ದೇಶ-ವಿದೇಶ

ಮಿಸ್ ಅರ್ಜೆಂಟೀನಾ – ಮಿಸ್ ಪೋರ್ಟೊರಿಕೊ ‘ಸುಂದರಿ’ಯರ ವಿವಾಹ.!

ಅರ್ಜೆಂಟೈನಾ: ’ಮಿಸ್ ಗ್ರ್ಯಾಂಡ್ ಇಂಟರ್ನ್ಯಾಷನಲ್ ಅರ್ಜೆಂಟೈನಾ 2020 ’ ಮರಿಯಾನಾ ವರೆಲಾ ಮತ್ತು ’ಗ್ರ್ಯಾಂಡ್ ಇಂಟರ್ನ್ಯಾಷನಲ್ ಪೋರ್ಟೊ ರಿಕೊ 2020 ’ ಕಿರೀಟವನ್ನು ಅಲಂಕರಿಸಿದ ಫ್ಯಾಬಿಯೊಲಾ ವ್ಯಾಲೆಂಟಿನ್, ಈ ಇಬ್ಬರು ಸುಂದರಿಯರು ಮದುವೆಯಾಗಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿಕೊಂಡಿದ್ದಾರೆ. ನವವಿವಾಹಿತೆಯರು ತಮ್ಮ ಸಂಬಂಧವನ್ನು ದೀರ್ಘಕಾಲದವರೆಗೆ ರಹಸ್ಯವಾಗಿಟ್ಟ ನಂತರ ಅಧಿಕೃತಗೊಳಿಸಿರುವುದಾಗಿ ಹೇಳಿಕೊಂಡಿದ್ದಾರೆ. “ನಮ್ಮ ಸಂಬಂಧವನ್ನು ಖಾಸಗಿಯಾಗಿ ಇರಿಸಿಕೊಳ್ಳಲು ನಿರ್ಧರಿಸಿದ ಬಳಿಕ, ನಾವು ಅ.೨೮ ರಂದು ವಿಶೇಷ ದಿನದಂದು ವಿವಾಹವಾಗಿ ಬಹಿರಂಗಪಡಿಸಿದ್ದೇವೆ” ಎಂದು ಶೀರ್ಷಿಕೆ ಬರೆದು ಇನ್ಟ್ರಾ ಗ್ರಾಂ ನಲ್ಲಿ ಪೋಸ್ಟ್

ಮಿಸ್ ಅರ್ಜೆಂಟೀನಾ – ಮಿಸ್ ಪೋರ್ಟೊರಿಕೊ ‘ಸುಂದರಿ’ಯರ ವಿವಾಹ.! Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು

ಸಮಗ್ರ ನ್ಯೂಸ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಲಾಹೋರ್‌ ನಿಂದ ಇಸ್ಲಾಮಾಬಾದ್‌ಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ಇಮ್ರಾನ್ ಖಾನ್ ಗುರುವಾರ ವಜೀರಾಬಾದ್‌ ನಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಮ್ರಾನ್ ಖಾನ್ ಸೇರಿದಂತೆ 6 ಜನರು ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಗುಂಡು ಹಾರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಇಮ್ರಾನ್

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು Read More »

ಗುಜರಾತ್ ಚುನಾವಣೆಗೆ ಮುಹೂರ್ತ ಫಿಕ್ಸ್| ಡಿಸೆಂಬರ್ ನಲ್ಲಿ ನಡೆಯಲಿದೆ ಎರಡು‌ ಹಂತದ ಮತದಾನ

ಸಮಗ್ರ ನ್ಯೂಸ್: ಬಹು ನಿರೀಕ್ಷಿತ ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಗುರುವಾರ ಮಧ್ಯಾಹ್ನ ಪ್ರಕಟಿಸಿದೆ. ಚುನಾವಣೆಯು ಡಿಸೆಂಬರ್ 1 ಹಾಗೂ 5 ರಂದು ಎರಡು ಹಂತದಲ್ಲಿ ನಡೆಯಲಿದೆ. ಡಿಸೆಂಬರ್ 8ರಂದು ಹಿಮಾಚಲ ಪ್ರದೇಶದ ಜೊತೆಗೆ ಗುಜರಾತ್ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಭೀಕರ ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಮಾಧ್ಯಮಗಳೊಂದಿಗೆ ತಮ್ಮ ಸಂವಾದವನ್ನು ಆರಂಭಿಸಿದರು. ಗುಜರಾತ್‌ನಲ್ಲಿ 4.9 ಕೋಟಿ ಮತದಾರರು ತಮ್ಮ ಹಕ್ಕು

ಗುಜರಾತ್ ಚುನಾವಣೆಗೆ ಮುಹೂರ್ತ ಫಿಕ್ಸ್| ಡಿಸೆಂಬರ್ ನಲ್ಲಿ ನಡೆಯಲಿದೆ ಎರಡು‌ ಹಂತದ ಮತದಾನ Read More »

ಪ್ರಧಾನಿ ಭಾಷಣದ ವೇಳೆ ಪೆಂಡಾಲ್ ನಿಂದ ಬೋಲ್ಟ್ ತೆಗೆದ ಭೂಪ| ಆರೋಪಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಗುಜರಾತ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡುತ್ತಿರುವಾಗಲೇ ಸಾರ್ವಜನಿಕವಾಗಿ ಹಾಕಲಾದ ಪೆಂಡಾಲ್‌ನಿಂದ ಬೋಲ್ಟ್ ಅನ್ನು ತೆಗದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 31ರಂದು ಥರಾಡ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯಲ್ಲಿನ ವಿಡಿಯೋವೊಂದು ವೈರಲ್ ಆಗಿತ್ತು. ಒಂದು ಕಡೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದರೆ, ಇನ್ನೊಂದು ಮಗ್ಗಲಿನಲ್ಲಿ ಸಾರ್ವಜನಿಕ ಸಭೆಗಾಗಿ ಹಾಕಿದ್ದ ಮಂಟಪದ ಬೋಲ್ಟ್ ಅನ್ನು ಬಿಚ್ಚಿ, ತೆಗೆಯುತ್ತಿರುವುದು ವಿಡಿಯೋದಲ್ಲಿ ಗೋಚರಿಸಿತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್

ಪ್ರಧಾನಿ ಭಾಷಣದ ವೇಳೆ ಪೆಂಡಾಲ್ ನಿಂದ ಬೋಲ್ಟ್ ತೆಗೆದ ಭೂಪ| ಆರೋಪಿಯನ್ನು ಬಂಧಿಸಿದ ಪೊಲೀಸರು Read More »

‘ಹೊಡಿತಾಳೆ, ಬಡೀತಾಳೆ ನನ್ ಹೆಂಡ್ತಿ’ | ಕಾಟ ತಾಳಲಾರದೆ ಮೋದಿಗೆ ಮೊರೆಯಿಟ್ಟ ಪತಿ ಮಹಾಶಯ

ಸಮಗ್ರ ನ್ಯೂಸ್: ನಾವು ಹೆಚ್ಚಾಗಿ ಗಂಡ ಹೆಂಡತಿಗೆ ಹಿಂಸೆ ಕೇಳುವುದನ್ನು ನೋಡಿರುತ್ತೇವೆ, ಕೇಳಿರುತ್ತೇವೆ, ಆದರೆ ಇಲ್ಲಿ ವಿರುದ್ಧ ಪತ್ನಿ ಕಿರುಕುಳ ನೀಡುತ್ತಾಳೆ ಎಂದು ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಪತಿರಾಯ ಸಹಾಯಕ್ಕೆ ಮೊರೆಯಿಟ್ಟಿದ್ದಾನೆ. ಸದ್ಯ ಈತನ ಪೋಸ್ಟ್ ವೈರಲ್ ಆಗಿದೆ. ನನ್ನ ಪತ್ನಿ ತನಗೆ ಕಿರುಕುಳ ನೀಡುತ್ತಿದ್ದಾಳೆ ಎಂಬುದು ಟ್ವಿಟ್ಟರ್ ಮೂಲಕ ಪ್ರಧಾನಿ ಮೋದಿ, ಕಾನೂನು ಸಚಿವ ಕಿರಣ್ ರಿಜುಜು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿದ್ದಾನೆ. ಈತನ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ

‘ಹೊಡಿತಾಳೆ, ಬಡೀತಾಳೆ ನನ್ ಹೆಂಡ್ತಿ’ | ಕಾಟ ತಾಳಲಾರದೆ ಮೋದಿಗೆ ಮೊರೆಯಿಟ್ಟ ಪತಿ ಮಹಾಶಯ Read More »

ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಕೆ| ನಾಳೆಯಿಂದ ಹೊಸ ದರ ಜಾರಿ

ಸಮಗ್ರ ನ್ಯೂಸ್: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸಲಾಗಿದೆ. ತೈಲ ಕಂಪನಿಗಳು ದರಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್ ಗೆ ಪೆಟ್ರೋಲ್ ಹಾಗೂ ಡೀಸೆಲ್ ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಹೊಸ ಬೆಲೆಗಳು ಮಂಗಳವಾರ(ನ.1)ದಿಂದ ಬೆಳಿಗ್ಗೆ 6 ಗಂಟೆಯಿಂದ ಜಾರಿಗೆ ಬರಲಿವೆ. ನವದೆಹಲಿಯಲ್ಲಿ ಸೋಮವಾರ ಪೆಟ್ರೋಲ್ ಬೆಲೆ 96.72 ರೂ., ಮುಂಬೈನಲ್ಲಿ 106.31 ರೂ.ಕೊಲ್ಕತ್ತಾ ದಲ್ಲಿ ಪೆಟ್ರೋಲ್ ಗೆ 106.03 ರೂ., ಚೆನ್ನೈನಲ್ಲಿ 102.63 ರೂ ಆಗಿದೆ. ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್

ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಕೆ| ನಾಳೆಯಿಂದ ಹೊಸ ದರ ಜಾರಿ Read More »

ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ

ಸಮಗ್ರ ನ್ಯೂಸ್: ಫ್ರೆಂಚ್ ಓಪನ್ ಸೂಪರ್ ಪುರುಷರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಭಾರತದ ಸ್ಟಾರ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಚೈನೀಸ್ ತೈಪೆಯ ಲು ಚಿಂಗ್ ಯಾವೊ ಮತ್ತು ಯಾಂಗ್ ಪೊ ಹಾನ್ ವಿರುದ್ಧ ನೇರ ಗೇಮ್‌ಗಳ ಜಯದೊಂದಿಗೆ ಫ್ರೆಂಚ್ ಓಪನ್ ಸೂಪರ್ 750 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. 48 ನಿಮಿಷಗಳ ಕಾಲ ನಡೆದ ಫೈನಲ್‌ನಲ್ಲಿ ವಿಶ್ವದ ಎಂಟನೇ ಶ್ರೇಯಾಂಕದ ಜೋಡಿ 25ನೇ ಶ್ರೇಯಾಂಕದ ಲು ಮತ್ತು ಯಾಂಗ್‌ರನ್ನು 21-13, 21-19 ಅಂತರದಿಂದ ಮಣಿಸಿದರು.

ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ Read More »

ನಾಳೆ(ನ.1) ದೇಶದಲ್ಲಿ ಮೊದಲ ಡಿಜಿಟಲ್ ರೂಪಾಯಿ ಬಿಡುಗಡೆ| 9 ಬ್ಯಾಂಕ್ ಗಳಿಗೆ ಮಾನ್ಯತೆ

ಸಮಗ್ರ ನ್ಯೂಸ್: ಕೇಂದ್ರೀಯ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಮೊದಲ ಪೈಲಟ್ ಡಿಜಿಟಲ್ ರೂಪಾಯಿ (ಸಗಟು ವಿಭಾಗ) ಅನ್ನು ಸರ್ಕಾರಿ ಸೆಕ್ಯುರಿಟಿಗಳಲ್ಲಿನ ವಹಿವಾಟುಗಳಿಗಾಗಿ ಮಂಗಳವಾರ ಬಿಡುಗಡೆ ಮಾಡಲಾಗುವುದು ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ. ಸರ್ಕಾರಿ ಸೆಕ್ಯುರಿಟಿಗಳಲ್ಲಿ ದ್ವಿತೀಯ ಮಾರುಕಟ್ಟೆ ವಹಿವಾಟುಗಳನ್ನು ಇತ್ಯರ್ಥಪಡಿಸುವುದು ಪೈಲಟ್ಗೆ ಬಳಕೆಯಾಗಿದೆ ಎಂದು ಆರ್ಬಿಐ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ), ಬ್ಯಾಂಕ್ ಆಫ್ ಬರೋಡಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್,

ನಾಳೆ(ನ.1) ದೇಶದಲ್ಲಿ ಮೊದಲ ಡಿಜಿಟಲ್ ರೂಪಾಯಿ ಬಿಡುಗಡೆ| 9 ಬ್ಯಾಂಕ್ ಗಳಿಗೆ ಮಾನ್ಯತೆ Read More »

ಗುಜರಾತ್ ನಲ್ಲೊಂದು ಘೋರ ದುರಂತ| ಕೇಬಲ್ ಸೇತುವೆ ಕುಸಿದು 400 ಮಂದಿ ನದಿಪಾಲು!!

ಸಮಗ್ರ ನ್ಯೂಸ್: ಗುಜರಾತ್ ನ ಮೊರ್ಬಿ ಜಿಲ್ಲೆಯಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೇಬಲ್ ಸೇತುವೆ ಕುಸಿದಿದ್ದರಿಂದ ಸುಮಾರು 400ರಷ್ಟು ಜನರು ನದಿಗೆ ಬಿದ್ದಿರುವ ಬಗ್ಗೆ ವರದಿಯಾಗಿದೆ. ಸ್ಥಳೀಯ ಮಾಹಿತಿಗಳ‌ ಪ್ರಕಾರ, ಮಚ್ಚು ನದಿಗೆ ನಿರ್ಮಿಸಲಾದ ಈ ಕೇಬಲ್ ಸೇತುವೆ ಸಾಕಷ್ಟು ಹಳೆಯದಾಗಿದ್ದು, ಇದನ್ನು ಪಾರಂಪರಿಕ ಸೇತುವೆಯಲ್ಲಿ ಸೇರಿಸಲಾಗಿತ್ತು. ದೀಪಾವಳಿಯ ನಂತರ, ಗುಜರಾತಿ ಹೊಸ ವರ್ಷದಂದು ರಿಪೇರಿ ಮಾಡಿದ ನಂತರ ಅದನ್ನ ಮತ್ತೆ ಸೇತುವೆಯನ್ನು ಜನರ ಉಪಯೋಗಕ್ಕೆ ತೆರೆಯಲಾಗಿತ್ತು. ಸದ್ಯ

ಗುಜರಾತ್ ನಲ್ಲೊಂದು ಘೋರ ದುರಂತ| ಕೇಬಲ್ ಸೇತುವೆ ಕುಸಿದು 400 ಮಂದಿ ನದಿಪಾಲು!! Read More »

ಸೋಮಾಲಿಯಾದಲ್ಲಿ ಭೀಕರ ಕಾರು ಬಾಂಬ್ ಸ್ಪೋಟ| 100 ಕ್ಕೂ ಹೆಚ್ಚು ಮಂದಿ ಸಾವು| 300 ಕ್ಕೂ ಹೆಚ್ಚು ಮಂದಿಗೆ ಗಾಯ

ಸಮಗ್ರ ನ್ಯೂಸ್: ಸೋಮಾಲಿಯಾದ ರಾಜಧಾನಿಯ ಜನನಿಬಿಡ ಜಂಕ್ಷನ್ನಲ್ಲಿ ಶನಿವಾರ ನಡೆದ ಎರಡು ಕಾರು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 100 ಜನರು ಮೃತಪಟ್ಟಿದ್ದಾರೆ. ಭೀಕರ ದಾಳಿಯಿಂದಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸೊಮಾಲಿಯಾದ ಅಧ್ಯಕ್ಷ ಹಸನ್ ಶೇಖ್ ಮೊಹಮ್ಮದ್ ತಿಳಿಸಿದ್ದಾರೆ. ಸೊಮಾಲಿಯಾದ ರಾಜಧಾನಿಯ ಜನನಿಬಿಡ ಜಂಕ್ಷನ್ನಲ್ಲಿ ಶನಿವಾರ ನಡೆದ ಎರಡು ಕಾರು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 100 ಜನರು ಮೃತಪಟ್ಟಿದ್ದಾರೆ. ಭೀಕರ ದಾಳಿಯಿಂದಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸೊಮಾಲಿಯಾದ

ಸೋಮಾಲಿಯಾದಲ್ಲಿ ಭೀಕರ ಕಾರು ಬಾಂಬ್ ಸ್ಪೋಟ| 100 ಕ್ಕೂ ಹೆಚ್ಚು ಮಂದಿ ಸಾವು| 300 ಕ್ಕೂ ಹೆಚ್ಚು ಮಂದಿಗೆ ಗಾಯ Read More »