ದೇಶ-ವಿದೇಶ

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ಹಾಜರಾದ 71,134 ಬಾಲಕರಲ್ಲಿ 27,705 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.38 ಫಲಿತಾಂಶ ಬಂದಿದೆ. […]

ಎಸ್ಎಸ್ಎಲ್ ಸಿ ಪೂರಕ ಪಲಿತಾಂಶ ಪ್ರಕಟ| ಬಾಲಕಿಯರೇ ಮೇಲುಗೈ Read More »

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ (ಜೂ.30) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:30.06.2023 ರಂದು ಬೆಳಿಗ್ಗೆ 11.00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ನಾಳೆ ಬೆಳಿಗ್ಗೆ ವಿದ್ಯಾರ್ಥಿಗಳು 11 ಗಂಟೆಯ ಬಳಿಕ ಮಂಡಳಿಯ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ಫಲಿತಾಂಶವನ್ನು

ಜೂ.30: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ

ಸಮಗ್ರ ನ್ಯೂಸ್: ಪರೀಕ್ಷಾ ಮಾದರಿಯನ್ನು ಪರಿಶೀಲಿಸಲು ಐಐಟಿ ಕೌನ್ಸಿಲ್ ಅನ್ನು ಕೇಳಲಾಗಿದ್ದು. ಇದರಿಂದ ಕೋಚಿಂಗ್‌ಗಳನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ಐಐಟಿ ದೆಹಲಿಗೆ ೫ ತಿಂಗಳೊಳಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಐಐಟಿ ಅಡ್ವಾನ್ಸ್ ಬದಲಿಗೆ ಜಂಟಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಐಐಟಿ ಕೌನ್ಸಿಲ್ ಸಭೆಯಲ್ಲೂ ಕೇಂದ್ರ ಸರ್ಕಾರ ಈ ಬಗ್ಗೆ ಸಲಹೆಯನ್ನು ಮುಂದಿಟ್ಟಿದ್ದು, ಸಿಎಫ್‌ಟಿಐ, ಐಐಟಿ, ಎನ್‌ಐಟಿ ಸೇರಿದಂತೆ ದೇಶದ ಇತರೆ ಕೇಂದ್ರ ಅನುದಾನಿತ ತಾಂತ್ರಿಕ ಸಂಸ್ಥೆಗಳಲ್ಲಿ ಪ್ರವೇಶಕ್ಕೆ

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ Read More »

ಚಿನ್ನ ಖರೀದಿದಾರರಿಗೆ ಶುಭ ಶುಕ್ರವಾರ| ಇಂದೂ ಇಳಿಕೆಯಾಗಿದೆ ಬಂಗಾರದ ಬೆಲೆ

ಸಮಗ್ರ ನ್ಯೂಸ್: ಜೂನ್ 23ರ ಶುಕ್ರವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹44,000 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯೂ 500 ರೂಪಾಯಿ ಇಳಿಕೆ ಕಂಡು 1 ಕೆಜಿಗೆ 71,500 ರೂಪಾಯಿಗೆ ತಲುಪಿದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 49,000 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆಯಾಗಿ 49,000ರು ಬೆಲೆ ಹಾಗೂ

ಚಿನ್ನ ಖರೀದಿದಾರರಿಗೆ ಶುಭ ಶುಕ್ರವಾರ| ಇಂದೂ ಇಳಿಕೆಯಾಗಿದೆ ಬಂಗಾರದ ಬೆಲೆ Read More »

ಕಾಣೆಯಾಗಿದ್ದ ಜಲಾಂತರ್ಗಾಮಿ ನೌಕೆಯ ಅವಶೇಷ ಪತ್ತೆ

ಸಮಗ್ರ ನ್ಯೂಸ್: ಕಾಣೆಯಾದ ಟೈಟಾನಿಕ್ ಪ್ರವಾಸಿ ಜಲಾಂತರ್ಗಾಮಿ ನೌಕೆಯ ಹುಡುಕಾಟದಲ್ಲಿ ರಿಮೋಟ್ ಚಾಲಿತ ವಾಹನದಿಂದ ಅವಶೇಷಗಳು ಪತ್ತೆಯಾಗಿವೆ ಎಂದು ಯುಎಸ್ ಕೋಸ್ಟ್ ಗಾರ್ಡ್ ಗುರುವಾರ ತಿಳಿಸಿದೆ. ಕಾಣೆಯಾದ ಟೈಟಾನಿಕ್ ಜಲಾಂತರ್ಗಾಮಿ ನೌಕೆಗಾಗಿ ಶೋಧ ನಡೆಸುತ್ತಿರುವ ತಂಡಗಳು ಅವಶೇಷಗಳನ್ನ ಪತ್ತೆಹಚ್ಚಿವೆ ಮತ್ತು ಅದನ್ನ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಯುಎಸ್ಸಿಜಿ ತಿಳಿಸಿದೆ.

ಕಾಣೆಯಾಗಿದ್ದ ಜಲಾಂತರ್ಗಾಮಿ ನೌಕೆಯ ಅವಶೇಷ ಪತ್ತೆ Read More »

ಶಿಕ್ಷಕರ ವರ್ಗಾವಣೆಗೆ `ಕೌನ್ಸೆಲಿಂಗ್’ | ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ಸಮಗ್ರ ನ್ಯೂಸ್: 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು , ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರ ಸಾಮಾನ್ಯ ವರ್ಗಾವಣೆಗೆ ಕೌನ್ಸೆಲಿಂಗ್ ಗೆ ಮಂಗಳವಾರದಿಂದ ಚಾಲನೆ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಆರೇಳು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆಗೆ ಚಾಲನೆ ನೀಡಲಾಗಿದ್ದು, ತಕ್ಷಣದಿಂದಲೇ ಕೌನ್ಸೆಲಿಂಗ್ ಪ್ರಾರಂಭಗೊಳ್ಳಲಿದೆ. ಪುನಾರಂಭದ ಬಗ್ಗೆ ಬಹಳ ಒತ್ತಡ ಇದ್ದ

ಶಿಕ್ಷಕರ ವರ್ಗಾವಣೆಗೆ `ಕೌನ್ಸೆಲಿಂಗ್’ | ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ Read More »

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ

ಸಮಗ್ರ ನ್ಯೂಸ್:ಹಲವು ವರ್ಷಗಳಿಂದ ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿರುವ ಯೋಗ. ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ 21 ಅನ್ನು ಅನೇಕ ಭೌತಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಪ್ರಪಂಚದ ಜನರಿಗೆ ಅರಿವು ಮೂಡಿಸಲು ‘ಮಾನವೀಯತೆ’ ಎಂಬ ಧ್ಯೇಯದೊಂದಿಗೆ ‘ಅಂತರರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲಾಗುತ್ತದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಮತ್ತು ಯೋಗಾಸನಗಳು ಸಹಾಯ ಮಾಡುತ್ತವೆ. ಅಲ್ಲದೆ ದೇಹದ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸಾವಿರಾರು ವರ್ಷದ ಇತಿಹಾಸವಿರುವ ಯೋಗಾಭ್ಯಾಸ ಇಂದು ಪಾಶ್ಚಾತ್ಯ ದೇಶಗಳಲ್ಲಿ ಹೆಚ್ಚಿನ ಪ್ರಸಿದ್ಧಿಯನ್ನು ಪಡೆದಿದೆ.

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ Read More »

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ

ಸಮಗ್ರ ನ್ಯೂಸ್: ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡವನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ ‘ರೋಬೋಟಿಕ್‌ ಎನ್‌-ಬ್ಲಾಕ್‌’ ವಿಧಾನದ ಮೂಲಕ ಕಸಿ ಮಾಡಲಾಗಿದ್ದು, ಈ ಪ್ರಕರಣ ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣವಾಗಿದೆ. ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ ಶ್ರೀಹರ್ಷ ಹರಿನಾಥ ಅವರ ತಂಡವು ಈ ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಡಾ. ಕೇಶವಮೂರ್ತಿ, 30 ವರ್ಷದ ವ್ಯಕ್ತಿಯು ದೀರ್ಘಕಾಲದಿಂದ ಮೂತ್ರಪಿಂಡದ

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ Read More »

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ?

ಸಮಗ್ರ ನ್ಯೂಸ್: ಮೇ, ಜೂನ್ 2023ರಂದು ನಡೆಸಲಾದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜೂ.20ರ ಮಂಗಳವಾರದಂದು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 23-05-2023 ರಿಂದ 03-06-2023ರಂದು ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಮುಕ್ತಾಯವಾಗಿದ್ದು, ಈ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ? Read More »

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ

ಇಂಪಾಲ: ಸಂಘರ್ಷ ಪೀಡಿತ ಪ್ರದೇಶವಾದ ಮಣಿಪುರದಲ್ಲಿ ಶುಕ್ರವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪೊಲೀಸ್ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶನಿವಾರ ಮುಂಜಾನೆಯವರೆಗೂ ಗುಂಡಿನ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್‌ಪುರ್ ಜಿಲ್ಲೆಯ ಕಾಂಗ್ವಾಯ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಗುಂಪು ಗುಂಪಾಗಿ ಸೇರಿಕೊಂಡು ಅಲ್ಲಲ್ಲಿ ಬೆಂಕಿ ಹಚ್ಚುವ ವಿದ್ವಂಸಕ ಕೃತ್ಯಗಳು ನಡೆದಿವೆ. ಭಾರತೀಯ ಸಶಸ್ತ್ರ ಪಡೆ, ಅಸ್ಸಾಂ ರೈಫಲ್ಸ್, ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಮತ್ತು ರಾಜ್ಯ ಪೊಲೀಸರ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ Read More »