ದೇಶ-ವಿದೇಶ

ಮತ್ತೆ ಆರಂಭಗೊಳ್ಳುತ್ತಿದೆ ಭಾರತ-ಶ್ರೀಲಂಕಾ ನಡುವೆ ದೋಣಿ ಸೇವೆ

ಸಮಗ್ರ ನ್ಯೂಸ್: 40 ವರ್ಷದ ನಂತರ, ಕಳೆದ ಅಕ್ಟೋಬರ್‍ನಲ್ಲಿ ಪ್ರಾರಂಭಗೊಂಡು ಹವಾಮಾನ ವೈಪರೀತ್ಯದಿಂದ ಸ್ಥಗಿತಗೊಂಡಿದ್ದ ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಜಾಪ್ಪಾ ಜಿಲ್ಲೆಯ ಕಾಂಕೆಸಂತುರೈ (ಕೆಕೆಎಸ್) ನಗರದ ನಡುವಿನ ದೋಣಿ ಸೇವೆಯು ಮೇ 13ರಿಂದ ಪುನರಾರಂಭಗೊಳ್ಳಲಿದೆ ಎಂದು ಭಾರತೀಯ ಹೈಕಮಿಷನ್ ಸೋಮವಾರ ತಿಳಿಸಿದೆ. ದೋಣಿ ಸೇವೆಯನ್ನು ಮತ್ತೆ ಪ್ರಾರಂಭಿಸುತ್ತಿರುವುದು, ಭಾರತ ಸರ್ಕಾರದ ಜನಕೇಂದ್ರಿತ ನೀತಿಯ ದೃಢೀಕರಣವಾಗಿದೆ ಎಂದು ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ. ಕಾಂಕೆಸಂತುರೈ ಬಂದರನ್ನು ಪುನಶ್ಚತನಗೊಳಿಸಲು ಯೋಜನಾ ವೆಚ್ಚವಾದ ರೂ. 531 ಕೋಟಿಯನ್ನು ಭಾರತವು ಶ್ರೀಲಂಕಾಕ್ಕೆ ನೀಡಿದೆ.ಶ್ರೀಲಂಕಾದ […]

ಮತ್ತೆ ಆರಂಭಗೊಳ್ಳುತ್ತಿದೆ ಭಾರತ-ಶ್ರೀಲಂಕಾ ನಡುವೆ ದೋಣಿ ಸೇವೆ Read More »

ಲೋಕಸಭಾ ಚುನಾವಣೆ/ ಲೋಗೋ ಬದಲಿಸಿದ ಗೂಗಲ್

ಸಮಗ್ರ ನ್ಯೂಸ್: 2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಗೂಗಲ್ ಡೂಡಲ್ ತನ್ನ ಸೇವೆಯನ್ನು ಒದಗಿಸಿದೆ. ಸರ್ಚ್ ಇಂಜಿನ್‍ನ ಮುಖಪುಟದಲ್ಲಿ ಐಕಾನಿಕ್ “ಗೂಗಲ್” ಲೋಗೋವನ್ನು ಬದಲಿಸುವ ಗೂಗಲ್ ಡೂಡಲ್, ಭಾರತೀಯ ಚುನಾವಣೆಗಳ ಸಾರವನ್ನು ಸಂಕೇತಿಸುವ ಅಳಿಸಲಾಗದ ಶಾಯಿಯಿಂದ ಗುರುತಿಸಲಾದ ಮೇಲಕ್ಕೆತ್ತಿದ ತೋರು ಬೆರಳನ್ನು ಹೊಂದಿದೆ. ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 93 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಲೋಕಸಭೆ ಚುನಾವಣೆಯ 3 ನೇ ಹಂತಕ್ಕೆ ರಾಷ್ಟ್ರವು ಪ್ರವೇಶಿಸುತ್ತಿದ್ದಂತೆ ಡೂಡಲ್ ಭಾರತದಾದ್ಯಂತ ವಾಸಿಸುವ ಜನರಿಗೆ ಮಾತ್ರ

ಲೋಕಸಭಾ ಚುನಾವಣೆ/ ಲೋಗೋ ಬದಲಿಸಿದ ಗೂಗಲ್ Read More »

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ| ರಾಜ್ಯದಲ್ಲಿ ಐದು‌ ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಹಳೆ ಮೈಸೂರು ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕದ ಹಲವು ಭಾಗದಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು,

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ| ರಾಜ್ಯದಲ್ಲಿ ಐದು‌ ದಿನ ಮಳೆ ಮುನ್ಸೂಚನೆ Read More »

ಇಂದು ದೇಶದಲ್ಲಿ 3ನೇ ಹಂತದ ಲೋಕಸಭಾ ಚುನಾವಣೆ| ಹಲವು ಘಟಾನುಘಟಿಗಳ ಭವಿಷ್ಯ ನಿರ್ಧರಿಸಲಿದ್ದಾನೆ ಮತದಾರ

ಸಮಗ್ರ ನ್ಯೂಸ್: ದೇಶದಲ್ಲಿ ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದ 14 ಸೇರಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಒಟ್ಟು 2,59,17, 493 ಮತದಾರರಿದ್ದಾರೆ. ಈ ಪೈಕಿ 1,29,48,978 ಪುರುಷರು,

ಇಂದು ದೇಶದಲ್ಲಿ 3ನೇ ಹಂತದ ಲೋಕಸಭಾ ಚುನಾವಣೆ| ಹಲವು ಘಟಾನುಘಟಿಗಳ ಭವಿಷ್ಯ ನಿರ್ಧರಿಸಲಿದ್ದಾನೆ ಮತದಾರ Read More »

ಪಶ್ಚಿಮ ಬಂಗಾಳ – ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ

ಸಮಗ್ರ ನ್ಯೂಸ್‌ : ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪಾಂಡುವಾ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮಗುವೊಂದು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ

ಪಶ್ಚಿಮ ಬಂಗಾಳ – ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ Read More »

ದಕ್ಷಿಣ ಬ್ರೆಜಿಲ್ ನಲ್ಲಿ ಜಲಪ್ರವಾಹ/ 78ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ದಕ್ಷಿಣ ಬ್ರೆಜಿಲ್ ನಲ್ಲಿ ಭಾರೀ ಮಳೆಗೆ ಉಂಟಾಗಿರುವ ಪ್ರವಾಹದ ತೀವ್ರತೆಗೆ ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‍ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‍ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು, ಅಗ್ನಿಶಾಮಕ ಸಿಬ್ಬಂದಿ ಮತ್ತು

ದಕ್ಷಿಣ ಬ್ರೆಜಿಲ್ ನಲ್ಲಿ ಜಲಪ್ರವಾಹ/ 78ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ Read More »

ಭದ್ರತೆಗೆ ಧಕ್ಕೆ/ ಅಲ್‍ಜಜೀರಾ ಸುದ್ದಿವಾಹಿನಿ ಸ್ಥಗಿತಗೊಳಿಸಿದ ಇಸ್ರೇಲ್

ಸಮಗ್ರ ನ್ಯೂಸ್: ಹಮಾಸ್ ವಿರುದ್ಧ ಇಸ್ರೇಲ್ ಸತತ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿಯೇ, ಹಮಾಸ್ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಕಾರಣಕ್ಕಾಗಿ ಇಸ್ರೇಲ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್‍ಜಜೀರಾ ಸುದ್ದಿವಾಹಿನಿಯನ್ನು ಇಸ್ರೇಲ್ ಸ್ಥಗಿತಗೊಳಿಸಿದೆ. ಚಾನೆಲ್ ಬಂದ್ ಮಾಡುವ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಣೆ ಮಾಡಿದ್ದು, ಅಲ್‍ಜಜೀರಾ ಚಾನೆಲ್‍ಅನ್ನು ಇಸ್ರೇಲ್‍ನಲ್ಲಿ ಸ್ಥಗಿತಗೊಳಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹಾಗಾಗಿ, ಚಾನೆಲ್ ಅನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಜಮಿನ್ ನೆತನ್ಯಾಹು ಎಕ್ಸ್ ಜಾಲತಾಣದಲ್ಲಿ ಪೆÇೀಸ್ಟ್ ಮಾಡಿದ್ದಾರೆ. ಈ ಕೂಡಲೇ ಅಲ್‍ಜಜೀರಾ ಚಾನೆಲ್ ಅನ್ನು ಸ್ಥಗಿತಗೊಳಿಸುತ್ತೇವೆ.

ಭದ್ರತೆಗೆ ಧಕ್ಕೆ/ ಅಲ್‍ಜಜೀರಾ ಸುದ್ದಿವಾಹಿನಿ ಸ್ಥಗಿತಗೊಳಿಸಿದ ಇಸ್ರೇಲ್ Read More »

ಮೇ 20 ರ ಬಳಿಕ 10 ಮತ್ತು 12ನೇ ತರಗತಿ ಪರೀಕ್ಷಾ ಫಲಿತಾಂಶ/ ಖಚಿತಪಡಿಸಿದ ಸಿಬಿಎಸ್ಇ ಬೋರ್ಡ್

ಸಮಗ್ರ ನ್ಯೂಸ್: 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಮೇ. 20ರ ಬಳಿಕ ಪ್ರಕಟ ಮಾಡುತ್ತೇವೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ತಿಳಿಸಿದೆ. ಈ ಮೊದಲು ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಹೀಗಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳಬಾರದು ಎಂದು ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸಿಬಿಎಸ್ಇ ಬೋರ್ಡ್ ತನ್ನ ವೆಬ್‌ಸೈಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, 10 ಮತ್ತು 12 ನೇ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಮೇ 20ರ

ಮೇ 20 ರ ಬಳಿಕ 10 ಮತ್ತು 12ನೇ ತರಗತಿ ಪರೀಕ್ಷಾ ಫಲಿತಾಂಶ/ ಖಚಿತಪಡಿಸಿದ ಸಿಬಿಎಸ್ಇ ಬೋರ್ಡ್ Read More »

ಬ್ರೆಜಿಲ್‌: ಭಾರೀ ಮಳೆ: ಮಣ್ಣಿನ ಕುಸಿತದಿಂದಾಗಿ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ

ಸಮಗ್ರ ನ್ಯೂಸ್ : ಬ್ರೆಜಿಲ್‌ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವಿಗೀಡಾಗಿದ್ದಾರೆ. 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ನಾವು ಇತಿಹಾಸದಲ್ಲಿ ಅತ್ಯಂತ ಕೆಟ್ಟ ದುರಂತವನ್ನು ಎದುರಿಸುತ್ತಿದ್ದೇವೆ. ಅಲ್ ಜಜೀರಾ

ಬ್ರೆಜಿಲ್‌: ಭಾರೀ ಮಳೆ: ಮಣ್ಣಿನ ಕುಸಿತದಿಂದಾಗಿ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ Read More »

ತೆಲಂಗಾಣ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು

ಸಮಗ್ರ ನ್ಯೂಸ್‌ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ನಿರಂಜನ್‌ ರೆಡ್ಡಿ ಅಮಿತ್‌ ಶಾ ವಿರುದ್ಧ ದೂರು ದಾಖಲಿಸಿದ್ದರು. ಮೇ 1ರಂದು ಅಮಿತ್‌ ಶಾ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲಿ, ಕೆಲವು ಮಕ್ಕಳು ಕಾಣಿಸಿಕೊಂಡಿದ್ದರು. ಅಲ್ಲದೇ ರ್ಯಾಲಿಯಲ್ಲಿ ಮಗುವೊಂದು ಬಿಜೆಪಿಯ ಲೋಗೋವನ್ನು ಕೈಯಲ್ಲಿ ಹಿಡಿದಿತ್ತು. ಆ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು

ತೆಲಂಗಾಣ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು Read More »