ದೇಶ-ವಿದೇಶ

ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್ ರಾಜೀನಾಮೆ

ಸಮಗ್ರ ನ್ಯೂಸ್: ವಾಟ್ಸಾಪ್ ನ ಭಾರತದ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಸಾರ್ವಜನಿಕ ನೀತಿ ಮೆಟಾ ಇಂಡಿಯಾದ ನಿರ್ದೇಶಕ ರಾಜೀವ್ ಅಗರ್ವಾಲ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಭಾರತದಲ್ಲಿ ವಾಟ್ಸಾಪ್ ಸಾರ್ವಜನಿಕ ನೀತಿಯ ನಿರ್ದೇಶಕ ಶಿವನಾಥ್ ತುಕ್ರಾಲ್ ಅವರನ್ನು ಈಗ ಭಾರತದ ಎಲ್ಲಾ ಮೆಟಾ ಬ್ರಾಂಡ್ ಗಳ ಸಾರ್ವಜನಿಕ ನೀತಿಯ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ವಿಶ್ವದಾದ್ಯಂತ ಸುಮಾರು 11,000 ಉದ್ಯೋಗಗಳನ್ನು ಕಡಿತಗೊಳಿಸುವ ಮೂಲಕ ಮೆಟಾ ತನ್ನ ಅತಿದೊಡ್ಡ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ ಒಂದು ವಾರದೊಳಗೆ ಇದು ಬಂದಿದೆ. ಈ

ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್ ರಾಜೀನಾಮೆ Read More »

ಮೋದಿ – ರಿಷಿ ಸುನಕ್ ಮುಖಾಮುಖಿ| ಹಲವು ವಿಚಾರಗಳ ಬಗ್ಗೆ ಚರ್ಚೆ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ನಿನ್ನೆ ಸಂಜೆ ಇಂಡೋನೆಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗ ಸಭೆಗೆ ತೆರಳಿದ್ದಾರೆ. ಈಗ ಅನೇಕ ಜಾಗತಿಕ ನಾಯಕರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಭಾಷಣೆ ನಡೆಸುತ್ತಿರುವ ಮೋದಿ ಈಗ ಬ್ರಿಟನ್​ ಪ್ರಧಾನಿ ರಿಷಿ ಸುನಕ್ ರನ್ನೂ ಭೇಟಿ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ‘ಪ್ರಧಾನಿ ಮೋದಿ ಮತ್ತು ಪ್ರಧಾನಿ ರಿಷಿ ಸುನಕ್​ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗದಲ್ಲಿ ಮಾತುಕತೆ ನಡೆಸುತ್ತಿದ್ದಾರೆ’ ಎಂದು ಟ್ವೀಟ್​ ಮಾಡಿದೆ. ಮೋದಿ ಮತ್ತು ಸುನಕ್​ ಇದೇ ಮೊದಲ

ಮೋದಿ – ರಿಷಿ ಸುನಕ್ ಮುಖಾಮುಖಿ| ಹಲವು ವಿಚಾರಗಳ ಬಗ್ಗೆ ಚರ್ಚೆ Read More »

ನಿತ್ಯಾನಂದನ ಕೈಲಾಸ ಶಾಖೆಗಳಲ್ಲಿ ವಿವಿಧ ಉದ್ಯೋಗಾವಕಾಶ| ಪೋಸ್ಟರ್ ವೈರಲ್ ಆಗ್ತಿದ್ದಂತೆ ತನಿಖೆ ಆರಂಭಿಸಿದ ಪೊಲೀಸರು

ಸಮಗ್ರ ನ್ಯೂಸ್: ಭಾರತದ ವಿವಿಧ ಕೈಲಾಸ ಶಾಖೆಗಳಲ್ಲಿ ಸೂಕ್ತ ಸಂಭಾವನೆ ಸಹಿತ ಉದ್ಯೋಗಾವಕಾಶ ನೀಡಲಾಗುವುದು ಎಂದು ಜಾಹೀರಾತು ಪ್ರಕಟಿಸಲಾಗಿದೆ. ಸ್ಟೈಫಂಡ್ ಜೊತೆಗೆ ಒಂದು ವರ್ಷದ ತರಬೇತಿಯ ನಂತರ ಕೈಲಾಸದಲ್ಲಿ ಈ ಕೆಳಗಿನ ಕ್ಷೇತ್ರಗಳಲ್ಲಿ ಉದ್ಯೋಗ ನೀಡಲಾಗುವುದು ಎಂದು ಜಾಹೀರಾತೊಂದು ಜಾಲತಾಣಗಳಲ್ಲಿ ಫೋಸ್ಟ್​ ಮಾಡಲಾಗಿದ್ದು, ವೈರಲ್​ ಆಗುತ್ತಿದೆ. ಇದೀಗ ಈ ಪೋಸ್ಟರ್ ವೈರಲ್ ಆಗ್ತಿದ್ದು ಇದರ‌ ಬೆನ್ನತ್ತಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿತ್ಯಾನಂದ ಹಿಂದೂ ವಿಶ್ವವಿದ್ಯಾಲಯ, ಕೈಲಾಸ ವಿದೇಶಿ ಮತ್ತು ದೇಶೀಯ ದೇವಾಲಯಗಳು, ಕೈಲಾಸ ಐಟಿ ವಿಭಾಗ, ವಿದೇಶಿ

ನಿತ್ಯಾನಂದನ ಕೈಲಾಸ ಶಾಖೆಗಳಲ್ಲಿ ವಿವಿಧ ಉದ್ಯೋಗಾವಕಾಶ| ಪೋಸ್ಟರ್ ವೈರಲ್ ಆಗ್ತಿದ್ದಂತೆ ತನಿಖೆ ಆರಂಭಿಸಿದ ಪೊಲೀಸರು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸಂಚು ರೂಪಿಸಿ ಹತ್ಯೆ ಮಾಡಿದ ಪಿಎಫ್ಐ! ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ಐಎ) ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸಂಚು ರೂಪಿಸಿ ಹತ್ಯೆ ಮಾಡಿದ ಪಿಎಫ್ಐ! ಮಾಹಿತಿ ಬಹಿರಂಗ Read More »

ದೆಹಲಿ ಸುತ್ತಮುತ್ತ ಕಂಪಿಸಿದ ಭೂಮಿ| ಭಯದಿಂದ ಹೊರಗೋಡಿದ ಜನತೆ

ಸಮಗ್ರ ನ್ಯೂಸ್: ದೆಹಲಿ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ ಇಂದು ಭೂಕಂಪನದ ಅನುಭವ ಉಂಟಾಗಿರುವ ಬಗ್ಗೆ ತಿಳಿದು ಬಂದಿದೆ. ಭೂಮಿ ಕಂಪಿಸಿದ್ದರಿಂದ ಮನೆಯಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ದೆಹಲಿ ಹಾಗೂ ನೋಯ್ಡಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದೀಗ ಭೂಮಿ ಕಂಪಿಸಿದಂತ ಅನುಭವ ಉಂಟಾಗಿರೋದಾಗಿ ತಿಳಿದು ಬಂದಿದೆ. ಭೂಕಂಪನದ ಅನುಭವದಿಂದ ಜನರು ಭಯ ಭೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ ಎನ್ನಲಾಗಿದೆ.

ದೆಹಲಿ ಸುತ್ತಮುತ್ತ ಕಂಪಿಸಿದ ಭೂಮಿ| ಭಯದಿಂದ ಹೊರಗೋಡಿದ ಜನತೆ Read More »

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು

ಸಮಗ್ರ ನ್ಯೂಸ್: ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಅವರನ್ನು ಮುಂಬೈ ಏರ್‌ಪೋರ್ಟ್‌ನಲ್ಲಿ ಏರ್‌ ಇಂಟಲಿಜೆನ್ಸ್‌ ಯುನಿಟ್‌ ತಡೆದು 7 ಲಕ್ಷ ರೂಪಾಯಿ ದಂಡ ಹಾಕಿದೆ. ಏರ್‌ಪೋರ್ಟ್‌ನಲ್ಲಿರುವ ವಾಯು ಗುಪ್ತಚರ ಘಟಕದ ಮೂಲಗಳು ಈ ಕುರಿತಾಗಿ ಮಾಹಿತಿಯನ್ನು ನೀಡಿದೆ. ವಿಮಾನ ನಿಲ್ದಾಣದಲ್ಲಿ ಒಂದು ಗಂಟೆ ಕಾರ್ಯಾಚರಣೆಯ ನಂತರ ಶಾರುಖ್ ಮತ್ತು ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರನ್ನು ಕಸ್ಟಮ್ಸ್‌ ಬಿಡುಗಡೆ ಮಾಡಿದೆ. ಆದರೆ ಶಾರುಖ್ ಅವರ ಅಂಗರಕ್ಷಕ ರವಿ ಮತ್ತು ತಂಡದ ಇತರ ಸದಸ್ಯರನ್ನು ಪೊಲೀಸರು ತಡೆ

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು Read More »

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ| ನಳಿನಿ, ಆರ್.ಪಿ ರವಿಚಂದ್ರನ್ ಸೇರಿ 6 ಮಂದಿಗೆ ಬಿಡುಗಡೆ ಭಾಗ್ಯ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಇಂದು ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಕೊಲೆಗಡುಕರು ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಅಕಾಲಿಕ ಬಿಡುಗಡೆ ಕೋರಿ ನಳಿನಿ ಸಲ್ಲಿಸಿದ್ದ

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ| ನಳಿನಿ, ಆರ್.ಪಿ ರವಿಚಂದ್ರನ್ ಸೇರಿ 6 ಮಂದಿಗೆ ಬಿಡುಗಡೆ ಭಾಗ್ಯ Read More »

ಮತಾಂತರಗೊಂಡ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನವಿಲ್ಲ – ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರು ಅಸ್ಪೃಶ್ಯತೆಯಿಂದ ಬಳಲುತ್ತಿಲ್ಲವಾದ್ದರಿಂದ ಅವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಅವಕಾಶ ನೀಡಬಾರದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರು ಪರಿಶಿಷ್ಟ ಜಾತಿಗಳಿಗೆ ಅರ್ಹರಾಗಿರುವ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಅಫಿಡವಿಟ್‌ನಲ್ಲಿ 1950 ರ ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶವು ಯಾವುದೇ ಅಸಂವಿಧಾನಿಕತೆಯಿಂದ ಬಳಲುತ್ತಿಲ್ಲ ಎಂದು

ಮತಾಂತರಗೊಂಡ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನವಿಲ್ಲ – ಸುಪ್ರೀಂ ಕೋರ್ಟ್ Read More »

ಗುಜರಾತ್ ವಿಧಾನಸಭಾ ಚುನಾವಣೆ| ಬಿಜೆಪಿಯಿಂದ 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಹಾಲಿ ಸಿಎಂ ಭೂಪೇಂದ್ರ ಪಟೇಲ್ ಅವರು 2017ರ ಚುನಾವಣೆಯಲ್ಲಿ ಗೆದ್ದಿದ್ದ ಘಟ್ಲೋಡಿಯಾದಿಂದ ಈ ಬಾರಿಯೂ ಕಣಕ್ಕಿಳಿಯಲಿದ್ದಾರೆ. ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಅವರು ಮಜುರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇತ್ತೀಚೆಗೆ ಸೇತುವೆ ದುರಂತ ಸಂಭವಿಸಿದ್ದ ಮೋರ್ಬಿ ವಿಧಾನಸಭಾ ಕ್ಷೇತ್ರದಿಂದ ಕಾಂತಿಲಾಲ್ ಅಮರತಿಯಾ ಅವರನ್ನು ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್‌ನಿಂದ ಬಂದಿರುವ ಬ್ರಿಜೇಶ್ ಮೆರ್ಜಾ ಅವರು ಈ ಹಿಂದೆ ಇಲ್ಲಿ

ಗುಜರಾತ್ ವಿಧಾನಸಭಾ ಚುನಾವಣೆ| ಬಿಜೆಪಿಯಿಂದ 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ Read More »

‘ವಲ್ಡ್ ಬುಕ್ ಆಫ್ ರೆಕಾರ್ಡ್’ ಗೆ ಸೇರ್ಪಡೆಯಾದ ನಾಡಪ್ರಭು ಪ್ರತಿಮೆ| ವಿಶ್ವದ ಮೊದಲ ಮತ್ತು ಎತ್ತರದ ಕಂಚಿನ ಪ್ರತಿಮೆ ನ.11ಕ್ಕೆ‌ ಅನಾವರಣ

ಸಮಗ್ರ ನ್ಯೂಸ್: ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬ ದಾಖಲೆಗೆ ಕೆಂಪೇಗೌಡರ ಪ್ರತಿಮೆ ಪಾತ್ರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಯಾಗಿದೆ. 84 ಕೋಟಿ ರೂ. ವೆಚ್ಚದಲ್ಲಿ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ನಿರ್ಮಿಸಲಾಗಿದ್ದು, ನವೆಂಬರ್ 11 ರಂದು ಉದ್ಘಾಟನೆಗೊಳ್ಳಲಿದೆ.

‘ವಲ್ಡ್ ಬುಕ್ ಆಫ್ ರೆಕಾರ್ಡ್’ ಗೆ ಸೇರ್ಪಡೆಯಾದ ನಾಡಪ್ರಭು ಪ್ರತಿಮೆ| ವಿಶ್ವದ ಮೊದಲ ಮತ್ತು ಎತ್ತರದ ಕಂಚಿನ ಪ್ರತಿಮೆ ನ.11ಕ್ಕೆ‌ ಅನಾವರಣ Read More »