಯೂಸ್ ನೀಡಿದ್ದು, 2016 ರ ಜನವರಿ 1 ಮಾರ್ಚ್ 31ರ ನಡುವೆ ಜನಿಸಿದವರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಈಗಷ್ಟೇ 18 ವರ್ಷ ಆದವರಿಗೆ ಈಗ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಿದ್ದರೆ ಅವರು ಮೊದಲ ಬಾರಿಗೆ ಮತ ಚಲಾಯಿಸಲು ಮುಂದಿನ ಚುನಾವಣೆಯವರೆಗೆ ಕಾಯಬೇಕಾಗುತ್ತದೆ. ಹೀಗಾಗಿ ಫಾರ್ಮ್ 6 ರ ನಿಬಂಧನೆಯ

18 ವರ್ಷ ತುಂಬಿದವರಿಗೆಲ್ಲಾ ಮತದಾನಕ್ಕೆ ಅವಕಾಶ Read More »

ಲಖನೌ: ಅರ್ಚಕರಂತೆ ವಸ್ತ ಧರಿಸಿ ಕಾಶಿ ದೇಗುಲದಲ್ಲಿ ಕರ್ತವ್ಯ ನಿರ್ವಹಿಸಲಿರುವ ಪೊಲೀಸ್‌ ಸಿಬ್ಬಂದಿ

ಸಮಗ್ರ ನ್ಯೂಸ್: ಕಾಶಿ ದೇಗುಲದಲ್ಲಿ ಪೊಲೀಸರಿಗೆ ಹೊಸ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ಗಂಧ ಅಥವಾ ವಿಭೂತಿ ಹಚ್ಚಿಕೊಂಡು, ಕಿತ್ತಳೆ ಬಣ್ಣದ ವಸ್ತ ಧರಿಸಿಕೊಂಡು ಥೇಟ್‌ ಅರ್ಚಕರಂತೆ ಪ್ರಸಿದ್ಧ ವಾರಾಣಸಿಯ ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯಲ್ಲಿ ಉತ್ತರಪ್ರದೇಶದ ಪೊಲೀಸ್‌ ಸಿಬ್ಬಂದಿ, ಭಕ್ತರು ದರ್ಶನಕ್ಕೆ ಬರುವ ವೇಳೆ ಕರ್ತವ್ಯ ನಿರ್ವಹಿಸಲಿದ್ದಾರೆ.‌ ವಿಶ್ವನಾಥನ ಗರ್ಭಗುಡಿಯ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸ್‌ ಸಿಬ್ಬಂದಿಗೆ ಮಾತ್ರ ಈ ಹೊಸ ವಸ್ತ್ರಸಂಹಿತೆ ಅನ್ವಯಿಸಲಿದೆ. ಗರ್ಭಗುಡಿಯಲ್ಲಿ ಕರ್ತವ್ಯ ನಿಯೋಜಿತ ಮಹಿಳಾ ಪೊಲೀಸ್‌ ಸಿಬ್ಬಂದಿಯೂ

ಲಖನೌ: ಅರ್ಚಕರಂತೆ ವಸ್ತ ಧರಿಸಿ ಕಾಶಿ ದೇಗುಲದಲ್ಲಿ ಕರ್ತವ್ಯ ನಿರ್ವಹಿಸಲಿರುವ ಪೊಲೀಸ್‌ ಸಿಬ್ಬಂದಿ Read More »

ಚಂಡೀಗಢ:ಇಂದಿರಾ ಗಾಂಧಿ ಹಂತಕನ ಪುತ್ರ ಲೋಕಸಭಾ ಚುನಾವಣೆಗೆ ಸ್ಪರ್ಧೆ

ಸಮಗ್ರ ನ್ಯೂಸ್‌ : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹಂತಕನ ಪುತ್ರನೊಬ್ಬ ಪಂಜಾಬ್‌ನ ಸಂಸತ್ ಚುನಾವಣೆಯಲ್ಲಿ ಫರೀದ್‌ಕೋಟ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. 12ನೇ ತರಗತಿಯಲ್ಲಿ ಡ್ರಾಪ್ಔಟ್ ಆಗಿದ್ದ ಸರಬ್ಜಿತ್ ಸಿಂಗ್ ಖಾಲ್ಸಾ (45) ಚುನಾವಣೆಯಲ್ಲಿ ಸ್ಪರ್ಧೆಗಿಳಿದಿದ್ದಾರೆ. ಇವರು ದಿವಂಗತ ಪ್ರಧಾನಿಯ ಇಬ್ಬರು ಹಂತಕರಲ್ಲಿ ಒಬ್ಬನಾದ ಬಿಯಾಂತ್ ಸಿಂಗ್ ಮಗ. 2014 ಮತ್ತು 2009 ರಲ್ಲಿ ಸರಬ್ಜಿತ್ ಸಿಂಗ್ ಖಾಲ್ಸಾ ಅವರು ಅನುಕ್ರಮವಾಗಿ ಫತೇಘರ್ ಸಾಹಿಬ್ (ಮೀಸಲು) ಮತ್ತು ಬಟಿಂಡಾ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

ಚಂಡೀಗಢ:ಇಂದಿರಾ ಗಾಂಧಿ ಹಂತಕನ ಪುತ್ರ ಲೋಕಸಭಾ ಚುನಾವಣೆಗೆ ಸ್ಪರ್ಧೆ Read More »

ಇವಿಎಂ ಕುರಿತು ಅಪಪ್ರಚಾರ/ ಮಾನಿಟರಿಂಗ್ ತಂಡ ರಚಿಸಿದ ಪೊಲೀಸ್ ಇಲಾಖೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ವಿದ್ಯುನ್ಮಾನ ಮತಯಂತ್ರ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ನಿಗಾ ಇರಿಸಿರುವ ಕೇರಳ ಪೊಲೀಸರು ಮುಲಾಜಿಲ್ಲದೆ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ. ಸಮಾಜದಲ್ಲಿ ಒಡಕು, ಘರ್ಷಣೆ, ದ್ವೇಷ ಹುಟ್ಟು ಹಾಕುವ, ಮತದಾರರನ್ನು ದಾರಿ ತಪ್ಪಿಸುವ ಸಂದೇಶ ರವಾನೆ, ಪ್ರಚಾರಕ್ಕೆ ಸಂಬಂಧಿಸಿ ಇದುವರೆಗೆ ಕೇರಳದಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಮಲಪ್ಪುರಂ, ಎರ್ನಾಕುಳಂ ನಗರ, ತ್ರಿಶೂರ್ ನಗರದಲ್ಲಿ ತಲಾ ಎರಡು ಪ್ರಕರಣ ದಾಖಲಾಗಿದ್ದರೆ, ತಿರುವನಂತಪುರಂ ಗ್ರಾಮಾಂತರ, ಕೊಲ್ಲಂ ನಗರ, ಪತ್ತನಂತಿಟ್ಟ, ಅಲಪ್ಪುಳ, ಪಾಲಕ್ಕಾಡ್ ಮತ್ತು

ಇವಿಎಂ ಕುರಿತು ಅಪಪ್ರಚಾರ/ ಮಾನಿಟರಿಂಗ್ ತಂಡ ರಚಿಸಿದ ಪೊಲೀಸ್ ಇಲಾಖೆ Read More »

ನವದೆಹಲಿ: ನಾನು ಹಣಕ್ಕಾಗಿ ಗಂಡನನ್ನು ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ- ಮನ್ನತ್ ಕುಲ್ಹಾರಿಯಾ

ಸಮಗ್ರ ನ್ಯೂಸ್ : ನಾನು ಹಣಕ್ಕಾಗಿ ನನ್ನ ಗಂಡನನ್ನು ಹರಾಜು ಹಾಕಲು ಅಥವಾ ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಇನ್ಸ್ಟಾಗ್ರಾಮ್ನಲ್ಲಿ ಮನ್ನತ್ ಕುಲ್ಹಾರಿಯಾ ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಎಲ್ಲೆಡೆ ಸುದ್ದಿಯಾಗಿದೆ. ಶ್ರೀದೇವಿ ಹಾಗೂ ಅನಿಲ್ ಕಪೂರ್ ಜೊತೆಯಾಗಿ ನಟಿಸಿದ್ದ ಜುಡಾಯಿ ಚಿತ್ರದಲ್ಲಿ ನಾಯಕಿ ಹೇಗೆ ತನ್ನ ಗಂಡನನ್ನು ಮಾರಾಟ ಮಾಡಲು ಯೋಚಿಸುವುದಿಲ್ಲವೋ ಅದೇ ರೀತಿ ನಾನು ಸಹ ಯಾವುದೇ ಆಲೋಚನೆ ಇಲ್ಲದೇ ಆತನನ್ನು ಮಾರುತ್ತೇನೆ. ಆತ ಬೆಲೆಯಿಲ್ಲದ ವಸ್ತು ಆಗಿರುವುದರಿಂದ ನಾನು ಆತನನ್ನು ಮಾರಾಟ

ನವದೆಹಲಿ: ನಾನು ಹಣಕ್ಕಾಗಿ ಗಂಡನನ್ನು ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ- ಮನ್ನತ್ ಕುಲ್ಹಾರಿಯಾ Read More »

ಆಮ್ ಆದ್ಮಿಗೆ ಮತ್ತೊಂದು ಶಾಕ್/ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಜಾ

ಸಮಗ್ರ ನ್ಯೂಸ್: ದೆಹಲಿ ಮದ್ಯನೀತಿ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ವಜಾಗೊಳಿಸಲಾಗಿದೆ. ವಿಭವ್ ಕುಮಾರ್ ನೇಮಕ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎನ್ನುವ ಕಾರಣ ಕೊಟ್ಟು ಅವರನ್ನು ವಿಚಕ್ಷಣ ಇಲಾಖೆ ವಜಾಗೊಳಿಸಿದೆ. ಅರವಿಂದ್ ಕೇಜಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರನ್ನು ಕೆಲವು ದಿನಗಳ ಹಿಂದೆ ಇಡಿ ವಿಚಾರಣೆ ನಡೆಸಿದ ಸಮಯದಲ್ಲಿ ವಿಜಿಲೆನ್ಸ್

ಆಮ್ ಆದ್ಮಿಗೆ ಮತ್ತೊಂದು ಶಾಕ್/ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಜಾ Read More »

ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ/ ಸಚಿವ ದಿನೇಶ್ ಗುಂಡೂರಾವ್ ಆದೇಶ

ಸಮಗ್ರ ನ್ಯೂಸ್: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ರಾಜ್ಯದಲ್ಲಿ ಪತಂಜಲಿಯ ಎಲ್ಲ ಉತ್ಪನ್ನಗಳ ಪರಿಶೀಲನೆ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ. ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಔಷದ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ

ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ/ ಸಚಿವ ದಿನೇಶ್ ಗುಂಡೂರಾವ್ ಆದೇಶ Read More »

ತಿರುಮಲದಲ್ಲಿ ಏಪ್ರಿಲ್ 21ರಿಂದ ಹಲವು ಸೇವೆಗಳು ರದ್ದು

ಸಮಗ್ರ ನ್ಯೂಸ್‌ : ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ನಡೆಯುವ ವಸಂತೋತ್ಸವ ಈ ಬಾರಿ ಏ. 21ರಿಂದ 23ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೇವಾಲಯದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರಿಂದ ಯಾವುದೇ ನಿಯಮಿತ ಸೇವೆಗಳನ್ನು ನಡೆಸಲಾಗುವುದಿಲ್ಲ. ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಬರುವ ಚೈತ್ರ ಮಾಸದ ತ್ರಯೋದಶಿ, ಚತುರ್ದಶಿ ಮತ್ತು ಪೌರ್ಣಮಿಯ ಶುಭ ದಿನಗಳಲ್ಲಿ ವಾರ್ಷಿಕ ಸಲಕಟ್ಲ ವಸಂತೋತ್ಸವವನ್ನು ನಡೆಸಲಾಗುತ್ತದೆ. ಈ ಬಾರಿ ಮೂರು ದಿನಗಳ ಸಲಕಟ್ಲ ವಸಂತೋತ್ಸವವು ಏಪ್ರಿಲ್ 21ರಿಂದ 23ರವರೆಗೆ ವೈಭವದಿಂದ

ತಿರುಮಲದಲ್ಲಿ ಏಪ್ರಿಲ್ 21ರಿಂದ ಹಲವು ಸೇವೆಗಳು ರದ್ದು Read More »

ಅಪಾಯಕಾರಿ ನಾಯಿಗಳ ನಿಷೇಧ/ ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಪಿಟ್‌ಬುಲ್ ಟೆರಿಯರ್, ಅಮೇರಿಕನ್ ಬುಲ್‌ಡಾಗ್ಸ್, ರೊಟ್‌ವೀಲರ್ಸ್ ಮತ್ತು ಮ್ಯಾಸ್ಟಿಫ್ಟ್ ಸೇರಿದಂತೆ ೨೩ ತಳಿಗಳ ಅಪಾಯಕಾರಿ ನಾಯಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಇಂದು ಕರ್ನಾಟಕ ಹೈಕೋರ್ಟ್ ಕೇಂದ್ರದ ಸುತ್ತೋಲೆಯನ್ನು ರದ್ದುಗೊಳಿಸಿದ್ದು, ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ ಸಂಘಟನೆಯೊAದಿಗೆ ಸಮಾಲೋಚಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ, ಕಿಂಗ್ ಸಾಲೊಮನ್ ಡೇವಿಡ್ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ

ಅಪಾಯಕಾರಿ ನಾಯಿಗಳ ನಿಷೇಧ/ ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »