ದೇಶ-ವಿದೇಶ

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ ಜಾಯ್| ಬಿರುಗಾಳಿ ; ರಕ್ಕಸ ಅಲೆಗಳಿಗೆ ಕರಾವಳಿ ತತ್ತರ

ಸಮಗ್ರ ನ್ಯೂಸ್: ಬಿಪರ್​ಜಾಯ್ ಚಂಡಮಾರುತ ಗುರುವಾರ ರಾತ್ರಿ ಗುಜರಾತ್​ನ ಸೌರಾಷ್ಟ್ರ ಮತ್ತು ಕಛ್ ಕರಾವಳಿಗೆ ಅಪ್ಪಳಿಸಿದೆ. 125 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸಿವೆ. ಕಛ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್ಗರ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ, ಮಳೆ ಆಗುತ್ತಿದೆ. ತಗ್ಗು ಪ್ರದೇಶಗಳು ಮುಳುಗಡೆ ಆಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಸಮುದ್ರದಲ್ಲಿ 2-3 ಮೀಟರ್ ಎತ್ತರದ […]

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ ಜಾಯ್| ಬಿರುಗಾಳಿ ; ರಕ್ಕಸ ಅಲೆಗಳಿಗೆ ಕರಾವಳಿ ತತ್ತರ Read More »

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಪೊಲೀಸರಿಗೆ ಸರಿಯಾದ ಮಾಹಿತಿ ನೀಡದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಮೌಖಿಕ ಎಚ್ಚರಿಕೆಯನ್ನು ನೀಡಿದೆ. ಅರ್ಜಿಯ ವಿಚಾರಣಾ ಸಮಯದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆಯನ್ನು ನೀಡಿದೆ. ಫೇಸ್‌ಬುಕ್ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ಕಾರಣಕ್ಕೆ ಅರ್ಜಿ ವಿಚಾರಣೆ ವೇಳೆ ಮಂಗಳೂರು ಪೊಲೀಸರು ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದರು. ಪ್ರಕರಣದ ಕುರಿತು ಸರಿಯಾದ ಮಾಹಿತಿಯನ್ನು ಒಂದು ವಾರದಲ್ಲಿ ಒದಗಿಸುವಂತೆ ಹೈಕೋರ್ಟ್‌ ಕೇಂದ್ರ ಸರ್ಕಾರ

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್ Read More »

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ಜೈಲಿನಲ್ಲಿರುವ ಭಾರತೀಯ ಪ್ರಜೆಯೊಬ್ಬರ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರೊಂದಿಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಸಾಮಾಜಿಕ ಮಾಧ್ಯಮದ ದೈತ್ಯ ಚಟುವಟಿಕೆಗಳನ್ನು ಮುಚ್ಚುವ ಆದೇಶವನ್ನು ಹೊರಡಿಸುವ ಬಗ್ಗೆ ಪರಿಗಣಿಸುವುದಾಗಿ ಕರ್ನಾಟಕ ಹೈಕೋರ್ಟ್ ಬುಧವಾರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬಿಕರ್ನಕಟ್ಟೆ ನಿವಾಸಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ. ‘ಅಗತ್ಯ ಮಾಹಿತಿಯೊಂದಿಗೆ ಸಂಪೂರ್ಣ ವರದಿಯನ್ನು

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಆಭರಣ ಪ್ರಿಯರಿಗೆ ಸಂತಸದ ಸುದ್ದಿ| ಬಂಗಾರ ದರ ದಿನೇದಿನೇ ಹಗುರ!!

ಸಮಗ್ರ ನ್ಯೂಸ್: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ದುಬೈನಲ್ಲಿ ಇಳಿಕೆಯ ವೇಗ ಹೆಚ್ಚಿದೆ. ಭಾರತೀಯ ರೂ ಲೆಕ್ಕದಲ್ಲಿ ದುಬೈನಲ್ಲಿ 10 ಗ್ರಾಮ್ ಚಿನ್ನದ ಬೆಲೆ 49,000 ರೂಗೆ ಬಂದಿಳಿದಿದೆ. ಭಾರತದ ವಿವಿಧೆಡೆಯೂ ಚಿನ್ನ ಅಗ್ಗಗೊಂಡಿದೆ. ಇಲ್ಲಿ ಬೆಳ್ಳಿ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರೆಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರೂಪಾಯಿ ಆಗಿದೆ. 100 ಗ್ರಾಮ್

ಆಭರಣ ಪ್ರಿಯರಿಗೆ ಸಂತಸದ ಸುದ್ದಿ| ಬಂಗಾರ ದರ ದಿನೇದಿನೇ ಹಗುರ!! Read More »

ಸಿಇಟಿ ಫಲಿತಾಂಶ ಪ್ರಕಟ|ಈ ಬಾರಿಯೂ ಬಾಲಕಿಯರೇ ಮೇಲುಗೈ| ಫಲಿತಾಂಶ ನೋಡೋದು ಹೀಗೆ…

ಸಮಗ್ರ ನ್ಯೂಸ್: 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ಕೋರ್ಸ್​ಗೆ- 2,03,381 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ-

ಸಿಇಟಿ ಫಲಿತಾಂಶ ಪ್ರಕಟ|ಈ ಬಾರಿಯೂ ಬಾಲಕಿಯರೇ ಮೇಲುಗೈ| ಫಲಿತಾಂಶ ನೋಡೋದು ಹೀಗೆ… Read More »

ನಾಳೆ(ಜೂ.15) ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (KCET-2023) ಫಲಿತಾಂಶ ಜೂನ್.15ರ ಗುರುವಾರದ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಅವರು ಇಲ್ಲಿನ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಿಗ್ಗೆ 9:30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ(ಜೂ.15) ಸಿಇಟಿ ಫಲಿತಾಂಶ ಪ್ರಕಟ Read More »

‘ನೀಟ್’ ಫಲಿತಾಂಶ; ಧ್ರುವ ಅಡ್ವಾಣಿ ರಾಜ್ಯಕ್ಕೆ ಫಸ್ಟ್

ಸಮಗ್ರ ನ್ಯೂಸ್: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬೆಂಗಳೂರಿನ ಜಿ.ಆರ್‌.ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿ ಧ್ರುವ ಅಡ್ವಾಣಿ ರಾಜ್ಯಕ್ಕೆ ಮೊದಲಿಗರಾಗಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಅಗ್ರ 5ನೇ ರ್‍ಯಾಂಕ್‌ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಷಯದಲ್ಲಿ (ಸಿಬಿಎಸ್‌ಸಿ) ಶೇ 99.4 ಗಳಿಸಿದ್ದ ಧ್ರವ ಅಡ್ವಾಣಿ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್‌) ಸೇರುವ ಗುರಿ ಹೊಂದಿದ್ದಾರೆ. ಕರ್ನಾಟಕದ ಮತ್ತೊಬ್ಬ ವಿದ್ಯಾರ್ಥಿ ಎಸ್‌.ಎಚ್‌.ಭೈರೇಶ್‌ ಅಖಿಲ

‘ನೀಟ್’ ಫಲಿತಾಂಶ; ಧ್ರುವ ಅಡ್ವಾಣಿ ರಾಜ್ಯಕ್ಕೆ ಫಸ್ಟ್ Read More »

ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತೆ ಅರೆಸ್ಟ್

ಸಮಗ್ರ ನ್ಯೂಸ್: ಸರ್ಕಾರದ ದಾಖಲೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಸರ್ಕಾರದ ದಾಖಲೆಗಳನ್ನು ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧ ಮಿಯಾಮಿ ಕೋರ್ಟ್ ಗೆ ಶರಣಾಗಿದ್ದ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಜೂನ್ 13 ರಂದು ಮಿಯಾಮಿಯ ಫೆಡರಲ್ ನ್ಯಾಯಾಲಯಕ್ಕೆ ಆಗಮಿಸಿದರು, ಅಲ್ಲಿ ಅವರನ್ನು ಬಂಧಿಸಲಾಯಿತು ಮತ್ತು ರಹಸ್ಯ ದಾಖಲೆಗಳನ್ನು ತಪ್ಪಾಗಿ ನಿರ್ವಹಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಯಿತು. ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ

ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತೆ ಅರೆಸ್ಟ್ Read More »

ಜೂ.14ರಂದು ಹೊರ ಬೀಳಲಿದೆ ಸಿಇಟಿ ಫಲಿತಾಂಶ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು (ಕೆಸಿಇಟಿ) ಜೂನ್ 12 ರಂದು ಘೋಷಿಸಲು ಯೋಜಿಸಿತ್ತು. ಆದರೆ ಇದೀಗ ಜೂನ್ 14 ರಂದು ರಿಸಲ್ಟ್ ಹೊರಬೀಳಲಿದೆ ಎಂದು ಕೆಇಎ ಮೂಲವು ಮಾಧ್ಯಮಗಳಿಗೆ ತಿಳಿಸಿದೆ. “ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಅಂದರೆ ಜೂನ್ 12 ರಂದು ಬಿಡುಗಡೆ ಮಾಡುವುದಾಗಿ ನಿಗದಿಪಡಿಸಲಾಗಿತ್ತು. ಆದರೆ ಕೆಲವು ಆಂತರಿಕ ತಪಾಸಣೆಗಳ ಕಾರಣ ಫಲಿತಾಂಶವನ್ನು ಜೂನ್ 14 ರಂದು ಪ್ರಕಟಿಸಲಾಗುವುದು” ಎಂದು ಕೆಇಎ ಅಧಿಕಾರಿಯೊಬ್ಬರು

ಜೂ.14ರಂದು ಹೊರ ಬೀಳಲಿದೆ ಸಿಇಟಿ ಫಲಿತಾಂಶ Read More »

ಬರೋಬ್ಬರಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ ಮಕ್ಕಳು| ಅಷ್ಟು ದಿನ ಬದುಕಿದ್ದೇ ರೋಚಕ..!

ಸಮಗ್ರ ನ್ಯೂಸ್: ಅಮೆಜಾನ್‌ ಪ್ರಾಂತ್ಯದ ಅರರಾಕುವಾರಾದಿಂದ ಸ್ಯಾನ್‌ ಜೋಸ್‌ ಡೆಲ್‌ ಗುವಿಯಾರ್‌ಗೆ ಮೇ 1ರಂದು ಪ್ರಯಾಣ ಬೆಳೆಸಿದ್ದ ಒಂದೇ ಕುಟುಂಬದ 7 ಮಂದಿ ಮತ್ತು ಒಬ್ಬ ಪೈಲಟ್‌ ಇದ್ದ ʼಸೆಸ್ನಾ 206ʼ ಸಣ್ಣ ವಿಮಾನವೊಂದು ಎಂಜಿನ್‌ ವೈಫಲ್ಯಗೊಂಡು ದಟ್ಟ ಕಾಡಿನಲ್ಲಿ ಬಿದ್ದಿತ್ತು. ಈ ಘಟನೆಯಲ್ಲಿ ತಾಯಿ ಮತ್ತು ವಿಮಾನದ ಪೈಲಟ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಾರ್ಯಾಚರಣೆ ವೇಳೆ ಕಾಡಿನಲ್ಲಿ ಮಕ್ಕಳ ಹೆಜ್ಜೆ ಗುರುತು, ಅರ್ಧ ತಿಂದ ಹಣ್ಣುಗಳು ಸೇರಿದಂತೆ ಹಲವು ಕುರುಹುಗಳು ಪತ್ತೆಯಾಗಿದ್ದು, ಹೀಗಾಗಿ ಮಕ್ಕಳು ಬದುಕಿರುವ ಸುಳಿವು

ಬರೋಬ್ಬರಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ ಮಕ್ಕಳು| ಅಷ್ಟು ದಿನ ಬದುಕಿದ್ದೇ ರೋಚಕ..! Read More »