ದೇಶ-ವಿದೇಶ

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ

ಸಮಗ್ರ ನ್ಯೂಸ್: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ(ಅ10) ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು. ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ Read More »

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶ ಪ್ರತಿಯಲ್ಲಿ ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ನಾಮಕರಣ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಹಲವು ದಿನಗಳಿಂದ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಎಂಬ ಒತ್ತಾಯ ಕೇಳಿ ಬಂದಿತ್ತು.ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ದೆಹಲಿಯಲ್ಲಿ ಭೇಟಿಯಾಗಿ ಸಂಸದರು ಲಿಖಿತ ಮನವಿ ಕೂಡ ಸಲ್ಲಿಸಿದ್ದರು. ಮೈಸೂರಿಗೆ

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ Read More »

‘ಅಂತಾರಾಷ್ಟ್ರೀಯ ಟೈಟಾನ್ ಬ್ಯುಸಿನೆಸ್ ಅವಾರ್ಡ್’ ಮುಡಿಗೇರಿಸಿಕೊಂಡ ಸಿಎಂ ಪುತ್ರ ಭರತ್ ಬೊಮ್ಮಾಯಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿ ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ 2022 ಲಭಿಸಿದೆ. ಅಶ್ವ ಎನರ್ಜಿ ಮತ್ತು ವಾಲ್ಟೆಕ್ ಎಂಬ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಭರತ್ ಬಿ ಬೊಮ್ಮಾಯಿ ಅವರು ಉತ್ಪಾದನೆ ವಿಭಾಗದಲ್ಲಿ ವರ್ಷದ ಜಾಗತಿಕ ವಾಣಿಜ್ಯೋದ್ಯಮಿಯಾಗಿ ಹೊರಹೊಮ್ಮಿದ್ದು 2022 ರ – ಟೈಟಾನ್ ಬಿಸಿನೆಸ್ ಅವಾರ್ಡ್: ಸೀಸನ್ 2 ರಲ್ಲಿ ನಿರ್ಣಾಯಕ ವಿಜಯವನ್ನು ಸಾಧಿಸಿದ್ದಾರೆ. ಈ ಬಗ್ಗೆ ಪ್ರಕಟಣೆಯನ್ನು ಹೊರಡಿಸಿರುವ ಟೈಟಾನ್ ಬಿಸಿನೆಸ್

‘ಅಂತಾರಾಷ್ಟ್ರೀಯ ಟೈಟಾನ್ ಬ್ಯುಸಿನೆಸ್ ಅವಾರ್ಡ್’ ಮುಡಿಗೇರಿಸಿಕೊಂಡ ಸಿಎಂ ಪುತ್ರ ಭರತ್ ಬೊಮ್ಮಾಯಿ Read More »

ಪಾಲಕ್ಕಾಡ್: ಭೀಕರ ಅಪಘಾತಕ್ಕೆ 9 ಮಂದಿ ಬಲಿ| ಹಲವರು ಗಂಭೀರ

ಸಮಗ್ರ ನ್ಯೂಸ್: ಪಾಲಕ್ಕಾಡ್‌ನ ವಡಕ್ಕೆಂಚೇರಿ ಬಳಿಯ ಮಂಗಳಂ ಎಂಬಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ಸೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಟೂರಿಸ್ಟ್ ಬಸ್‌ನಲ್ಲಿ ಒಟ್ಟು 42 ವಿದ್ಯಾರ್ಥಿಗಳಿದ್ದರು ಮತ್ತು ಕೆಎಸ್‌ಆ​ರ್​ಟಿಸಿ ಬಸ್​ನಲ್ಲಿ 49 ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಶಾಲಾ ಶಿಕ್ಷಕಿ ವಿಷ್ಣು ವಿಕೆ ಮತ್ತು ವಿದ್ಯಾರ್ಥಿಗಳಾದ ಅಂಜನಾ ಅಜಿತ್, ಇಮ್ಯಾನುಯೆಲ್ ಸಿಎಸ್, ದಿಯಾ ರಾಜೇಶ್, ಕ್ರಿಸ್

ಪಾಲಕ್ಕಾಡ್: ಭೀಕರ ಅಪಘಾತಕ್ಕೆ 9 ಮಂದಿ ಬಲಿ| ಹಲವರು ಗಂಭೀರ Read More »

ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ಹಲವು ಭಕ್ತರು‌ ನಾಪತ್ತೆ

ಸಮಗ್ರ ನ್ಯೂಸ್: ದುರ್ಗಾ ವಿಸರ್ಜನೆ ವೇಳೆ ದಿಢೀರ್ ಸೃಷ್ಟಿಯಾದ ಪ್ರವಾಹದಿಂದ ಹಲವು ಭಕ್ತರು ಕೊಚ್ಚಿ ಹೋದ ಘಟನೆ ಪ.ಬಂಗಾಳದಲ್ಲಿ ನಡೆದಿದೆ. ಇಲ್ಲಿನ ಜಲ್‌ಪೈಗುರಿ ಜಿಲ್ಲೆಯ ನಿಯೋರಾ ನದಿ ದಂಡೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದ್ದು ಹಲವರು ನಾಪತ್ತೆಯಾಗಿದ್ದಾರೆ. ಕಳೆದೆರಡು ದಿನದಿಂದ ಸತತ ಮಳೆಯಾಗುತ್ತಿದ್ದ ಕಾರಣ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾಗಿದೆ. ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಭಕ್ತರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. 7 ಮಂದಿ ಮೃತದೇಹ ಹೊರಕ್ಕೆ

ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ಹಲವು ಭಕ್ತರು‌ ನಾಪತ್ತೆ Read More »

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು

ಸಮಗ್ರ ನ್ಯೂಸ್: ಇಂಡೋನೇಷ್ಯಾದ ಜಕಾರ್ತದಲ್ಲಿ ಶನಿವಾರ ತಡರಾತ್ರಿ ಫುಟ್‌ಬಾಲ್ ಪಂದ್ಯದ ವೇಳೆ ನಡೆದ ಹಿಂಸಾಚಾರದಿಂದ ಕನಿಷ್ಠ 127 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಜಾವದ ಮಲಂಗ್‌ನಲ್ಲಿ ನಡೆದ ಪಂದ್ಯದಲ್ಲಿ ಎದುರಾಳಿ ತಂಡ ಗೆಲುವು ಸಾಧಿಸಿದ್ದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಮೈದಾನಕ್ಕೆ ಇಳಿದು ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಿಂಸಾಚಾರ ಸಂಭವಿಸಿ, ಇಬ್ಬರು ಪೊಲೀಸರ ಸಹಿತ ಕನಿಷ್ಠ 127 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇಂಡೋನೇಷ್ಯಾದ ಪ್ರಮುಖ ಲೀಗ್ ಬಿಆರ್‌ಐ ಲಿಗಾ 1ರ ಅರೆಮಾ ಎಫ್‌ಸಿ ಮತ್ತು ಪರ್ಸಬೆಯ ಸುರಬಯ ತಂಡದ ನಡುವೆ

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು Read More »

ರಾಮಾಯಣದ ಶ್ರೀರಾಮನಿಗೆ ಏರ್ ಪೋರ್ಟ್ ನಲ್ಲಿ ಸಾಷ್ಟಾಂಗ ನಮಸ್ಕರಿಸಿದ ಮಹಿಳೆ

ಸಮಗ್ರ ನ್ಯೂಸ್: ಕಳೆದ 35 ವರ್ಷಗಳ ಹಿಂದೆ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ ರಾಮಾಯಣ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ? 80-90ರ ದಶಕದಲ್ಲಿ ರಾಮಾಯಣ ಮತ್ತು ಮಹಾಭಾರತ ಧಾರಾವಾಹಿಗಳು ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದವು. ರಮಾನಂದ್ ಸಾಗರ್ ನಿರ್ಮಾಣದ ಈ ಅಧ್ಧೂರಿ ಧಾರಾವಾಹಿಯಲ್ಲಿ ನಟ ಅರುಣ್ ಗೋವಿಲ್ ರಾಮನಾಗಿ ಮಿಂಚಿದ್ದರು. ಈ ಧಾರಾವಾಹಿ ಜನಪ್ರಿಯತೆ ಎಷ್ಟಿದೆ ಎಂದರೆ ಕಳೆದ ಬಾರಿ ಲಾಕ್‌ ಡೌನ್ ಸಮಯದಲ್ಲಿ ಇದನ್ನು ಮರು ಪ್ರಸಾರ ಮಾಡಲಾಯ್ತು. ಪ್ರಪಂಚದಲ್ಲೇ ಮನರಂಜನೆ ವಿಭಾಗದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ

ರಾಮಾಯಣದ ಶ್ರೀರಾಮನಿಗೆ ಏರ್ ಪೋರ್ಟ್ ನಲ್ಲಿ ಸಾಷ್ಟಾಂಗ ನಮಸ್ಕರಿಸಿದ ಮಹಿಳೆ Read More »

ಅಡಿಕೆ ಬೆಳೆಗಾರರ ಕತ್ತು ಹಿಸುಕಿತೇ ಕೇಂದ್ರ ಸರ್ಕಾರ?| ಆಮದು ನಿಷೇಧ ತೆರವು ಬೆನ್ನಲ್ಲೇ ಇಳಿದ ಅಡಿಕೆ ಧಾರಣೆ

ಸಮಗ್ರ ನ್ಯೂಸ್: ದೇಶದಿಂದ ಅಡಿಕೆ ಬೆಳೆ ಆಮದು ಮಾಡಿಕೊಳ್ಳಲು ಇದ್ದ ನಿಷೇಧ ಆದೇಶವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಅಡಿಕೆ ಧಾರಣೆ ಏರು ಗತಿಯಲ್ಲಿದ್ದ ಹೊತ್ತಲ್ಲೇ ಮತ್ತೊಮ್ಮೆ ದಿಢೀರ್ ಬೆಲೆ ಇಳಿಕೆಯಾಗುತ್ತಿದ್ದು, ಅಡಿಕೆ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ನಿಯಮಗಳಿಗೆ ಸಿದ್ದುಪಡಿ ತಂದು ಪ್ರತಿ ಕೆಜಿ ಅಡಿಕೆಗೆ 251 ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿ ಮಾಡಿತ್ತು. ಈಗ ಕನಿಷ್ಠ ಆಮದು ಬೆಲೆ ಇಲ್ಲದೆ ಭೂತಾನ್ ನಿಂದ 17000 ಟನ್ ಹಸಿ ಅಡಿಕೆ

ಅಡಿಕೆ ಬೆಳೆಗಾರರ ಕತ್ತು ಹಿಸುಕಿತೇ ಕೇಂದ್ರ ಸರ್ಕಾರ?| ಆಮದು ನಿಷೇಧ ತೆರವು ಬೆನ್ನಲ್ಲೇ ಇಳಿದ ಅಡಿಕೆ ಧಾರಣೆ Read More »

ವಿಂಗ್ ಕಮಾಂಡರ್ ಅಭಿನಂದನ್ ನಿವೃತ್ತಿ

ಸಮಗ್ರ ನ್ಯೂಸ್: ಪಾಕ್ ಯುದ್ದ ವಿಮಾನ ಎಫ್ 16 ಹೊಡೆದುರುಳಿಸಿ ಪಾಕಿಸ್ತಾನ ಸೈನಿಕರ ವಶದಲ್ಲಿದ್ದಲ್ಲಿದ್ದರೂ ಎದೆಗಾರಿಕೆಯಿಂದ ಎದುರಿಸಿ ಬಳಿಕ ರಾಜತಾಂತ್ರಿಕ ಸಂಧಾನದ ಮೂಲಕ ಭಾರತಕ್ಕೆ ಸುರಕ್ಷಿತವಾಗಿ ಬಂದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸೇವೆಯಿಂದ ನಿವೃತ್ತಿಗೊಂಡಿದ್ದಾರೆ. ಅಭಿನಂದನ್ ವರ್ಧಮಾನ್ ಅವರು ವಾಯು ಸೇನೆಯಲ್ಲಿ ಮಿಗ್ 21 ಯುದ್ದ ವಿಮಾನದ ವಿಂಗ್ ಕಮಾಂಡರ್ ಆಗಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಅವರು ಪಾಕ್‌ ಯುದ್ದ ವಿಮಾನ ಎಫ್ 16ನ್ನು ಹೊಡೆದುರುಳಿಸಿ ಪಾಕ್ ಸೈನಿಕರಿಗೆ ಸೆರೆ ಸಿಕ್ಕಿ ಪಾಕ್

ವಿಂಗ್ ಕಮಾಂಡರ್ ಅಭಿನಂದನ್ ನಿವೃತ್ತಿ Read More »

ಭಾರತದಲ್ಲಿ ಇಂದಿನಿಂದ 5G ಯುಗಾರಂಭ| ಇಂಟರ್ನೆಟ್ ನ ಹೊಸವೇಗಕ್ಕೆ ಪ್ರಧಾನಿ‌ ಚಾಲನೆ

ಸಮಗ್ರ ನ್ಯೂಸ್: ಭಾರತದಲ್ಲಿ ಇಂದು 5ಜಿ ತಂತ್ರಜ್ಞಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಮೂಲಕ ಇಂದಿನಿಂದ ಭಾರತವು ಇಂಟರ್ನೆಟ್ ನ 5G ಯುಗವನ್ನು ಪ್ರವೇಶಿಸಲಿದೆ. ಇದರಿಂದ ಜನರು ಎದುರಿಸುತ್ತಿರುವ ಇಂಟರ್ನೆಟ್ ಸಮಸ್ಯೆಗಳಿಗೆ ಇನ್ನು ಪರಿಹಾರ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು (ಅಕ್ಟೋಬರ್ 1) ಭಾರತದಲ್ಲಿ 5G ಸೇವೆಗಳಿಗೆ ಚಾಲನೆ ನೀಡಿದ್ದಾರೆ. ದೆಹಲಿಯ ಪ್ರಗತಿ ಮೈದಾನದಲ್ಲಿ ಮೋದಿ 5G ಸೇವೆಗೆ ಚಾಲನೆ ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಹೈಸ್ಪೀಡ್ ಇಂಟರ್ನೆಟ್ ಬಳಕೆ ಆರಂಭವಾಗಿದೆ. ಜಿಯೋ, ಏರ್ಟೆಲ್ ಮುಂದಿನ

ಭಾರತದಲ್ಲಿ ಇಂದಿನಿಂದ 5G ಯುಗಾರಂಭ| ಇಂಟರ್ನೆಟ್ ನ ಹೊಸವೇಗಕ್ಕೆ ಪ್ರಧಾನಿ‌ ಚಾಲನೆ Read More »