ರಾಷ್ಟ್ರೀಯ

ಮಧ್ಯಪ್ರದೇಶದ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ

ಸಮಗ್ರ ನ್ಯೂಸ್: ಇಂದು ಮಧ್ಯ ಪ್ರದೇಶದ ಭೋಪಾಲ್​ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವೇಗಕ್ಕೆ ದಟ್ಟವಾದ ಹೊಗೆ ಆವರಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿದ ಎಂಬ ವರದಿಯಾಗಿದೆ. ಈ ಕಟ್ಟಡದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಮಂದಿ ಸಚಿವರ ಕಚೇರಿಗಳೂ ಇಲ್ಲಿವೆ. ಕಟ್ಟಡದ ಐದನೇ ಮಹಡಿಯಲ್ಲಿ ಮುಖ್ಯಮಂತ್ರಿ ಕಚೇರಿ ಇದೆ. ಬೆಂಕಿ ಅವಘಡದ ಕಾರಣ ಹಲವು […]

ಮಧ್ಯಪ್ರದೇಶದ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ Read More »

ಹೆದ್ದೆರೆಗಳ ಹೊಡೆತಕ್ಕೆ ಇಬ್ಬಾಗವಾದ ಐತಿಹಾಸಿಕ ವಲಿಯತುರಾ ಸಮುದ್ರ ಸೇತುವೆ

ಸಮಗ್ರ ನ್ಯೂಸ್: ಹೆದ್ದೆರೆಗಳ ಹೊಡೆತಕ್ಕೆ ಕೇರಳದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ತಿರುವನಂತಪುರಂನ ಐತಿಹಾಸಿಕ ವಲಿಯತುರಾ ಸಮುದ್ರ ಸೇತುವೆ ನಲುಗಿ ಇಬ್ಬಾಗವಾಗಿದೆ. 2017ರಲ್ಲಿ ಅಪ್ಪಳಿಸಿದ್ದ ಓಖಿ ಚಂಡಮಾರುತ, 2021ರಲ್ಲಿ ಕಾಣಿಸಿಕೊಂಡಿದ್ದ ಟೌಕ್ಷೆ ಚಂಡಮಾರುತದ ಸಂದರ್ಭವೂ ಈ ಸೇತುವೆ ಹಾನಿಗೊಳಗಾಗಿತ್ತು. ಇದೀಗ ಸೇತುವೆಯ ಒಂದು ಭಾಗ ಸಂಪೂರ್ಣ ಕುಸಿದಿದೆ ಎಂದು ಆಡಳಿತ ಮೂಲಗಳು ತಿಳಿಸಿವೆ. 1825 ರಲ್ಲಿ ಮೊದಲು ಉಕ್ಕಿನಲ್ಲಿ ನಿರ್ಮಾಣವಾಗಿದ್ದ ಈ ಸೇತುವೆ 1987ರಲ್ಲಿ ಎಂ.ವಿ. ಪಂಡಿತ್ ಹೆಸರಿನ ಹಡಗು ಡಿಕ್ಕಿಯಾಗಿ ಹಾನಿಗೊಳಗಾಗಿತ್ತು. ಬಳಿಕ 1957ರಲ್ಲಿ ಪುನರ್ ನಿರ್ಮಾಣಗೊಂಡು

ಹೆದ್ದೆರೆಗಳ ಹೊಡೆತಕ್ಕೆ ಇಬ್ಬಾಗವಾದ ಐತಿಹಾಸಿಕ ವಲಿಯತುರಾ ಸಮುದ್ರ ಸೇತುವೆ Read More »

ಚುನಾವಣಾ ಬಾಂಡ್ ವಹಿವಾಟು/ ಸುಪ್ರೀಂ ಕೋರ್ಟ್‍ನಲ್ಲಿ ಮಾ.11ಕ್ಕೆ ಎಸ್‍ಬಿಐ ಮನವಿಯ ವಿಚಾರಣೆ

ಸಮಗ್ರ ನ್ಯೂಸ್: ಚುನಾವಣಾ ಬಾಂಡ್‍ಗಳಲ್ಲಿ ನಡೆಸಿದ ವಹಿವಾಟುಗಳನ್ನು ಬಹಿರಂಗಗೊಳಿಸುವ ಕುರಿತು ಮತ್ತಷ್ಟು ಕಾಲಾವಕೋಶ ಕೋರಿದ್ದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‍ಬಿಐ) ಮನವಿಯನ್ನು ಸುಪ್ರೀಂ ಕೋರ್ಟ್ ಮಾ.11ಕ್ಕೆ ವಿಚಾರಣೆ ನಡೆಸಲಿದೆ. ಜೊತೆಗೆ ಸುಪ್ರೀಂ ಕೋರ್ಟ್ ಆದೇಶದಂತೆ ಮಾ.6ರೊಳಗೆ ಎಸ್‍ಬಿಐ ಚುನಾವಣಾ ಬಾಂಡ್ ಕುರಿತ ವಹಿವಾಟುಗಳನ್ನು ಬಹಿರಂಗ ಮಾಡಿಲ್ಲ ಎಂದು ಎಡಿಆರ್ ಎಂಬ ಎನ್‍ಜಿಒ ಸಲ್ಲಿಸಿರುವ ನ್ಯಾಯಾಂಗ ನಿಂದನಾ ಅರ್ಜಿಯನ್ನೂ ಆಲಿಸಲಿದೆ. ಸುಪ್ರೀಂ ಕೋರ್ಟ್ ನೀಡಿದ ಆದೇಶದಲ್ಲಿ ಎಸ್‍ಬಿಐ ಮಾ.6ರೊಳಗೆ ಚುನಾವಣಾ ಬಾಂಡ್‍ಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ಬಹಿರಂಗ ಮಾಡಬೇಕು

ಚುನಾವಣಾ ಬಾಂಡ್ ವಹಿವಾಟು/ ಸುಪ್ರೀಂ ಕೋರ್ಟ್‍ನಲ್ಲಿ ಮಾ.11ಕ್ಕೆ ಎಸ್‍ಬಿಐ ಮನವಿಯ ವಿಚಾರಣೆ Read More »

ಒಂದು ದೇಶ ಒಂದು ಚುನಾವಣೆ/ ಶೀಘ್ರದಲ್ಲಿ ವರದಿ ಸಲ್ಲಿಸಲಿರುವ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ

ಸಮಗ್ರ ನ್ಯೂಸ್: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಒಂದು ದೇಶ ಒಂದು ಚುನಾವಣೆ ಯೋಜನೆ ಜಾರಿಗೆ ಸಂಬಂಧಿಸಿದಂತೆ ತನ್ನ ವರದಿಯನ್ನು ತಯಾರಿಸಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಿದೆ ಎಂಬ ಮಾಹಿತಿ ಲಭ್ಯವಿದೆ. ಪ್ರಮುಖವಾಗಿ ಲೋಕಸಭೆ, ವಿಧಾನಸಭೆ ಮತ್ತು ಸ್ಥಳೀಯ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯನ್ನು ತಯಾರಿಸುವುದು, ಸರ್ಕಾರ ಅಲ್ಪಮತಕ್ಕೆ ಕುಸಿದಾಗ ಏಕತಾ ಸರ್ಕಾರವನ್ನು ರಚಿಸುವುದು, ರಾಷ್ಟ್ರಪತಿ ಆಡಳಿತಕ್ಕೆ ಸಂಬಂಧಿಸಿದಂತೆ ಸಂವಿಧಾನದ ಐದು ವಿಧಿಗಳನ್ನು ತಿದ್ದುಪಡಿ ಮಾಡಬೇಕೆಂದು ವರದಿಯಲ್ಲಿ ಉಲ್ಲೇಖಿಸಿದೆ ಎಂಬುದಾಗಿ ತಿಳಿದುಬಂದಿದೆ. ಕೇಂದ್ರ ಕಾನೂನು ಆಯೋಗ

ಒಂದು ದೇಶ ಒಂದು ಚುನಾವಣೆ/ ಶೀಘ್ರದಲ್ಲಿ ವರದಿ ಸಲ್ಲಿಸಲಿರುವ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ Read More »

ಲೋಕಸಭಾ ಚುನಾವಣೆಗೆ ಗ್ಯಾರಂಟಿ ಘೋಷಿಸಿದ ರಾಹುಲ್

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಈಗಾಗಲೇ ಕೆಲವು ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸಮೀಕ್ಷೆಗಳೂ ಬಿಡುಗಡೆಯಾಗುತ್ತಿವೆ. ಈ ನಡುವೆ ಸಿಎಂ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅವರು 5 ಹೊಸ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆಗಳ ಭರ್ತಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು, ಡಿಪ್ಲೊಮಾ ಪದವೀಧರರಿಗೆ ಶಿಷ್ಯವೇತನ ಗಿಗ್ ಕಾರ್ಮಿಕರ ಭದ್ರತೆಗೆ ಕಾನೂನು ಸೇರಿದಂತೆ ವಿವಿಧ ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್

ಲೋಕಸಭಾ ಚುನಾವಣೆಗೆ ಗ್ಯಾರಂಟಿ ಘೋಷಿಸಿದ ರಾಹುಲ್ Read More »

ಭಕ್ತಾಧಿಗಳಿಗೆ ಸಿಹಿ ಸುದ್ದಿ/ ಮೇ 10 ರಂದು ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಬದರಿನಾಥ್-ಕೇದಾರನಾಥ ದೇವಾಲಯ

ಸಮಗ್ರ ನ್ಯೂಸ್: ಹನ್ನೊಂದನೇ ಜ್ಯೋತಿಲಿರ್ಂಗ ಶ್ರೀ ಕೇದಾರನಾಥ ಧಾಮದ ಬಾಗಿಲು ಈ ವರ್ಷ ಮೇ 10 ರಂದು ಬೆಳಗ್ಗೆ 7 ಗಂಟೆಗೆ ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ ಪ್ರಕಟಿಸಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ಧಾಮದ ಬಾಗಿಲು 6 ತಿಂಗಳ ಕಾಲ ಮುಚ್ಚಿರುತ್ತದೆ ಮತ್ತು 6 ತಿಂಗಳ ನಂತರ ತೆಪ್ರಿ ರಾಜ್ ದರ್ಬಾರ್‍ನಲ್ಲಿ ಬಾಗಿಲು ತೆರೆಯುವ ದಿನಾಂಕವನ್ನು ಘೋಷಿಸಲಾಗುತ್ತದೆ. ಇದಕ್ಕಾಗಿ ಮೊದಲಿಗೆ ಡಿಮ್ಮಿ ಧಾರ್ಮಿಕ ಕೇಂದ್ರ ಪಂಚಾಯತ್ ವತಿಯಿಂದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಿಂದ ಗಾನುಘಡ

ಭಕ್ತಾಧಿಗಳಿಗೆ ಸಿಹಿ ಸುದ್ದಿ/ ಮೇ 10 ರಂದು ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಬದರಿನಾಥ್-ಕೇದಾರನಾಥ ದೇವಾಲಯ Read More »

ಸಂಕರ್ಷಣ ಶಾಲಗ್ರಾಮವು ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಶ್ರೀ ಪೇಜಾವರ ಶ್ರೀಗಳು ಶುಕ್ರವಾರದಂದು ಅಯೋಧ್ಯೆಯ ರಾಮನ ಪಾದದಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಿಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.

ಸಂಕರ್ಷಣ ಶಾಲಗ್ರಾಮವು ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ Read More »

ಕೇಂದ್ರ ಸರ್ಕಾರದ ಬಂಪರ್ ಕೊಡುಗೆ/ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ ಮಾಡಿದೆ. ಈಗ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ಇದರ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್ ಹೆಚ್ಚಳದ ಜೊತೆಗೆ ಗ್ರಾಚುಟಿ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಲಿದೆ. ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು

ಕೇಂದ್ರ ಸರ್ಕಾರದ ಬಂಪರ್ ಕೊಡುಗೆ/ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ Read More »

ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ| ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್

ಸಮಗ್ರ ನ್ಯೂಸ್: ಇಂದು ಅಂತರಾಷ್ಟ್ರೀಯ ಮಹಿಳಾ ದಿನ ಈ ದಿನವೇ ಪ್ರಧಾನಿ ಮೋದಿ ದೇಶದ ಜನತೆಗೆ ಉಡುಗೊರೆ ನೀಡಿದ್ದು, ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಒಂದು ಕಡೆ ಲೋಕ ಸಭಾ ಚುನಾವಣೆ ಮುಂದೆ ಬರುತ್ತಿದೆ. ಇದೆ ಸಮಯದಲ್ಲಿ ಸಿಲಿಂಡರ್ ಬೆಲೆ

ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ| ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್ Read More »

ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ರೈತರು, ಯುವಕರು, ಅಸಂಘಟಿತ ವಲಯದವರು, ಯುವೋದ್ಯಮಿಗಳು ಹೀಗೆ ವಿವಿಧ ವಲಯದ ಜನರನ್ನು ಆಕರ್ಷಿಸುವಂತಹ ಗ್ಯಾರಂಟಿ ಭರವಸೆಗಳನ್ನು ಕಾಂಗ್ರೆಸ್ ನೀಡಿದ್ದು, ನರೇಂದ್ರ ಮೋದಿ ನೀಡುತ್ತಿರುವ ಗ್ಯಾರಂಟಿಗಳಿಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಅಸ್ತ್ರ ಬಿಟ್ಟಿದೆ ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ತುಂಬಿಲ್ಲ.

ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್ Read More »