ದೇಶ-ವಿದೇಶ

ಮದ್ಯದ ಅಮಲಲ್ಲಿ ಅರ್ಧ ಸುಟ್ಟ ಯುವತಿಯ ಮೃತದೇಹ ತಿಂದ ಕಟುಕರು…!!

ಸಮಗ್ರ ನ್ಯೂಸ್: ಕಂಠಪೂರ್ತಿ ಕುಡಿದ ವ್ಯಕ್ತಿಗೆ ಕೆಲವೊಮ್ಮೆ ತಾನು ಏನು ಮಾಡುತ್ತಿದ್ದೇನೆ ಎಂಬುದು ತಿಳಿದಿರುವುದಿಲ್ಲ. ಆತ ತಾನು ಏನು ಮಾಡುತ್ತಿರುವೆನೆಂಬ ಅರಿವಿಲ್ಲದೆ ಕುಡಿದ ಮತ್ತಿನಲ್ಲಿ ಇಬ್ಬರು ವ್ಯಕ್ತಿಗಳು ಅರ್ಧ ಸುಟ್ಟ ಯುವತಿಯ ಮೃತದೇಹವನ್ನು ತಿಂದ ಪ್ರಸಂಗವೊಂದು ಭುವನೇಶ್ವರದಲ್ಲಿ ನಡೆದಿದೆ. ಇಲ್ಲಿನ ಮಯರ‍್ಬಂಜ್ ಜಿಲ್ಲೆಯ ಬದಶಾಹಿನ ಬ್ಲಾಕ್ ನ ಗ್ರಾಮವೊಂದರಲ್ಲಿ ಕೃತ್ಯ‌ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ 25 ವರ್ಷದ ಯುವತಿಯೊಬ್ಬಳ ಮೃತದೇಹವನ್ನು ಸ್ಥಳೀಯ ಶವಾಗಾರಕ್ಕೆ ಸಾಗಿಸಿ ಅಲ್ಲಿ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಆದರೆ ಆಕೆಯ ದೇಹ ಪೂರ್ತಿಯಾಗಿ ಸುಟ್ಟಿರಲಿಲ್ಲ. […]

ಮದ್ಯದ ಅಮಲಲ್ಲಿ ಅರ್ಧ ಸುಟ್ಟ ಯುವತಿಯ ಮೃತದೇಹ ತಿಂದ ಕಟುಕರು…!! Read More »

ನೇಪಾಳದಲ್ಲಿ ನಾಪತ್ತೆಯಾದ ಹೆಲಿಕಾಪ್ಟರ್ ಪತನ| ಗುಡ್ಡಗಾಡುಗಳಲ್ಲಿ ಅವಶೇಷ ಪತ್ತೆ

ಸಮಗ್ರ ನ್ಯೂಸ್: ನೇಪಾಳದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ನಾಪತ್ತೆಯಾಗಿದ್ದು, ಇದೀಗ ಇದರ ಅವಶೇಷಗಳು ಗುಡ್ಡಗಾಡು ಪ್ರದೇಶದಲ್ಲಿ ಪತ್ತೆಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಐದು ಮಂದಿ ವಿದೇಶಿಯರೂ ಸೇರಿದಂತೆ ಒಟ್ಟು ಆರು ಮಂದಿ ಇದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಹಾರಾಟ ಆರಂಭಿಸಿದ್ದ ಈ ಹೆಲಿಕಾಪ್ಟರ್ ಬೆಳಗ್ಗೆ 10 ಗಂಟೆ ಸುಮಾರಿಗೆ ಕಂಟ್ರೋಲ್ ಟವರ್ ರೆಡಾರ್ ನಿಂದ ಸಂಪರ್ಕ ಕಳೆದುಕೊಂಡಿದ್ದು, ಬಳಿಕ ಪತನಗೊಂಡಿರುವುದು ಬೆಳಕಿಗೆ ಬಂದಿದೆ. ಹೆಲಿಕಾಪ್ಟರ್ ನ ಅವಶೇಷ ಹಾಗೂ

ನೇಪಾಳದಲ್ಲಿ ನಾಪತ್ತೆಯಾದ ಹೆಲಿಕಾಪ್ಟರ್ ಪತನ| ಗುಡ್ಡಗಾಡುಗಳಲ್ಲಿ ಅವಶೇಷ ಪತ್ತೆ Read More »

ನೇಪಾಳದಲ್ಲಿ 6 ಜನರಿದ್ದ ಹೆಲಿಕಾಪ್ಟರ್ ನಾಪತ್ತೆ

ಸಮಗ್ರ ನ್ಯೂಸ್: ನೇಪಾಳದಲ್ಲಿ 6 ಜನರಿದ್ದ ಹೆಲಿಕಾಪ್ಟರ್ ನಾಪತ್ತೆಯಾಗಿರುವ ಬಗ್ಗೆ ಸುದ್ದಿಸಂಸ್ಥೆ ANI ವರದಿ ಮಾಡಿದೆ. “ಸೋಲುಖುಂಬುವಿನಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಬೆಳಿಗ್ಗೆ ಸುಮಾರು 10 ಗಂಟೆಗೆ ಕಂಟ್ರೋಲ್ ಟವರ್‌ ನೊಂದಿಗೆ ಸಂಪರ್ಕ ಕಡಿತಗೊಂಡಿದೆ” ಎಂದು ಮಾಹಿತಿ ಅಧಿಕಾರಿ ಜ್ಞಾನೇಂದ್ರ ಭುಲ್ ಹೇಳಿದ್ದಾರೆ.9NMV ಕರೆ ಚಿಹ್ನೆಯೊಂದಿಗೆ ಹೆಲಿಕಾಪ್ಟರ್ ಬೆಳಗ್ಗೆ 10:12ಕ್ಕೆ (ಸ್ಥಳೀಯ ಸಮಯ) ರಾಡಾರ್‌ನಿಂದ ಹೊರಬಂದಿತು. ನಾಪತ್ತೆಯಾದ ಹೆಲಿಕಾಪ್ಟರ್‌ನಲ್ಲಿ 5 ವಿದೇಶಿ ಪ್ರಜೆಗಳಿದ್ದರು ಎಂದು ವರದಿಯಾಗಿದೆ.

ನೇಪಾಳದಲ್ಲಿ 6 ಜನರಿದ್ದ ಹೆಲಿಕಾಪ್ಟರ್ ನಾಪತ್ತೆ Read More »

ಭಾರೀ ಮಳೆಗೆ ತತ್ತರಿಸುತ್ತಿರುವ ಉತ್ತರ ಭಾರತ| ಕೇರಳ ಸೇರಿ 5 ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರತಕ್ಕೆ ಮಳೆಗಾಲ ಆರಂಭ ಕೊಂಚ ತಡವಾದರೂ ಯಾರೂ ಊಹಿಸದ ರೀತಿಯಲ್ಲಿ ಅಬ್ಬರಿಸುತ್ತಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತಕ್ಕೆ ಅನಾಹುತವೇ ಸೃಷ್ಟಿಯಾಗಿದೆ. ಮುಖ್ಯವಾಗಿ ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳು ಮುಳುಗಡೆಯಾಗಿದೆ. ಹಿಮಾಚಲ ಪ್ರದೇಶದ ಬಹುತೇಕ ಜಿಲ್ಲೆಯಲ್ಲಿ ಭೂಕುಸಿತ, ಪ್ರವಾಹದಿಂದ ಪಟ್ಟಣ, ಗ್ರಾಮಗಳೇ ಸರ್ವನಾಶವಾಗಿದೆ. ಭೀಕರ ಮಳೆಗೆ ಇದೀಗ ಐದು ರಾಜ್ಯಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಿಮಾಚಲ ಪ್ರದೇಶ, ದೆಹಲಿ, ಹರ್ಯಾಣ, ಪಂಜಾಬ್ ಹಾಗೂ ಕೇರಳ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ

ಭಾರೀ ಮಳೆಗೆ ತತ್ತರಿಸುತ್ತಿರುವ ಉತ್ತರ ಭಾರತ| ಕೇರಳ ಸೇರಿ 5 ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ Read More »

ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ಕಸ್ತೂರಿರಂಗನ್ ಗೆ ಲಘು ಹೃದಯಾಘಾತ| ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಪ್ಟ್

ಸಮಗ್ರ ವಾರ್ತೆ: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆ ತರಲಾಗುತ್ತಿದೆ. ಅವರು ಶ್ರೀಲಂಕಾದ ಕೊಲಂಬೊಗೆ ತೆರಳಿದ್ದ ವೇಳೆ ಈ ಲಘು ಹೃದಯಾಘಾತವಾಗಿದ್ದು, ವಿಮಾನದ ಮೂಲಕ ಅವರನ್ನು ಬೆಂಗಳೂರಿಗೆ ಕರೆತಂದು ನಾರಾಯಣ ಹೃದಯಾಲಯದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಸಂಜೆ 5.30ರ ಸುಮಾರಿಗೆ ಅವರನ್ನು ಬೆಂಗಳೂರಿನ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಕರೆ ತರಲಿದ್ದು, ಅಲ್ಲಿಂದ ಜೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಕರೆದೊಯ್ಯಲಾಗುವುದು. ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ.ದೇವಿ ಶೆಟ್ಟಿ

ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ಕಸ್ತೂರಿರಂಗನ್ ಗೆ ಲಘು ಹೃದಯಾಘಾತ| ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಪ್ಟ್ Read More »

ಡಾಕ್ಟರ್‌ಗೆ 500 ರೂ. ನಕಲಿ ನೋಟು ಕೊಟ್ಟು ಯಾಮಾರಿಸಿದ ರೋಗಿ| ಫನ್ನಿ ಮೂಮೆಂಟ್‌ ಎಂದ ಡಾಕ್ಟರ್‌

ಸಮಗ್ರ ನ್ಯೂಸ್: ರೋಗಿಯೊಬ್ಬ ಡಾಕ್ಟರ್‌ಗೆ 500 ರೂ. ಮುಖಬೆಲೆಯ ನಕಲಿ ನೋಟು ಕೊಟ್ಟು ಯಾಮಾರಿಸಿದ ಘಟನೆ ನಡೆದಿದೆ. ನಕಲಿ ನೋಟಿನ ಚಿತ್ರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವ ಡಾಕ್ಟರ್‌, ಇದೊಂದು ಫನ್ನಿ ಮೂಮೆಂಟ್‌ ಅಂತ ಬರೆದುಕೊಂಡಿದ್ದಾರೆ. ಆರ್ಥೋಪೆಡಿಕ್ ಶಸ್ತ್ರಚಿಕಿತ್ಸಕ ಡಾ.ಮಾನನ್‌ ವೊರ ಬಳಿ ರೋಗಿಯೊಬ್ಬರು ವೈದ್ಯಕೀಯ ತಪಾಸಣೆಗೆ ಬಂದಿದ್ದರು. ಚಿಕಿತ್ಸೆ ಬಳಿಕ ಶುಲ್ಕವಾಗಿ 500 ರೂ. ಮುಖಬೆಲೆ ನೋಟನ್ನು ಕೊಟ್ಟಿದ್ದರು. ಆದರೆ ಇದು ನಕಲಿ ನೋಟು ಎಂದು ನಂತರ ವೈದ್ಯರಿಗೆ ಗೊತ್ತಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನೋಟಿನೊಂದಿಗೆ

ಡಾಕ್ಟರ್‌ಗೆ 500 ರೂ. ನಕಲಿ ನೋಟು ಕೊಟ್ಟು ಯಾಮಾರಿಸಿದ ರೋಗಿ| ಫನ್ನಿ ಮೂಮೆಂಟ್‌ ಎಂದ ಡಾಕ್ಟರ್‌ Read More »

ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್‌: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ವಿದ್ಯಾರ್ಥಿನಿ ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾಳೆ. ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ (11) ಕಳೆದ ತಿಂಗಳು ಜೂ. 29 ರಂದು ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾಳೆ. ಪತ್ರದ ಸಾರಾಂಶನಾನು (ಲಕ್ಷ್ಮೀ) ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ

ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ ವಿದ್ಯಾರ್ಥಿನಿ Read More »

ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಹರಿಯಾಣದ ಸೋನಿಪತ್‌ ಜಿಲ್ಲೆಯ ಮದಿನಾ ಗ್ರಾಮಕ್ಕೆ ಶನಿವಾರ ದಿಢೀರ್‌ ಭೇಟಿ ನೀಡಿ ಅಲ್ಲಿಯ ಜನರೊಂದಿಗೆ ಸಂವಾದ ನಡೆಸಿದ್ದು, ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ರೈತರೊಂದಿಗೆ ಸಮಯ ಕಳೆದಿದ್ದಾರೆ. ರಾಹುಲ್‌ ಅವರು ಭತ್ತದ ಸಸಿಗಳನ್ನು ನಾಟಿ ಮಾಡುತ್ತಿರುವ ಚಿತ್ರಗಳನ್ನು ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ. ರೈತ ಮಹಿಳೆಯರೊಂದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತುಕತೆ ನಡೆಸಿದರು.

ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್ ಗಾಂಧಿ Read More »

ಪಾಕ್‌ ಗಂಡನ ಬಿಟ್ಟು ಭಾರತದ ಪ್ರೀಯಕರನೊಂದಿಗೆ ಹೊಸ ಜೀವನ ಶುರು ಮಾಡ್ತಿದ್ದಾಳೆ ಪಾಕಿಸ್ತಾನಿ ಮಹಿಳೆ

ಸಮಗ್ರ ನ್ಯೂಸ್: ಭಾರತಕ್ಕೆ ಅಕ್ರಮವಾಗಿ ತನ್ನ 4 ಮಕ್ಕಳೊಂದಿಗೆ ಪ್ರವೇಶಿಸಿದ್ದ ಮಹಿಳೆ ಮತ್ತು ಆತನ ಪ್ರಿಯಕರ ಹಾಗೂ ಅವರಿಬ್ಬರಿಗೆ ಆಶ್ರಯ ನೀಡಿದ್ದ ಪ್ರಿಯಕರನ ತಂದೆಯನ್ನ ಗ್ರೇಟರ್ ನೋಯ್ಡಾ ಪೊಲೀಸರು ಜುಲೈ ಬಂಧಿಸಿದ್ದರು. ಶುಕ್ರವಾರ ಸ್ಥಳೀಯ ನ್ಯಾಯಾಲಯ (Local Court) ಈ ಮೂವರಿಗೂ ಜಾಮೀನು ನೀಡಿತು. ಕಾಗದ ಪತ್ರಗಳ ಪರಿಶೀಲನೆ ಕೆಲಸ ಮುಗಿದ ಬಳಿಕ ಶನಿವಾರ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು. ಜೈಲಿನಿಂದ ಬಿಡುಗಡೆಗೊಂಡ ನಂತರ

ಪಾಕ್‌ ಗಂಡನ ಬಿಟ್ಟು ಭಾರತದ ಪ್ರೀಯಕರನೊಂದಿಗೆ ಹೊಸ ಜೀವನ ಶುರು ಮಾಡ್ತಿದ್ದಾಳೆ ಪಾಕಿಸ್ತಾನಿ ಮಹಿಳೆ Read More »

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ

ಸಮಗ್ರ ನ್ಯೂಸ್: ಇತ್ತೀಚಿಗೆ ಮಾರುಕಟ್ಟೆಯಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ಗಳ ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಬೇಡಿಕೆಗೆ ಅನುಗುಣವಾಗಿ ವಿವಿಧ ವಾಹನ ತಯಾರಕ ಕಂಪನಿಗಳು ತಮ್ಮ ಹಳೆಯ ಮಾದರಿಯ ಕಾರ್ ಗಳ ಖರೀದಿಗೆ ಹಣಕಾಸಿನ ಯೋಜನೆಯನ್ನು ಬಿಡುಗಡೆ ಮಾಡುತ್ತಿವೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ (Maruti Suzuki ) ಕಂಪನಿ CNG ಮಾದರಿಯ ಕಾರ್ ಗಳನ್ನೂ ಗ್ರಾಹಕರಿಗಾಗಿ ಪರಿಚಯಿಸಿದೆ. ಇನ್ನು ಮಾರುತಿ ಸುಜುಕಿ ಆಲ್ಟೊ CNG ಕಾರಿನ ಬೆಲೆ ಸ್ವಲ್ಪ ಅಧಿಕವಾಗಿದೆ. ಆದರೆ ಇದೀಗ ಕಂಪನಿಯು ಈ ಕಾರನ್ನು

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ Read More »