ದೇಶ-ವಿದೇಶ

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 21 ಮಂದಿ ಸಾವನ್ನಪ್ಪಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ […]

ಕೇರಳದ ಮಲಪ್ಪುರಂನಲ್ಲಿ ಬೋಟ್ ಪಲ್ಟಿ| ಮಹಿಳೆಯರು, ಮಕ್ಕಳು ಸೇರಿ‌ ‌21 ಮಂದಿ ದುರ್ಮರಣ Read More »

ಇಂದು(ಮೇ.8) ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿಯು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಘೋಷಣೆಯ ದಿನಾಂಕ ಹಾಗೂ ಸಮಯದ ಬಗ್ಗೆ ಮಾಹಿತಿಯನ್ನು ಪ್ರಕಟಿಸಿದೆ. ಇಂದು(ಮೇ.8) ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶ ಘೋಷಣೆ ಮಾಡಲಿದೆ. karresults.nic.in ಮತ್ತು kseab.karnataka.gov.in ನಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. 2022-23ನೇ ಶೈಕ್ಷಣಿಕ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆಯು ಮಾರ್ಚ್​ 28ರಿಂದ ಏಪ್ರಿಲ್​

ಇಂದು(ಮೇ.8) ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ Read More »

ಮಣಿಪುರದಲ್ಲಿ ಹಿಂಸಾಚಾರಕ್ಕೆ 54 ಮಂದಿ ಬಲಿ| ಸದ್ಯ‌ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

ಸಮಗ್ರ ನ್ಯೂಸ್: ಮಣಿಪುರದಲ್ಲಿ ನಡೆದ ಪ್ರತಿಭಟನಾ ಕಿಡಿಗೆ ಇಲ್ಲಿಯವರೆಗೆ 54 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಎಸ್ಟಿ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಸಮುದಾಯಗಳು ಪ್ರತಿಭಟನೆ ನಡೆಸುತ್ತಿದ್ದವು. ಮಣಿಪುರ ಸಹಜ ಸ್ಥಿತಿಗೆ ಮರಳಿದೆ. ಮತ್ತೆ ಎಂದಿನಂತೆ ಜನ ಜೀವನ ಸಹಜ ಸ್ಥಿತಿಗೆ ಬರುತ್ತಿವೆ. ಸೇನಾಪಡೆಗಳು ಹಾಗೂ ಕೇಂದ್ರ ಪೊಲೀಸ್‌ ಪಡೆಗಳ ಕಾರ್ಯಾಚರಣೆಯಿಂದ ಅಲ್ಲಿನ ಸ್ಥಿತಿ ಗತಿ ಮತ್ತೆ ಸಹಜ ಸ್ಥಿತಿಗೆ ಬರುತ್ತಿದೆ. ಹಿಂಸಾಚಾರದಲ್ಲಿ ಮೂರೇ ದಿನಗಳಲ್ಲಿ 54 ಜನ ಬಲಿಯಾಗಿದ್ದು, 16 ಮಂದಿಯ

ಮಣಿಪುರದಲ್ಲಿ ಹಿಂಸಾಚಾರಕ್ಕೆ 54 ಮಂದಿ ಬಲಿ| ಸದ್ಯ‌ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ Read More »

ಇಂದು(ಮೇ.7)ನೀಟ್ ಪರೀಕ್ಷೆ; ಇಲ್ಲಿದೆ ಮುಖ್ಯ ಮಾಹಿತಿ

ಸಮಗ್ರ ನ್ಯೂಸ್: ವೈದ್ಯ ಮತ್ತು ದಂತ ವೈದ್ಯ ಕೋರ್ಸ್ ಗಳ ಪ್ರವೇಶಕ್ಕಾಗಿ ಇಂದು ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ನಡೆಯುತ್ತಿದೆ. ಕನ್ನಡ, ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮಲಯಾಳಂ, ಮರಾಠಿ, ಒಡಿಯಾ, ತಮಿಳು, ತೆಲುಗು, ಉರ್ದು, ಪಂಜಾಬಿ ಭಾಷೆಗಳಲ್ಲೂ ಪರೀಕ್ಷೆ ಬರೆಯಲು ಅವಕಾಶವಿದ್ದು, ಮಧ್ಯಾಹ್ನ 2 ರಿಂದ ಸಂಜೆ 5:20ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಮಧ್ಯಾಹ್ನ 12:30 ರೊಳಗೆ ತಮಗೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕಿದ್ದು,

ಇಂದು(ಮೇ.7)ನೀಟ್ ಪರೀಕ್ಷೆ; ಇಲ್ಲಿದೆ ಮುಖ್ಯ ಮಾಹಿತಿ Read More »

ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ‌ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ

ಸಮಗ್ರ ನ್ಯೂಸ್: ‘ವಿಶ್ವ ಆರೋಗ್ಯ ಸಂಸ್ಥೆ’ ಸಿಹಿಸುದ್ದಿ ತಿಳಿಸಿದ್ದು, ಕೊರೊನಾ ಕಂಟಕದ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಕೊನೆಯಾಗಿದೆ ಎಂದಿದೆ. ಬರೋಬ್ಬರಿ 3 ವರ್ಷಗಳ ನಂತರ ಎಲ್ಲವೂ ಸರಿದಾರಿಗೆ ಬಂದಂತಾಗಿದೆ. 68 ಲಕ್ಷ ಜನರ ಸಾವಿನೊಂದಿಗೆ ಕೊರೊನಾ ವೈರಸ್ ಬಹುತೇಕ ಕರಾಳ ಅಧ್ಯಾಯ ಮುಗಿಸಿದೆ. 17 ನವೆಂಬರ್ 2019, ಯಾರಿಗೂ ತಿಳಿಯದ ವೈರಸ್ ಒಂದು ಚೀನಾದಲ್ಲಿ ಕಂಡುಬಂದಿತ್ತು. ಚೀನಾದ ವುಹಾನ್ ಜನರ ಮೇಲೆ ಮೊದಲು ದಾಳಿ ಮಾಡಿದ್ದ ಕೊರೊನಾ ನಂತರ ಜಗತ್ತಿಗೇ ಹರಡಿತ್ತು. ವುಹಾನ್ ಪ್ರಾಂತ್ಯದಲ್ಲಿ ಸಂಶಯಾಸ್ಪದ

ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ‌ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ Read More »

ಜಮ್ಮು- ಕಾಶ್ಮೀರದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ| ಇಬ್ಬರು ಯೋಧರು ಹುತಾತ್ಮ; ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು (ಮೇ.5) ಬೆಳಗ್ಗೆ ಭಯೋತ್ಪಾದಕರು ನಡೆಸಿದ ಬಾಂಬ್‌ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಂಗಳವಾರ ಜಮ್ಮು ಪ್ರದೇಶದ ಭಟ ಧುರಿಯನ್‌ನ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ಗೆ ಹೊಂಚುದಾಳಿ ನಡೆಸಿದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಮತ್ತು ನಿರ್ಮೂಲನೆ

ಜಮ್ಮು- ಕಾಶ್ಮೀರದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ| ಇಬ್ಬರು ಯೋಧರು ಹುತಾತ್ಮ; ನಾಲ್ವರಿಗೆ ಗಾಯ Read More »

ಮೇ.8ಕ್ಕೆ ಎಸ್ಎಸ್ಎಲ್ ಸಿ ‌ಫಲಿತಾಂಶ| ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ – kseab.karnataka.gov.in ಅಥವಾ karresults.nic.in ಗೆ ಭೇಟಿ ನೀಡುವ ಮೂಲಕ ಕರ್ನಾಟಕ SSLC ಫಲಿತಾಂಶ 2023ವನ್ನು ವೀಕ್ಷಿಸಬಹುದಾಗಿದೆ. ಕೆಎಸ್‌ಇಎಬಿ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ ಅವರು ಮಾತನಾಡಿ, ನಾವು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮೇ 8

ಮೇ.8ಕ್ಕೆ ಎಸ್ಎಸ್ಎಲ್ ಸಿ ‌ಫಲಿತಾಂಶ| ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆ Read More »

ಇಂದು(ಮೇ.5) ವರ್ಷದ ಮೊದಲ ಚಂದ್ರಗ್ರಹಣ| ಭಾರತದಲ್ಲಿ ಗೋಚರವಾಗುತ್ತಾ?

ಸಮಗ್ರ ನ್ಯೂಸ್: ಈ ವರ್ಷದ ಮೊದಲನೇ ಚಂದ್ರಗ್ರಹಣ ಇಂದು(ಮೇ.5) ಸಂಭವಿಸಲಿದೆ. ಆದರೆ ಭಾರತದಲ್ಲಿ ಈ ಚಂದ್ರ ಗ್ರಹಣ ಗೋಚರವಾಗುವುದಿಲ್ಲ. ಈ ವರ್ಷದ ಪ್ರಥಮ ಸೂರ್ಯ ಗ್ರಹಣ ಸಂಭವಿಸಿ 15 ದಿನ ಕಳೆದಿದೆ. ಇದರ ಬೆನ್ನಲ್ಲೇ ಚಂದ್ರ ಗ್ರಹಣ ಸಹ ಸಂಭವಿಸುತ್ತಿದೆ. ವೈಶಾಖ ಮಾಸದ ಹುಣ್ಣಿಮೆ ಆಗಿದ್ದು, ಈ ಸಂದರ್ಭ ಚಂದ್ರ ಗ್ರಹಣ ನಡೆಯಲಿದೆ. ಈ ಗ್ರಹಣವು ಪೆನಂಬ್ರಲ್ ಚಂದ್ರ ಗ್ರಹಣವಾಗಿದ್ದು, ಇದರಲ್ಲಿ ಚಂದ್ರನ ಮೇಲ್ಮೈ ಧೂಳಿನ ಬಿರುಗಾಳಿಯಂತೆ ಕಾಣಿಸಲಿದೆ. ಖಗೋಳಶಾಸ್ತ್ರಜ್ಞರ ಪ್ರಕಾರ, ವರ್ಷದ ಮೊದಲ ಚಂದ್ರ ಗ್ರಹಣವು

ಇಂದು(ಮೇ.5) ವರ್ಷದ ಮೊದಲ ಚಂದ್ರಗ್ರಹಣ| ಭಾರತದಲ್ಲಿ ಗೋಚರವಾಗುತ್ತಾ? Read More »

ಜಮ್ಮು: ಸೇನಾಕಾಪ್ಟರ್ ಪತನ; ಕಮಾಂಡಿಂಗ್ ಆಫೀಸರ್ ಸೇರಿ ಮೂವರು ಗಂಭೀರ

ಸಮಗ್ರ‌ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಕಿಶ್​ತ್ವಾರ್ ಜಿಲ್ಲೆಯ ಮರ್ವಾಹ್ ತೆಹಸಿಲ್‌ನ ಮಚ್ನಾ ಗ್ರಾಮದ ಬಳಿ ಸೇನಾ ಕಾಪ್ಟರ್ ಎಎಲ್​ಎಚ್​ ಧ್ರುವ​ ಪತನಗೊಂಡಿದೆ. ಕಾಪ್ಟರ್​ನಲ್ಲಿ ಕಮಾಂಡಿಂಗ್ ಆಫೀಸರ್ ​ಸೇರಿ ಮೂವರು ಪ್ರಯಾಣಿಸುತ್ತಿದ್ದರು. ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ ಎಂದು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಕಾಪ್ಟರ್​ ಮರ್ವಾ ಕಡೆಗೆ ತೆರಳುತ್ತಿದ್ದಾಗ ಇಂದು ಬೆಳಗ್ಗೆ 9.40 ಕ್ಕೆ ಪತನಗೊಂಡಿದೆ. ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್ ಇದಾಗಿದ್ದು, ಪತನಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಜಮ್ಮು: ಸೇನಾಕಾಪ್ಟರ್ ಪತನ; ಕಮಾಂಡಿಂಗ್ ಆಫೀಸರ್ ಸೇರಿ ಮೂವರು ಗಂಭೀರ Read More »

ಮಣಿಪುರದಲ್ಲಿ ಹದ್ದುಮೀರಿದ ಹಿಂಸಾಚಾರ| ಕಂಡಲ್ಲಿ ಗುಂಡು ಆದೇಶ ನೀಡಿದ ಗೃಹ ಇಲಾಖೆ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಮೇಟಿ ಸಮುದಾಯವನ್ನ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದರ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿರುವ ಪ್ರತಿಭಟನೆಗಳ ಮಧ್ಯೆ, ರಾಜ್ಯಪಾಲರು ಗುರುವಾರ ರಾಜ್ಯ ಗೃಹ ಇಲಾಖೆಯ ಕಂಡಲ್ಲಿ ಗುಂಡು ಹಾರಿಸುವ ಆದೇಶಕ್ಕೆ ಅನುಮೋದನೆ ನೀಡಿದ್ದಾರೆ. ರಾಜ್ಯದ ರಾಜ್ಯಪಾಲರು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ಗಳು ಮತ್ತು ಎಲ್ಲಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗಳು / ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗಳಿಗೆ ‘ಎಲ್ಲಾ ರೀತಿಯ ಮನವೊಲಿಕೆ, ಎಚ್ಚರಿಕೆ, ಸಮಂಜಸವಾದ ಬಲ ಇತ್ಯಾದಿಗಳು ಮುಗಿದಿರುವ ವಿಪರೀತ ಸಂದರ್ಭಗಳಲ್ಲಿ ಗುಂಡು ಹಾರಿಸುವ’ ಆದೇಶಗಳನ್ನ ಹೊರಡಿಸಲು

ಮಣಿಪುರದಲ್ಲಿ ಹದ್ದುಮೀರಿದ ಹಿಂಸಾಚಾರ| ಕಂಡಲ್ಲಿ ಗುಂಡು ಆದೇಶ ನೀಡಿದ ಗೃಹ ಇಲಾಖೆ Read More »