ದೇಶ-ವಿದೇಶ

ದಿಲ್ಲಿ ಕಾರು ಬಾಂಬ್ ಸ್ಪೋಟ ಪ್ರಕರಣ| ಕಾರೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್

ಸಮಗ್ರ ನ್ಯೂಸ್: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್ ಆಗಿದೆ. ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟಕ್ಕೆ ಸಂಬಂಧಿಸಿದಂತೆ ಹೊಸ ಸಿಸಿಟಿವಿ ಫೋಟೋಗಳು ಮತ್ತು ವೀಡಿಯೊವೊಂದು ಹೊರಬಂದಿದ್ದು, ಕನಿಷ್ಠ ಎಂಟು ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿದ್ದಾರೆ. ಈ ಘಟನೆ ನವೆಂಬರ್ 10 ರಂದು ಸಂಜೆ 6.22 ಕ್ಕೆ ನಡೆದಿದ್ದು, ಹುಂಡೈ ಐ20 ಕಾರನ್ನು ಚಾಲನೆ ಮಾಡುತ್ತಿರುವ ವ್ಯಕ್ತಿಯನ್ನು ತೋರಿಸುತ್ತದೆ. ಅದೇ […]

ದಿಲ್ಲಿ ಕಾರು ಬಾಂಬ್ ಸ್ಪೋಟ ಪ್ರಕರಣ| ಕಾರೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್ Read More »

ದೆಹಲಿಯ ಕೆಂಪುಕೋಟೆ ಬಳಿ ಕಾರುಬಾಂಬ್ ಸ್ಪೋಟ| ಕನಿಷ್ಠ 8 ಮಂದಿ ಸಾವು

ಸಮಗ್ರ ನ್ಯೂಸ್: ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಜೆ 6.55ರ ಸುಮಾರಿಗೆ ಸ್ಫೋಟಕ ಸಂಭವಿಸಿದ್ದು ಏಳೆಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ

ದೆಹಲಿಯ ಕೆಂಪುಕೋಟೆ ಬಳಿ ಕಾರುಬಾಂಬ್ ಸ್ಪೋಟ| ಕನಿಷ್ಠ 8 ಮಂದಿ ಸಾವು Read More »

ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರದಿಂದ ಬ್ರೇಕ್

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಎತ್ತಿನಹೊಳೆ ಏತ ನೀರಾವರಿ ಯೋಜನೆ ಹಾಗೂ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ತಡೆ ಹಿಡಿದಿದೆ. ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ 2,000 ಮೆಗಾವಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗಾಗಿ ಸುಮಾರು 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರವು ತಡೆಹಿಡಿದು ಆದೇಶ ಹೊರಡಿಸಿದೆ. ಯೋಜನೆಯ ಸದಸ್ಯರು ಗಂಭೀರ ಪರಿಸರ ಕಾಳಜಿಗಳನ್ನು ಮತ್ತು ಅರಣ್ಯ

ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರದಿಂದ ಬ್ರೇಕ್ Read More »

‘ವಂದೇ‌ಮಾತರಂ’ ಗೀತೆಗೆ 150ರ ಹರೆಯ| ಇಂದು ದೇಶಾದ್ಯಂತ ಮೊಳಗಲಿದೆ ದೇಶ ಭಕ್ತಿಗೀತೆ

ಸಮಗ್ರ ನ್ಯೂಸ್: ಇಂದು ವಂದೇ ಮಾತರಂ ಗೀತೆಯ 150 ನೇ ವರ್ಷಾಚರಣೆ. ಈ ಹಿನ್ನೆಲೆ ದೇಶಾದ್ಯಂತ ದೇಶಭಕ್ತಿ ಗೀತೆ ಗಾಯನ ಮೊಳಗಲಿದೆ. ದೇಶದ ಹಲವು ಕಡೆ ವಂದೇ ಮಾತರಂ ಗೀತೆ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಂದೇ ಮಾತರಂ 1950 ರಲ್ಲಿ ಭಾರತ ಗಣರಾಜ್ಯದ ರಾಷ್ಟ್ರೀಯ ಗೀತೆಯಾಗಿ ಅಂಗೀಕರಿಸಲ್ಪಟ್ಟ ಒಂದು ಕವಿತೆಯಾಗಿದೆ. ಇದನ್ನು ಬಂಕಿಮ್ ಚಂದ್ರ ಚಟರ್ಜಿ 1870 ರ ದಶಕದಲ್ಲಿ ಸಂಸ್ಕೃತೀಕೃತ ಬಂಗಾಳಿ ಭಾಷೆಯಲ್ಲಿ ಬರೆದಿದ್ದಾರೆ. ನವೆಂಬರ್ 1875 ರಂದು ಮತ್ತು ಇದನ್ನು ಮೊದಲು 1882 ರಲ್ಲಿ

‘ವಂದೇ‌ಮಾತರಂ’ ಗೀತೆಗೆ 150ರ ಹರೆಯ| ಇಂದು ದೇಶಾದ್ಯಂತ ಮೊಳಗಲಿದೆ ದೇಶ ಭಕ್ತಿಗೀತೆ Read More »

ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರಿ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಭಾಗ್ಯ ಸಿಕ್ಕಿದೆ. ಈಗಾಗಲೇ 10ನೇ ತರಗತಿಯ ವರೆಗೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ ಸಿಗುತ್ತಿದೆ. ಇದೀಗ ಹೊಸದಾಗಿ ಪಿಯೂ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಲು ಸರ್ಕಾರ ಚಿಂತಿಸಿದೆ. ರಾಜ್ಯದಲ್ಲಿ ಸುಮಾರು

ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ Read More »

ಉತ್ತರ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ| ಹಲವು ಸಾವು ನೋವಿನ ಆತಂಕ

ಸಮಗ್ರ ನ್ಯೂಸ್: ಕಳೆದ ತಡರಾತ್ರಿ ಉತ್ತರ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ವರದಿ ಮಾಡಿದೆ. ಮಜಾರ್-ಇ-ಶರೀಫ್ ನಗರದ ಬಳಿಯ ಖೋಲ್ಮ್ ಪ್ರದೇಶದಲ್ಲಿ 28 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಮತ್ತು ರಾಜಧಾನಿ ಕಾಬೂಲ್‌ನವರೆಗೆ ಕಂಪನದ ಅನುಭವವಾಗಿದೆ. ಅಂಕಿಅಂಶವನ್ನು ನವೀಕರಿಸುವ ಮೊದಲು ಯುಎಸ್‌ಜಿಎಸ್ ಆರಂಭದಲ್ಲಿ 10 ಕಿಲೋಮೀಟರ್ ಆಳದಲ್ಲಿ ಆಳವನ್ನು ದಾಖಲಿಸಿತ್ತು. ಆಗಸ್ಟ್ 31 ರಂದು ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ 6.0 ತೀವ್ರತೆಯ ಭೂಕಂಪದಲ್ಲಿ 2,200 ಕ್ಕೂ

ಉತ್ತರ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ| ಹಲವು ಸಾವು ನೋವಿನ ಆತಂಕ Read More »

ನ.28: ಕೃಷ್ಣ ನಗರಿ ಉಡುಪಿಗೆ ಪ್ರಧಾನಿ ಮೋದಿ ಭೇಟಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇದೇ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಪ್ರಧಾನಿ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನ

ನ.28: ಕೃಷ್ಣ ನಗರಿ ಉಡುಪಿಗೆ ಪ್ರಧಾನಿ ಮೋದಿ ಭೇಟಿ Read More »

ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ| 104 ಮಂದಿ ಸಾವು

ಸಮಗ್ರ ನ್ಯೂಸ್: ಸಹಜ ಸ್ಥಿತಿಗೆ ಮರಳುತ್ತಿದ್ದ ಗಾಜಾಪಟ್ಟಿಯಲ್ಲಿ ಹಮಾಸ್‌ ಕದನ ವಿರಾಮ ಉಲ್ಲಂಘಿಸಿದೆ ಎಂದು ಇಸ್ರೇಲ್‌ ಮಂಗಳವಾರ ತಡರಾತ್ರಿ ನಡೆಸಿದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿ ಕನಿಷ್ಠ 104 ಮಂದಿ ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಗಾಜಾದಲ್ಲಿ ಕದನ ವಿರಾಮ ಜಾರಿಯಲ್ಲಿದೆ. ಹಮಾಸ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದರೆ, ಇಸ್ರೇಲ್‌ ಪ್ರತಿದಾಳಿ ನಡೆಸುವ ಹಕ್ಕಿದೆ ಎಂದು ಹೇಳಿದ್ದಾರೆ. ಜತೆಗೆ ಮಧ್ಯಪ್ರಾಚ್ಯದಲ್ಲಿ ಹಮಾಸ್‌ ಒಂದು ಸಣ್ಣ ಭಾಗ. ಅದು ಮತ್ತೆ ಬಾಲ ಬಿಚ್ಚಲು

ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ| 104 ಮಂದಿ ಸಾವು Read More »

ಅಮೇರಿಕಾ ನಿರ್ಬಂಧ| ರಷ್ಯಾದಿಂದ ತೈಲ‌ ಖರೀದಿ ಸ್ಥಗಿತಕ್ಕೆ ಭಾರತ‌ ನಿರ್ಧಾರ

ಸಮಗ್ರ ನ್ಯೂಸ್: ರಷ್ಯಾದ ಎರಡು ಪ್ರಮುಖ ತೈಲ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದ ಹಿನ್ನೆಲೆ ಭಾರತದ ತೈಲ ಸಂಸ್ಕರಣಾ ಕಂಪನಿಗಳು ರಷ್ಯಾದಿಂದ ಹೊಸದಾಗಿ ತೈಲ ಖರೀದಿ ನಿಲ್ಲಿಸಿದೆ. ಅಮೆರಿಕ ನಿರ್ಬಂಧದ ಪರಿಣಾಮ, ಪಾವತಿ ವಿಧಾನ ಕುರಿತ ಗೊಂದಲ ಬಗೆಹರಿಯುವವರೆಗೂ ರಷ್ಯಾದ ರೋಸ್‌ನೆಫ್ಟ್‌ ಮತ್ತು ಲುಕೋಯಿಲ್‌ನಿಂದ ತೈಲ ಖರೀದಿ ಸ್ಥಗಿತಕ್ಕೆ ನಿರ್ಧರಿಸಿವೆ. ಆದರೆ ತಕ್ಷಣದ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ದೀರ್ಘ ಕಾಲೀನ ಒಪ್ಪಂದದದ ಬದಲಾಗಿ ಸ್ಪಾಟ್‌ ಮಾರ್ಕೆಟ್‌ನಿಂದ ತೈಲ ಖರೀದಿಗೆ ದೇಶದ ಅತಿದೊಡ್ಡ ತೈಲ ಉದ್ಯಮವಾದ ಇಂಡಿಯನ್‌

ಅಮೇರಿಕಾ ನಿರ್ಬಂಧ| ರಷ್ಯಾದಿಂದ ತೈಲ‌ ಖರೀದಿ ಸ್ಥಗಿತಕ್ಕೆ ಭಾರತ‌ ನಿರ್ಧಾರ Read More »

ಅಯೋಧ್ಯೆ: ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ

ಸಮಗ್ರ ನ್ಯೂಸ್: ನಿತ್ಯ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿರುವ ಅಯೋಧ್ಯೆಯ ಐತಿಹಾಸಿಕ ರಾಮಮಂದಿರದ ನಿರ್ಮಾಣ ಕಾರ್ಯ ಮುಕ್ತಾಯವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಘೋಷಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಟ್ರಸ್ಟ್‌, ‘ಪ್ರಭು ಶ್ರೀರಾಮನ ಎಲ್ಲಾ ಭಕ್ತರಿಗೆ ಮಂದಿರ ನಿರ್ಮಾಣ ಕಾರ್ಯಗಳು ಪೂರ್ಣಗೊಂಡಿವೆ ಎಂದು ತಿಳಿಸಲು ಸಂತೋಷಪಡುತ್ತೇವೆ. ಇದರಲ್ಲಿ ಮುಖ್ಯಮಂದಿರ ಮತ್ತು ಆವರಣದೊಳಗಿನ ಮಹಾದೇವ, ಗಣೇಶ, ಹನುಮಾನ್, ಸೂರ್ಯದೇವ, ಭಗವತಿ ಮತ್ತು ಅನ್ನಪೂರ್ಣ ದೇವರ 6 ಮಂದಿರಗಳು ಸೇರಿವೆ. ಜೊತೆಗೆ ಶೇಷಾವತಾರ ಮಂದಿರವೂ ಪೂರ್ಣಗೊಂಡಿದೆ.

ಅಯೋಧ್ಯೆ: ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ Read More »