ದೇಶ-ವಿದೇಶ

10 ಸಾವಿರ ಮಂದಿ ಗೂಗಲ್ ನಿಂದ ಹೊರಕ್ಕೆ| ಉದ್ಯೋಗಿಗಳ ವಜಾಕ್ಕೆ ಚಿಂತನೆ

ಸಮಗ್ರ ನ್ಯೂಸ್: ದೈತ್ಯ ಐಟಿ ಕಂಪೆನಿಗಳಲ್ಲಿ ಉದ್ಯೋಗಿಗಳ ವಜಾ ಪರ್ವ ಮುಂ‌ದುವರಿದಿದ್ದು ಇದೀಗ ಗೂಗಲ್‌ ಕಂಪೆನಿಯಿಂದ 10ಸಾವಿರ ಮಂದಿಯನ್ನು ಶೀಘ್ರವೇ ಕೆಲಸದಿಂದ ಕೈಬಿಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಹೆಡ್ಜ್ ಫಂಡ್ ಬಿಲಿಯನೇರ್ ಕ್ರಿಸ್ಟೋಫರ್ ಹೊಹ್ನ್, ಗೂಗಲ್ ಮಾತೃಸಂಸ್ಥೆಯಾದ ಆಲ್ಫಾಬೆಟ್‌ಗೆ ಈ ಸಂಬಂಧ ಪತ್ರ ಬರೆದಿದ್ದು, ಉದ್ಯೋಗಿಗಳ ಸಂಖ್ಯೆ ಕಡಿತಗೊಳಿಸಲು ಸಲಹೆ ನೀಡಲಾಗಿದೆ. ಟೆಕ್ ಬೆಹೆಮೊತ್ ಗೂಗಲ್ ಕಾರ್ಯಕ್ಷಮತೆಯ ಸುಧಾರಣೆ ಸಂಬಂಧ ಯೋಜನೆಯೊಂದನ್ನು ಜಾರಿಗೊಳಿಸಲು ಮುಂದಾಗಿದ್ದು, ಇದರ ಫಲಿತಾಂಶವಾಗಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಬೆಕಾಗುತ್ತದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. […]

10 ಸಾವಿರ ಮಂದಿ ಗೂಗಲ್ ನಿಂದ ಹೊರಕ್ಕೆ| ಉದ್ಯೋಗಿಗಳ ವಜಾಕ್ಕೆ ಚಿಂತನೆ Read More »

ಶಾಸಕರನ್ನು ಅಪಹರಣಗೈದ ಪ್ರಕರಣ| ಬಿ.ಎಲ್.ಸಂತೋಷ್ ಗೆ ಲುಕ್‌ಔಟ್ ನೋಟಿಸ್

ಸಮಗ್ರ ನ್ಯೂಸ್: ಶಾಸಕರನ್ನು ಅಪಹರಿಸಿ ಅವರನ್ನು ಕೋಟಿ ಕೋಟಿ ಹಣಕ್ಕೆ ಖರೀದಿ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪದಡಿ ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಮತ್ತಿಬ್ಬರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ತೆಲಂಗಾಣದ ಆಡಳಿತಾರೂಢ ಟಿಆರ್‌‌ಎಸ್ ಶಾಸಕರನ್ನು ಅಪಹರಿಸಿ ಅವರನ್ನು ಕೋಟಿ ಕೋಟಿ ಹಣಕ್ಕೆ ಖರೀದಿ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪದ ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಶಾಸಕರನ್ನು ಅಪಹರಣಗೈದ ಪ್ರಕರಣ| ಬಿ.ಎಲ್.ಸಂತೋಷ್ ಗೆ ಲುಕ್‌ಔಟ್ ನೋಟಿಸ್ Read More »

ಏರ್ ಟೆಲ್ ಗ್ರಾಹಕರಿಗೆ ದರ‌ಏರಿಕೆ ಬಿಸಿ? ಇತರೆ ಕಂಪೆನಿಗಳು ದರ ಹೆಚ್ಚಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಏರ್ ಟೆಲ್ ಬಳಕೆದಾರರಿಗೆ ದರ ಏರಿಕೆಯ ಆತಂಕ ಶುರುವಾಗಿದೆ. ಕಂಪೆನಿಯು ಈಗಾಗಲೇ ತನ್ನ ಎರಡು ಸರ್ಕಲ್‌ನಲ್ಲಿ ಶೇ.57ರಷ್ಟು ದರವನ್ನು ಏರಿಸಿದ್ದು ಉಳಿದ ಕಂಪನಿಗಳು ಏರ್‌ಟೆಲ್‌ ಕ್ರಮವನ್ನು ಅನುಸರಿಸುವ ಸಾಧ್ಯತೆಯಿದೆ. ಹರ್ಯಾಣ ಮತ್ತು ಒಡಿಶಾ ಸರ್ಕಲ್‌ನಲ್ಲಿ ಏರ್‌ಟೆಲ್‌ ಕನಿಷ್ಟ ರಿಚಾರ್ಚ್‌ ದರವನ್ನು ಶೇ.57ರಷ್ಟು ಏರಿಕೆ ಮಾಡಿದೆ. ಈ ಮೊದಲು 99 ರೂ. ರಿಚಾರ್ಜ್‌ ಮಾಡಿದರೆ 28 ದಿನಗಳ ವ್ಯಾಲಿಡಿಟಿ, 99 ರೂ. ಟಾಕ್‌ ಟೈಂ ಮತ್ತು 200 ಎಂಬಿ ಡೇಟಾ ಸಿಗುತ್ತಿತ್ತು. ಈಗ ಈ ಪ್ಯಾಕ್‌

ಏರ್ ಟೆಲ್ ಗ್ರಾಹಕರಿಗೆ ದರ‌ಏರಿಕೆ ಬಿಸಿ? ಇತರೆ ಕಂಪೆನಿಗಳು ದರ ಹೆಚ್ಚಿಸುವ ಸಾಧ್ಯತೆ Read More »

ಲಘು ವಿಮಾನ ಪತನ; 8 ಮಂದಿ ಸಾವು

ಸಮಗ್ರ ನ್ಯೂಸ್: ಲಘು ವಿಮಾನವೊಂದು ವಸತಿ ಪ್ರದೇಶದಲ್ಲಿ ಪತನಗೊಂಡು ಎಂಟು ಮಂದಿ ಮೃತಪಟ್ಟ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಇಲ್ಲಿನ ಮೆಡೆಲಿನ್​​ನ ಒಲಯಾ ಹೆರೆರಾ ವಿಮಾನ ನಿಲ್ದಾಣದಿಂದ ಟೇಕ್​ಆಫ್​ ಆಗಿದ್ದ ಈ ವಿಮಾನದಲ್ಲಿ ಇಬ್ಬರು ಪೈಲೆಟ್​ಗಳು ಮತ್ತು ಆರು ಮಂದಿ ಪ್ರಯಾಣಿಕರು ಇದ್ದರು. ಏರ್​ಪೋರ್ಟ್​ನಿಂದ ಹೊರಟ ಕೆಲವೇ ಹೊತ್ತಲ್ಲಿ, ಸಮೀಪದ ವಸತಿ ಪ್ರದೇಶದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ. ಆ ಮನೆಯ ಕೊನೇ ಫ್ಲೋರ್​ ಧ್ವಂಸಗೊಂಡಿದೆ. ಅದೃಷ್ಟಕ್ಕೆ ಮನೆಯಲ್ಲಿ ಇದ್ದವರಿಗಾಗಲೀ, ಪತನಗೊಂಡ ಸ್ಥಳದಲ್ಲಿ ಇದ್ದ ಇನ್ನಿತರರಿಗಾಗಲೀ ಯಾವುದೇ ತೊಂದರೆಯಾಗಿಲ್ಲ

ಲಘು ವಿಮಾನ ಪತನ; 8 ಮಂದಿ ಸಾವು Read More »

ಭೂಕಂಪಕ್ಕೆ ತತ್ತರಿಸಿದ ಇಂಡೋನೇಷ್ಯಾ| ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆ

ಸಮಗ್ರ ನ್ಯೂಸ್: ಇಂಡೋನೇಷ್ಯಾದ ಪ್ರಮುಖ ದ್ವೀಪ ಜಾವಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 162 ಮಂದಿ ಮೃತಪಟ್ಟಿದ್ದು, 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 5.6ರಷ್ಟು ದಾಖಲಾಗಿತ್ತು. ಮೃತರಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದೆ. ಹಲವು ಮನೆಗಳು ಮತ್ತು ಕಟ್ಟಡಗಳು ಕುಸಿದು ಬಿದ್ದಿವೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿದವರ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಜೆದಿಲ್‌ ಎಂಬ ಹಳ್ಳಿಯೊಂದರಲ್ಲೇ ಸುಮಾರು 25ಕ್ಕೂ ಹೆಚ್ಚು ಜನರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ತಂಡಗಳು ಕುಸಿದ ಮನೆಗಳ

ಭೂಕಂಪಕ್ಕೆ ತತ್ತರಿಸಿದ ಇಂಡೋನೇಷ್ಯಾ| ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆ Read More »

ಬೆಂಗಳೂರು: ಯೋಗ ಹೇಳಿಕೊಡುವವರು ಬೇಕಾಗಿದ್ದಾರೆ| 30,000 ಸಂಬಳ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಡಿಜಿಟಲ್ ಆರ್ಟಿಸ್ಟ್​, ಯೋಗ ಥೆರಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 30, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ. ಅರ್ಜಿ

ಬೆಂಗಳೂರು: ಯೋಗ ಹೇಳಿಕೊಡುವವರು ಬೇಕಾಗಿದ್ದಾರೆ| 30,000 ಸಂಬಳ Read More »

ರಸ್ನಾ ಗ್ರೂಪ್ ಸಂಸ್ಥಾಪಕ ಅಝೀಜ್ ಫಿರೋಜ್ಶಾ ವಿಧಿವಶ

ಸಮಗ್ರ ನ್ಯೂಸ್: ವಿಶ್ವದ ಅತಿದೊಡ್ಡ ತಂಪು ಪಾನೀಯವನ್ನು ಜನರಿಗೆ ಪರಿಚಯಿಸಿದ್ದ ರಸ್ನಾ ಗ್ರೂಪ್‌‌ನ ಸ್ಥಾಪಕ ಆರೀಝ್ ಪಿರೋಜ್ಶಾ ಖಂಬಟ್ಟಾ(85) ಅವರು ಇಂದು ವಿಧಿವಶರಾಗಿದ್ದಾರೆ. ಆರೀಝ್ ಅವರು ಭಾರತೀಯ ಕೈಗಾರಿಕೆ, ವ್ಯಾಪಾರ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಸಾಮಾಜಿಕ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ವಾಪಿಝ್ (ವರ್ಲ್ಡ್ ಅಲೈಯನ್ಸ್ ಆಫ್ ಪಾರ್ಸಿ ಇರಾನಿ ಜರ್ತೋಸ್ಟಿಸ್) ನ ಮಾಜಿ ಅಧ್ಯಕ್ಷರಾಗಿ ಮತ್ತು ಅಹಮದಾಬಾದ್ ಪಾರ್ಸಿ ಪಂಚಾಯತ್ ನ ಹಿಂದಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತಂಪು ಪಾನೀಯಗಳಲ್ಲಿ ಆರೀಝ್ ಅವರ ಬ್ರಾಂಡ್ ರಸ್ನಾ

ರಸ್ನಾ ಗ್ರೂಪ್ ಸಂಸ್ಥಾಪಕ ಅಝೀಜ್ ಫಿರೋಜ್ಶಾ ವಿಧಿವಶ Read More »

ಇಂಡೋನೇಷ್ಯಾದಲ್ಲಿ ಪ್ರಬಲ‌ ಭೂಕಂಪ| 44 ಜನ ಸಾವು, 300ಕ್ಕೂ ಹೆಚ್ಚು ಮಂದಿ ಗಂಭೀರ

ಸಮಗ್ರ ನ್ಯೂಸ್: ಇಂಡೋನೇಷ್ಯಾದ ಪಶ್ಚಿಮ ಜಾವಾ ದ್ವೀಪದಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಇಲ್ಲಿನ ಸಾಸಿಯಾಜೂರ್ ಪ್ರದೇಶದಲ್ಲಿ 49 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಈ ಭೂಕಂಪದಲ್ಲಿ ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಲವು ಆಸ್ತಿಪಾಸ್ತಿ‌ ನಷ್ಟ ಉಂಟಾಗಿರುವ ಸಾಧ್ಯತೆ‌ ಇದ್ದು ಗಾಯಾಳುಗಳನ್ನ ಆಸ್ಪತ್ರೆಗೆ ಸ್ಥಳಾಂತರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.9 ರಿಂದ 5.6 ರ ನಡುವೆ ಇತ್ತು. ಭೂಕಂಪದಿಂದಾಗಿ ಸಾವಿರಾರು ಮನೆಗಳು

ಇಂಡೋನೇಷ್ಯಾದಲ್ಲಿ ಪ್ರಬಲ‌ ಭೂಕಂಪ| 44 ಜನ ಸಾವು, 300ಕ್ಕೂ ಹೆಚ್ಚು ಮಂದಿ ಗಂಭೀರ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ನ.22ರಿಂದ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ನ.22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನ.22 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಬೆಂಗಳೂರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ನ.22ರಿಂದ ಮಳೆ‌ ಸಾಧ್ಯತೆ Read More »

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ

ಸಮಗ್ರ ನ್ಯೂಸ್: ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆ ಮೆಹನಾರ್‌ನಲ್ಲಿ ನಡೆದಿದೆ. ಘಟನೆಯಲ್ಲಿ 7 ಮಕ್ಕಳು ಸೇರಿ 15 ಜನ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್, ಮಕ್ಕಳ ಸಹಿತ ಹಲವರ ಮೇಲೆ ಹರಿದಿದೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ದುರ್ಘಟನೆಯನ್ನು ದುರಂತ ಎಂದು ಹೇಳಿದ್ದಾರೆ. ಮೃತರ

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ Read More »