ರಾಷ್ಟ್ರೀಯ

ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ

ಸಮಗ್ರ ನ್ಯೂಸ್: ಮಾಜಿ ಸಂಸದೆ ನಟಿ ಜಯಪ್ರದಾ, 2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಚಾರಣೆಗಾಗಿ ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಪ್ರಾಸಿಕ್ಯೂಷನ್ ಅಧಿಕಾರಿ ನೀರಜ್ ಕುಮಾರ್, ಜಯಪ್ರದಾ ಅವರು ತಮ್ಮ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿದೆ ಎಂದು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಅಭ್ಯರ್ಥಿಯಾಗಿದ್ದ ಜಯಪ್ರದಾ ಅವರು ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ ಎಂದು ಕೆಮಿ ಮತ್ತು […]

ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ Read More »

ವಿಚಾರಣೆಗೆ ಹಾಜರಾಗದ ಅರವಿಂದ್ ಕೇಜ್ರಿವಾಲ್/ ಹೊಸ ದೂರು ಸಲ್ಲಿಸಿದ ಇಡಿ

ಸಮಗ್ರ ನ್ಯೂಸ್: ಜಾರಿ ನಿರ್ದೇಶನಾಲಯ(ಇಡಿ)ವು, ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿದೆ. ಆಮ್ ಆದ್ಮ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರು 4 ರಿಂದ 8 ರವರೆಗಿನ ಸಮನ್ಸ್‍ಗಳನ್ನು ಗೌರವಿಸಿಲ್ಲ ಎಂದು ಈ ಹೊಸ ದೂರಿನಲ್ಲಿ ಇಡಿ ಆರೋಪಿಸಿದೆ. ಕೇಜ್ರಿವಾಲ್ ಅವರಿಗೆ ದೆಹಲಿ ಅಬಕಾರಿ

ವಿಚಾರಣೆಗೆ ಹಾಜರಾಗದ ಅರವಿಂದ್ ಕೇಜ್ರಿವಾಲ್/ ಹೊಸ ದೂರು ಸಲ್ಲಿಸಿದ ಇಡಿ Read More »

370ನೇ ವಿಧಿ ರದ್ದಾದ ಬಳಿಕ ಪ್ರಧಾನಿ ಮೋದಿ ಮೊದಲ ಕಾಶ್ಮೀರ ಭೇಟಿ/ ಬಹು ಅಭಿವೃದ್ಧಿ ಯೋಜನೆಗಳ ಅನಾವರಣ

ಸಮಗ್ರ ನ್ಯೂಸ್: ಸಾಂವಿಧಾನಿಕವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರ 2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು. ಇಂದು ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಕಸಿತ್ ಭಾರತ, ವಿಕಸಿತ್ ಜಮ್ಮು ಕಾಶ್ಮೀರ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ-ಆರ್ಥಿಕತೆಯನ್ನು ಉತ್ತೇಜಿಸಲು ಸುಮಾರು 5,000 ಕೋಟಿ ರು. ಯೋಜನೆಯೊಂದಿಗೆ, ಬಹು

370ನೇ ವಿಧಿ ರದ್ದಾದ ಬಳಿಕ ಪ್ರಧಾನಿ ಮೋದಿ ಮೊದಲ ಕಾಶ್ಮೀರ ಭೇಟಿ/ ಬಹು ಅಭಿವೃದ್ಧಿ ಯೋಜನೆಗಳ ಅನಾವರಣ Read More »

ಕೃತಕ ಬುದ್ಧಿಮತ್ತೆಯ (ಎಐ) ರೋಬೋ ಶಿಕ್ಷಕಿ/ ಕೇರಳದ ಶಾಲೆಯಲ್ಲಿ ಮೊದಲ ಪಾಠ

ಸಮಗ್ರ ನ್ಯೂಸ್: ಟೀವಿ ನಿರೂಪಣೆ ಸೇರಿ ವಿವಿಧ ವಲಯಗಳಲ್ಲಿ ಪ್ರಸಿದ್ಧಿ ಪಡೆದಿದ್ದ ಎಐ ಮನುಷ್ಯರು ಈಗ ಮೊದಲ ಬಾರಿ ಶಾಲೆಗೂ ಲಗ್ಗೆ ಇಟ್ಟಿದ್ದು, ಕೃತಕ ಬುದ್ಧಿಮತ್ತೆಯ ರೋಬೋ ಶಿಕ್ಷಕಿಯೊಬ್ಬಳನ್ನು ಕೇರಳದ ತಿರುವನಂತಪುರದಲ್ಲಿರುವ ಶಾಲೆಯೊಂದು ಪರಿಚಯಿಸಿದೆ. ಮೇಕರ್ಸ್ ಎಜುಟೆಕ್ ಎಂಬ ತಂತ್ರಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿರುವ ಎಐ ಶಿಕ್ಷಕಿಗೆ ಐರಿಸ್ ಎಂದು ಹೆಸರಿಡಲಾಗಿದೆ. ಇದನ್ನು ಕಡುವಾಯಿಲ್ ತಂಗಳ್ ಚಾರಿಟೇಬಲ್ ಟ್ರಸ್ಟ್‍ನ ಶಾಲೆಯಲ್ಲಿ ಇರಿಸಲಾಗಿದೆ. ಕೇರಳ ರಾಜ್ಯದಲ್ಲಿ ಮತ್ತು ಪ್ರಾಯಶಃ ಇಡೀ ದೇಶದಲ್ಲೇ ಮೊದಲ ಹುಮನಾಯ್ಡ್ ರೋಬೋಟ್ ಶಿಕ್ಷಕಿ ಏಂಬ ಹಿರಿಮೆ

ಕೃತಕ ಬುದ್ಧಿಮತ್ತೆಯ (ಎಐ) ರೋಬೋ ಶಿಕ್ಷಕಿ/ ಕೇರಳದ ಶಾಲೆಯಲ್ಲಿ ಮೊದಲ ಪಾಠ Read More »

ಸರ್ವರ್ ವ್ಯತ್ಯಯದಿಂದ‌ ನಷ್ಟವಾಗಿದ್ದೆಷ್ಟು ಗೊತ್ತಾ? ಒಂದು ಗಂಟೆಲಿ ಹಿಂಗಾದ್ರೆ ಹೆಂಗೆ!?

ಸಮಗ್ರ ನ್ಯೂಸ್: ವಿಶ್ವದಾದ್ಯಂತ ಜನಪ್ರಿಯ ಜಾಲತಾಣವಾದ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಸರ್ವರ್‌ ಡೌನ್ ಸಮಸ್ಯೆಯಿಂದ ಬಳಕೆದಾರರು ಪರದಾಡುವಂತಾಗಿತ್ತು. ಅಷ್ಟೇ ಅಲ್ಲ ಷೇರುಗಳ ಬೆಲೆಯೂ ಗಣನೀಯ ಕುಸಿತ ಕಂಡಿದ್ದು, ಇದರಿಂದ 829 ಕೋಟಿ ರೂಪಾಯಿ ನಷ್ಟವಾಗುವ ಮೂಲಕ ಮಾರ್ಕ್‌ ಜುಗರ್‌ ಬರ್ಗ್‌ ಒಡೆತನದ ಮೆಟಾ ಮತ್ತೊಮ್ಮೆ ದೊಡ್ಡ ಸುದ್ದಿಯಲ್ಲಿದ್ದಂತಾಗಿದೆ. ಮೆಟಾದ ಜನಪ್ರಿಯ ಜಾಲತಾಣಗಳಾದ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಮತ್ತು ಥ್ರೆಡ್ಸ್‌ ಭಾರತ ಸೇರಿದಂತೆ ಜಾಗತಿಕವಾಗಿ ಸರ್ವರ್‌ ಡೌನ್‌ ಆಗಿ ಎಲ್ಲರ ಖಾತೆಗಳು (ಮಂಗಳವಾರ ರಾತ್ರಿ 8.53) ದಿಢೀರನೆ ಲಾಗ್‌

ಸರ್ವರ್ ವ್ಯತ್ಯಯದಿಂದ‌ ನಷ್ಟವಾಗಿದ್ದೆಷ್ಟು ಗೊತ್ತಾ? ಒಂದು ಗಂಟೆಲಿ ಹಿಂಗಾದ್ರೆ ಹೆಂಗೆ!? Read More »

ಬೀಫ್ ರಪ್ತಿನಲ್ಲಿ‌ 2ನೇ ಸ್ಥಾನಕ್ಕೇರಿದ ಭಾರತ

ಸಮಗ್ರ ವಾರ್ತೆ: 2023ರಲ್ಲಿ ಬೀಫ್ ರಫ್ತುದಾರರ ಪೈಕಿ ಭಾರತ ಮತ್ತೊಂದು ಪ್ರಮುಖ ರಫ್ತು ದೇಶವಾಗಿ ಹೊರ ಹೊಮ್ಮಿದ್ದು, ಕೋಣದ ಮಾಂಸವನ್ನು ರಫ್ತು ಮಾಡುತ್ತಿದೆ. ಭಾರತದ ನಂತರದ ಸ್ಥಾನದಲ್ಲಿ ಅಮೆರಿಕಾ ಮತ್ತು ಆಸ್ಟ್ರೇಲಿಯಾ ದೇಶಗಳಿವೆ. ಮೊದಲನೇ ಸ್ಥಾನವನ್ನು ಬ್ರೆಝಿಲ್ ಪಡೆದಿದೆ. ಅತೀ ಹೆಚ್ಚು ಬೀಫ್ ಉತ್ಪಾದನೆಯಲ್ಲಿ ಅಮೆರಿಕಾ ಅಗ್ರ ಕ್ರಮಾಂಕದಲ್ಲಿದ್ದು, ಅದು ಉತ್ಪಾದಿಸುವ ಬಹುತೇಕ ಬೀಫ್ ಅನ್ನು ದೇಶೀಯ ಬಳಕೆಗೇ ಮಾರಾಟ ಮಾಡುತ್ತದೆ ಎಂದು thewire ವರದಿ ಮಾಡಿದೆ. 2023ರ ಎಪ್ರಿಲ್ ವರೆಗೆ ಭಾರತವು 14.75 ಲಕ್ಷ ಟನ್

ಬೀಫ್ ರಪ್ತಿನಲ್ಲಿ‌ 2ನೇ ಸ್ಥಾನಕ್ಕೇರಿದ ಭಾರತ Read More »

ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋ ರೈಲು/ ಇಂದು ಮೋದಿ ಉದ್ಘಾಟನೆ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಅತೀ ದೊಡ್ಡ ನದಿ ಹೂಗ್ಲಿ ನದಿಯ ಅಡಿಯಿಂದ ಸಾಗುವ ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋ ರೈಲು ಉದ್ಘಾಟನೆಗೆ ಸಜ್ಜಾಗಿದ್ದು, ಇಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಒಟ್ಟು 6 ನಿಲ್ದಾಣಗಳನ್ನು ಹೊಂದಿರುವ ಕೋಲ್ಕತಾ ಹಾಗೂ ಹೌರಾ ನಗರವನ್ನು ಸಂಪರ್ಕಿಸುವ ಈ ಮೆಟ್ರೋ ರೈಲು ಪಶ್ಚಿಮ ಬಂಗಾಳದ ಜೀವನಾಡಿ ಎಂದೇ ಗುರುತಿಸಿಕೊಂಡಿದೆ. ಈ ಎರಡು ಅವಳಿ ನಗರಕ್ಕೆ ಸಂಪರ್ಕ ಕಲ್ಪಿಸುವ ಈ ಮೆಟ್ರೋ ರೈಲು ಹೂಗ್ಲಿ ನದಿಯ ನೀರಿನೊಳಗಿನಿಂದ ಸಾಗಲಿದೆ. ಒಟ್ಟು

ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋ ರೈಲು/ ಇಂದು ಮೋದಿ ಉದ್ಘಾಟನೆ Read More »

ಭಾರತ ಸೇರಿದಂತೆ ವಿಶ್ವದಾದ್ಯಂತ ಪೇಸ್ ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್

ಸಮಗ್ರ ನ್ಯೂಸ್: ವಿಶ್ವದ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಂ ಬಳಕೆದಾರರಿಗೆ ಅಂಡ್ರಾಯ್ಡ್​​, ಐಒಎಸ್​ ಹಾಗೂ ಪಿಸಿಯಲ್ಲಿ ಬಳಸಲು ಸಮಸ್ಯೆ ಎದುರಾಗಿದೆ. ಜಗತ್ತಿನಾದ್ಯಂತ ರಾತ್ರಿ 9:00 ಗಂಟೆ ಸುಮಾರಿಗೆ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣ ಎಕ್ಸ್​ (ಈ ಹಿಂದೆ ಟ್ವಿಟರ್​)ನಲ್ಲಿ #Zuckerberg, #facebookDown, #InstagramDown ಎಂಬ ಹ್ಯಾಶ್​​ಟ್ಯಾಗ್ ಟ್ರೆಂಡ್​ ಆಗುತ್ತಿದೆ. ಜಗತಿನಾದ್ಯಂತ ಸುಮಾರು 200ಕೋಟಿಗೂ ಅಧಿಕ ಫೇಸ್​ಬುಕ್​ ಬಳಕೆದಾರರಿದ್ದು, ಇಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಆಯಪ್​ಗಳು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ. ಏಕಾಏಕಿ

ಭಾರತ ಸೇರಿದಂತೆ ವಿಶ್ವದಾದ್ಯಂತ ಪೇಸ್ ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ Read More »

ಮಾಲ್ಡೀವ್ಸ್‍ಗೆ ಮತ್ತೆ ಸೆಡ್ಡು ಹೊಡೆದ ಭಾರತ/ ಮಿನಿಕಾಯ್‍ನಲ್ಲಿ ವಾಯುನೆಲೆ ಸ್ಥಾಪನೆ

ಸಮಗ್ರ ನ್ಯೂಸ್: ಮಾಲ್ಡೀವ್ಸ್‍ಗೆ ಸನಿಹದಲ್ಲೇ, ಲಕ್ಷದ್ವೀಪದ ದಕ್ಷಿಣ ಭಾಗದಲ್ಲಿರುವ ಕೊನೆಯ ದ್ವೀಪ ಪ್ರದೇಶ ಮಿನಿಕಾಯ್‍ನಲ್ಲಿ ಐಎನ್‍ಎಸ್ ಜಟಾಯು ಹೆಸರಿನ ನೌಕಾನೆಲೆಯೊಂದನ್ನು ಸ್ಥಾಪನೆ ಮಾಡುವ ಮೂಲಕ ದ್ವೀಪರಾಷ್ಟ್ರಕ್ಕೆ ಮತ್ತೆ ಸಡ್ಡು ಹೊಡೆಯಲು ಭಾರತ ಮಂದಾಗಿದೆ. ಮಾಲ್ಡೀವ್ಸ್‍ನಿಂದ ಉತ್ತರ ದಿಕ್ಕಿಗೆ ಉದ್ದೇಶಿತ ಸ್ಥಳ 130 ಕಿ.ಮೀ. ದೂರದಲ್ಲಿದೆ. ಅರಬ್ಬೀ ಸಮುದ್ರದಲ್ಲಿ ಜಟಾಯು ವಾಯುನೆಲೆಯಿಂದ ಭಾರತದ ಬಲ ಮತ್ತಷ್ಟು ವೃದ್ಧಿಯಾಗಲಿದ್ದು, ಹಡಗು ಕಳ್ಳರು ಹಾಗೂ ಮಾದಕ ವಸ್ತು ದಂಧೆ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಪುಷ್ಟಿ ಸಿಗಲಿದೆ. ಇದರ ಜತೆಗೆ ಭಾರತದ ಮುಖ್ಯ

ಮಾಲ್ಡೀವ್ಸ್‍ಗೆ ಮತ್ತೆ ಸೆಡ್ಡು ಹೊಡೆದ ಭಾರತ/ ಮಿನಿಕಾಯ್‍ನಲ್ಲಿ ವಾಯುನೆಲೆ ಸ್ಥಾಪನೆ Read More »

ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದವನು ಅರೆಸ್ಟ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಿದ ಮೊಹಮ್ಮದ್ ರಸೂಲ್ ಕಡ್ದಾರೆನನ್ನು (45) ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರದ ರಂಗಂಪೇಟೆ ನಿವಾಸಿಯಾಗಿರುವ ರಸೂಲ್ ಕಡ್ದಾರೆ ಹೈದರಾಬಾದ್​ನಲ್ಲಿ ಕೂಲಿ ಮಾಡುತ್ತಿದ್ದನು. ಕೈಯಲ್ಲಿ ತಲ್ವಾರ್ ಹಿಡಿದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ “ಕಾಂಗ್ರೆಸ್ ಹೀಗೆಲ್ಲ ಆಡಳಿತ ಮಾಡಿಲ್ಲ. ನರೇಂದ್ರ ಮೋದಿ ಪ್ರಧಾನಿ ಆಗದ್ದೇನೆ ಎಂದು ನಾಟಕ ಮಾಡುತ್ತಿದ್ದಿಯಾ?

ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದವನು ಅರೆಸ್ಟ್ Read More »