ದೇಶ-ವಿದೇಶ

Karnataka PUC result| ನಾಳೆಯೇ(ಎ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಈ ಜಾಲತಾಣಗಳಲ್ಲಿ ಸಿಗಲಿದೆ ರಿಸಲ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ […]

Karnataka PUC result| ನಾಳೆಯೇ(ಎ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಈ ಜಾಲತಾಣಗಳಲ್ಲಿ ಸಿಗಲಿದೆ ರಿಸಲ್ಟ್ Read More »

ಚೀನಾವನ್ನೇ ಹಿಂದಿಕ್ಕಿದ ಭಾರತ| ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಲ್ಲಿ ಇಂಡಿಯಾ ನಂ.1

ಸಮಗ್ರ ನ್ಯೂಸ್: ವಿಶ್ವ ಜನಸಂಖ್ಯಾ ರಿವ್ಯೂ ಪ್ರಕಾರ ಭಾರತ ಅತಿಹೆಚ್ಚು ಜನಸಂಖ್ಯೆ ಹೊಂದಿದ ರಾಷ್ಟ್ರವೆನಿಸಿಕೊಂಡಿದ್ದ ಚೀನಾವನ್ನು ಈಗಾಗ್ಲೇ ಹಿಂದಿಕ್ಕಿದೆ. ಈ ಗಣತಿಯ ಪ್ರಕಾರ 2022ರ ಅಂತ್ಯದ ವೇಳೆಗೆ ಭಾರತದ ಜನಸಂಖ್ಯೆ 140 ಕೋಟಿ ದಾಟಿತ್ತು. ಇದು ಚೀನಾದ ಜನಸಂಖ್ಯೆಗಿಂತ 50 ಲಕ್ಷದಷ್ಟು ಹೆಚ್ಚಾಗಿದೆ. ಪ್ರಸ್ತುತ ದೇಶದ ಜನಸಂಖ್ಯೆ 1.412 ಬಿಲಿಯನ್‌ ಎಂದು ಚೀನಾ ಹೇಳಿಕೊಂಡಿದೆ. 1961ರ ಬಳಿಕ ಅಂದರೆ ಚೀನಾ ಸ್ವಾತಂತ್ರ್ಯ ಪಡೆದ ನಂತರ ಇದೇ ಮೊದಲ ಬಾರಿಗೆ ಅಲ್ಲಿನ ಜನಸಂಖ್ಯೆಯಲ್ಲಿ ಕುಸಿತ ದಾಖಲಾಗಿದೆ. ತಜ್ಞರ ಪ್ರಕಾರ

ಚೀನಾವನ್ನೇ ಹಿಂದಿಕ್ಕಿದ ಭಾರತ| ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಲ್ಲಿ ಇಂಡಿಯಾ ನಂ.1 Read More »

ಎ.24 ಅಥವಾ 25ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್

ಸಮಗ್ರ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು ಏಪ್ರಿಲ್‌ 24 ಅಥವಾ 25ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಮೂಲಗಳು ತಿಳಿಸಿವೆ. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೇ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಂಡು ಮೌಲ್ಯಮಾಪನ ಕಾರ್ಯವನ್ನು ಮಂಡಳಿ ಸುಸೂತ್ರವಾಗಿಪೂರ್ಣಗೊಳಿಸಿದೆ. ಪ್ರತಿ ವಿಷಯದಲ್ಲಿ ಬಹು ಆಯ್ಕೆ ಸೇರಿದಂತೆ ಒಂದು ಅಂಕದ

ಎ.24 ಅಥವಾ 25ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ Read More »

ವೇಶ್ಯಾವಾಟಿಕೆ ದಂಧೆ| ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಕಿರುತೆರೆ ನಟಿ

ಸಮಗ್ರ ನ್ಯೂಸ್: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಕಾಸ್ಟಿಂಗ್ ನಿರ್ದೇಶಕಿ ಮತ್ತು ಕಿರುತೆರೆಯ ಖ್ಯಾತ ನಟಿ ಆರತಿ ಮಿತ್ತಲ್ ಅವರನ್ನು ಮುಂಬೈ ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ವೇಶ್ಯಾವಾಟಿಕೆ ದಂಧೆಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಆಗ ಆರತಿ ಸೇರಿದಂತೆ 2 ಮಾಡೆಲ್ಸ್ ರೆಡ್ ಹ್ಯಾಂಡ್​ ಆಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಮಾಡೆಲ್​​ಗಳನ್ನು ಬಳಕೆ ಮಾಡಿಕೊಂಡು ಈ ದಂಧೆಯನ್ನು ನಡೆಸುತ್ತಿದ್ದರು ಎಂಬುದನ್ನು ಪೊಲೀಸರು ಹೇಳಿದ್ದಾರೆ. ಆರತಿ ಬಂಧನ ಬಾಲಿವುಡ್ ಬಣ್ಣದ ಲೋಕದಲ್ಲಿ ಸಂಚಲನ ಮೂಡಿಸಿದೆ.

ವೇಶ್ಯಾವಾಟಿಕೆ ದಂಧೆ| ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಕಿರುತೆರೆ ನಟಿ Read More »

ಅಮುಲ್ ಬಳಿಕ ಮೆಣಸಿನಕಾಯಿ ಮಸಾಲೆ ಅರೆಯುತ್ತಿರುವ ಗುಜರಾತ್| ಬ್ಯಾಡಗಿ ಮೆಣಸಿನ ಮಾರುಕಟ್ಟೆ ಆವರಿಸಿಕೊಳ್ಳುತ್ತಿದೆ ‘ಲಾಲ್ ಮಿರ್ಚಿ’

ಸಮಗ್ರ ನ್ಯೂಸ್: ಅಮುಲ್ ಹಾಲಿನ ವಿವಾದದ ಬಳಿಕ ಈಗ ಗುಜರಾತ್ ಮೆಣಸು ಮಾರುಕಟ್ಟೆಯಲ್ಲಿ ಗದ್ದಲ ಸೃಷ್ಟಿಸಿದೆ. ಬೆಂಗಳೂರು ಮಾರುಕಟ್ಟೆಗೆ ಅಮುಲ್ ಪ್ರವೇಶದ ಪ್ರಸ್ತಾವನೆ ಸಿಕ್ಕಾಪಟ್ಟೆ ರಾಜಕೀಯ ಗದ್ದಲ ಸೃಷ್ಟಿಸಿತ್ತು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ಹೆಚ್ಚುತ್ತಿರುವ ಸಮಯದಲ್ಲಿ ಗುಜರಾತ್ ಮೂಲದ ಅಮುಲ್ ಸಂಸ್ಥೆ ಬೆಂಗಳೂರು ಮಾರುಕಟ್ಟೆಯಲ್ಲಿ ಆನ್‌ಲೈನ್‌ ಮೂಲಕ ಹಾಲು ಮತ್ತು ಮೊಸರು ವಿತರಣೆಗೆ ಸಜ್ಜಾಗಿರೋದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ‘ಬಾಯ್ಕಾಟ್‌ ಅಮುಲ್‌, ಸೇವ್‌ ನಂದಿನಿ’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಅಭಿಯಾನ ಪ್ರಾರಂಭಿಸಿದ್ದರು. ಈಗ

ಅಮುಲ್ ಬಳಿಕ ಮೆಣಸಿನಕಾಯಿ ಮಸಾಲೆ ಅರೆಯುತ್ತಿರುವ ಗುಜರಾತ್| ಬ್ಯಾಡಗಿ ಮೆಣಸಿನ ಮಾರುಕಟ್ಟೆ ಆವರಿಸಿಕೊಳ್ಳುತ್ತಿದೆ ‘ಲಾಲ್ ಮಿರ್ಚಿ’ Read More »

ಭಾರತದಲ್ಲಿ ವಾಟ್ಸಪ್ ಸರ್ವರ್ ಡೌನ್; ಪರದಾಡುತ್ತಿರುವ ಬಳಕೆದಾರರು

ಸಮಗ್ರ ನ್ಯೂಸ್: ಭಾರತದಲ್ಲಿ ಕೆಲವು ಬಳಕೆದಾರರಿಗೆ WhatsApp ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ. Downdetector ಪ್ರಕಾರ, ಅಪ್ಲಿಕೇಶನ್ ಕಳೆದ ರಾತ್ರಿಯಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇಂದು ಕೂಡ ಮುಂದುವರೆದಿದೆ ಎಂದು ತಿಳಿದುಬಂದಿದೆ. ಈ ಸಮಸ್ಯೆ ಎದುರಿಸಿದ ಬಗ್ಗೆ ಬಳಕೆದಾರರು Twitter ನಲ್ಲಿ ಸ್ಥಗಿತದ ಬಗ್ಗೆ ದೂರು ನೀಡಿದ್ದಾರೆ. ಈ ಮೂಲಕ ಬಳಕೆದಾರರು ಅಪ್ಲಿಕೇಶನ್‌ನಲ್ಲಿ ಸ್ವೀಕರಿಸಿದ ವೀಡಿಯೊಗಳನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ವರದಿ ಮಾಡಿದ್ದಾರೆ. ಆದಾಗ್ಯೂ, ಆಂಡ್ರಾಯ್ಡ್ ಬೀಟಾ ಬಳಕೆದಾರರಲ್ಲಿ ಈ ಸಮಸ್ಯೆಯು ಹೆಚ್ಚು ಪ್ರಚಲಿತವಾಗಿದೆ.

ಭಾರತದಲ್ಲಿ ವಾಟ್ಸಪ್ ಸರ್ವರ್ ಡೌನ್; ಪರದಾಡುತ್ತಿರುವ ಬಳಕೆದಾರರು Read More »

ಮುಂಬೈ: ಬಿಸಿಲ‌ ಝಳಕ್ಕೆ 11 ಮಂದಿ ಸಾವು| ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಡೆದ ದುರ್ಘಟನೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿದ್ದ 11 ಮಂದಿ ಬಿಸಿಲಿನ ತಾಪದಿಂದ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಬಿಸಿಲಿನ ಝಳದಿಂದ ಹಲವರು ಅಸ್ವಸ್ಥರಾಗಿದ್ದು, ಸುಮಾರು 50 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಹಾರಾಷ್ಟ್ರ ಸರ್ಕಾರವು ಸ್ಥಾಪಿಸಿದ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಗೃಹ ಸಚಿವ ಅಮಿತ್ ಶಾ ಪ್ರದಾನ ಮಾಡಿದರು. ಬೆಳಗ್ಗೆ 11.30ಕ್ಕೆ ಆರಂಭವಾದ ಪ್ರಶಸ್ತಿ ಪ್ರದಾನ ಸಮಾರಂಭ ಮಧ್ಯಾಹ್ನ 1ರವರೆಗೆ ನಡೆದಿತ್ತು. ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಇದ್ದರೂ ನೆರಳಿಗಾಗಿ ಶಾಮಿಯಾನ

ಮುಂಬೈ: ಬಿಸಿಲ‌ ಝಳಕ್ಕೆ 11 ಮಂದಿ ಸಾವು| ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಡೆದ ದುರ್ಘಟನೆ Read More »

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ!

ಸಮಗ್ರ ನ್ಯೂಸ್: ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿದೆ. ಆದರೆ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಶೆಟ್ಟರ್ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ರಾಜ್ಯ ನಾಯಕರು ಮಾತ್ರವಲ್ಲ, ಬಿಜೆಪಿಯ ಪವರ್ ಫುಲ್ ಮ್ಯಾನ್ ಅಮಿತ್ ಶಾ ಖುದ್ದು ಕರೆ ಮಾಡಿ ಶೆಟ್ಟರ್ ಜೊತೆ ಮಾತನಾಡಿದ್ದಾರಂತೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪೆಟ್ಟು ನೀಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಅವರನ್ನು ಹೇಗಾದರೂ ಮನವೊಲಿಸಿ, ಬಿಜೆಪಿಯಲ್ಲೇ

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ! Read More »

ದುಬೈನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ| ಭಾರತೀಯರು ಸೇರಿ 16 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಯುಎಇ ರಾಜಧಾನಿ ದುಬೈನ ವಸತಿ ಕಟ್ಟಡ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಭಾರತೀಯರು ಸೇರಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ನೆರೆಹೊರೆಯಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ಏಳು ಎಮಿರೇಟ್‌ಗಳಲ್ಲಿ ಒಂದಾದ ದುಬೈ, ಸುಮಾರು 3.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ಅವರಲ್ಲಿ ಸುಮಾರು 90 ಪ್ರತಿಶತ ವಿದೇಶಿಯರು ಇದ್ದಾರೆ.

ದುಬೈನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ| ಭಾರತೀಯರು ಸೇರಿ 16 ಮಂದಿ ಸಜೀವ ದಹನ Read More »

ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದ ಚಾಲಕ| ಇಲ್ಲಿದೆ ವಿಡಿಯೋ

ಮುಂಬೈ: ಟ್ರಾಫಿಕ್ ಸಿಗ್ನಲ್‌ ಜಂಪ್‌ ಮಾಡಲು ಯತ್ನಿಸಿದ ಕಾರು ಚಾಲಕನನ್ನು ಪ್ರಶ್ನಿಸಿದ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದಿರುವ ಘಟನೆಯೊಂದು ಮುಂಬೈ ನಗರದಲ್ಲಿ ನಡೆದಿದೆ. ಟ್ರಾಫಿಕ್ ಕಾನ್‌ಸ್ಟೆಬಲ್ ಸಿದ್ಧೇಶ್ವರ ಮಾಳಿ (37) ಎಂದು ಗುರುತಿಸಲಾಗಿದೆ .ಕಾನ್ಸ್‌ಟೇಬಲ್ ಸಿದ್ಧೇಶ್ವರ ಮಾಳಿ ಅವರು ಬ್ಲೂ ಡೈಮಂಡ್ ಜಂಕ್ಷನ್‌ನಲ್ಲಿ ಸಿಗ್ನಲ್ ಜಂಪ್ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರು ಚಾಲಕನನ್ನು ನಿಲ್ಲಿಸಲು ಪ್ರಯತ್ನಿಸಿದರು.ಈ ವೇಳೆ ಟ್ರಾಫಿಕ್​ ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಕಾರು ಚಾಲಕ ಎಳೆದೊಯ್ದಿದ್ದಾನೆ.

ಪೊಲೀಸರನ್ನೇ ಕಾರಿನ ಬಾನೆಟ್​ ಮೇಲೆ 20 ಕಿ.ಮೀ ಎಳೆದೊಯ್ದ ಚಾಲಕ| ಇಲ್ಲಿದೆ ವಿಡಿಯೋ Read More »