ದೇಶ-ವಿದೇಶ

ಇಂದಿನಿಂದ ಕೇಂದ್ರ ಮುಂಗಾರು ಅಧಿವೇಶನ| ನೂತನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಲಿರುವ ನಿರ್ಮಲಾ|

ಸಮಗ್ರ ನ್ಯೂಸ್: ಸಂಸತ್ತಿನ ಬಜೆಟ್‌ ಅಧಿವೇಶನವು ಇಂದಿನಿಂದ (ಜುಲೈ 22) ಆರಂಭವಾಗಲಿದ್ದು, ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಜ್ಜಾಗಿದ್ದಾರೆ. ಇಂದಿನಿಂದ ಆರಂಭವಾಗುವ ಬಜೆಟ್‌ ಅಧಿವೇಶನವು ಆಗಸ್ಟ್‌ 12ರವರೆಗೆ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಅಧಿವೇಶನದಲ್ಲಿ 16 ಕಲಾಪಗಳು ನಡೆಯಲಿವೆ. ಸೋಮವಾರವೇ ಆರ್ಥಿಕ ಸಮೀಕ್ಷೆ ಪ್ರಕಟಿಸಲಾಗುತ್ತದೆ. ಅಧಿವೇಶನದ ವೇಳೆ ಕೇಂದ್ರ ಸರ್ಕಾರವು ವಿಪತ್ತು ನಿರ್ವಹಣಾ (ತಿದ್ದುಪಡಿ) ವಿಧೇಯಕ, ಭಾರತೀಯ ವಾಯುಯಾನ ವಿಧೇಯಕ ಸೇರಿ ಒಟ್ಟು […]

ಇಂದಿನಿಂದ ಕೇಂದ್ರ ಮುಂಗಾರು ಅಧಿವೇಶನ| ನೂತನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಲಿರುವ ನಿರ್ಮಲಾ| Read More »

ಕನ್ನಡಿಗರಿಗೆ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌

ಸಮಗ್ರ ನ್ಯೂಸ್: ಇತ್ತೀಚೆಗೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ ಇದೀಗ ಕ್ಷಮೆಯಾಚಿಸಿದ್ದಾರೆ. ಈ ಕಾರಣಕ್ಕೆ ಕರ್ನಾಟಕದಾದ್ಯಂತ ಬಾಯ್ಕಾಟ್‌ ಫೋನ್‌ ಪೇ (Boycott PhonePe) ಎಂಬ ಅಭಿಯಾನ ಆರಂಭವಾದ ಬೆನ್ನಲ್ಲೇ, ಸಮೀರ್‌ ನಿಗಮ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದ ಪೋಸ್ಟ್‌ ಮೂಲಕ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಮೀರ್‌ ನಿಗಮ್‌ ಅವರು ಪೋಸ್ಟ್‌ ಮಾಡಿದ್ದಾರೆ. “ಕಳೆದ ವಾರ

ಕನ್ನಡಿಗರಿಗೆ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌ Read More »

ಉ.ಪ್ರದೇಶ ಸಿಎಂ ಯೋಗಿಯಿಂದ ಮಾರ್ಕೆಟಿಂಗ್ ಸರ್ಜಿಕಲ್ ಸ್ಟ್ರೈಕ್| ರಾಜ್ಯಾದ್ಯಂತ ಅಂಗಡಿ ಬೋರ್ಡ್ ನಲ್ಲಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಆದೇಶ

ಸಮಗ್ರ ನ್ಯೂಸ್: ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್- ರೆಸ್ಟೋರೆಂಟ್ ಮತ್ತಿತರ ಆಹಾರದ ಅಂಗಡಿಗಳ ಮುಂದೆ ಮಾಲೀಕರ ಹೆಸರುಗಳನ್ನು ಪ್ರದರ್ಶಿಸಬೇಕೆಂಬ ಮುಜಾಫರ್​ನಗರ ಜಿಲ್ಲಾ ಪೊಲೀಸರ ವಿವಾದಾತ್ಮಕ ಆದೇಶವನ್ನು ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಇಡೀ ರಾಜ್ಯಕ್ಕೆ ವಿಸ್ತರಿಸಿದೆ. ಜಿಲ್ಲಾ ಪೊಲೀಸರು ಸೋಮವಾರ ಹೊರಡಿಸಿದ್ದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೊಂದು ‘ಮುಸ್ಲಿಂ-ವಿರೋಧಿ ಕ್ರಮ’ ಎಂದು ವಿಪಕ್ಷಗಳು ಟೀಕಿಸಿದ್ದವು. ಈ ಆದೇಶವು ಮುಸ್ಲಿಂ ವರ್ತಕರನ್ನು ಟಾರ್ಗೆಟ್ ಮಾಡಿದೆಯೆಂದು ಆಳುವ ಪಕ್ಷದ ಕೆಲವು ಮಿತ್ರ ಪಕ್ಷಗಳು ಕೂಡ ಆರೋಪಿಸಿರುವುದರಿಂದ ವಿವಾದದ ಕಾವು

ಉ.ಪ್ರದೇಶ ಸಿಎಂ ಯೋಗಿಯಿಂದ ಮಾರ್ಕೆಟಿಂಗ್ ಸರ್ಜಿಕಲ್ ಸ್ಟ್ರೈಕ್| ರಾಜ್ಯಾದ್ಯಂತ ಅಂಗಡಿ ಬೋರ್ಡ್ ನಲ್ಲಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಆದೇಶ Read More »

ಪೋಷಕರೇ ಇಲ್ಲಿ ಕೇಳಿ| ಅತಿಯಾದ ಮೊಬೈಲ್ ಬಳಕೆಯಿಂದ ನಿಮ್ಮ ಮಕ್ಕಳು ಈ ಕಾಯಿಲೆಗೆ ತುತ್ತಾಗಬಹುದು!

ಸಮಗ್ರ ನ್ಯೂಸ್: ಹೊರಗಡೆ ಹೋಗಿ ಕ್ರಿಕೆಟ್, ಪುಟ್‌ಬಾಲ್ ಇನ್ನಿತರ ಆಟವಾಡಿ ದೈಹಿಕವಾಗಿ ಸದೃಢವಾಗುವ ವಯಸ್ಸು, ಅದರೆ ಇಂತಹ ದೈಹಿಕ ಶಕ್ತಿ ಹೆಚ್ಚಿಸುವ ಆಟಗಳನ್ನು ಆಡುವ ಬದಲಿಗೆ ಸ್ಮಾರ್ಟ್ ಫೋನ್ ಹಿಡಿದುಕೊಂಡು ಮಕ್ಕಳು ಆಟ ಆಡುತ್ತಿದ್ದಾರೆ. ಊಟಾ ಬಿಟ್ಟರು ಮೊಬೈಲ್ ಬಿಡಲ್ಲ ಅಂತಿದ್ದಾರೆ. ಮಕ್ಕಳ ಮೊಬೈಲ ಸ್ಕೀನಿಂಗ್ ಟೈಮ್ ಏರಿಕೆಯಿಂದ ಅತಿಯಾದ ಮೊಬೈಲ್ ಗೀಳಿನಿಂದ ಮಕ್ಕಳಿಗೆ ಮಯೋಪಿಯಾ ಡಿಸೀಜ್ ಶುರುವಾಗಿದ್ದು ವೈದ್ಯರು ಅಚ್ಚರಿಯ ಅಂಶ ಹೊರ ಹಾಕಿದ್ದಾರೆ. ಮಯೋಪಿಯಾ ಡಿಸೀಸ್​ಗೆ ವೈದ್ಯರೇ ಶಾಕ್:ಕೊವಿಡ್ ನಂತರ ಮಕ್ಕಳ ಆರೋಗ್ಯ ಬಗ್ಗೆ

ಪೋಷಕರೇ ಇಲ್ಲಿ ಕೇಳಿ| ಅತಿಯಾದ ಮೊಬೈಲ್ ಬಳಕೆಯಿಂದ ನಿಮ್ಮ ಮಕ್ಕಳು ಈ ಕಾಯಿಲೆಗೆ ತುತ್ತಾಗಬಹುದು! Read More »

ಅಮೆರಿಕದ ಅಧ್ಯಕ್ಷೀಯ ಹುದ್ದೆ ಚುನಾವಣೆ/ ರಿಪಬ್ಲಿಕನ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌

ಸಮಗ್ರ ನ್ಯೂಸ್‌: ಅಮೆರಿಕದ ಅಧ್ಯಕ್ಷೀಯ ಹುದ್ದೆ ಚುನಾವಣೆಗೆ ರಿಪಬ್ಲಿಕನ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌ ಅವರನ್ನು ಸೋಮವಾರ ಇಲ್ಲಿ ಆಯ್ಕೆ ಮಾಡಲಾಯಿತು. 4 ವರ್ಷಗಳಿಗೊಮ್ಮೆ ನಡೆಯುವ ಪಕ್ಷದ ಸಭೆಯಲ್ಲಿ ಭಾರೀ ಬೆಂಬಲದೊಂದಿಗೆ ಟ್ರಂಪ್‌ ಹೆಸರನ್ನುಘೋಷಿಸಲಾಯಿತು. ಟ್ರಂಪ್‌ ಹೀಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿರುವುದು ಇದು 3ನೇ ಬಾರಿ. 2017ರಲ್ಲಿ ಟ್ರಂಪ್ ಹಿಲರಿ ಕ್ಲಿಂಟನ್‌ ವಿರುದ್ಧ ಗೆದ್ದಿದ್ದರೆ, 2021ರಲ್ಲಿ ಜೋ ಬೈಡೆನ್‌ ವಿರುದ್ಧ ಸೋತಿದ್ದರು. ಇದೀಗ ಮತ್ತೆ ಅವರು ಕಣಕ್ಕೆ ಇಳಿಯುತ್ತಿದ್ದು, ಬಹುತೇಕ ಡೆಮಾಕ್ರೆಟ್‌ ಪಕ್ಷದ ನಾಯಕ,

ಅಮೆರಿಕದ ಅಧ್ಯಕ್ಷೀಯ ಹುದ್ದೆ ಚುನಾವಣೆ/ ರಿಪಬ್ಲಿಕನ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌ Read More »

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ‌ಮುಳುಗಡೆ| 13 ಭಾರತೀಯರು ಸೇರಿ 16 ಮಂದಿ ಕಣ್ಮರೆ

ಸಮಗ್ರ ನ್ಯೂಸ್: ತೈಲ ತುಂಬಿದ್ದ ಹಡಗೊಂದು ಸಮುದ್ರದಲ್ಲಿ ಮುಳುಗಿರುವ ಘಟನೆ ಒಮನ್‌ನಲ್ಲಿ ನಡೆದಿದೆ. ಈ ಭಾರೀ ದುರ್ಘಟನೆಯಲ್ಲಿ 13 ಭಾರತೀಯರು ಸೇರಿದಂತೆ ಒಟ್ಟು 16 ನೌಕಾ ಸಿಬ್ಬಂದಿ ಕಣ್ಮರೆಯಾಗಿದ್ದಾರೆ. ಈ ಬಗ್ಗೆ ಸಾಗರ ಭದ್ರತಾ ಕೇಂದ್ರ(MSC) ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ನೌಕೆಯಲ್ಲಿದ್ದ ಇತರ ಮೂವರ ಸಿಬ್ಬಂದಿಗಳು ಶ್ರೀಲಂಕಾ ಮೂಲದವರು ಎನ್ನಲಾಗಿದೆ. ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿದೆ ಎಂದು MSC X ನಲ್ಲಿನ

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ‌ಮುಳುಗಡೆ| 13 ಭಾರತೀಯರು ಸೇರಿ 16 ಮಂದಿ ಕಣ್ಮರೆ Read More »

ಮಸ್ಕತ್ ನ ಶಿಯಾ ಮಸೀದಿ ಬಳಿ ಗುಂಡಿನ ದಾಳಿ| ಓರ್ವ ಭಾರತೀಯ ಸಹಿತ 9 ಮಂದಿ‌ ಸಾವು

ಸಮಗ್ರ ನ್ಯೂಸ್: ಒಮಾನ್ ರಾಜಧಾನಿ ಮಸ್ಕತ್ನ ಶಿಯಾ ಮಸೀದಿಯ ಬಳಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿದ್ದಾರೆ ಎಂದು ಒಮಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ. ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್

ಮಸ್ಕತ್ ನ ಶಿಯಾ ಮಸೀದಿ ಬಳಿ ಗುಂಡಿನ ದಾಳಿ| ಓರ್ವ ಭಾರತೀಯ ಸಹಿತ 9 ಮಂದಿ‌ ಸಾವು Read More »

ವಿಚ್ಚೇದನ ಇಲ್ಲದೇ ಮದುವೆ| ಸುಪ್ರೀಂ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್ ವಿಚ್ಛೇದನವಿಲ್ಲದೆ ಎರಡನೇ ಬಾರಿಗೆ ಮದುವೆಯಾದ ದಂಪತಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣವು ಅಸಾಧಾರಣವಾಗಿರುವುದರಿಂದ ಆರೋಪಿಗಳಿಗೆ ವಿಶೇಷ ವಿನಾಯಿತಿ ನೀಡಲಾಗಿದೆ. ಅದೇನೆಂದರೆ ದಂಪತಿಗೆ ಚಿಕ್ಕ ಮಗುವಿದೆ. ಹೀಗಾಗಿ ಅವರಿಗೆ ವಿವಿಧ ಸಮಯಗಳಲ್ಲಿ ಶಿಕ್ಷೆಯನ್ನು ಅನುಭವಿಸುವ ಸ್ವಾತಂತ್ರ್ಯವನ್ನು ನೀಡಲಾಗುತ್ತದೆ. ಒಬ್ಬ ಆರೋಪಿಯ ಶಿಕ್ಷೆ ಪೂರ್ಣಗೊಂಡ ನಂತರ, ಇನ್ನೊಬ್ಬರು ಎರಡು ವಾರಗಳಲ್ಲಿ ಶರಣಾಗಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪತಿ ಮೊದಲು ಆರು ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಮಹಿಳೆ ಎರಡು

ವಿಚ್ಚೇದನ ಇಲ್ಲದೇ ಮದುವೆ| ಸುಪ್ರೀಂ ಮಹತ್ವದ ತೀರ್ಪು Read More »

ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ಭಾರತದ ಪರಿಹಾರ/ 2.5 ಮಿಲಿಯನ್ ಡಾಲರ್‌ ಪರಿಹಾರ ಧನ ಬಿಡುಗಡೆ

ಸಮಗ್ರ ನ್ಯೂಸ್‌: ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ಭಾರತವು 2.5 ಮಿಲಿಯನ್ ಡಾಲರ್‌ನ ಮೊದಲ ಕಂತನ್ನು ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆಗೆ (UNRWA) ಬಿಡುಗಡೆ ಮಾಡಿದೆ. ನೋಂದಾಯಿತ ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗೆ ನೇರ ಪರಿಹಾರ ಮತ್ತು ಕೆಲಸ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಇದು ಯುಎನ್ ಸದಸ್ಯ ರಾಷ್ಟ್ರಗಳ ಸ್ವಯಂಪ್ರೇರಿತ ಕೊಡುಗೆಯಾಗಿ ಹಣ ನೀಡುತ್ತಿದೆ. UNRWA, 1950 ರಿಂದ ಕಾರ್ಯನಿರ್ವಹಿಸುತ್ತಿದೆ. ಭಾರತದ ಬೆಂಬಲವು ಪ್ಯಾಲೇಸ್ವಿನಿಯನ್ ನಿರಾಶ್ರಿತರಿಗೆ ಒದಗಿಸಲಾದ ಶಿಕ್ಷಣ, ಆರೋಗ್ಯ, ಪರಿಹಾರ ಮತ್ತು ಸಾಮಾಜಿಕ ಸೇವೆಗಳು ಸೇರಿದಂತೆ ಏಜೆನ್ಸಿಯ ಪ್ರಮುಖ ಕಾರ್ಯಕ್ರಮಗಳು ಮತ್ತು

ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ಭಾರತದ ಪರಿಹಾರ/ 2.5 ಮಿಲಿಯನ್ ಡಾಲರ್‌ ಪರಿಹಾರ ಧನ ಬಿಡುಗಡೆ Read More »

ಟ್ರಂಪ್ ಮೇಲೆ‌ ಗುಂಡಿನ ದಾಳಿ| ಅಮೇರಿಕಾದ ಮಾಜಿ ಅಧ್ಯಕ್ಷ ಗಂಭೀರ

ಸಮಗ್ರ ನ್ಯೂಸ್: ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರವಾಗಿ ಗಾಯಗೊಂಡಿದ್ದಾರೆ ವರದಿಯಾಗಿದೆ. ‌ದಾಳಿಯಿಂದ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಒಸರುತ್ತಿರುವುದು ಕಂಡುಬಂದಿದೆ. ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಆರಂಭಿಕ ದೊಡ್ಡ ಸ್ಫೋಟದ ನಂತರ ಟ್ರಂಪ್ ಗಾಯಗೊಂಡಂತೆ ನೆಲಕ್ಕೆ ಬಿದ್ದರು. ಭದ್ರತಾ ಸಿಬ್ಬಂದಿ ಮಾಜಿ ಅಧ್ಯಕ್ಷರನ್ನು ತ್ವರಿತವಾಗಿ ರಕ್ಷಿಸಿ ವೇದಿಕೆಯಿಂದ ಹೊರಗೆ ಕರೆದೊಯ್ಯುತ್ತಿದ್ದಂತೆ ಅನೇಕ ಪ್ರೇಕ್ಷಕರಿಂದ ಕಿರುಚಾಟಗಳು

ಟ್ರಂಪ್ ಮೇಲೆ‌ ಗುಂಡಿನ ದಾಳಿ| ಅಮೇರಿಕಾದ ಮಾಜಿ ಅಧ್ಯಕ್ಷ ಗಂಭೀರ Read More »