ಅಯೋಧ್ಯಾ ರಾಮಮಂದಿರಕ್ಕೆ ಅರ್ಚಕರ ನೇಮಕಾತಿ/ ಸಲ್ಲಿಕೆಯಾದ ಅರ್ಜಿಗಳು 3000
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ 2024ರ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಲಾಗುತ್ತಿದೆ, ಈ ಹಿನ್ನಲೆಯಲ್ಲಿ ರಾಮಮಂದಿರಕ್ಕೆ ಅರ್ಚಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಲ್ಲಿಯವರೆಗೆ ಮೂರು ಸಾವಿರ ಅರ್ಜಿಗಳ ಸಲ್ಲಿಕೆಯಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅರ್ಚಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದ್ದು, ಸಲ್ಲಿಕೆಯಾದ ಮೂರು ಸಾವಿರ ಅರ್ಜಿಗಳ ಪೈಕಿ, ಆರ್ಹತೆಯ ಆಧಾರದ ಮೇಲೆ 200 ಮಂದಿಯನ್ನು ಸಂದರ್ಶನಕ್ಕೆ ಶಾರ್ಟ್ಲಿಸ್ಟ್ ಮಾಡಲಾಗಿದೆ. ಅಂತಿಮವಾಗಿ 20 ಮಂದಿಯನ್ನು ಆಯ್ಕೆ ಮಾಡಲಾಗುವುದು ಎಂದು ಟ್ರಸ್ಟ್ ತಿಳಿಸಿದೆ. […]
ಅಯೋಧ್ಯಾ ರಾಮಮಂದಿರಕ್ಕೆ ಅರ್ಚಕರ ನೇಮಕಾತಿ/ ಸಲ್ಲಿಕೆಯಾದ ಅರ್ಜಿಗಳು 3000 Read More »










