ದೇಶ-ವಿದೇಶ

ಕೇರಳದಲ್ಲಿ ಮತ್ತೆ ನಿಫಾ ಭೀತಿ| ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಸಮಗ್ರ ನ್ಯೂಸ್: ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಎರಡು ಅಸಹಜ ಸಾವು ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೋಗ್ಯ ಸಚಿವಾಲಯ ನಿಫಾ ಸೋಂಕು ಭೀತಿಯ ಬಗ್ಗೆ ಎಚ್ಚರಿಕೆ ನೀಡಿದೆ. ಈ ಎರಡು ಸಾವುಗಳು ನಿಫಾ ವೈರಸ್ ನಿಂದ ಸಂಭವಿಸಿವೆ ಎಂದು ಶಂಕಿಸಲಾಗಿದ್ದು, ಮೃತರ ಪೈಕಿ ಒಬ್ಬರ ಸಂಬಂಧಿಕರು ಕೂಡಾ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಘಟನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಉನ್ನತ ಮಟ್ಟದ ಸಭೆ […]

ಕೇರಳದಲ್ಲಿ ಮತ್ತೆ ನಿಫಾ ಭೀತಿ| ಆರೋಗ್ಯ ಇಲಾಖೆಯಿಂದ ಎಚ್ಚರಿಕೆ Read More »

ಕೆಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ| ಸೆ. 30 ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023ನ್ನು ನ. 26ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆ ಪ್ರಕಟನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗೆ ಆಹ್ವಾನಿಸಲಾಗಿದೆ. ಮೊದಲ ಪತ್ರಿಕೆ-I: ಸಾಮಾನ್ಯ ಪತ್ರಿಕೆಯು ಬೋಧನೆ ಮತ್ತು ಬುದ್ಧಿ ಸಾಮರ್ಥ್ಯ. ಈ ಪತ್ರಿಕೆಯು ಅಭ್ಯರ್ಥಿಗಳ ಸಾಮಾನ್ಯ ಪತ್ರಿಕೆಯಾಗಿದ್ದು, ಸಾಮಾನ್ಯ ಜ್ಞಾನ ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಗಳನ್ನು ಗ್ರಹಿಸುವ ಹಾಗೂ ಯೋಚನಾ ಸಾಮರ್ಥ್ಯವನ್ನು ಆಳೆಯುವಂತಹದ್ದಾಗಿರುತ್ತದೆ. ಈ ಪತ್ರಿಕೆಯು 50

ಕೆಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ| ಸೆ. 30 ಕೊನೆಯ ದಿನಾಂಕ Read More »

ರಾಜ್ಯ, ರಾಷ್ಟ್ರ ರಾಜಕಾರಣದ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ| ಯುಗಾದಿ ಬಳಿಕ ಭಾರೀ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯ ಹಾಗೂರಾಷ್ಟ್ರ ರಾಜಕಾರಣದ ಬಗ್ಗೆ ಇಂದು ಕೋಡಿಮಠದ ಶಿವಾನದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಅಸ್ಥಿರತೆ ಉಂಟಾಗಲಿದೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣ, ರಾಷ್ಟ್ರ ರಾಜಕಾರಣದಲ್ಲಿ ಅಸ್ಥಿರತೆ ಉಂಟಾಗಲಿದೆ. ಯುಗಾದಿಯ ನಂತ್ರ ಏನಾಗುತ್ತೆ ಅಂತ ಕಾದು ನೋಡಿ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಅಚ್ಚರಿಯನ್ನು ಎದುರು ನೋಡುವಂತೆ ಹೇಳಿದ್ದಾರೆ.

ರಾಜ್ಯ, ರಾಷ್ಟ್ರ ರಾಜಕಾರಣದ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ| ಯುಗಾದಿ ಬಳಿಕ ಭಾರೀ ಬದಲಾವಣೆ Read More »

ತಾಂತ್ರಿಕ ಅಡಚಣೆ; ಕೇಂದ್ರ ಸರ್ಕಾರದ ‘ಮಾತೃವಂದನಾ’ ಯೋಜನೆ ಸ್ಥಗಿತ

ಸಮಗ್ರ ನ್ಯೂಸ್: ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆಗಾಗಿ ನೀಡಲಾಗುತ್ತಿದ್ದ ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆ ತಾಂತ್ರಿಕ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದೆ. ಮಾತೃವಂದನಾ ಯೋಜನೆ ಸಾಫ್ಟ್ ವೇರ್ ಅನ್ನು ಮಿಷನ್ ಶಕ್ತಿ 2.O ಸಾಫ್ಟ್ ವೇರ್ ಜೊತೆಗೆ ಜೋಡಿಸಲಾಗಿದ್ದು, ನೂತನ ತಂತ್ರಾಂಶದಲ್ಲಿ ಹಳೆಯ ಡೇಟಾಗಳು ಲಭ್ಯವಾಗುತ್ತಿಲ್ಲ. ಈ ತಾಂತ್ರಿಕ ಸಮಸ್ಯೆಯಿಂದ ಯೋಜನೆ ಹಣ ಫಲಾನುಭವಿಗಳಿಗೆ ಲಭ್ಯವಾಗುತ್ತಿಲ್ಲ ಎಂದು ತಿಳದುಬಂದಿದೆ. ಈ ಯೋಜನೆಯಡಿ, ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುತ್ತದೆ. ನವಜಾತ ಶಿಶುಗಳ

ತಾಂತ್ರಿಕ ಅಡಚಣೆ; ಕೇಂದ್ರ ಸರ್ಕಾರದ ‘ಮಾತೃವಂದನಾ’ ಯೋಜನೆ ಸ್ಥಗಿತ Read More »

ಸಾವು ಎಲ್ಲದಕ್ಕೂ ಪರಿಹಾರವಲ್ಲ|ಆತ್ಮಹತ್ಯಾ ತಡೆದಿನ ಸೆಪ್ಟಂಬರ್–10

ಸಮಗ್ರ ನ್ಯೂಸ್: ಪ್ರತಿ ವರ್ಷ ಸೆಪ್ಟಂಬರ್ 10ರಂದು ವಿಶ್ವ ಆತ್ಮಹತ್ಯಾ ತಡೆದಿನ ಎಂದು ಆಚರಿಸಿ, ಯುವಜನರಲ್ಲಿ ಆತ್ಮಹತ್ಯೆಯನ್ನು ಮಾಡದಿರುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿಶ್ವದಲ್ಲಿ ಪ್ರತಿ 60 ಸೆಂಕೆಂಡ್‍ಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮತ್ತು ವರ್ಷವೊಂದರಲ್ಲಿ ಏನಿಲ್ಲವೆಂದರೂ 10ರಿಂದ 12 ಲಕ್ಷ ಮಂದಿ ಆತ್ಮಹತ್ಯೆ ಮಾಡುತ್ತಿದ್ದಾರೆ. ಜೀವನದಲ್ಲಿ ಜಿಗುಪ್ಸೆ, ಬದುಕಿನಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ನಷ್ಟ, ವಿದ್ಯಾಭ್ಯಾಸದಲ್ಲಿ ಅನುತೀರ್ಣ, ಕೆಲಸದಲ್ಲಿ ಒತ್ತಡ ಹೀಗೆ ಹತ್ತು ಹಲವು ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳುತ್ತಾರೆ. 15-20 ವರ್ಷದೊಳಗಿನವರಲ್ಲಿ ಸಾವಿಗೆ ಎರಡನೇ ಅತೀ ದೊಡ್ಡ ಕಾರಣ

ಸಾವು ಎಲ್ಲದಕ್ಕೂ ಪರಿಹಾರವಲ್ಲ|ಆತ್ಮಹತ್ಯಾ ತಡೆದಿನ ಸೆಪ್ಟಂಬರ್–10 Read More »

ಮೊರಾಕೋ ಭೂಕಂಪ: ಏರುತ್ತಲೇ ಇದೆ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ಮೊರಾಕೊದಲ್ಲಿ ಸಂಭವಿಸಿದ ಭೂಕಂಪದ ಸಾವಿನ ಸಂಖ್ಯೆ 632 ಕ್ಕೆ ಏರಿದೆ, 329 ಜನರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯವನ್ನು ಉಲ್ಲೇಖಿಸಿ ಸರ್ಕಾರಿ ಟಿವಿ ಸ್ಟೇಷನ್ ತಿಳಿಸಿದೆ. ಮೊರೊಕ್ಕೊದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಸುಮಾರು 600 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ ಕಾರಣದಿಂದ ಕಳೆದುಹೋದ ಜೀವಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರು ಸಂತ್ರಸ್ತ ಕುಟುಂಬಗಳಿಗೆ ತಮ್ಮ ಸಂತಾಪವನ್ನು ತಿಳಿಸಿದರು ಮತ್ತು ಈ ದುರಂತ ಸಮಯದಲ್ಲಿ ಉತ್ತರ ಆಫ್ರಿಕಾದ ದೇಶದ ಜನರಿಗೆ

ಮೊರಾಕೋ ಭೂಕಂಪ: ಏರುತ್ತಲೇ ಇದೆ ಸಾವಿನ ಸಂಖ್ಯೆ Read More »

ಜಿ-೨೦ ಶೃಂಗಸಭೆಯಲ್ಲಿ ಇಂಡಿಯಾ ಬದಲು ‘ಭಾರತ’ ದರ್ಶನ

ಸಮಗ್ರ ನ್ಯೂಸ್: ದೇಶದ ಹೆಸರು ಬದಲಾವಣೆ ವಿಚಾರ ಭಾರಿ ಚರ್ಚೆಯಲ್ಲಿದ್ದು, ಇದೀಗ ನವದೆಹಲಿಯಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಕೂಡ ‘ಭಾರತ್’ ಹೆಸರಿನ ಪ್ರಸ್ತಾಪ ಬಂದಿದೆ. ಇಂದು ನಡೆಯುತ್ತಿರುವ ಜಿ 20 ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದಾಗ ದೇಶದ ಹೆಸರನ್ನು ‘ಭಾರತ್’ ಎಂದು ಪ್ರದರ್ಶಿಸಲಾಯಿತು. ಮೈಕ್ ನ ನೇಮ್ ಬೋರ್ಡ್ ನಲ್ಲಿ ‘BHARAT’ ಎಂದು ಪ್ರದರ್ಶಿಸಲಾಯಿತು. ತಮ್ಮ ಉದ್ಘಾಟನಾ ಭಾಷಣಕ್ಕೆ ಮುಂಚಿತವಾಗಿ, ಪ್ರಧಾನಿ ಮೋದಿ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ ಯುಎಸ್ ಅಧ್ಯಕ್ಷ ಜೋ

ಜಿ-೨೦ ಶೃಂಗಸಭೆಯಲ್ಲಿ ಇಂಡಿಯಾ ಬದಲು ‘ಭಾರತ’ ದರ್ಶನ Read More »

ಮೊರಾಕೋದಲ್ಲಿ ಪ್ರಬಲ ಭೂಕಂಪ; 296 ಮಂದಿ ಸಾವು|

ಸಮಗ್ರ ನ್ಯೂಸ್:ಮೊರಾಕೊದಲ್ಲಿ ಶುಕ್ರವಾರ ತಡರಾತ್ರಿ ಮರ್ಕೆಚ್ ಬಳಿ ಪ್ರಬಲ ಭೂಕಂಪ ಸಂಭವಿಸಿದ್ದು ಕನಿಷ್ಠ 296 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ಸಚಿವಾಲಯ ತಿಳಿಸಿದೆ. ಭೂಕಂಪ ಪೀಡಿತ ಸ್ಥಳಗಳಲ್ಲಿ ಕಟ್ಟಡಗಳು ಅಲುಗಾಡುತ್ತಿವೆ ಮತ್ತು ಭಯಭೀತರಾದ ನಿವಾಸಿಗಳು ಬೀದಿಗಿಳಿದಿದ್ದಾರೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಭೂಕಂಪದ ಕೇಂದ್ರಬಿಂದುವು ತುಲನಾತ್ಮಕವಾಗಿ 18.5 ಕಿಮೀ ಆಳದಲ್ಲಿದೆ ಮತ್ತು ಯುಎಸ್‌ಜಿಎಸ್ ಪ್ರಕಾರ, ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 11 ಗಂಟೆಯ ನಂತರ ಮರಕೇಶ್‌ನ ನೈರುತ್ಯಕ್ಕೆ 72 ಕಿಮೀ ಮತ್ತು ಅಟ್ಲಾಸ್ ಪರ್ವತ

ಮೊರಾಕೋದಲ್ಲಿ ಪ್ರಬಲ ಭೂಕಂಪ; 296 ಮಂದಿ ಸಾವು| Read More »

ಬೆಳ್ಳಂಬೆಳಗ್ಗೆ ಆಂಧ್ರ‌ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್| ಭಾರಿ ಹೈಡ್ರಾಮಾ ಸೃಷ್ಟಿ

ಸಮಗ್ರ ನ್ಯೂಸ್: ಸಿಐಡಿ ಪೊಲೀಸರು ಬೆಳ್ಳಂ ಬೆಳಗ್ಗೆ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಬಂಧಿಸಿದ್ದು, ಬಂಧನದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಚಂದ್ರಬಾಬು ಬಂಧಿಸಲು ಪೊಲೀಸರು ಹೋಗಿದ್ದು, ಭಾರಿ ಹೈಡ್ರಾಮಾ ನಡೆದ ನಂತರ ಬೆಳಗ್ಗೆ 6 ಗಂಟೆಗೆ ಬಂಧಿಸಿದ್ದಾರೆ. ಬಂಧನದ ವೇಳೆ ವಾಗ್ಧಾಳಿ ನಡೆಸಿ ಚಂದ್ರಬಾಬು ನಾಯ್ಡು ‘ ಸಿಐಡಿ ಪೊಲೀಸರು ನನ್ನ ಹಕ್ಕನ್ನು ಕಸಿಯುವ ಕೆಲಸ ಮಾಡಿದ್ದಾರೆ.ಎಫ್ ಐ ಆರ್ ಮಾಡಿಲ್ಲ, ಯಾವುದೇ ನೋಟಿಸ್ ನೀಡಿಲ್ಲ. ಯಾಕೆ ನನ್ನನ್ನು ಬಂಧಿಸುತ್ತೀರಾ..?

ಬೆಳ್ಳಂಬೆಳಗ್ಗೆ ಆಂಧ್ರ‌ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್| ಭಾರಿ ಹೈಡ್ರಾಮಾ ಸೃಷ್ಟಿ Read More »

ಡಾ.ಬ್ರೋ ಈಗ “ಮ್ಯಾನ್ ಆಪ್ ಮಿಲಿಯನ್ಸ್”| 20 ಲಕ್ಷ SUBSCRIBERS ಪಡೆದ ಕನ್ನಡ ಹುಡುಗ

ಸಮಗ್ರ ನ್ಯೂಸ್: ‘ನಮಸ್ಕಾರ ದೇವ್ರು’ ಎನ್ನುತ್ತಲೇ ವಿಶ್ವಪರ್ಯಟನೆ ಮಾಡುತ್ತಿರುವ ಕನ್ನಡದ ಜಾಗತಿಕ ರಾಯಭಾರಿ ಡಾ. ಬ್ರೋ (ಗಗನ್ ಶ್ರೀನಿವಾಸ್​) ಈಗ ಮ್ಯಾನ್ ಆಫ್ ಮಿಲಿಯನ್ಸ್ ಆಗಿದ್ದಾರೆ. ಅರ್ಥಾತ್, ಯೂ-ಟ್ಯೂಬ್​ನಲ್ಲಿ ಅವರ ಸಬ್​ಸ್ಕ್ರೈಬರ್ಸ್​ ಸಂಖ್ಯೆ 2 ಮಿಲಿಯನ್ (20) ಲಕ್ಷ ಆಗಿದೆ. ಜೊತೆಗೆ ಅವರ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಮ್​ನಲ್ಲೂ ಫಾಲೋವರ್ಸ್ ಸಂಖ್ಯೆ ಈಗಾಗಲೇ ಮಿಲಿಯನ್ ದಾಟಿದೆ. ಇತ್ತೀಚೆಗಷ್ಟೇ ಯೂಟ್ಯೂಬ್​ನಲ್ಲಿ 2 ಮಿಲಿಯನ್ ಸಬ್​ಸ್ಕ್ರೈಬರ್ಸ್​ ಹೊಂದಿದ ಡಾ.ಬ್ರೋ, ಫೇಸ್​ಬುಕ್​ನಲ್ಲಿ 1.6 ಮಿಲಿಯನ್​ ಹಾಗೂ ಇನ್​ಸ್ಟಾಗ್ರಾಮ್​ನಲ್ಲಿ 1.3 ಮಿಲಿಯನ್​ ಫಾಲೋವರ್ಸ್ ಹೊಂದಿದ್ದಾರೆ.

ಡಾ.ಬ್ರೋ ಈಗ “ಮ್ಯಾನ್ ಆಪ್ ಮಿಲಿಯನ್ಸ್”| 20 ಲಕ್ಷ SUBSCRIBERS ಪಡೆದ ಕನ್ನಡ ಹುಡುಗ Read More »