ರಾಷ್ಟ್ರೀಯ

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ನೇಮಕ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಡಿಜಿಪಿ ಹುದ್ದೆಯಿಂದ ರಾಜೀವ್ ಕುಮಾರ್ ಅವರನ್ನು ವಜಾಗೊಳಿಸಿದ ನಂತರ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ಅವರನ್ನು ನೇಮಕ ಮಾಡಲಾಗಿದೆ. ವಿವೇಕ್ ಸಹಾಯ್ ಅವರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಲಾಗಿದ್ದು, ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವಿವೇಕ್ ಸಹಾಯ್ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ. ವಿವೇಕ್ ಸಹಾಯ್ ಅವರು ಪಶ್ಚಿಮ ಬಂಗಾಳ ಕೇಡರ್‍ನ 1988 ಬ್ಯಾಚ್‍ನ ಐಪಿಎಸ್ ಅಧಿಕಾರಿ. ಅವರು ಈ ಹಿಂದೆ ಡೈರೆಕ್ಟರ್ ಜನರಲ್ (ಡಿಜಿ), ಪ್ರಾವಿಶನಿಂಗ್ […]

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ನೇಮಕ Read More »

ಬಿಜೆಪಿ ಸೇರ್ಪಡೆಗೊಂಡ ಸುಪ್ರೀಂ ಕೋರ್ಟ್ ವಕೀಲೆ ಸೀಮಾ ಕುಶ್ವಾಹಾ

ಸಮಗ್ರ ನ್ಯೂಸ್: ನಿರ್ಭಯಾ ಸಾಮೂಹಿಕ ಅತ್ಯಾಚಾರ, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಶ್ರದ್ಧಾ ವಾಕರ್ ಹತ್ಯೆಯಂತಹ ಪ್ರಮುಖ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದ ಮಂಡಿಸಿದ್ದ ಸುಪ್ರೀಂ ಕೋರ್ಟ್ ವಕೀಲೆ ಮತ್ತು ಬಿಎಸ್ಪಿ ನಾಯಕಿ ಸೀಮಾ ಕುಶ್ವಾಹಾ ಅವರು ಸೋಮವಾರ ಬಿಜೆಪಿ ಸೇರ್ಪಡೆಗೊಂಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಪಕ್ಷಕ್ಕೆ ಸ್ವಾಗತಿಸಿದರು. ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ಕ್ಕೆ ಕುಶ್ವಾಹಾ ಅವರು 2022 ರ ಜನವರಿಯಲ್ಲಿ ಸೇರಿದ್ದರು. ಸೀಮಾ ಅವರು ನಿರ್ಭಯಾ ಜ್ಯೋತಿ ಟ್ರಸ್ಟ್ ಸ್ಥಾಪಿಸಿದರು

ಬಿಜೆಪಿ ಸೇರ್ಪಡೆಗೊಂಡ ಸುಪ್ರೀಂ ಕೋರ್ಟ್ ವಕೀಲೆ ಸೀಮಾ ಕುಶ್ವಾಹಾ Read More »

ಪರಿಸರ ಸ್ನೇಹಿ ಚುನಾವಣೆ/ ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ ಮುಂದಾದ ಆಯೋಗ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯನ್ನು ಪರಿಸರ ಸ್ನೇಹಿಯಾಗಿಸಲು ಚುನಾವಣಾ ಆಯೋಗ ಟೊಂಕಕಟ್ಟಿದ್ದು, ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ, ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಒತ್ತು ನೀಡುವ ಜೊತೆಗೆ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ಕಡಿವಾಣ, ಕಾರ್ ಪೂಲಿಂಗ್‍ಗೆ ಉತ್ತೇಜನ ಸೇರಿ ಹಲವು ಕ್ರಮಗಳಿಗೆ ಮುಂದಾಗಿದೆ. ಇದರ ಜೊತೆಗೆ, ಪರಿಸರ ಸ್ನೇಹಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳೂ ಸಾಥ್ ನೀಡಬೇಕು ಎಂದೂ ಅವರು ಕೋರಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಪ್ರತಿ ಕಾರ್ಯಕ್ರಮಗಳೂ ಆದಷ್ಟು ಪರಿಸರ ಸ್ನೇಹಿಯಾಗಿರಬೇಕು ಎಂಬುದು ಆಯೋಗದ

ಪರಿಸರ ಸ್ನೇಹಿ ಚುನಾವಣೆ/ ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ ಮುಂದಾದ ಆಯೋಗ Read More »

ಕಮಲ್‍ನಾಥ್‍ಗೆ ಶಾಕ್ ಕೊಟ್ಟ ಬೆಂಬಲಿಗರು/ ಆಪ್ತ ಸಹಾಯಕ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಕಮಲನಾಥ್ ಅವರ ಆಪ್ತ ಸಹಾಯಕ ಸೇರಿದಂತೆ ಹಲವು ಕಾರ್ಯಕರ್ತರು ಇಂದು ಭೋಪಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಕಾಂಗ್ರೆಸ್ ವಕ್ತಾರ ಸೈಯದ್ ಜಾಫರ್ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿ.ಡಿ. ಶರ್ಮಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ. ಛಿಂದ್ವಾರಾ ಮೂಲದ ಜಾಫರ್ ಅವರನ್ನು ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ಆಪ್ತ ಸಹಾಯಕ ಎಂದೇ ಪರಿಗಣಿಸಲಾಗಿತ್ತು.

ಕಮಲ್‍ನಾಥ್‍ಗೆ ಶಾಕ್ ಕೊಟ್ಟ ಬೆಂಬಲಿಗರು/ ಆಪ್ತ ಸಹಾಯಕ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ Read More »

ಬದಲಾದ ಕಾಶ್ಮೀರ/ ಕಣಿವೆ ರಾಜ್ಯದಲ್ಲೀಗ ಫಾರ್ಮುಲಾ 4 ಕಾರುಗಳ ಘರ್ಜನೆ

ಸಮಗ್ರ ನ್ಯೂಸ್: ಕಲ್ಲೆಸೆತಕ್ಕೆ ಸುದ್ದಿಯಾಗುತ್ತಿದ್ದ ಕಾಶ್ಮೀರದ ಬೀದಿಗಳಲ್ಲಿ ಇದೇ ಮೊದಲ ಬಾರಿಗೆ ಫಾರ್ಮುಲಾ 4 ಕಾರು ರೇಸ್ ಆಯೋಜಿಸಲಾಗಿದ್ದು, ಕಣಿವೆ ರಾಜ್ಯ ಕಾಶ್ಮೀರದ ಶ್ರೀನಗರ ದಾಲ್ ಸರೋವರದ ದಡದಲ್ಲಿ ಫಾರ್ಮುಲಾ 4 ಕಾರುಗಳ ಘರ್ಜನೆ ಜಗತ್ತಿನ ಗಮನಸೆಳೆದಿದೆ. ದಾಲ್ ಸರೋವರದ ದಡದಲ್ಲಿರುವ ಲಲಿತ್ ಘಾಟ್‍ನಿಂದ ನೆಹರೂ ಪಾರ್ಕ್‍ವರೆಗಿನ 1.7 ಕಿಮೀ ಟ್ರ್ಯಾಕ್‍ನಲ್ಲಿ ಸ್ಟೀಕ್ ರೇಸಿಂಗ್ ಕಾರುಗಳು ಭರ್ಜರಿ ಸದ್ದು ಮಾಡಿದವು. ಪ್ರಧಾನಿ ನರೇಂದ್ರ ಮೋದಿ ಖುದ್ದು ಈ ಕುರಿತು ಸಂತಸ ವ್ಯಕ್ತಪಡಿಸಿದ್ದು, ತುಂಬಾ ಸಂತೋಷವಾಗಿದೆ. ಇದು ಜಮ್ಮು

ಬದಲಾದ ಕಾಶ್ಮೀರ/ ಕಣಿವೆ ರಾಜ್ಯದಲ್ಲೀಗ ಫಾರ್ಮುಲಾ 4 ಕಾರುಗಳ ಘರ್ಜನೆ Read More »

ಇನ್ಮುಂದೆ ಭಾನುವಾರವೂ ಅಂಚೆ ಕಚೇರಿಗಳು ಓಪನ್

ಸಮಗ್ರ ನ್ಯೂಸ್ : ಇತ್ತೀಚೆಗೆ ಪೋಸ್ಟ್ ಆಫೀಸ್ ಕೆಲಸಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಗ್ರಾಹಕರ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಅಂಚೆ ಇಲಾಖೆ ಭಾನುವಾರದಂದು ರಾಜ್ಯದಾದ್ಯಂತ ಆಯ್ದ ಕೆಲವು ಅಂಚೆ ಕಚೇರಿಗಳನ್ನು ತೆರೆಯಲು ಚಿಂತನೆ ನಡೆಸುತ್ತಿದೆ. ವಾರದ ನಿಯಮಿತ ಕೆಲಸದ ದಿನದಂದು ಅವುಗಳನ್ನು ಮುಚ್ಚಲಾಗುತ್ತದೆ, ಇದರಿಂದಾಗಿ ಸಾರ್ವಜನಿಕರಿಗೆ ವಾರದ ಎಲ್ಲಾ ದಿನಗಳಲ್ಲೂ ಕನಿಷ್ಠ ತಮ್ಮ ನಗರಗಳಲ್ಲಿ ಕೆಲವು ಸ್ಥಳಗಳಲ್ಲಿ ಅಂಚೆ ಸೇವೆಗಳು ಲಭ್ಯವಿರುತ್ತವೆ. ಭಾನುವಾರ ಕಾರ್ಯನಿರ್ವಹಿಸುವ ಅಂಚೆ ಕಚೇರಿಗಳಲ್ಲಿ ಹಣಕಾಸಿನ ಸೇವೆಗಳ ಅಗತ್ಯತೆಯನ್ನು ಸಾರ್ವಜನಿಕರು ಬಯಸುತ್ತಿದ್ದಾರೆ. ಆದ್ದರಿಂದ ನಾವು ಈಗ

ಇನ್ಮುಂದೆ ಭಾನುವಾರವೂ ಅಂಚೆ ಕಚೇರಿಗಳು ಓಪನ್ Read More »

ನಿನ್ನೆಯಿಂದ ನೀತಿ ಸಂಹಿತೆ ಜಾರಿ: ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಪೊಲೀಸ್ ಠಾಣೆಗಳಿಗೆ ಸೂಚನೆ

ಸಮಗ್ರ ನ್ಯೂಸ್: ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ನಿನ್ನೆ ಘೋಷಣೆ ಮಾಡಿದೆ. ಚುನಾವಣಾ ತಯಾರಿ, ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ. ನಿನ್ನೆಯಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ರಾಜ್ಯದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಸದ್ಯ ಎಲ್ಲಾ ಪೊಲೀಸ್ ಠಾಣೆಗಳಿಗೂ ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಲೈಸೆನ್ಸ್ ಇರುವ ಗನ್​​ಗಳು, ಶಸ್ತ್ರಗಳನ್ನು ಹೊಂದಿರುವ ಎಲ್ಲಾ ನಾಗರಿಕರು ತಮ್ಮ ಶಸ್ತ್ರಗಳನ್ನ ಆಯಾ ಠಾಣೆಗಳಿಗೆ ಜಮಾ ಮಾಡುವಂತೆ ಸೂಚಿಸಲಾಗಿದೆ.ನಿನ್ನೆ ರಾಜ್ಯ ಮುಖ್ಯ

ನಿನ್ನೆಯಿಂದ ನೀತಿ ಸಂಹಿತೆ ಜಾರಿ: ನಿವಾಸಿಗಳ ಬಳಿ ಇರುವ ಗನ್ ವಶಕ್ಕೆ ಪಡೆಯುವಂತೆ ಪೊಲೀಸ್ ಠಾಣೆಗಳಿಗೆ ಸೂಚನೆ Read More »

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ಸಮಗ್ರ ನ್ಯೂಸ್: ‘ದತ್ತಾಜೀ’ ಎಂದೇ ಸಂಘ ಪರಿವಾರ ವಲಯದಲ್ಲಿ ಚಿರಪರಿಚಿತರಾಗಿರುವ ದತ್ತಾತ್ರೇಯ ಹೊಸಬಾಳೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ಪುನರಾಯ್ಕೆ ಆಗಿದ್ದಾರೆ.ನಾಗಪುರದ ರೇಶಿಂಬಾಗ್ ನ ಸ್ಮೃತಿ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಬೈಠಕ್ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಜವಾಬ್ದಾರಿ ನೀಡಲಾಗಿದೆ. ದತ್ತಾತ್ರೇಯ ಹೊಸಬಾಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆಯವರು. 1968ರ ವೇಳೆ ವಿದ್ಯಾರ್ಥಿ ದೆಸೆಯಿಂದಲೇ ಆರೆಸ್ಸೆಸ್ ಮತ್ತು ಎಬಿವಿಪಿ ಜೊತೆ ನಿಕಟ ಬಾಂಧವ್ಯ ಹೊಂದಿದ ಇವರು, ಬೆಂಗಳೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್‍ನಲ್ಲಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ Read More »

ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ

ಸಮಗ್ರ ನ್ಯೂಸ್: ಪೌರತ್ವ ಕಾಯ್ದೆ ಜಾರಿ ಬೆನ್ನಲ್ಲೇ ಗುಜರಾತ್‍ನ ಅಹಮದಾಬಾದ್‍ನಲ್ಲಿ ಪಾಕಿಸ್ಥಾನ ಮೂಲದ 18 ಮಂದಿ ಹಿಂದು ನಿರಾಶ್ರಿತರಿಗೆ ಭಾರತೀಯ ಪೌರತ್ವ ಪ್ರದಾನ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶೇಷ ಶಿಬಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಈ ನಿರಾಶ್ರಿತರಿಗೆ ಪೌರತ್ವ ನೀಡಿದರು. 2016 ಮತ್ತು 2018ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಗುಜರಾತ್‍ನ ಅಹಮದಾಬಾದ್, ಗಾಂಧಿನಗರ ಮತ್ತು ಕಚ್‍ನ ಜಿಲ್ಲಾಧಿಕಾರಿಗಳು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು

ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ Read More »

ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ

ಸಮಗ್ರ ನ್ಯೂಸ್: ಕೇಂದ್ರದ ಸಚಿವ ಸಂಪುಟ ಚುನಾವಣಾ ಆಯೋಗದ ಶಿಫಾರಸನ್ನು ರಾಷ್ಟ್ರಪತಿಯವರಿಗೆ ರವಾನಿಸಿದ್ದು, ಈ ಲೋಕಸಭಾ ಚುನಾವಣೆಯ ಪ್ರಕ್ರಿಯೆ ಭಾನುವಾರ ಆರಂಭಗೊಂಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಏಳು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣಾ ಸಂಬಂಧ ಅಧಿಸೂಚನೆ ಹೊರಡಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ. ಅಧಿಸೂಚನೆ ನಂತರದಲ್ಲಿ ನಿರ್ದಿಷ್ಟ ಕಾಲಮಿತಿಯಲ್ಲಿ ನಾಮನಿರ್ದೇಶನ ಪ್ರಕ್ರಿಯೆ ನಡೆಯುತ್ತದೆ. ಲೋಕಸಭಾ ಚುನಾವಣೆಯು ಮೊದಲ ಹಂತದಲ್ಲಿ ಏ.19ರಂದು 102 ಕ್ಷೇತ್ರಗಳಿಗೆ ನಡೆಯಲಿದ್ದು, ಮಾ.20ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 14(2)ರ

ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ Read More »