ದೆಹಲಿಯಲ್ಲಿ ಕೇರಳ ಸರ್ಕಾರದ ಪ್ರತಿಭಟನೆ
ಸಮಗ್ರ ನ್ಯೂಸ್: ತೆರಿಗೆ ಹಂಚಿಕೆ ವಿಚಾರದಲ್ಲಿ ನಿನ್ನೆ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಇಂದು ತೆರಿಗೆ ಅನ್ಯಾಯದ ವಿರುದ್ಧ ಕೇರಳದ ಆಡಳಿತಾರೂಢ ಎಲ್ಡಿಎಫ್ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದೆ. ‘ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ’ ಎಂಬ ಹೆಸರಿನಡಿ ಹೋರಾಟ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಭಾಗಿಯಾದರು. ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ದೆಹಲಿಯಲ್ಲಿ ಕೇರಳ ಸರ್ಕಾರದ ಪ್ರತಿಭಟನೆ Read More »










