ದೇಶ-ವಿದೇಶ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿರುವ ಎನ್‌ಇಇಟಿ-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಸಿಜೆಪಿ (CJP) ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ […]

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್ Read More »

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ

ಸಮಗ್ರ ನ್ಯೂಸ್: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್ಚುಕ್‌ ನಿನ್ನೆ (ಜು.23) ರಾತ್ರಿ ತಮ್ಮ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಪ್ರಮುಖ ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಗುರುವಾರ ಮಧ್ಯರಾತ್ರಿಯ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್ ಮತ್ತು ಲಡಾಖ್

23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ| ಕೊನೆಗೂ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕೇಂದ್ರ

ಸಮಗ್ರ ನ್ಯೂಸ್: ದೆಹಲಿ ಸೇರಿದಂತೆ ದೇಶದಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಳು ನಡೆದಿವೆ. ಹಲವು ರಾಜಕೀಯ ನಾಯಕರು ಹಾಗೂ ಸೆಲೆಬ್ರಿಟಿಗಳು ಯುವಕರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಪ್ರಾರಂಭವಾದ ಪ್ರತಿಭಟನೆಯು ಇದೀಗ ದೇಶವ್ಯಾಪ್ತಿ ವಿಸ್ತರಿಸಿದೆ. ಈ ರೀತಿ ಇರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ| ಕೊನೆಗೂ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕೇಂದ್ರ Read More »

ಭಾರೀ ಮಳೆ‌ ಹಿನ್ನಲೆ| ಜು.23ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: : ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.23ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿರುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಕರು ಹಾಗೂ ಸಾರ್ವಜನಿಕರು

ಭಾರೀ ಮಳೆ‌ ಹಿನ್ನಲೆ| ಜು.23ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಮಂಗಳೂರು: ಶೈಕ್ಷಣಿಕ ಜಿಲ್ಲೆಯಲ್ಲೇ 34 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳು ಬಂದ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು, ಪಿಎಂಶ್ರೀ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕಾಗಿ ಪಾಲಕರು ಪೈಪೋಟಿ ನಡೆಸುತ್ತಾರೆ. ಇನ್ನೊಂದೆಡೆ, ಸರ್ಕಾರಿ ಪ್ರಾಥಮಿಕ ಶಾಲೆಗಳು ಅದರಲ್ಲೂ ಕಿರಿಯ ಪ್ರಾಥಮಿಕ ಶಾಲೆಗಳು ಸೊರಗುತ್ತಿವೆ. ಪ್ರಸಕ್ತ ಸಾಲಿನಲ್ಲಿ 23 ಸರ್ಕಾರಿ ಶಾಲೆಗಳು, ಆರು ಅನುದಾನಿತ ಶಾಲೆಗಳು ಹಾಗೂ ಐದು ಅನುದಾನರಹಿತ ಶಾಲೆಗಳು ಸೇರಿದಂತೆ ಒಟ್ಟು 34 ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳ ದಾಖಲಾತಿಯಾಗಿಲ್ಲ. ಶೂನ್ಯ ದಾಖಲಾತಿ ಆಗಿರುವ ಸರ್ಕಾರಿ ಶಾಲೆಗಳಲ್ಲಿ ಎಲ್ಲವೂ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳೇ

ಮಂಗಳೂರು: ಶೈಕ್ಷಣಿಕ ಜಿಲ್ಲೆಯಲ್ಲೇ 34 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳು ಬಂದ್ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ಕುರಿತ ವಿಚಾರಣೆಗೆ ಸುಪ್ರೀಂ ನಕಾರ

ಸಮಗ್ರ ನ್ಯೂಸ್: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ಕೈಗೊಂಡ ಕ್ರಮಗಳ ಕುರಿತು ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ಮುಂದೆ ವಕೀಲ ನರೇಂದ್ರ ಮಿಶ್ರಾ ಅವರು ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದ್ದರು. NEET ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ಕುರಿತ ವಿಚಾರಣೆಗೆ ಸುಪ್ರೀಂ ನಕಾರ Read More »

“ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ‌ ತೋರಿಸಿ”| ಎನ್ ಡಿಎ ಸಂಸದರಿಗೆ ಪ್ರಧಾನಿ ಕಿವಿಮಾತು

ಸಮಗ್ರ ನ್ಯೂಸ್: ನೀಟ್-ಯುಜಿ (NEET-UG) 2026 ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಷ್ಟ್ರೀಯತಾವಾದಿ ಜನತಾಂತ್ರಿಕ ಮೈತ್ರಿ (NDA) ಸಂಸದರಿಗೆ ‘ಮಕ್ಕಳನ್ನು ಪ್ರಚೋದಿಸಬೇಡಿ, ಅವರಿಗೆ ಸರಿಯಾದ ದಾರಿ ತೋರಿಸಿ’ ಎಂದು ಕರೆ ನೀಡಿದರು. ನೀಟ್-ಯುಜಿ (NEET-UG) 2026 ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಸಂಸದರೊಂದಿಗೆ ಮಹತ್ವದ ಸಂದೇಶ ಹಂಚಿಕೊಂಡಿದ್ದಾರೆ. ಸಂಸತ್ತಿನ

“ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ‌ ತೋರಿಸಿ”| ಎನ್ ಡಿಎ ಸಂಸದರಿಗೆ ಪ್ರಧಾನಿ ಕಿವಿಮಾತು Read More »

ಕಾಕ್ರೋಚ್ ದೆಹಲಿ ದಂಗೆ| ನಿನ್ನೆ ಏನೇನಾಯ್ತು? ಫುಲ್ ಡೀಟೈಲ್ಸ್ ನೋಡಿ…

ಸಮಗ್ರ ನ್ಯೂಸ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಶಿಕ್ಷಣ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸೋಮವಾರ ಆಯೋಜಿಸಿದ್ದ ‘ಸಂಸದ್ ಚಲೋ’ ಪ್ರತಿಭಟನೆಯು ಆರಂಭದಲ್ಲಿ ಶಾಂತಿಯುತವಾಗಿ ನಡೆದರೂ, ನಂತರದಲ್ಲಿ ಹಿಂಸಾಚಾರಕ್ಕೆ ತಿರುಗಿತು. ಕೆಲವು ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಕೆಲವು ಪ್ರತಿಭಟನಾಕಾರರಿಗೂ ಗಾಯಗಳಾಗಿವೆ. ಘರ್ಷಣೆ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಮಂದಿಯನ್ನು

ಕಾಕ್ರೋಚ್ ದೆಹಲಿ ದಂಗೆ| ನಿನ್ನೆ ಏನೇನಾಯ್ತು? ಫುಲ್ ಡೀಟೈಲ್ಸ್ ನೋಡಿ… Read More »

ಇಂದಿನಿಂದ ಕೇಂದ್ರ ಮುಂಗಾರು ಅಧಿವೇಶನ| ಪ್ರಮುಖ ಮಸೂದೆಗಳ ಮಂಡನೆಗೆ ಸಿದ್ಧತೆ| ಸರ್ಕಾರದ ತರಾಟೆಗೆ ವಿರೋಧ ಪಕ್ಷಗಳಿಂದ ವ್ಯೂಹ

ಸಮಗ್ರ ನ್ಯೂಸ್: ಸಂಸತ್ತಿನ ಮುಂಗಾರು ಅಧಿವೇಶನವು ಇಂದಿನಿಂದ (ಜು.20) ಆರಂಭವಾಗುತ್ತಿದ್ದು, ಈ ಬಾರಿಯ ರಾಜಕೀಯ ಲೆಕ್ಕಾಚಾರಗಳು ಸಂಪೂರ್ಣವಾಗಿ ಭಿನ್ನವಾಗಿವೆ. ಒಂದೆಡೆ ಕೇಂದ್ರ ಸರ್ಕಾರವು ಕೆಲವು ಪ್ರಮುಖ ಕಾನೂನುಗಳನ್ನು ಜಾರಿಗೆ ತರಲು ಮಸೂದೆಗಳನ್ನು ಮಂಡಿಸಲು ಸಿದ್ಧತೆ ನಡೆಸಿದ್ದರೆ, ಇನ್ನೊಂದೆಡೆ ಪ್ರತಿಪಕ್ಷಗಳು ಹತ್ತಾರು ಪ್ರಮುಖ ಜನಪರ ಹಾಗೂ ವಿವಾದಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವ್ಯೂಹ ರಚಿಸಿವೆ. ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ 6 ಪ್ರಮುಖ ಮಸೂದೆಗಳಲ್ಲಿ ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ಮಸೂದೆ (FCRA) ಮತ್ತು ಆದಾಯ ತೆರಿಗೆ

ಇಂದಿನಿಂದ ಕೇಂದ್ರ ಮುಂಗಾರು ಅಧಿವೇಶನ| ಪ್ರಮುಖ ಮಸೂದೆಗಳ ಮಂಡನೆಗೆ ಸಿದ್ಧತೆ| ಸರ್ಕಾರದ ತರಾಟೆಗೆ ವಿರೋಧ ಪಕ್ಷಗಳಿಂದ ವ್ಯೂಹ Read More »

ಮಾಜಿ ಪ್ರಧಾನಿ ಹೆಚ್.ಡಿ‌ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (89) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ, ಜುಲೈ 15ರಂದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ. ದೇವೇಗೌಡರ ದೀರ್ಘ ಹಾಗೂ ಸುದೀರ್ಘ ರಾಜಕೀಯ ಪಯಣದಲ್ಲಿ ಸದಾ ನೆರಳಾಗಿ, ಇಡೀ ಕುಟುಂಬದ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಿದ್ದ ಗಟ್ಟಿಗಿತ್ತಿ ಚನ್ನಮ್ಮ ಅವರ ಅಗಲಿಕೆ

ಮಾಜಿ ಪ್ರಧಾನಿ ಹೆಚ್.ಡಿ‌ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ Read More »