ದೇಶ-ವಿದೇಶ

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಂದ ದೌರ್ಜನ್ಯ| ಹಾಡುಹಗಲೇ ನಡೆಯಿತು ‘ಪ್ರಜಾಪ್ರಭುತ್ವದ ಕಗ್ಗೊಲೆ!’

ಸಮಗ್ರ ನ್ಯೂಸ್: ರಾಷ್ಟ್ರರಾಜಧಾನಿಯಲ್ಲಿ ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟನಿಸಿದರೆ, ಮತ್ತೊಂದೆಡೆ ಜಂತರ್‌-ಮಂತರ್‌ನಲ್ಲಿ ಒಂದು ರೀತಿಯಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ದೇಶಕ್ಕೆ ಪದಕ ಜಯಿಸಿದ ಭಜರಂಗ್ ಫೂನಿಯಾ, ವಿನೇಶ್ ಫೋಗಾಟ್, ಸಾಕ್ಷಿ ಮಲಿಕ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತೀಯ ಜನತಾ ಪಕ್ಷ(ಬಿಜೆಪಿ) ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರ ಮೇಲೆ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಕೂಡಲೇ […]

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಂದ ದೌರ್ಜನ್ಯ| ಹಾಡುಹಗಲೇ ನಡೆಯಿತು ‘ಪ್ರಜಾಪ್ರಭುತ್ವದ ಕಗ್ಗೊಲೆ!’ Read More »

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ನೀವು ನೋಡಿದ್ದೀರಾ?

ಸಮಗ್ರ ನ್ಯೂಸ್: ಕೆಲವರು ಚಿಪ್ಪು ಮತ್ತು ಮಾಂಸಕ್ಕಾಗಿ ಆಮೆಯನ್ನು ಕಳ್ಳ ಬೇಟೆಯಾಡುತ್ತಾರೆ. ಇದರಿಂದಾಗಿ ಈ ಪ್ರಾಣಿಯು ಅಳಿವಿನಂಚಿನಲ್ಲಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಪ್ರಖ್ಯಾತ ವನ್ಯಜೀವಿಧಾಮ ಕಪ್ಪತಗುಡ್ಡದ ಅಂಚಿನಲ್ಲಿರುವ ಶೆಟ್ಟಿಕೆರೆಯಲ್ಲಿ ಅಪರೂಪದ ಆಮೆಯೊಂದು ಕಾಣಿಸಿಕೊಂಡಿದೆ. ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಶೆಟ್ಟಿಕೆರೆಯಲ್ಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಕುತೂಹಲ ಹುಟ್ಟಿಸಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೆರಿ ಗ್ರಾಮದಲ್ಲಿರುವ ಕಾಣಿಸಿಕೊಂಡಿರುವ ನಕ್ಷತ್ರ ಆಮೆ “ಟೆಸ್ಟುಡಿನಿಡೆ” ಕುಟುಂಬಕ್ಕೆ ಸೇರಿದೆ ಎಂದು ಹೇಳಲಾಗಿದೆ. ಇದರ ವೈಜ್ಞಾನಿಕ ಹೆಸರು “ಜಿಯೋಚಲೋನ್ ಎಲಗನ್ಸ್” ಎಂದಾಗಿದ್ದು ಇದರ

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ನೀವು ನೋಡಿದ್ದೀರಾ? Read More »

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ

ಸಮಗ್ರ ನ್ಯೂಸ್: ಜೂನ್ 14 ರವರೆಗೆ ಉಚಿತ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಲು ಅವಕಾಶ ನೀಡಲಾಗಿದೆ. ಆಧಾರ್ ನಲ್ಲಿನ ಹೆಸರು, , ಫೋಟೋ, ಮೊಬೈಲ್ ಸಂಖ್ಯೆಯಂತಹ ಯಾವುದೇ ಮಾಹಿತಿಯನ್ನು ಅಪ್ಡೇಟ್ ಮಾಡಲು 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಪ್ರಸ್ತುತ UIDAI ಈ ಎಲ್ಲ ತಿದ್ದುಪಡಿ ಸೇವೆಗಳನ್ನು ಜೂನ್ 14ರವರೆಗೆ ಉಚಿತವಾಗಿ ನೀಡಲಿದೆ. myAadhaar ಪೋರ್ಟಲ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅಪ್ಡೇಟ್ ಮಾಡಿದರೆ ಯಾವುದೇ ಶುಲ್ಕ ಇರುವುದಿಲ್ಲ. https://myaadhaar.uidai.gov.in/ ಗೆ ಭೇಟಿ ನೀಡಿ ವಿಳಾಸ

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ Read More »

ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿಗೆ ಆಹ್ವಾನ

ಸಮಗ್ರ ನ್ಯೂಸ್: ಇಲ್ಲಿನ ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜೂನ್ 7ರೊಳಗೆ ಇಲಾಖೆಯ ವೆಬ್‍ಸೈಟ್ www.cite.karnataka.gov.in ಮೂಲಕ ಅಥವಾ ಈ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಂಸ್ಥೆಯಲ್ಲಿ ನಿಗದಿತ ಪ್ರಮಾಣದಲ್ಲಿ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೆ ಇದ್ದಲ್ಲಿ ಪುರುಷ ಅಭ್ಯರ್ಥಿಗಳಿಗೆ ಪ್ರವೇಶ ಪಡೆಯಲು ಅಕಾಶವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2216360, 9880119147

ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿಗೆ ಆಹ್ವಾನ Read More »

ಕಾಲೇಜು ಪ್ರವೇಶಾತಿಗೆ ‘ಏಕರೂಪ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

ಸಮಗ್ರ ನ್ಯೂಸ್: ಉನ್ನತ ಶಿಕ್ಷಣ ಇಲಾಖೆಯು 2023-24 ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಅವುಗಳ ಸಂಯೋಜಿತ ಕಾಲೇಜುಗಳಲ್ಲಿ ಪದವಿ ಕೋರ್ಸುಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಪ್ರಸ್ತುತ ಸಾಲಿನಲ್ಲಿ ಮೇ.22 ರಿಂದ ಜುಲೈ 15 ರೊಳಗೆ ಪದವಿ ಕಾಲೇಜುಗಳ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜು.17 ರಿಂದ ತರಗತಿಗಳನ್ನು ಆರಂಭಿಸಿ, ನವೆಂಬರ್ 18 ಕ್ಕೆ ಮುಕ್ತಾಯಗೊಳಿಸಬೇಕು. ನವೆಂಬರ್ 20 ರಿಂದ ಪರೀಕ್ಷೆಗಳನ್ನು

ಕಾಲೇಜು ಪ್ರವೇಶಾತಿಗೆ ‘ಏಕರೂಪ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ Read More »

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ?

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ ಚಿಂತನೆ ನಡೆದಿದೆ. ಕರಾವಳಿಯಲ್ಲಿ ಹರಡುತ್ತಿರುವ ಕೋಮುವಾದವನ್ನು ಮಟ್ಟಹಾಕುವ ಉದ್ದೇಶದಿಂದಲೇ ಖಾಸಗಿ ಬಸ್ ಸೇವೆ ರದ್ದು ಮಾಡಲು ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಕರಾವಳಿಯಲ್ಲಿ ಕೋಮುವಾದ ಬೆಳೆಯುವಲ್ಲಿ ಖಾಸಗಿ ಬಸ್ ವಲಯದ ಪಾತ್ರ ಇರುವುದು ಮತ್ತು ಕರಾವಳಿಯ ಖಾಸಗಿ ಬಸ್ ಮಾಫಿಯಾದ ಕಪಿಮುಷ್ಠಿ ದಿನದಿಂದ ದಿನಕ್ಕೆ

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ? Read More »

ಯುಪಿಎಸ್ ಸಿ ಫಲಿತಾಂಶ ಪ್ರಕಟ| ರಾಜ್ಯದ 35 ಮಂದಿ ಪಾಸ್| ಎಚ್.ಎಸ್ ಭಾವನಾ ಕರ್ನಾಟಕದ ಟಾಪರ್

ಸಮಗ್ರ ನ್ಯೂಸ್: ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆಗಳ 2022ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ 35ಕ್ಕೂ ಅಧಿಕ ಅಭ್ಯರ್ಥಿಗಳು ರ‍್ಯಾಂಕ್‌ ಪಡೆದು ಸಾಧನೆ ಮಾಡಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಐಆರ್‌ಎಸ್‌ ಸೇವೆಯಲ್ಲಿರುವ ರಾಜ್ಯದ ಎಚ್‌.ಎಸ್‌.ಭಾವನಾ 55ನೇ ರ‍್ಯಾಂಕ್‌ ಪಡೆದು ರಾಜ್ಯದ ಟಾಪರ್‌ ಆಗಿದ್ದಾರೆ. ಭಾವನಾ ಅವರು ನಗರದ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿ ಬಳಿಕ ಯಲಹಂಕದ ವೆಂಕಟೇಶ್ವರ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪೂರ್ಣಗೊಳಿಸಿದ್ದರು. ಐಎಎಸ್‌ ಅಧಿಕಾರಿ ಆಗಬೇಕು ಎಂದು ಯುಪಿಎಸ್‌ಸಿ ಪರೀಕ್ಷೆ

ಯುಪಿಎಸ್ ಸಿ ಫಲಿತಾಂಶ ಪ್ರಕಟ| ರಾಜ್ಯದ 35 ಮಂದಿ ಪಾಸ್| ಎಚ್.ಎಸ್ ಭಾವನಾ ಕರ್ನಾಟಕದ ಟಾಪರ್ Read More »

ಐತಿಹಾಸಿಕ ದಾಖಲೆ ನಿರ್ಮಿಸಿದ ಮಹೀಂದ್ರಾ ಥಾರ್ SUV| ಒಂದು ಲಕ್ಷ ವಾಹನ ಮಾರಾಟ ಸಾಧನೆ

ಸಮಗ್ರ ನ್ಯೂಸ್: ಮಹೀಂದ್ರಾ ಥಾರ್ ಎಸ್‍ಯುವಿಯು ಬಹಳ ವರ್ಷಗಳಿಂದ ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ಆಫ್-ರೋಡರ್ ಎಸ್‍ಯುವಿಯಾಗಿದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿರುವ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಮಾದರಿಯು ಬಹುಬೇಡಿಯೊಂದಿಗೆ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇದರಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಮಹೀಂದ್ರಾ ಥಾರ್ ಎಸ್‍ಯುವಿಯ ಕಾಯುವ ಅವಧಿಯು ಕೂಡ ಹೆಚ್ಚಾಗುತ್ತಿದೆ. ಇದೀಗ ಮಹೀಂದ್ರಾ ಥಾರ್ ಎಸ್‍ಯುವಿಯು 1 ಲಕ್ಷ ಮಾರಾಟವಾಗಿ ಹೊಸ ಮೈಲಿಗಲ್ಲು ದಾಖಲಿಸಿದೆ. 2020ರ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾದ ಈ ಆಫ್-ರೋಡ್ 1 ಲಕ್ಷ ಉತ್ಪಾದನಾ ಗಡಿಯನ್ನು ದಾಟಿದೆ ಮತ್ತು

ಐತಿಹಾಸಿಕ ದಾಖಲೆ ನಿರ್ಮಿಸಿದ ಮಹೀಂದ್ರಾ ಥಾರ್ SUV| ಒಂದು ಲಕ್ಷ ವಾಹನ ಮಾರಾಟ ಸಾಧನೆ Read More »

ಇಂದಿನಿಂದ ದೇಶಾದ್ಯಂತ ಬ್ಯಾಂಕ್ ಗಳಲ್ಲಿ ₹. 2000 ನೋಟು ವಿನಿಮಯ ಅವಕಾಶ

ಸಮಗ್ರ ನ್ಯೂಸ್: ಇಂದಿನಿಂದ ದೇಶಾದ್ಯಂತ ಎಲ್ಲಾ ಬ್ಯಾಂಕ್ ಗಳಲ್ಲಿ 2000 ಮುಖಬೆಲೆಯ ನೋಟುಗಳ ವಿನಿಮಯ ಆರಂಭಿಸಲಾಗುತ್ತಿದೆ. ಕೌಂಟರ್ನಲ್ಲಿ 2000 ರೂ.ಗಳ ನೋಟುಗಳನ್ನು ವಿನಿಮಯ ಮಾಡುವ ಸೌಲಭ್ಯವನ್ನು ಸಾರ್ವಜನಿಕರಿಗೆ ಸಾಮಾನ್ಯ ರೀತಿಯಲ್ಲಿ ಒದಗಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಹೇಳಿದೆ. ಮೇ.23ರ ಮಂಗಳವಾರದ ಇಂದಿನಿಂದ ಹಿಂಪಡೆಯಲಾದಂತ 2,000 ರೂಪಾಯಿ ಮುಖಬಲೆಯ ನೋಟುಗಳನ್ನು ಯಾವುದೇ ಬ್ಯಾಂಕಿನಲ್ಲಿ ನೀಡಿ, ಇತರೆ ಮುಖ ಬೆಲೆಯ ನೋಟುಗಳನ್ನು ಪಡೆಯಬಹುದು ಎಂಬುದಾಗಿ ತಿಳಿಸಿದೆ. 2000 ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡುವುದನ್ನು

ಇಂದಿನಿಂದ ದೇಶಾದ್ಯಂತ ಬ್ಯಾಂಕ್ ಗಳಲ್ಲಿ ₹. 2000 ನೋಟು ವಿನಿಮಯ ಅವಕಾಶ Read More »

ಸಿಡ್ನಿ: ಮೋದಿ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ಮಂಗಳೂರಿನ ಅನಿಶಾ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಂಧೋನಿ ಅಲ್ಪನೀಸ್ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಅಪರೂಪದ ಅವಕಾಶ ಮಂಗಳೂರು ಮೂಲದ ಯುವತಿ ಅನಿಶಾ ಪೂಜಾರಿ ಅವರಿಗೆ ಒಲಿದಿದೆ. ಮೋದಿ ಆಸ್ಟ್ರೇಲಿಯ ಭೇಟಿ ಸಂದರ್ಭ ಮೇ 23ರಂದು ಆಸೀಸ್ ಪ್ರಧಾನಿ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ನಂತರ ಸಮುದಾಯ ಸ್ವಾಗತ ಸಂದರ್ಭ ಅನಿಶಾ ಅವರು ಇರುವ `ನಾಟ್ಯೋಕ್ತಿ’ ನೃತ್ಯ ತಂಡ ತುಳು ಜಾನಪದ ಮತ್ತು ಕಾಂತಾರ ಚಿತ್ರಗೀತೆಗಳಿಗೆ ನೃತ್ಯ ಪ್ರದರ್ಶನ

ಸಿಡ್ನಿ: ಮೋದಿ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ಮಂಗಳೂರಿನ ಅನಿಶಾ Read More »