ರಾಷ್ಟ್ರೀಯ

ಭಾರತೀಯ ಸೇನಾ ತರಬೇತಿ ವಿಮಾನ ಪತನ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ಪತನಗೊಂಡಿದೆ. ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೈಲಟ್ ವಿಮಾನದಿಂದ ಹೊರಗೆ ಜಿಗಿದಿದ್ದಾರೆಯೇ ಎಂಬುದು ಪೊಲೀಸರಿಗೆ ಖಚಿತವಾಗಿಲ್ಲ.

ಭಾರತೀಯ ಸೇನಾ ತರಬೇತಿ ವಿಮಾನ ಪತನ Read More »

‘ತ್ರಿ’ ವಿಕ್ರಮ ಮೆರೆದ ಬಿಜೆಪಿ| ದೇಶಕ್ಕೆ ಮೋದಿಯೇ ಗ್ಯಾರಂಟಿ ಟ್ರೆಂಡ್| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ

ಸಮಗ್ರ ನ್ಯೂಸ್: ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಬಿಜೆಪಿ ನಾಯಕರು ದೇಶಕ್ಕೆ “ಮೋದಿಯೇ ಗ್ಯಾರಂಟಿ” ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ. ಲೋಕಸಭೆಗೆ ಚುನಾವಣೆ ನಡೆಯುವ ಮುನ್ನದ ಸೆಮಿಫೈನಲ್‌ ಎಂದೇ ಬಿಂಬಿತವಾಗಿದ್ದ ಮೂರು ರಾಜ್ಯಗಳಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ #ModikiGuarantee ಟ್ರೆಂಡ್‌ ಆಗಿದೆ. ಬಿಜೆಪಿ ನಾಯಕರು ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್‌ ಈಗ ನಡೆಯುತ್ತಿರುವ ಚುನಾವಣಾ ರಾಜ್ಯಗಳಲ್ಲಿ

‘ತ್ರಿ’ ವಿಕ್ರಮ ಮೆರೆದ ಬಿಜೆಪಿ| ದೇಶಕ್ಕೆ ಮೋದಿಯೇ ಗ್ಯಾರಂಟಿ ಟ್ರೆಂಡ್| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ Read More »

ತೆಲಂಗಾಣ ಸಿಎಂ ಆಗಿ ನಾಳೆ ರೇವಂತ್ ರೆಡ್ಡಿ ಪ್ರಮಾಣವಚನ

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದು ನಾಳೆ ಸರಳ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ನಿಟ್ಟಿನಲ್ಲಿ ವ್ಯವಸ್ಥೆ ಮಾಡುವಂತೆ ರೇವಂತ್ ರೆಡ್ಡಿ ಡಿಜಿಪಿ ಅಂಜನಿ ಕುಮಾರ್ ಅವರಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಾಕಷ್ಟು ವ್ಯವಸ್ಥೆ ಮಾಡುವಂತೆ ಅಂಜನಿ ಕುಮಾರ್ ಅವರಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ಡಿಜಿಪಿ ಮತ್ತು ಹೆಚ್ಚುವರಿ ಡಿಜಿಗಳಾದ ಎಸ್.ಕೆ.ಜೈನ್

ತೆಲಂಗಾಣ ಸಿಎಂ ಆಗಿ ನಾಳೆ ರೇವಂತ್ ರೆಡ್ಡಿ ಪ್ರಮಾಣವಚನ Read More »

ಪಿಒಕೆ ಯಲ್ಲಿ ಪ್ರಯಾಣಿಕರ ಬಸ್ ಮೇಲೆ ಗುಂಡಿನ ದಾಳಿ| 8 ಮಂದಿ ಸಾವು, 26 ಮಂದಿಗೆ ಗಾಯ

ಸಮಗ್ರ ನ್ಯೂಸ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನದಲ್ಲಿ ಪ್ರಯಾಣಿಕರ ಬಸ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಚಿಲಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಉಪ ಆಯುಕ್ತ ಡಯಾಮರ್ ಕ್ಯಾಪ್ಟನ್ (ನಿವೃತ್ತ) ಆರಿಫ್ ಅಹ್ಮದ್ ಅವರನ್ನು ಉಲ್ಲೇಖಿಸಿ ವರದಿಯಲ್ಲಿ ತಿಳಿಸಲಾಗಿದ್ದು, ಅಪರಿಚಿತ ದಾಳಿಕೋರರು ಪ್ರಯಾಣಿಕರ ಬಸ್ ಮೇಲೆ ಗುಂಡು ಹಾರಿಸಿದ್ದಾರೆ. ಈ ನಡುವೆ ಚಿಲಾಸ್ ಬಳಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ

ಪಿಒಕೆ ಯಲ್ಲಿ ಪ್ರಯಾಣಿಕರ ಬಸ್ ಮೇಲೆ ಗುಂಡಿನ ದಾಳಿ| 8 ಮಂದಿ ಸಾವು, 26 ಮಂದಿಗೆ ಗಾಯ Read More »

ವಾಟ್ಸಾಪ್ ಪ್ಲಾಟ್‍ಫಾರ್ಮ್ ವಿರುದ್ಧ ನಿಂದನೆ/ 75 ಲಕ್ಷ ಖಾತೆಗಳನ್ನು ನಿಷೇಧಿಸಿದ ಮೆಟಾ

ಸಮಗ್ರ ನ್ಯೂಸ್: ವಾಟ್ಸಾಪ್ ಪ್ಲಾಟ್‍ಫಾರ್ಮ್ ವಿರುದ್ಧದ ನಿಂದನೆಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮೆಟಾ-ಮಾಲೀಕತ್ವದ ವಾಟ್ಸಾಪ್ 75 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. 75,48,000 ವಾಟ್ಸಾಪ್ ಖಾತೆಗಳನ್ನು ಅಕ್ಟೋಬರ್ 1 ಮತ್ತು ಅಕ್ಟೋಬರ್ 31ರ ನಡುವೆ ನಿಷೇಧಿಸಲಾಗಿದ್ದು, ಈ ಪೈಕಿ 19,19,000 ಬಳಕೆದಾರರನ್ನು ಈಗಾಗಲೇ ದೂರುಗಳಿಂದ ನಿಷೇಧಿಸಲಾಗಿದೆ ಎಂದು ಕಂಪನಿಯು ತನ್ನ ಮಾಸಿಕ ವರದಿಯಲ್ಲಿ ತಿಳಿಸಿದೆ. ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್‍ಫಾರ್ಮ್ ಆಗಿರುವ ವಾಟ್ಸಾಪ್ ದೇಶದಲ್ಲಿ ಸುಮಾರು 500 ಮಿಲಿಯನ್ ಬಳಕೆದಾರರನ್ನು ಹೊಂದಿದ್ದು, ಅಕ್ಟೋಬರ್‍ನಲ್ಲಿ ದೇಶದಲ್ಲಿ 9,063 ದೂರು

ವಾಟ್ಸಾಪ್ ಪ್ಲಾಟ್‍ಫಾರ್ಮ್ ವಿರುದ್ಧ ನಿಂದನೆ/ 75 ಲಕ್ಷ ಖಾತೆಗಳನ್ನು ನಿಷೇಧಿಸಿದ ಮೆಟಾ Read More »

ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಪಾಕಿಸ್ತಾನ​ ಪರ ಘೋಷಣೆ ಕೂಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನಾಯತ್​ವುಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಜೆಪಿ ನಗರದ ಪಬ್‌ವೊಂದರಲ್ಲಿ ಭಾರತ-ಆಸ್ಟ್ರೇಲಿಯಾ ತಂಡದ ನಡುವೆ ಟಿ20 ಪಂದ್ಯ ವೀಕ್ಷಣೆ ಮಾಡುತ್ತಿದ್ದ ವೇಳೆ ಇಬ್ಬರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಘಟನೆಗೆ ಸಂಬಂಧಿಸಿ ಪಬ್​ನಲ್ಲಿದ್ದವರು ಜೆ.ಪಿ.ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇನಾಯತ್​ವುಲ್ಲಾ ಖಾನ್, ಸೈಯದ್ ಮುಬಾರಕ್​ನನ್ನು ಬಂಧಿಸಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್ Read More »

ಮಾರ್ಯದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ.15ಕ್ಕೆ ಸಿದ್ದ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಒಂದು ತಿಂಗಳ ಮುಂಚೆಯೇ ಮೊದಲ ಹಂತದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ. 15ರೊಳಗೆ ಸಿದ್ಧಗೊಳಿಸಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ವಿಮಾನ ನಿಲ್ದಾಣವನ್ನು ‘ಮರ್ಯಾದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌’ ಎಂದು ಕರೆಯಲಾಗುವುದು. ಬೋಯಿಂಗ್ 737, ಏರ್‌ಬಸ್ 319 ಮತ್ತು ಏರ್‌ಬಸ್ 320 ವಿಮಾನಗಳಿಗೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರೊಂದಿಗೆ

ಮಾರ್ಯದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ.15ಕ್ಕೆ ಸಿದ್ದ Read More »

ಡಿ.4ರಿಂದ ಸಂಸತ್ ನ ಚಳಿಗಾಲದ ಅಧಿವೇಶನ| ಇಂದು ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಸಮಗ್ರ ನ್ಯೂಸ್: ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇಂದು(ಡಿ.2) ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ(ಡಿ.3) ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಒಟ್ಟು ೧೫ ದಿನಗಳ ಕಲಾಪ ನಡೆಯಲಿದ್ದು, ಡಿಸೆಂಬರ್ ೨೨ರಂದು ಅಧಿವೇಶನ ಮುಕ್ತಾಯಗೊಳ್ಳಲಿದೆ. ಸಂಸತ್ತಿನಲ್ಲಿ ರಚನಾತ್ಮಕ ಚರ್ಚೆ ನಡೆಸಲು

ಡಿ.4ರಿಂದ ಸಂಸತ್ ನ ಚಳಿಗಾಲದ ಅಧಿವೇಶನ| ಇಂದು ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ Read More »

ಮಿಜೋರಾಂ ವಿಧಾನಸಭಾ ಚುನಾವಣೆ/ ಡಿಸೆಂಬರ್ 4ಕ್ಕೆ ಮುಂದೂಡಿದ ಮತ ಎಣಿಕೆ

ಸಮಗ್ರ ನ್ಯೂಸ್: ಪಂಚರಾಜ್ಯಗಳ ಪೈಕಿ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಡಿಸೆಂಬರ್ 3ರಿಂದ ಡಿಸೆಂಬರ್ 4ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಡ ಮತ್ತು ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಭಾನುವಾರವೇ ಹೊರಬೀಳಲಿದೆ. ಮಿಜೋರಾಂ ರಾಜ್ಯದಲ್ಲಿ ಕ್ರೈಸ್ತ ಸಮುದಾಯವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಭಾನುವಾರ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದ್ದು, ಆ ದಿನ ವಿಶೇಷ ಪ್ರಾರ್ಥನೆ ನಡೆಯಲಿದೆ. ಹೀಗಾಗಿ ವಿವಿಧ ವಲಯಗಳಿಂದ ಬಂದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು

ಮಿಜೋರಾಂ ವಿಧಾನಸಭಾ ಚುನಾವಣೆ/ ಡಿಸೆಂಬರ್ 4ಕ್ಕೆ ಮುಂದೂಡಿದ ಮತ ಎಣಿಕೆ Read More »

ವಿದೇಶಿ ಆತಿಥ್ಯ ಸ್ವೀಕಾರ/ ಸಂಸದರಿಗೆ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯ

ಸಮಗ್ರ ನ್ಯೂಸ್: ಭಾರತದ ಸಂಸತ್ತಿನ ಸದಸ್ಯರು ಖಾಸಗಿಯಾಗಿ ವಿದೇಶಗಳಿಗೆ ತೆರಳಿದ ಸಂದರ್ಭಗಳಲ್ಲಿ, ಅಲ್ಲಿನ ಆತಿಥ್ಯ ಸ್ವೀಕರಿಸುವ ಮುನ್ನ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಬೇಕು. ಹಾಗೇಯೇ ಸರ್ಕಾರದ ಕಠಿಣ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ರಾಜ್ಯಸಭಾ ಸಚಿವಾಲಯ ಆದೇಶ ಹೊರಡಿಸಿದೆ. ವಿದೇಶಗಳಿಂದ ಬರುವ ಆಹ್ವಾನವನ್ನು ಕಡ್ಡಾಯವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಗಮನಕ್ಕೆ ತರಬೇಕು ಸಂಸದರಾಗಿ ತಾವು ನಿರ್ವಹಿಸಬೇಕಿರುವ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಅಡ್ಡಿ ಉಂಟುಮಾಡಬಹುದಾದ ಉಡುಗೊರೆಗಳನ್ನು ಪಡೆಯಬಾರದು. ಸಂಸದರು ನೀತಿಸಂಹಿತೆ ಪಾಲಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ವಿದೇಶಿ ಆತಿಥ್ಯ ಸ್ವೀಕಾರ/ ಸಂಸದರಿಗೆ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯ Read More »