ದೇಶ-ವಿದೇಶ

ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ‌ ಜೊತೆ‌ ಕೈ ಜೋಡಿಸಿದ ಆರ್ಯನ್ ಖಾನ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಶಾರುಖ್​ ಖಾನ್​ ಮಗ ಆರ್ಯನ್ ಖಾನ್ ಸಿನಿಮಾ ನಂತರ ಇದೀಗ ಉದ್ಯಮ ಕ್ಷೇತ್ರಕ್ಕೂ ಕಾಲಿಡುವುದಾಗಿ ಘೋಷಿಸಿದ್ದಾರೆ. ವಿಶ್ವದ ಅತಿದೊಡ್ಡ ಮದ್ಯ ತಯಾರಿಕಾ ಕಂಪನಿ ಜತೆ ಕೈಜೋಡಿಸಿ ಭಾರತದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಬಂಟಿ ಸಿಂಗ್ ಹಾಗೂ ಲೆಟಿ ಬ್ಲಾಗೋವಾ ಸಹಭಾಗಿತ್ವದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಆರ್ಯನ್ ಖಾನ್. ನಂತರ ದೇಶದಾದ್ಯಂತ ಮಾರುಕಟ್ಟೆಯನ್ನು ವಿಸ್ತರಿಸುವ ಬಗ್ಗೆ ಅವರು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ‘ಸ್ಲ್ಯಾಬ್ […]

ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ‌ ಜೊತೆ‌ ಕೈ ಜೋಡಿಸಿದ ಆರ್ಯನ್ ಖಾನ್ Read More »

Breaking: ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಮಕ್ಕಳ ಕಲಿಕಾ ಕೊರತೆ ನೀಗಿಸಲು ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ

Breaking: ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ Read More »

ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್

ಲಕ್ನೋ: ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳನ್ನು ತಡೆಯುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ. ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಇನ್ನು ಉತ್ತರ ಪ್ರದೇಶ,

ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್ Read More »

ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾತೈಲ ದರ; ಗ್ರಾಹಕರಿಗಿಲ್ಲ ಲಾಭ| ದೇವರು ಕೊಟ್ಟರೂ ಬಿಡಲೊಲ್ಲದ ಪೂಜಾರಿ!!

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿತವಾಗಿದೆ. ಒಂದೇ ತಿಂಗಳಲ್ಲಿ ಶೇಕಡ 20ರಷ್ಟು ದರ ಕುಸಿತ ಕಂಡಿದೆ. ಕಳೆದ ಮಾರ್ಚ್ ನಲ್ಲಿ ಬ್ಯಾರಲ್ ಗೆ 129 ಡಾಲರ್ ನಷ್ಟಿದ್ದ ಕಚ್ಚಾ ತೈಲದ ದರ ಈಗ 76 ಡಾಲರ್ ಗೆ ಕುಸಿದಿದೆ. ಇದರಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಇದರ ಲಾಭ ಸಿಗುವುದು ಬಹುತೇಕ ಅನುಮಾನವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆಯಾಗುವ ಸಾಧ್ಯತೆ ಕ್ಷೀಣವಾಗಿದೆ. ಜಾಗತಿಕ ಮಟ್ಟದಲ್ಲಿ

ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾತೈಲ ದರ; ಗ್ರಾಹಕರಿಗಿಲ್ಲ ಲಾಭ| ದೇವರು ಕೊಟ್ಟರೂ ಬಿಡಲೊಲ್ಲದ ಪೂಜಾರಿ!! Read More »

ಲ್ಯುಮೆಸಿಟಿಯನ್ನು ಸ್ವಾಧೀನಪಡಿಸಿಕೊಂಡ ಟೆಕ್ ದೈತ್ಯ ಮೈಕ್ರೋಸಾಫ್ಟ್

ಸಮಗ್ರ ನ್ಯೂಸ್: ಮುಂದಿನ ಪೀಳಿಗೆಯ ಹಾಲೋ ಕೋರ್ ಫೈಬರ್ (HCF) ತಂತ್ರಜ್ಞಾನಗಳಲ್ಲಿ ಮುಂಚೂಣಿಯಲ್ಲಿರುವ ಲ್ಯುಮೆಸಿಟಿ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ಮೈಕ್ರೋಸಾಫ್ಟ್ ಘೋಷಿಸಿದೆ. ಲ್ಯುಮೆಸಿಟಿಯ ನವೀನ HCF ಉತ್ಪನ್ನವು ಜಾಗತಿಕವಾಗಿ ಉದ್ಯಮ ಮತ್ತು ದೊಡ್ಡ ಪ್ರಮಾಣದ ಸಂಸ್ಥೆಗಳಿಗೆ ವೇಗದ, ವಿಶ್ವಾಸಾರ್ಹ ಮತ್ತು ಸುರಕ್ಷಿತ ನೆಟ್‌ವರ್ಕಿಂಗ್ ಅನ್ನು ಸಂಪರ್ಕಿಸಲು ಸಹಾಯಕವಾಗಿದೆ. ಈ ಸ್ವಾಧೀನಪಡಿಸಿಕೊಳ್ಳುವಿಕೆಯು ಮೈಕ್ರೋಸಾಫ್ಟ್ ತನ್ನ ಜಾಗತಿಕ ಕ್ಲೌಡ್ ಮೂಲಸೌಕರ್ಯವನ್ನು ಇನ್ನಷ್ಟು ಉತ್ತಮಗೊಳಿಸುವ ಸಾಮರ್ಥ್ಯವನ್ನು ವಿಸ್ತರಿಸಲು ಸಹಾಯಕವಾಗಲಿದೆ ಮತ್ತು ಅದರ ಕ್ಲೌಡ್ ಪ್ಲಾಟ್‌ಫಾರ್ಮ್ ಮತ್ತು ಸೇವೆಗಳನ್ನು ಗ್ರಾಹಕರಿಗೆ ಕಟ್ಟುನಿಟ್ಟಾದ ಲೇಟೆನ್ಸಿ

ಲ್ಯುಮೆಸಿಟಿಯನ್ನು ಸ್ವಾಧೀನಪಡಿಸಿಕೊಂಡ ಟೆಕ್ ದೈತ್ಯ ಮೈಕ್ರೋಸಾಫ್ಟ್ Read More »

ಪಾನ್‌ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ| ತೆರಿಗೆ ಇಲಾಖೆಯಿಂದ ಕೊನೆಯ ಗಡುವು

ಸಮಗ್ರ ನ್ಯೂಸ್: ನೀವು ನಿಮ್ಮ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಬೇಕೆಂದು ವರ್ಷಗಳಿಂದ ಸರ್ಕಾರ ಹೇಳುತ್ತಿದ್ದರೂ ಇನ್ನೂ ಕೂಡ ಹಲವರು ತಮ್ಮ ಪ್ಯಾನ್ ಕಾರ್ಡ್ ಆಧಾರ್ ಲಿಂಕ್ ಮಾಡಿಸಿಲ್ಲ. ಹಾಗಾಗಿ ತೆರಿಗೆ ಇಲಾಖೆಯು ಅವರಿಗೆ ಕೊನೆಯ ಗಡುವು ನೀಡಿದೆ. ವೈಯಕ್ತಿಕ ತೆರಿಗೆದಾರರು ತಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ನೀವು ಹಾಗೆ ಮಾಡದಿದ್ದಲ್ಲಿ ನಿಮ್ಮ ಆದಾಯ ತೆರಿಗೆ ರಿಟರ್ನ್ ಅನ್ನು ಪ್ರಕ್ರಿಯೆಗೊಳಿಸಲಾಗುವುದಿಲ್ಲ. 1961 ರ ಆದಾಯ

ಪಾನ್‌ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ| ತೆರಿಗೆ ಇಲಾಖೆಯಿಂದ ಕೊನೆಯ ಗಡುವು Read More »

ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್‌

ನವದೆಹಲಿ: ಯೂಟ್ಯೂಬ್‌ನಲ್ಲಿ ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡವೆಂದು ಹೇಳಿದ್ದ ಸುಪ್ರೀಂಕೋರ್ಟ್‌ನ ನ್ಯಾ.ಸಂಜಯ ಕಿಶನ್‌ ಕೌಲ್‌ ಮತ್ತು ನ್ಯಾ.ಎ.ಎಸ್‌.ಓಕಾ ನೇತೃತ್ವದ ನ್ಯಾಯಪೀಠ ಅರ್ಜಿದಾರರಿಗೆ 25 ಸಾವಿರ ರೂ. ದಂಡವನ್ನೂ ವಿಧಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಆನಂದ್‌ ಕಿಶೋರ್‌ ಚೌಧರಿ ಎಂಬವರು ಯೂಟ್ಯೂಬ್‌ನಲ್ಲಿ ಲಭ್ಯವಿರುವ ಅಧ್ಯಯನ ವಿಡಿಯೋಗಳನ್ನು ನೋಡಿ ಸಿದ್ಧತೆ ನಡೆಸಿದ್ದರು. ಆದರೆ, ಅವರು ಪರೀಕ್ಷೆ ಬರೆದರೂ ಅದರಲ್ಲಿ ಉತ್ತೀರ್ಣರಾಗಿರಲಿಲ್ಲ. ಯೂಟ್ಯೂಬ್‌ನಲ್ಲಿ ಇರುವ ಹೆಚ್ಚಿನ ಪ್ರಮಾಣದ ಜಾಹೀರಾತಿನಿಂದಲೇ ತನಗೆ ತೇರ್ಗಡೆಯಾಗಲು ಅಸಾಧ್ಯವಾಯಿತು. ಹೀಗಾಗಿ, ಗೂಗಲ್‌ ವತಿಯಿಂದ ನನಗೆ

ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್‌ Read More »

ದೇವರೆಂದು ಪೂಜಿಸಿದ ಆ ವಿಗ್ರಹ ದೇವರಲ್ಲ! ಹಾಗಾದ್ರೆ ಮತ್ತಿನ್ನೇನು? ಶಾಕ್ ನಲ್ಲಿ ಭಕ್ತಾಧಿಗಳು..!

ಸಮಗ್ರ ನ್ಯೂಸ್: ಇಷ್ಟು ದಿನ ದೇವರು ಅಂತ ಆರಾಧಿಸಿದ್ದು ದೇವರೇ ಅಲ್ಲ ಎಂದು ತಿಳಿದರೆ ಯಾರಿಗೇ ಆಗಲಿ, ಶಾಕ್ ಆಗೋದು ಖಂಡಿತ. ಇಂತಹುದೇ ಒಂದು ಅತಿ ವಿಚಿತ್ರ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದಲ್ಲಿರುವ ದೇವಾಲಯವೊಂದರಲ್ಲಿ ಆರಾಧಿಸುತ್ತಿದ್ದ ತಲೈವೆಟ್ಟಿ ಮುನಿಯಪ್ಪನ್ ದೇವರು ಇದೀಗ ಬುದ್ಧ ಎಂದು ಸಾಬೀತಾಗಿದೆ. ಈ ದೇವಾಲಯದಲ್ಲಿ ಬುದ್ಧನ ಶಿಲ್ಪವಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆಗೆ ಮದ್ರಾಸ್ ಹೈಕೋರ್ಟ್ ಖಡಕ್ ಆದೇಶ ನೀಡಿದೆ. ತಲೈವೆಟ್ಟಿ ಮುನಿಯಪ್ಪನ್ ದೇವಾಲಯದಲ್ಲಿ ಹಿಂದೂ ಧರ್ಮಕ್ಕೆ

ದೇವರೆಂದು ಪೂಜಿಸಿದ ಆ ವಿಗ್ರಹ ದೇವರಲ್ಲ! ಹಾಗಾದ್ರೆ ಮತ್ತಿನ್ನೇನು? ಶಾಕ್ ನಲ್ಲಿ ಭಕ್ತಾಧಿಗಳು..! Read More »

ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ನಿರ್ಮಾಣ ಸಾಧ್ಯವಿಲ್ಲ| ಕೇಂದ್ರ ಸಾರಿಗೆ ಸಚಿವ ನಿತಿನ್ ಘಡ್ಕರಿ ಅಭಿಮತ

ಸಮಗ್ರ ನ್ಯೂಸ್: ದಶಕದಿಂದಲೇ ಪ್ರಸ್ತಾವದಲ್ಲಿದ್ದ ಶಿರಾಡಿ ಘಾಟಿ ಸುರಂಗ ಮಾರ್ಗ ಹೆದ್ದಾರಿ ಯೋಜನೆಯನ್ನು ಕೇಂದ್ರ ಸರಕಾರ ಕೈಬಿಡುವ ಸೂಚನೆಗಳು ಕಾಣುತ್ತಿವೆ. ಈ ಯೋಜನೆಯು ದೊಡ್ಡ ಮೊತ್ತದ್ದಾಗಿದೆ ಹಾಗೂ ಅನೇಕ ಸವಾಲುಗಳಿಂದ ಕೂಡಿರುವ ಕಾರಣ ಇದು ಕಾರ್ಯಸಾಧುವಲ್ಲ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ. ಲೋಕಸಭೆಯಲ್ಲಿ ಗುರುವಾರ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಪ್ರಶ್ನೆಗೆ, ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿಯವರು ನೀಡಿರುವ ಉತ್ತರದಲ್ಲಿ ಈ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಮಂಗಳೂರಿಗೆ ಫೆಬ್ರವರಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ,

ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ನಿರ್ಮಾಣ ಸಾಧ್ಯವಿಲ್ಲ| ಕೇಂದ್ರ ಸಾರಿಗೆ ಸಚಿವ ನಿತಿನ್ ಘಡ್ಕರಿ ಅಭಿಮತ Read More »

ಹೊಸವರ್ಷದಿಂದ ಯುವಜನತೆಗೆ ಉಚಿತವಾಗಿ ಸಿಗಲಿದೆ ಕಾಂಡೋಮ್

ಸಮಗ್ರ ನ್ಯೂಸ್: ಸುರಕ್ಷಿತ ಲೈಂಗಿಕತೆಗಾಗಿ ಕಾಂಡೋಮ್ ಬಳಸಲು ಪ್ರೋತ್ಸಾಹಿಸಲಾಗುತ್ತೆ. ಇದರ ಮಧ್ಯೆ ಫ್ರಾನ್ಸ್ ನ ಯುವ ಜನತೆಗೆ ಹೊಸ ವರ್ಷದಿಂದ ಉಚಿತವಾಗಿ ಕಾಂಡೋಮ್ ವಿತರಿಸಲು ತೀರ್ಮಾನಿಸಲಾಗಿದೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಈ ವಿಷಯ ತಿಳಿಸಿದ್ದು, 18 ರಿಂದ 25 ವಯೋಮಾನದ ಯುವ ಜನತೆಗೆ 2023 ರ ಜನವರಿ 1ರಿಂದ ಉಚಿತವಾಗಿ ಕಾಂಡೋಮ್ ಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಫ್ರಾನ್ಸ್ ನಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಲೈಂಗಿಕವಾಗಿ ಹರಡುವ ರೋಗಗಳು ಶೇಕಡ 30ರಷ್ಟು ಹೆಚ್ಚಾಗಿರುವ ಹಿನ್ನೆಲೆಯಲ್ಲಿ

ಹೊಸವರ್ಷದಿಂದ ಯುವಜನತೆಗೆ ಉಚಿತವಾಗಿ ಸಿಗಲಿದೆ ಕಾಂಡೋಮ್ Read More »