“ರಾಮಮಂದಿರಕ್ಕೆ ನಾನು ಕೊಟ್ಟ ದೇಣಿಗೆ ವಾಪಸ್ ನೀಡಿ, ಇಲ್ಲವಾದಲ್ಲಿ ಕೋರ್ಟ್ ಮೊರೆಹೋಗುವೆ” – ದಿಗ್ವಿಜಯ್ ಸಿಂಗ್
ಸಮಗ್ರ ನ್ಯೂಸ್: “ನಾನು ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ನೀಡಿದ್ದ 1.11 ಲಕ್ಷ ರೂಪಾಯಿ ದೇಣಿಗೆ ಹಣವನ್ನು ನನಗೆ ತಕ್ಷಣ ವಾಪಸ್ ನೀಡಿ. ಇಲ್ಲದಿದ್ದರೆ ನಾನು ನ್ಯಾಯಾಲಯದ ಮೆಟ್ಟಿಲೇರುತ್ತೇನೆ,” ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಕ್ರೋಶ ಹೊರಹಾಕಿದ್ದಾರೆ. ರಾಮಮಂದಿರ ದೇಣಿಗೆ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿರುವ ಅವರು, ಈ ಕುರಿತು ಅಯೋಧ್ಯೆಯಲ್ಲೇ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ. ತಮ್ಮ ದೇಣಿಗೆ ಹಣದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ದಿಗ್ವಿಜಯ್ ಸಿಂಗ್, ನಾನು ರಾಮಮಂದಿರಕ್ಕೆ […]










