ದೇಶ-ವಿದೇಶ

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..!

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ಮಧ್ಯೆ ದಾಳಿಗಳು ನಡೆಯುತ್ತಿದ್ದು. ಇದೀಗ ಕದನವಿರಾಮ ಸಿಕ್ಕಿದೆ. ಆದರೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ನಿನ್ನೆ ರಾತ್ರಿ ಜಮ್ಮು ಕಾಶ್ಮೀರ ಮತ್ತು ಗಡಿ ರಾಜ್ಯಗಳ ಮೇಲೆ ಡ್ರೋನ್ ದಾಳಿ ಮಾಡಿದೆ. ಇದೇ ವಿಚಾರವಾಗಿ ಭಾರತೀಯ ವಾಯುಪಡೆ( IAF) ಟ್ವೀಟ್ ಮಾಡಿದ್ದು ಆಪರೇಷನ್ ಸಿಂಧೂರ್(Operation Sindoor) ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ. ಭಾರತೀಯ ವಾಯುಪಡೆ (ಐಎಎಫ್) ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ […]

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..! Read More »

ಯಾವುದೇ ಉಗ್ರದಾಳಿಯನ್ನು ಯುದ್ಧವೆಂದು ಪರಿಗಣಿಸಲು ಭಾರತ ತೀರ್ಮಾನ

ಸಮಗ್ರ ನ್ಯೂಸ್: ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧ ಕೃತ್ಯವೆಂದು ಪರಿಗಣಿಸಲು ಭಾರತ ನಿರ್ಧರಿಸಿದೆ. ಈ ಮೂಲಕ ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಶಾಕ್ ನೀಡಿದೆ. ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಅಪ್ರಚೋದಿತ ಆಕ್ರಮಣದಿಂದಾಗಿ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಗಗನಕ್ಕೇರಿರುವಂತೆಯೇ, ದೇಶದಲ್ಲಿ ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಮೇ 7 ರಿಂದ ಸತತ ಮೂರು ರಾತ್ರಿ ಇಸ್ಲಾಮಾಬಾದ್

ಯಾವುದೇ ಉಗ್ರದಾಳಿಯನ್ನು ಯುದ್ಧವೆಂದು ಪರಿಗಣಿಸಲು ಭಾರತ ತೀರ್ಮಾನ Read More »

ಕದನ ವಿರಾಮದ ಬಳಿಕ ನರಿಬುದ್ದಿ ತೋರಿದ ಪಾಕ್| ಜಮ್ಮು ಕಾಶ್ಮೀರದ ಹಲವೆಡೆ ಡ್ರೋಣ್ ದಾಳಿ

ಸಮಗ್ರ ನ್ಯೂಸ್: ಕದನ ವಿರಾಮ ಘೋಷಣೆ ಬೆನ್ನಲ್ಲೇ‌ ಮತ್ತೆ ನರಿ ಬುದ್ದಿ ತೋರಿರುವ ಪಾಕ್ ಜಮ್ಮು ಕಾಶ್ಮೀರದ ಹಲವು ನಗರಗಳನ್ನು ಗುರಿಯಾಗಿರಿಸಿ ಡ್ರೋಣ್ ದಾಳಿ ನಡೆಸಿದೆ. ಇದೀಗ ಬಂದ ಮಾಹಿತಿಗಳ ಶ್ರೀನಗರದ ಲಾಲ್ ಚೌಕ್, ಉದಂಪುರ ಸೇರಿದಂತೆ ಹಲವು ನಗರಗಳಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಡ್ರೋಣ್ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ಉಳಿದಂತೆ ಗುಜರಾತ್ ನ ಕಚ್, ರಾಜಸ್ಥಾನದ ಜೈಸ್ಮೇರ್ ನಲ್ಲಿ ಪಾಕಿಸ್ತಾನ ಡ್ರೋಣ್ ದಾಳಿ ನಡೆಸಿದ್ದು ಕದನ ವಿರಾಮ ಉಲ್ಲಂಘನೆಯಾಗಿದೆ.

ಕದನ ವಿರಾಮದ ಬಳಿಕ ನರಿಬುದ್ದಿ ತೋರಿದ ಪಾಕ್| ಜಮ್ಮು ಕಾಶ್ಮೀರದ ಹಲವೆಡೆ ಡ್ರೋಣ್ ದಾಳಿ Read More »

ಭಾರತ – ಪಾಕ್ ನಡುವೆ ಕದನ ವಿರಾಮ| ಅಮೇರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ

ಸಮಗ್ರ ನ್ಯೂಸ್: ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ. ಡೊನಾಲ್ಡ್ ಟ್ರಂಪ್ ಸಹ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರೋದಕ್ಕೆ ಸಂತೋಷವಾಗಿದೆ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇತ್ತ ಅಮೆರಿಕ ವಿದೇಶಾಂಗ

ಭಾರತ – ಪಾಕ್ ನಡುವೆ ಕದನ ವಿರಾಮ| ಅಮೇರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ Read More »

2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..! ಶೀಘ್ರದಲ್ಲೇ ಮರು ನಿಗದಿ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಸಿಸಿಐ (BCCI), ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ (IPL 2025) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪಾಕಿಸ್ತಾನ ಭಾರತದ ಹಲವಾರು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು. ಆದರೆ, ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿ ಅದರ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹೊಡೆದುರುಳಿಸಿತು. ಆದರೆ ಈ ದಾಳಿಯ ಪರಿಣಾಮದಿಂದಾಗಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು

2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..! ಶೀಘ್ರದಲ್ಲೇ ಮರು ನಿಗದಿ Read More »

ಮತ್ತೆ ಭಾರತದ ಮೇಲೆ ಪಾಕ್ ಡ್ರೋನ್ ದಾಳಿ.. ಗಡಿ ರಾಜ್ಯಗಳು ಬ್ಲಾಕ್ ಔಟ್..!

ಸಮಗ್ರ ನ್ಯೂಸ್: ಭಾರತದ ಮೇಲೆ ಪಾಕಿಸ್ತಾನ ಮತ್ತೋಮ್ಮೆ ಬಾಲ ಬಿಚ್ಚಿದೆ. ಜಮ್ಮು ಕಾಶ್ಮೀರ, ರಾಜಸ್ಥಾನ, ಪಂಜಾಬ್ ಗಡಿ ಪ್ರದೇಶಗಳ ಮೇಲೆ ಪಾಕ್ ಡ್ರೋನ್ ದಾಳಿ ನಡೆಸಿದೆ. ಇಂದು (ಮೇ 09) ಬೆಳಗ್ಗೆಯಿಂದ ಯಾವುದೇ ಡ್ರೋನ್ ದಾಳಿಗಳು ಆಗಿರಲಿಲ್ಲ. ಬದಲಿಗೆ ಪಾಕ್ ಆಗಾಗ ಬಾರ್ಡರ್ನಲ್ಲಿ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ಭಾರತ ಸಹ ತಿರುಗೇಟು ನೀಡಿತ್ತು. ಆದ್ರೆ, ಇದೀಗ ರಾತ್ರಿಯಾಗುತ್ತಿದ್ದಂತೆಯೇ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿಗೆ ಯತ್ನಿಸಿದೆ. ಪಾಕ್ ದಾಳಿ ನಡೆಸುತ್ತಿದ್ದಂತೆಯೇ ಜಮ್ಮು -ಕಾಶ್ಮೀರದಲ್ಲಿ ಸೈರನ್

ಮತ್ತೆ ಭಾರತದ ಮೇಲೆ ಪಾಕ್ ಡ್ರೋನ್ ದಾಳಿ.. ಗಡಿ ರಾಜ್ಯಗಳು ಬ್ಲಾಕ್ ಔಟ್..! Read More »

ಬೆಂಗಳೂರು ಏರ್ ಪೋರ್ಟ್ ನಲ್ಲಿ ಹೈಅಲರ್ಟ್| ಪ್ರಯಾಣಿಕರಿಗೆ ೩ ಗಂಟೆ ಮುಂಚಿತವಾಗಿ ಬರಲು ಸೂಚನೆ

ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಹಾಗೂ ಪ್ರಯಾಣಿಕರಿಗೆ 3 ಗಂಟೆ ಮುಂಚೆ ಬರಲು ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.ವಿಮಾನ ನಿಲ್ದಾಣದಲ್ಲಿ ಶಸ್ತ್ರಸಜ್ಜಿತ ಸೈನಿಕರು ರೌಂಡ್ಸ್ ಹಾಕುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು

ಬೆಂಗಳೂರು ಏರ್ ಪೋರ್ಟ್ ನಲ್ಲಿ ಹೈಅಲರ್ಟ್| ಪ್ರಯಾಣಿಕರಿಗೆ ೩ ಗಂಟೆ ಮುಂಚಿತವಾಗಿ ಬರಲು ಸೂಚನೆ Read More »

ಕ್ವೆಟ್ಟಾ ವಶಕ್ಕೆ ಪಡೆದ ಬಲೂಚ್ ಸೇನೆ| ಅಡಕತ್ತರಿಯಲ್ಲಿ ಸಿಲುಕಿದ ಪಾಕಿಸ್ತಾನ

ಸಮಗ್ರ ನ್ಯೂಸ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾವನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಘೋಷಿಸಿದೆ. ಭಾರತದೊಂದಿಗೆ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆಳವಣಿಗೆಯ ನಡುವೆ, ಪಾಕಿಸ್ತಾನಿ ಸೇನೆಯನ್ನು ಕ್ವೆಟ್ಟಾದಿಂದ ಹೊರದಬ್ಬುವಲ್ಲಿ ಬಲೂಚ್ ಹೋರಾಟಗಾರರು ಯಶಸ್ವಿಯಾಗಿದ್ದಾರೆ ಎಂದು ಬಿಎಲ್‌ಎ ಹೇಳಿಕೊಂಡಿದೆ. ಭಾರತದ ಗಡಿಯಲ್ಲಿ ಪಾಕಿಸ್ತಾನ ತನ್ನ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಅಮೃತಸರ, ಜಲಂಧರ್, ಜೈಸಲ್ಮೇರ್, ಮತ್ತು ಉಧಂಪುರದಂತಹ ನಗರಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಲು ಪ್ರಯತ್ನಿಸಿದೆ. ಈ ಉದ್ವಿಗ್ನತೆಯ ನಡುವೆ,

ಕ್ವೆಟ್ಟಾ ವಶಕ್ಕೆ ಪಡೆದ ಬಲೂಚ್ ಸೇನೆ| ಅಡಕತ್ತರಿಯಲ್ಲಿ ಸಿಲುಕಿದ ಪಾಕಿಸ್ತಾನ Read More »

ಪಾಕಿಸ್ತಾನದ 50 ಡ್ರೋನ್ ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ

ಸಮಗ್ರ ನ್ಯೂಸ್: ಭಾರತದ ಮೇಲೆ ಪಾಕಿಸ್ತಾನ ತಡರಾತ್ರಿ ಇಂದಲೂ ಕ್ಷಿಪಣಿ ದಾಳಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಆದರೆ ಭಾರತ ಮಾತ್ರ ಪಾಕಿಸ್ತಾನದ ಯಾವುದೇ ಡ್ರೋನ್ ಗಳನ್ನು ಗಡಿಯಿಂದ ಒಳಗಡೆ ಪ್ರವೇಶಕ್ಕೆ ಬಿಡದೆ, ಎಲ್ಲ ಡ್ರೋನ್ ಗಳನ್ನು ಹೊಡೆದುರುಳಿಸಿದೆ ಎಂದು ಭಾರತೀಯ ಸೇನೆಯಿಂದ ಮಾಹಿತಿ ಲಭ್ಯವಾಗಿದೆ. ಭಾರತದ ಮೇಲೆ ಪಾಕಿಸ್ತಾನ ಇದುವರೆಗೂ 50 ಡ್ರೋನ್ ಗಳ ಮೂಲಕ ದಾಳಿ ಮಾಡಿತ್ತು. ಇದೀಗ ಎಲ್ಲಾ 50 ಡ್ರೋನ್ ಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಪಾಕಿಸ್ತಾನದ ದಾಳಿಗೆ ಭಾರತೀಯ

ಪಾಕಿಸ್ತಾನದ 50 ಡ್ರೋನ್ ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ Read More »

ಕರಾಚಿ ಬಂದರು ಮೇಲೆ ಭಾರತೀಯ ನೌಕಾಪಡೆ ದಾಳಿ| ಪ್ರಮುಖ ವಾಣಿಜ್ಯ ನಗರ ತತ್ತರ

ಸಮಗ್ರ ನ್ಯೂಸ್: ಪಾಕಿಸ್ತಾನ ಇನ್ನೆಂದು ಭಾರತದತ್ತ ಕಣ್ಣೆಟ್ಟಿ ನೋಡದಂತ ಮಾಡಲು ಭಾರತ ಸಜ್ಜಾಗಿದೆ. ಮೂರು ಸೇನೆಗಳು ಏಕಕಾಲಕ್ಕೆ ಪಾಕಿಸ್ತಾನ ಮೇಲೆ ಮುಗಿಬಿದ್ದಿದೆ. ಪಾಕಿಸ್ತಾನ ದಾಳಿ ವಿಫಲಗೊಳಿರುವ ಸೇನೆ ಪ್ರತಿದಾಳಿ ನಡೆಸುತ್ತಿದೆ. 1971ರಲ್ಲಿ ಪಾಕಿಸ್ತಾನ ಮೇಲಿನ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಕರಾಚಿ ಬಂದರು ಮೇಲೆ ಭಾರತೀಯ ನೌಕಾ ಪಡೆ ದಾಳಿ ಮಾಡಿದೆ. ಐಎನ್‌ಎಸ್ ವಿಕ್ರಾಂತ್ ಇದೀಗ ಕರಾಚಿ ಬಂದರು ಮೇಲೆ ದಾಳಿ ಮಾಡಿದೆ. ಈ ದಾಳಿಯಲ್ಲಿ ಕರಾಚಿ ಬಂದಿನ ಬಹುತೇಕ ಭಾಗ ಧ್ವಂಸಗೊಂಡಿದೆ. ಭಾರತದ ಮೇಲೆ

ಕರಾಚಿ ಬಂದರು ಮೇಲೆ ಭಾರತೀಯ ನೌಕಾಪಡೆ ದಾಳಿ| ಪ್ರಮುಖ ವಾಣಿಜ್ಯ ನಗರ ತತ್ತರ Read More »